
ಬೆಂಗಳೂರು, (ಏ.11): ಮಾಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಹಣ ಸಹಾಯ ಮಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠಿ ಎಚ್.ದೇವೇಗೌಡರ ಕಾರ್ಯವನ್ನು ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈ ಮಾರಿ ಕೊರೋನಾ ವಿರುದ್ಧದ ಸಮರಕ್ಕೆ ಒಟ್ಟು 3 ಲಕ್ಷ ರೂ. ತಮ್ಮ ಪೆನ್ಶನ್ ಹಣದಿಂದ ನೀಡಿ ಆರ್ಥಿಕವಾಗಿ ಕೈಜೋಡಿಸಿದ್ದಾರೆ.
ಕೊರೋನಾ ಹೋರಾಟಕ್ಕೆ 3 ಸರ್ಕಾರಗಳಿಗೆ ಆರ್ಥಿಕ ಸಹಾಯ ಮಾಡಿದ ದೇವೇಗೌಡ್ರು
ಇದೀಗ ಇದಕ್ಕೆ ಪ್ರಧಾನಿ ನರೇಂದ್ರ ಮೋಧಿ ಅವರು ಪ್ರತಿಕ್ರಿಯಿಸಿದ್ದು, ದೊಡ್ಡಗೌಡ್ರ ನಡೆಯನ್ನು ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲದೇ ದೇವೇಗೌಡ ನಡೆ ಸ್ಫೂರ್ತಿದಾಯಕವಾದದ್ದು ಎಂದು ಟ್ವೀಟ್ ಮಾಡಿದ್ದಾರೆ.
ತಮ್ಮ ಪೆನ್ಶನ್ ಹಣದಿಂದ ದೇವೇಗೌಡ ಅವರು PM ಪರಿಹಾರ ನಿಧಿಗೆ 1 ಲಕ್ಷ ರೂಪಾಯಿ ನೀಡಿದ್ದಾರೆ. ಇದರ ಜೊತೆಗೆ ಕರ್ನಾಟಕ ಮತ್ತು ಕೇರಳ ಸಿಎಂ ಪರಿಹಾರ ನಿಧಿಗೆ ತಲಾ 1 ಲಕ್ಷ ರೂ. ಸೇರಿದಂತೆ ಒಟ್ಟು 3 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ತಿಳಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ