
ನವದೆಹಲಿ(ಡಿ.30): ಕೇಂದ್ರ ಸರ್ಕಾರ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳಿಲ್ಲ. ಕಾರಣ ರೈತರ ಸಮಸ್ಯೆ ಹಾಗೂ ಪ್ರತಿಭಟನಗೆ ಅಂತ್ಯಹಾಡಲು ನಡೆಸಿದ 6ನೇ ಸುತ್ತಿನ ಮಾತುಕತೆ ಸಂಪೂರ್ಣ ಸಫಲಗೊಂಡಿಲ್ಲ. ರೈತ ಸಂಘಟನೆಗಳು ಇಟ್ಟ ನಾಲ್ಕು ಬೇಡಿಕೆಗಳಲ್ಲಿ 2 ಬೇಡಿಕೆಗೆ ಕೇಂದ್ರ ಸಮ್ಮತಿಸಿದೆ
ಮೋದಿ ಮೇಲೆ ರೈತರು ನಂಬಿಕೆ ಕಳೆದುಕೊಂಡಿದ್ದಾರೆ; ಕಾರಣ ಹೇಳಿದ ರಾಹುಲ್ ಗಾಂಧಿ
ಪ್ರತಿಭಟನಾ ನಿರತ ರೈತರ ಜೊತೆ ಕೇಂದ್ರ ಸರ್ಕಾರ ಸುದೀರ್ಘ ಮಾತುಕತೆ ನಡೆಸಿದೆ. ಆದರೆ ರೈತ ಸಂಘಟನೆಗಳು ಪಟ್ಟು ಸಡಿಲಗೊಳಿಸಿಲ್ಲ. ವಿದ್ಯುತ್ ಬಿಲ್ ಸೇರಿದಂತೆ ರೈತರ ನಾಲ್ಕು ಬೇಡಿಕೆಗಳಲ್ಲಿ 2 ಬೇಡಿಕೆಗೆ ಕೇಂದ್ರ ಒಪ್ಪಿಗೆ ನೀಡಿದೆ. ಆದರೆ ಇನ್ನುಳಿದ ಕೇಂದ್ರ ಸರ್ಕಾರ ಮಾತಿಗೆ ರೈತರು ಜಗ್ಗಿಲ್ಲ. ಹೀಗಾಗಿ ಮಾತುಕತೆ, ಸಂಪೂರ್ಣ ಫಲಪ್ರದವಾಗಿಲ್ಲ. ಹೀಗಾಗಿ ಪ್ರತಿಭಟನೆ ಮುಂದುವರಿಯಲಿದೆ. 7ನೇ ಸುತ್ತಿನ ಮಾತುಕತೆ ಜನವರಿ 4 ರಂದು ನಡೆಲು ನಿರ್ಧರಿಸಲಾಗಿದೆ.
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೇ ಸಚಿವ ಪಿಯೂಷ್ ಗೋಯಸ್ ಸೇರಿದಂತೆ ಕೇಂದ್ರಸರ್ಕಾರ ಮೂವರು ಸಚಿವರು ರೈತರೊಂದಿಗೆ ಮಾತುಕತೆ ನಡೆಸಿತು. ಪ್ರತಿಭಟನಾ ನಿರತ ರೈತ ಸಂಘಟನೆಗಳ 41 ಮುಖಂಡರು ಈ ಮಾತುಕತೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗೆ ಸಂಬಂಧಿಸಿ ಸಮಿತಿ ರಚಿಸುವ ಭರವೆಸೆ ನೀಡಿದೆ. ಆದರೆ ಕಾಯ್ದೆಯನ್ನೇ ಹಿಂಪಡೆಯಲು ರೈತ ಸಂಘಟನೆಗಳು ಪಟ್ಟು ಹಿಡಿದಿದೆ.
ಕನಿಷ್ಠ ಬೆಂಬಲ ಬೆಲೆ ಸರಿಯಾಗಿ ಜಾರಿಯಾಗುವಂತೆ ನೋಡಿಕೊಳ್ಳವು ಸಮಿತಿ ಸೇರಿದಂತೆ ಹಲವು ಪರಿಹಾರ ಸೂತ್ರಗಳನ್ನು ಕೇಂದ್ರ ಮುಂದಿಟ್ಟಿತು. ಆದರೆ ರೈತ ಸಂಘಟನಗಳು ಮೂರು ಕೃಷಿ ಕಾಯ್ದೆ ಹಿಂಪೆಡಯುವುದನ್ನು ಬಿಟ್ಟು ಬೇರೆ ಏನೂ ಮಾತಾಡಿಲ್ಲ. ಮೂರು ಕಾಯ್ದೆಗಳಲ್ಲಿನ ಸಮಸ್ಯೆಗಳಲ್ಲ, ಮೂರು ಕಾಯ್ದೆಗಳೇ ಸಮಸ್ಯೆ ಎಂದು ರೈತರ ಪಟ್ಟು ಹಿಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ