
ನವದೆಹಲಿ (ಜು.27): ಕೇಂದ್ರ ಪಡಿತರ, ಗ್ರಾಹಕ ವ್ಯವಹಾರ ಹಾಗೂ ನವೀಕೃತ ಇಂಧನ ಸಚಿವ ಪ್ರಹ್ಲಾದ ಜೋಶಿ ಅವರು, ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ತರುವಾಯ ತಮಗೆ ಹೆಚ್ಚುವರಿಯಾಗಿ ವಹಿಸಲಾಗಿರುವ ಶಿಕ್ಷಣ ಸಚಿವ ಖಾತೆಯ ಅಧಿಕಾರವನ್ನು ಭಾನುವಾರ ವಹಿಸಿಕೊಂಡರು.
ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅವರು ಇಲಾಖಾ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪ್ರಧಾನಿಯವರು ಈ ಜವಾಬ್ದಾರಿಯನ್ನು ನನಗೆ ಪೂರ್ಣ ವಿಶ್ವಾಸದಿಂದ ವಹಿಸಿದ್ದಾರೆ. ನಾನು ನಿನ್ನೆ ಕರ್ನಾಟಕದಲ್ಲಿದ್ದೆ. ನಾನು ನಿನ್ನೆ ರಾತ್ರಿ ಇಲ್ಲಿಗೆ ತಲುಪಿ ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡೆ’ ಎಂದರು.
‘ಇದು ನನಗೆ ಹೊಸ ವಿಷಯವಾಗಿದೆ. ಇದು ಬಹಳ ದೊಡ್ಡ ಇಲಾಖೆ. ಅಧಿಕಾರಿಗಳ ಜತೆ ಚರ್ಚಿಸಿ ಮಾಹಿತಿ ಸಂಗ್ರಹಿಸಿದ್ದೇನೆ. ಸಚಿವಾಲಯದ ಕಾರ್ಯನಿರ್ವಹಣೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಆದ್ದರಿಂದ ನಾನು ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡ ನಂತರ ನಿಮ್ಮೊಂದಿಗೆ ವಿವರವಾಗಿ ಮಾತನಾಡುತ್ತೇನೆ’ ಎಂದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಜಂತರ್ಮಂತರ್ನಲ್ಲಿ ಜಿರಳೆ ಪಕ್ಷ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಶನಿವಾರ ಶಿಕ್ಷಣ ಖಾತೆಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ಜೋಶಿ ಅವರಿಗೆ ಶನಿವಾರ ರಾತ್ರಿ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ನೀಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ