
ನವದೆಹಲಿ (ಡಿಸೆಂಬರ್ 12, 2023): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ರದ್ದು ನಿರ್ಧಾರ ಸರಿ ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ, ಈ ವಿಷಯದಲ್ಲಿ ಮೂರೂವರೆ ದಶಕಗಳ ನಾನಾ ರೀತಿಯ ಹೋರಾಟ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ಸಿಕ್ಕ ಬಹುದೊಡ್ಡ ಜಯ ಎಂದೇ ಬಣ್ಣಿಸಲಾಗಿದೆ.
ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ 370ನೇ ವಿಧಿ ರದ್ದುಗೊಳಿಸುವ ನಿರ್ಧಾರ ಕೈಗೊಂಡಿದ್ದು ಹೌದಾದರೂ, ಅಂಥದ್ದೊಂದು ಹೋರಾಟಕ್ಕೆ ಅವರು ಮೂರೂವರೆ ದಶಕಗಳ ಹಿಂದೆಯೇ ಏಕತಾ ಯಾತ್ರೆಯ ಮೂಲಕ ಮುನ್ನುಡಿ ಬರೆದಿದ್ದರು.
ಮೊದಲ ಹೆಜ್ಜೆ:
1984 - 85ರಲ್ಲೇ ಆರ್ಎಸ್ಎಸ್ನ ಸಭೆಯೊಂದರಲ್ಲಿ ಮಾತನಾಡುವಾಗ ಮೊದಲ ಬಾರಿಗೆ ನರೇಂದ್ರ ಮೋದಿ ಜಮ್ಮು ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಸಂವಿಧಾನದ 370ನೇ ವಿಧಿ ಮತ್ತು 35ಎ ವಿಧಿಗಳಿಂದ ಆಗುತ್ತಿರುವ ಪರಿಣಾಮಗಳ ಕುರಿತು ಮಾತನಾಡಿದ್ದರು. 1992ರಲ್ಲಿ ಕನ್ಯಾಕುಮಾರಿಯಿಂದ ಶ್ರೀನಗರದವರೆಗೆ ಕಾಶ್ಮೀರ ವಿಮೋಚನೆಗಾಗಿ 45 ದಿನಗಳ ಏಕತಾ ಯಾತ್ರೆ ಮಾಡಿ ಉಗ್ರರ ಅಡ್ಡಿಯ ನಡುವೆಯೂ ಶ್ರೀನಗರದ ಲಾಲ್ಚೌಕ್ನಲ್ಲಿ ಜನವರಿ 24ರಂದು ತ್ರಿವರ್ಣ ಧ್ವಜ ಹಾರಿಸಿ ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದರು. ಅಲ್ಲದೆ ಅದೇ ವರ್ಷ ಬಿಜೆಪಿಯಿಂದ ಕಾಶ್ಮೀರದ ಅಧ್ಯಯನ ಸಮಿತಿ ಸದಸ್ಯರಾಗಿ 4 ದಿನಗಳ ಕಾಲ ಕಾಶ್ಮೀರ ಪ್ರವಾಸ ಮಾಡಿ ಅಲ್ಲಿನ ವಸ್ತುಸ್ಥಿತಿಯನ್ನು ಅರಿತಿದ್ದರು.
ಇದನ್ನು ಓದಿ: Article 370: ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಮೋದಿ, ಅಮಿತ್ ಶಾ, ಕಾಶ್ಮೀರಿ ನಾಯಕರು ಹೇಳಿದ್ದೀಗೆ..
1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಸ್ವತಃ ತೆರಳಿ ಸೈನಿಕರಿಗೆ ನೆರವು ನೀಡಿದ್ದರು. ಗುಜರಾತ್ ಮುಖ್ಯಮಂತ್ರಿಯಾದಾಗಲೂ ಹಲವಾರು ಬಾರಿ ಕಾಶ್ಮೀರಕ್ಕೆ ತೆರಳಿ ಅಲ್ಲಿನ ವಿವಿಧ ಸಮುದಾಯದೊಂದಿಗೆ ಸಮಾಲೋಚಿಸಿ ಸ್ಫೂರ್ತಿ ತುಂಬಿದ್ದರು. 2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರ ಮಾಡಲು ಕಾಶ್ಮೀರಕ್ಕೆ ತೆರಳಿದಾಗ ವಿಧಿ 35ಎ ದಿಂದ ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದ ಕುರಿತು ಬೆಳಕು ಚೆಲ್ಲಿದ್ದರು.
ಪ್ರಧಾನಿಯಾದ ನಂತರ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಉಗ್ರವಾದವನ್ನು ನಿಗ್ರಹಿಸುವ ಜೊತೆಗೆ ಅಲ್ಲಿನ ಶ್ರೇಯೋಭಿವೃದ್ಧಿಗೆ ಪ್ರಮುಖ ತೊಡಕಾಗಿದ್ದ ಆರ್ಟಿಕಲ್ 370 ಮತ್ತು 35ಎಗಳನ್ನು 2019ರಲ್ಲಿ ಸಂಸತ್ತಿನಲ್ಲಿ ರದ್ದು ಮಾಡಿದರು. ಈಗ ಇದಕ್ಕೆ ನ್ಯಾಯಾಲಯದ ಅನುಮೋದನೆಯೂ ದೊರೆಯುವುದರೊಂದಿಗೆ ಮೂರೂವರೆ ದಶಕಗಳ ಹೋರಾಟಕ್ಕೆ ದೊಡ್ಡ ಜಯ ಸಿಕ್ಕಂತಾಗಿದೆ.
ಕಾಶ್ಮೀರಕ್ಕೆ ವಿಶೇಷ ಸ್ಥಾನ ರದ್ದು ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್: ಮೋದಿ ಸರ್ಕಾರಕ್ಕೆ ಜಯ
ಪ್ರಕರಣ ಸಾಗಿಬಂದ ಹಾದಿ
ಸೆಪ್ಟೆಂಬರ್ 2024ರೊಳಗೆ ಜಮ್ಮು ಕಾಶ್ಮೀರದಲ್ಲಿ ಎಲೆಕ್ಷನ್ ನಡೆಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಡೆಡ್ಲೈನ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ