
ನವದೆಹಲಿ: ರೈತರಿಗೆ ಉತ್ತಮ ಬೆಲೆ ಒದಗಿಸಲು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸುವ ಸಲುವಾಗಿ 35,000 ಕೋಟಿ ರು.ವೆಚ್ಚದ ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ (ಪಿಎಂ-ಆಶಾ) ಯೋಜನೆಯನ್ನು ಮುಂದುವರೆಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ರೈತರು ಮತ್ತು ಗ್ರಾಹಕರಿಗೆ ಉಪಯೋಗವಾಗುವಂತೆ ಬೆಲೆ ಬೆಂಬಲ ಯೋಜನೆ (ಪಿಎಸ್ಎಸ್) ಮತ್ತು ಬೆಲೆ ಸ್ಥಿರೀಕರಣ ನಿಧಿ (ಪಿಎಸ್ಎಫ್)ಯನ್ನು ಒಗ್ಗೂಡಿಸಲಾಗಿದೆ. ಇದರಿಂದಾಗಿ ಪಿಎಂ-ಆಶಾ ಯೋಜನೆ ಪಿಎಸ್ಎಸ್, ಪಿಎಸ್ಎಫ್, ಬೆಲೆ ಕೊರತೆ ಪಾವತಿ ಯೋಜನೆಯ(ಪಿಒಪಿಎಸ್), ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ(ಎಂಐಎಸ್) ಅಂಶಗಳನ್ನು ಒಳಗೊಂಡಿರಲಿದೆ.
ಹಿಂಗಾರು ಬೆಳೆಗಾರರಿಗೆ ಕೈಗೆಟುಕುವ ದರದಲ್ಲಿ ಕೃಷಿ ಪೋಷಕಾಂಶಗಳನ್ನು ವಿತರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ಮೇಲೆ 24474 3 ಕೋಟಿ ರು. ಸಬ್ಸಿಡಿಯನ್ನು ಘೋಷಿಸಿದೆ.
ರಸಗೊಬ್ಬರ ತಯಾರಕರು/ಆಮದುದಾರರ ಮೂಲಕ ರೈತರಿಗೆ ಪಿ&ಕೆ ರಸಗೊಬ್ಬರದ 28 ಗ್ರೇಡ್ಗಳನ್ನು ಸಬ್ಸಿಡಿ ದರದಲ್ಲಿ ಒದಗಿಸುವುದು ಇದರ ಉದ್ದೇಶವಾಗಿದ್ದು, ಇದು 2024ರ ಅಕ್ಟೋಬರ್ನಿಂದ 2025ರ ಮಾರ್ಚ್ವರೆಗೆ ಅನ್ವಯಿಸುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ