ಮೋದಿ ಸರ್ಕಾರದ ಮೊದಲ 100 ದಿನಗಳ ಕಾರ್ಯ ಯೋಜನೆ ರೆಡಿ!

Published : Jun 11, 2024, 12:57 PM ISTUpdated : Jun 11, 2024, 05:34 PM IST
ಮೋದಿ ಸರ್ಕಾರದ ಮೊದಲ 100 ದಿನಗಳ ಕಾರ್ಯ ಯೋಜನೆ ರೆಡಿ!

ಸಾರಾಂಶ

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಅವರ ಸರ್ಕಾರದ ಮೊದಲ 100 ದಿನಗಳ ಕಾರ್ಯ ಯೋಜನೆ ಸಿದ್ಧವಾಗಿದೆ.

ನವದೆಹಲಿ (ಜೂ.11): ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಅವರ ಸರ್ಕಾರದ ಮೊದಲ 100 ದಿನಗಳ ಕಾರ್ಯ ಯೋಜನೆ ಸಿದ್ಧವಾಗಿದೆ.

ಕೇಂದ್ರದ ಎಲ್ಲ ಸಚಿವಾಲಯಗಳು ಹಾಗೂ ಇಲಾಖೆಗಳು ತಮ್ಮ ವರದಿಯನ್ನು ತಯಾರು ಮಾಡಿದ್ದು, ಅದನ್ನು ಮುಂದಿನ ವಾರ ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ) ಹಾಗೂ ಕೇಂದ್ರ ಮಂತ್ರಿ ಪರಿಷತ್‌ ಮುಂದೆ ಮಂಡನೆ ಮಾಡುವ ನಿರೀಕ್ಷೆ ಇದೆ.

ಮಿತ್ರಪಕ್ಷಗಳ ಮರ್ಜಿಯೊಂದಿಗೆ 3ನೇ ಬಾರಿ ಪ್ರಧಾನಿಯಾದ ಮೋದಿ ಎಂದು ವಿದೇಶಿ ಮಾಧ್ಯಮಗಳ ವರದಿ

ಸರ್ಕಾರಿ ಕಾರ್ಯದರ್ಶಿಗಳ 10 ವಲಯವಾರು ಗುಂಪುಗಳು ಈಗಾಗಲೇ 100 ದಿನಗಳ ಕಾರ್ಯಯೋಜನೆಯನ್ನು ಸಂಪುಟ ಕಾರ್ಯದರ್ಶಿ ಹಾಗೂ ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳ ಮುಂದೆ ಮಂಡಿಸಿದ್ದಾರೆ. ಪ್ರಧಾನಿ ಮೋದಿ ಅವರು ಇಟಲಿಯಲ್ಲಿ ನಡೆಯುವ ಜಿ-7 ಶೃಂಗದಲ್ಲಿ ಮುಂದಿನ ವಾರ ಪಾಲ್ಗೊಂಡು ವಾಪಸಾಗಲಿದ್ದಾರೆ. ಆ ವೇಳೆ 100 ದಿನಗಳ ಕಾರ್ಯಯೋಜನೆಯನ್ನು ಪಿಎಂಒ ಹಾಗೂ ಸಂಪುಟದ ಮುಂದೆ ಮಂಡಿಸಲಾಗುತ್ತದೆ. ಜೂ.17 ಅಥವಾ 18ರ ವೇಳೆ ಇದು ಮಂಡನೆಯಾಗಲಿದೆ ಎಂದು ವರದಿಗಳು ತಿಳಿಸಿವೆ.

ಈಗಾಗಲೇ ವರದಿಯನ್ನು ಸಿದ್ಧಪಡಿಸಿದ್ದೇವೆ. ಕೆಲವೊಂದು ಅಂಶಗಳ ಸೇರ್ಪಡೆ ಅಥವಾ ಬದಲಾವಣೆಗಳ ಕುರಿತು ಚರ್ಚೆ ನಡೆಯುತ್ತಿದೆ. ಅಂತಿಮ ಪ್ರಾತ್ಯಕ್ಷಿಕೆ ವರದಿಯನ್ನು ಸಜ್ಜಾಗಿಟ್ಟುಕೊಳ್ಳಲು ನಮಗೆ ಸೂಚಿಸಲಾಗಿದೆ. ಮುಂಬರುವ ದಿನಗಳಲ್ಲಿ ಇದನ್ನು ಮಂಡನೆ ಮಾಡಲು ಅವಕಾಶ ನೀಡಲಾಗುತ್ತದೆ. ಪ್ರಾಯಶಃ ಜೂ.17 ಅಥವಾ 18ರ ವೇಳೆಗೆ ಮಂಡಿಸಬೇಕಾಗಿ ಬರಬಹುದು ಎಂಬ ಸೂಚನೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದೇಶಿ ಮಾಧ್ಯಮಗಳು ಯುರೋಪ್ ದೇಶಗಳನ್ನೇಕೆ ಕ್ರಿಶ್ಚಿಯನ್ ನ್ಯಾಷನಲಿಸ್ಟ್ ಸರ್ಕಾರ ಎಂದು ಕರೆಯಲ್ಲ?

ಭಾನುವಾರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಭಾವಿ ಸಚಿವರ ಸಭೆ ನಡೆಸಿದ್ದ ಮೋದಿ ಅವರು, 100 ದಿನಗಳ ಕಾರ್ಯ ಯೋಜನೆ ಜಾರಿ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದರು.

ಚುನಾವಣೆ ಘೋಷಣೆಯಾಗುವ ಮೊದಲೇ ಅಂದರೆ, ಮಾ.3ರಂದು ಪ್ರಧಾನಿ ಮೋದಿ ಅವರು ಎಲ್ಲ ಸಚಿವಾಲಯಗಳ ಜತೆಗೆ ಸಭೆ ನಡೆಸಿ, 100 ದಿನಗಳ ಕಾರ್ಯಯೋಜನೆ ಸಿದ್ಧಪಡಿಸಲು ಸೂಚಿಸಿದ್ದರು. ದೊಡ್ಡದಾಗಿ ಹಾಗೂ ಮಹತ್ವಾಕಾಂಕ್ಷೆಯಿಂದ ಯೋಚನೆ ಮಾಡುವಂತೆಯೂ ನಿರ್ದೇಶಿಸಿದ್ದರು. ಮಾಮೂಲಿ ಕೆಲಸ ಕಾರ್ಯಗಳು ಹಾಗೂ ಸುಲಭವಾಗಿ ಮಾಡಬಹುದಾದ ಯೋಜನೆಗಳನ್ನಷ್ಟೇ ಸೂಚಿಸದಂತೆಯೂ ಸಲಹೆ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!