ಮೋದಿ ಸಂಪುಟದಲ್ಲಿ ಮೇಜರ್‌ ಸರ್ಜರಿ: ಕಾನೂನು ಸಚಿವ ಸ್ಥಾನ ಕಳೆದುಕೊಂಡ ಕಿರಣ್‌ ರಿಜಿಜು

Published : May 18, 2023, 10:28 AM ISTUpdated : May 18, 2023, 11:10 AM IST
ಮೋದಿ ಸಂಪುಟದಲ್ಲಿ ಮೇಜರ್‌ ಸರ್ಜರಿ: ಕಾನೂನು ಸಚಿವ ಸ್ಥಾನ ಕಳೆದುಕೊಂಡ ಕಿರಣ್‌ ರಿಜಿಜು

ಸಾರಾಂಶ

ಕೇಂದ್ರ ಸರ್ಕಾರದ ಕ್ಯಾಬಿನೆಟ್‌ ಸಚಿವಾಲಯದಲ್ಲಿ ಪುನರ್‌ ರಚನೆ ಮಾಡಲಾಗಿದೆ. ಕಾನೂನು ಸಚಿವರಾಗಿದ್ದ ಕಿರಣ್‌ ರಿಜಿಜುಗೆ ಭೂ ವಿಜ್ಞಾನ ಸಚಿವ ಸ್ಥಾನವನ್ನು ನೀಡಲಾಗಿದೆ. 

ನವದೆಹಲಿ (ಮೇ 18, 2023): ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ಯಾಬಿನೆಟ್‌ ಸಚಿವಾಲಯದಲ್ಲಿ ಪುನರ್‌ ರಚನೆ ಮಾಡಲಾಗಿದೆ. ಕಾನೂನು ಸಚಿವರಾಗಿದ್ದ ಕಿರಣ್‌ ರಿಜಿಜುಗೆ ಭೂ ವಿಜ್ಞಾನ ಸಚಿವ ಸ್ಥಾನವನ್ನು ನೀಡಲಾಗಿದೆ. 

ಇನ್ನು, ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಸಚಿವರಾಗಿರುವ ಅರ್ಜುನ್‌ ರಾಮ್‌ ಮೇಘ್ವಾಲ್‌ ಅವರಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯಾಂಗ ಸಚಿವ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ರಾಷ್ಟ್ರಪತಿ ಭವನದ ಮೂಲಗಳು ಖಚಿತಪಡಿಸಿವೆ. 

ಇದನ್ನು ಓದಿ : ನ್ಯಾಯಾಂಗ, ಕೊಲಿಜಿಯಂ ವಿರುದ್ಧ ಹೇಳಿಕೆ: ಉಪರಾಷ್ಟ್ರಪತಿ ಧನಕರ್‌, ಸಚಿವ ರಿಜಿಜು ವಿರುದ್ಧ ಇಂದು ಸುಪ್ರಿಂಕೋರ್ಟ್‌ ವಿಚಾರಣೆ

ನ್ಯಾಯಾಂಗ ಮತ್ತು ಕೊಲಿಜಿಯಂ ಬಗ್ಗೆ ನೀಡಲಾದ ಹೇಳಿಕೆಗಳ ಸಂಬಂಧ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹಾಗೂ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆಯು ಪಾರದರ್ಶಕವಾಗಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹೇಳಿದ್ದರು. ಕೊಲಿಜಿಯಂ ವಿಚಾರದಲ್ಲಿ ಕಿರಣ್‌ ರಿಜಿಜು ಅಸಮಾಧಾನ, ಸುಪ್ರೀಂಕೋರ್ಟ್‌ ವಿರುದ್ಧದ ತಿಕ್ಕಾಟದ ನಡುವೆಯೇ ಕೇಂದ್ರ ಸರ್ಕಾರ ಕ್ಯಾಬಿನೆಟ್‌ ಪುನರ್‌ರಚನೆ ಮಾಡಿದೆ. 

ಇನ್ನು, ಈ ಬೆಳವಣಿಗೆಗೆ ವಿಪಕ್ಷಗಳಾದ ಟಿಎಂಸಿ, ಉದ್ಧವ್‌ ಠಾಕ್ರೆ ಶಿವಸೇನೆ ಬಣ ಹಾಗೂ ಕಾಂಗ್ರೆಸ್‌ ನಾಯಕರು ಸಹ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಸಚಿವ ಸ್ಥಾನದಿಂದ ಕಿರಣ್‌ ರಿಜಿಜು ಪದಚ್ಯುತಿ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ  ಉದ್ಧವ್‌ ಠಾಕ್ರೆ ಬಣದ ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ “ಮಹಾರಾಷ್ಟ್ರದ ತೀರ್ಪಿನ ಮುಜುಗರದ ಕಾರಣವೇ? ಅಥವಾ ಮೋದಾನಿ-ಸೆಬಿ ತನಿಖೆಯೇ?’’ ಎಂದು ಟ್ವೀಟ್‌ ಮೂಲಕ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ರಾಜಕೀಯ ಹಿನ್ನೆಲೆಯವರಿಗೆ ಜಡ್ಜ್‌ ಹುದ್ದೆ: ರಿಜಿಜು ಸಮರ್ಥನೆ; ಮದ್ರಾಸ್‌ ಹೈಕೋರ್ಟ್‌ಗೆ ಗೌರಿ ನೇಮಕ ಹಿನ್ನೆಲೆ ಸುಪ್ರೀಂ ವಿಚಾರಣೆ

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಅಲ್ಕಾ ಲಂಬಾ ಕೂಡ  "ಕೇಂದ್ರ ಸರ್ಕಾರವು ತನ್ನ ಇಮೇಜ್ ಅನ್ನು ರಕ್ಷಿಸಿಕೊಳ್ಳಲು ಕಿರಣ್‌ ರಿಜಿಜು ಅವರನ್ನು ತೆಗೆದುಹಾಕಿದೆ" ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ಗೆ 5 ಜಡ್ಜ್‌ಗಳ ನೇಮಕ: ಸುಪ್ರೀಂ ಅತೃಪ್ತಿ ಬೆನ್ನಲ್ಲೇ ಕೇಂದ್ರ ಸರ್ಕಾರ ಅಸ್ತು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!