Judge cash row | ದೆಹಲಿ ನ್ಯಾಯಾಧೀಶರ ಮನೆಯಲ್ಲಿ ಕಂತೆ ಕಂತೆ ಸುಟ್ಟ ಹಣ: ತನಿಖಾ ವರದಿ ಬಹಿರಂ! ಇಲ್ಲಿದೆ ವಿವರ

Published : Mar 24, 2025, 08:08 AM ISTUpdated : Mar 24, 2025, 08:45 AM IST
Judge cash row | ದೆಹಲಿ ನ್ಯಾಯಾಧೀಶರ ಮನೆಯಲ್ಲಿ ಕಂತೆ ಕಂತೆ ಸುಟ್ಟ ಹಣ: ತನಿಖಾ ವರದಿ ಬಹಿರಂ! ಇಲ್ಲಿದೆ ವಿವರ

ಸಾರಾಂಶ

ದಿಲ್ಲಿ ಹೈಕೋರ್ಟ್ ನ್ಯಾ। ಯಶವಂತ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಬಹಿರಂಗಪಡಿಸಿರುವ ದಿಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ಕೆ. ಉಪಾಧ್ಯಾಯ ಸಲ್ಲಿಸಿದ್ದ ಆಂತರಿಕ ತನಿಖಾ ವರದಿಯಲ್ಲಿ ಸ್ಫೋಟಕ ಅಂಶಗಳಿವೆ. ‘ಜಡ್ಜ್‌ ವರ್ಮಾ ಮನೆಯಲ್ಲಿ ಸುಟ್ಟ 500 ರು. ನೋಟಿನ 4-5 ಗೋಣಿಚೀಲ ಪತ್ತೆ ಆಗಿವೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನವದೆಹಲಿ (ಮಾ.24): ದಿಲ್ಲಿ ಹೈಕೋರ್ಟ್ ನ್ಯಾ। ಯಶವಂತ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಬಹಿರಂಗಪಡಿಸಿರುವ ದಿಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ಕೆ. ಉಪಾಧ್ಯಾಯ ಸಲ್ಲಿಸಿದ್ದ ಆಂತರಿಕ ತನಿಖಾ ವರದಿಯಲ್ಲಿ ಸ್ಫೋಟಕ ಅಂಶಗಳಿವೆ. ‘ಜಡ್ಜ್‌ ವರ್ಮಾ ಮನೆಯಲ್ಲಿ ಸುಟ್ಟ 500 ರು. ನೋಟಿನ 4-5 ಗೋಣಿಚೀಲ ಪತ್ತೆ ಆಗಿವೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನ್ಯಾ। ಉಪಾಧ್ಯಾಯ ವರದಿಯಲ್ಲಿ ವಿಡಿಯೋ ಲಗತ್ತಿಸಲಾಗಿದ್ದು, ಸುಟ್ಟಿರುವ ರಾಶಿರಾಶಿ ಹಣ ತುಂಬಿದ ಚೀಲಗಳ ದೃಶ್ಯಗಳಿವೆ. ಮಾ.15ರಂದು ನ್ಯಾ। ವರ್ಮಾ ಅವರ ದಿಲ್ಲಿ ನಿವಾಸದಲ್ಲಿ ಬೆಂಕಿ ಸಂಭವಿಸಿತ್ತು. ಆಗ ವರ್ಮಾ ಅವರ ಮನೆಗೆ ಬಿದ್ದ ಬೆಂಕಿ ನಂದಿಸಲು ತೆರಳಿದ್ದ ಅಗ್ನಿಶಾಮಕ ಸಿಬ್ಬಂದಿಗೆ ನೋಟಿನ ಕಂತೆಗಳು ಕಂಡುಬಂದಿದ್ದವು. ಇದರ ವಿಡಿಯೋ ಚಿತ್ರೀಕರಣ ಮಾಡಿ ದಿಲ್ಲಿ ಪೊಲೀಸ್ ಆಯುಕ್ತರು ದಿಲ್ಲಿ ಹೈಕೋರ್ಟ್‌ಗೆ ಮಾ.16ರಂದು ವಿಡಿಯೋ ಸಮೇತ ವರದಿ ನೀಡಿದ್ದರು.

ಈ ವರದಿಯನ್ನು ಉಲ್ಲೇಖಿಸಿ ದಿಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ನ್ಯಾ। ಉಪಾಧ್ಯಾಯರು ಸುಪ್ರೀಂ ಕೋರ್ಟ್‌ಗೆ ವರದಿ ನಡಿದ್ದು, ‘ಬೆಂಕಿ ಹೊತ್ತಿಕೊಂಡ ಕೋಣೆಯಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದ ನಂತರ, 4-5 ಅರ್ಧ ಸುಟ್ಟ ಚೀಲಗಳು ಕಂಡುಬಂದಿವೆ. ಅವುಗಳೊಳಗೆ ಭಾರತೀಯ ಕರೆನ್ಸಿಯ ಅವಶೇಷಗಳು ಕಂಡುಬಂದಿವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿದೆಹಲಿ ನ್ಯಾಯಾಧೀಶರ ಮನೆಯಲ್ಲಿ ಸುಟ್ಟ ನೋಟಿನ ದೃಶ್ಯ ಬಯಲು

ಈ ಬೆಚ್ಚಿ ಬೀಳಿಸುವ ಅಂಶದ ಕಾರಣ, ತ್ರಿಸದಸ್ಯ ಆಂತರಿಕ ನ್ಯಾಯಾಂಗ ತನಿಖೆಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರು ಆದೇಶಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಆರೋಪ ಸಾಬೀತಾದರೆ ವಜಾ ಸಂಭವ

ನವದೆಹಲಿ: ಸುಪ್ರೀಂ ಕೋರ್ಟ್‌ ನೇಮಿತ ತ್ರಿಸದಸ್ಯ ನ್ಯಾಯಾಧೀಶರ ಸಮಿತಿಯು ನ್ಯಾ। ಯಶವಂತ ವರ್ಮಾ ವಿರುದ್ಧ ಕೈಗೊಂಡಿರುವ ತನಿಖೆ ಗಂಭೀರ ಸ್ವರೂಪದ್ದಾಗಿದೆ. ಒಂದು ವೇಳೆ ಆರೋಪಗಳು ಸಾಬೀತಾದಲ್ಲಿ ಈ ಸಮಿತಿಯು ವಜಾ ಪ್ರಕ್ರಿಯೆಗೆ ಶಿಫಾರಸು ಮಾಡಬಹುದು ಎಂದು ಮೂಲಗಳು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!