ಹಿಮಾಲಯಕ್ಕೆ ಹೊರಟಿದ್ದೀರಾ?: ಪವನ್ ಕಲ್ಯಾಣ್‌ ಜತೆ ಮೋದಿ ಹಾಸ್ಯ

Published : Feb 21, 2025, 07:02 AM ISTUpdated : Feb 21, 2025, 07:41 AM IST
ಹಿಮಾಲಯಕ್ಕೆ ಹೊರಟಿದ್ದೀರಾ?: ಪವನ್ ಕಲ್ಯಾಣ್‌ ಜತೆ ಮೋದಿ ಹಾಸ್ಯ

ಸಾರಾಂಶ

ದೆಹಲಿ ಸಿಎಂ ಪ್ರಮಾಣ ವಚನದಲ್ಲಿ ಪವನ್ ಕಲ್ಯಾಣ್ ಅವರ ವೇಷಭೂಷಣ ಕಂಡು ಮೋದಿ ಹಾಸ್ಯವಾಡಿದರು. ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಒಗ್ಗಟ್ಟಿನಿಂದ ಎದುರಿಸಲು ಎನ್‌ಡಿಎ ಮೈತ್ರಿಕೂಟ ತೀರ್ಮಾನಿಸಿದೆ.

ಹಿಮಾಲಯಕ್ಕೆ ಹೊರಟಿದ್ದೀರಾ?: ಪವನ್ ಕಲ್ಯಾಣ್‌ ಜತೆ ಮೋದಿ ಹಾಸ್ಯ

ನವದೆಹಲಿ: ದೆಹಲಿ ಸಿಎಂ ಶಪಥ ಕಾರ್ಯಕ್ರಮಕ್ಕೆ ಆಗಮಿಸಿದ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರ ವೇಷಭೂಷಣವನ್ನು ಕಂಡು ಪ್ರಧಾನಿ ನರೇಂದ್ರ ಮೋದಿ ಅವರು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಇತ್ತೀಚೆಗೆ ಪ್ರಯಾಗರಾಜ್‌ ಸೇರಿ ವಿವಿಧ ಕ್ಷೇತ್ರಗಳಿಗೆ ತೀರ್ಥಯಾತ್ರೆ ಕೈಗೊಂಡಿರುವ ಕಲ್ಯಾಣ್‌ ದೀಕ್ಷೆಯ ಭಾಗವಾಗಿ ಸಾಧಾರಣ ಧಾರ್ಮಿಕ ಉಡುಗೆ ಧರಿಸಿ, ಮೇಲೊಂದು ಶಲ್ಯ ಹೊದ್ದುಕೊಂಡಿದ್ದರು. ಇದನ್ನು ಕಂಡ ಮೋದಿ, ‘ಎಲ್ಲವನ್ನೂ ಬಿಟ್ಟು ಹಿಮಾಲಯಕ್ಕೆ (ತಪಸ್ಸಿಗೆ) ಹೊರಟಿದ್ದೀರಾ?’ ಎಂದು ತಮಾಷೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪವನ್‌, ‘ಸದ್ಯಕ್ಕಂತೂ ಎಲ್ಲೂ ಹೋಗುವುದಿಲ್ಲ. ಮಾಡಬೇಕಾದ ಕೆಲಸ ಸಾಕಷ್ಟಿದೆ. ಹಿಮಾಲಯ ಕಾಯುತ್ತಿರುತ್ತದೆ’ ಎಂದು ಹಾಸ್ಯ ಮಾಡಿದರು.

ಬಳಿಕ ಈ ಬಗ್ಗೆ ಮಾತಾಡಿದ ಕಲ್ಯಾಣ್‌, ‘ಪ್ರಧಾನಿ ಯಾವಾಗಲೂ ನಮ್ಮೊಂದಿಗೆ ಹಾಸ್ಯಮಯವಾಗಿ ಸಂಭಾಷಿಸುತ್ತಾರೆ’ ಎಂದರು.

ಮುಂಬರುವ ವಿಧಾನಸಭಾ ಚುನಾವಣೆ ಒಗ್ಗಟ್ಟಿಂದ ಎದುರಿಸಲು ಎನ್‌ಡಿಎ ಮೈತ್ರಿಕೂಟ ತೀರ್ಮಾನ

ನವದೆಹಲಿ: ಮುಂಬರುವ ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ತೀರ್ಮಾನ ಮಾಡಿದೆ. ದೆಹಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬೆನ್ನಲ್ಲೇ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಸಂಪೂರ್ಣ ಶಕ್ತಿಯೊಂದಿಗೆ ಚುನಾವಣೆ ಎದುರಿಸಲು ಎಲ್ಲ ನಾಯಕರು ಈ ತೀರ್ಮಾನ ಕೈಗೊಂಡರು.

ಮಹಾರಾಷ್ಟ್ರ ಮತ್ತು ದೆಹಲಿ ಚುನಾವಣೆ ರೀತಿಯಲ್ಲೇ ಮುಂಬರುವ ಎಲ್ಲಾ ರಾಜ್ಯಗಳ ಚುನಾವಣೆಯನ್ನು ಎನ್‌ಡಿಎ ಒಕ್ಕೂಟ ಗೆಲ್ಲಲಿದೆ ಎಂದು ಭರವಸೆ ನೀಡಿದರು, ಆಗ ಪ್ರಧಾನಿ ಮೋದಿ ಅವರು ನಾವು ಭಾರತವನ್ನು ಒಂದಾಗಿ ಅಭಿವೃದ್ಧಿಪಡಿಸುವ ಗುರಿ ಸಾಧಿಸಲಿದ್ದೇವೆ ಎಂದು ತಿಳಿಸಿದ್ದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ತಿಳಿಸಿದರು. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆಂಧ್ರ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಸೇರಿ ಹಲವು ಎನ್‌ಡಿಎ ಒಕ್ಕೂಟದ ಮುಖಂಡರು, ಬಿಜೆಪಿ ನಾಯಕರು, ಕೇಂದ್ರ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್