
ನವದೆಹಲಿ(ಜು.03): ನಿಗದಿತ ದಿನಾಂಕಕ್ಕಿಂತ ಆರು ದಿನಗಳ ಮೊದಲೇ ಮುಂಗಾರು ಮಳೆ ಹಿಗ್ಗಿದ್ದು, ಇಡೀ ದೇಶವನ್ನೇ ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.
‘ಈ ಹಿಂದೆ ಅಂದಾಜಿಸಿದಂತೆ ಜು. 8ರ ಬದಲು ಆರು ದಿನಗಳ ಮೊದಲೇ ನೈಋುತ್ಯ ಮಾನ್ಸೂನ್ ಶನಿವಾರ ಇಡೀ ದೇಶವನ್ನೇ ವ್ಯಾಪಿಸಿದೆ’ ಎಂದು ಐಎಂಡಿ ತಿಳಿಸಿದೆ.
ಈ ಹಿಂದೆಯೂ ಕೂಡಾ ಜೂ.1 ರಂದು ಕೇರಳವನ್ನು ನೈಋುತ್ಯ ಮಾನ್ಸೂನ್ ಪ್ರವೇಶಿಸಲಿದೆ ಎಂದು ಐಎಂಡಿ ಅಂದಾಜಿಸಿತ್ತು. ಆದರೆ ಅದಕ್ಕೂ 3 ದಿನ ಮೊದಲೇ ಮೇ. 29 ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗಿತ್ತು. ನೈಋುತ್ಯ ಮಾನ್ಸೂನ್ ಪ್ರವೇಶದೊಂದಿಗೆ ಉಷ್ಣ ಅಲೆಯಲ್ಲಿ ತತ್ತರಿಸುತ್ತಿದ್ದ ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಮಳೆ ಆರಂಭವಾಗಿದೆ.
ಕೃಷಿಯಾಧಾರಿತ ದೇಶವಾದ ಭಾರತಕ್ಕೆ ನೈಋುತ್ಯ ಮುಂಗಾರು ಮಳೆಯು ಅತ್ಯಂತ ಪ್ರಮುಖವಾಗಿದೆ. ಈಗಾಗಲೇ ದೇಶವು ಶೇ. 8ರಷ್ಟುಮಳೆಯ ಕೊರತೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮಾನ್ಸೂನ್ ಮಳೆಯು ಇನ್ನಷ್ಟುಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಹಮಾಮಾನ ತಜ್ಞರು ಜುಲೈನಲ್ಲಿ ಉತ್ತಮ ಮಳೆಯಾಗಬಹುದು ಎಂದು ನಿರೀಕ್ಷಿಸಿದ್ದಾರೆ.
ದೇಶದಲ್ಲಿ ಜೂನ್ನಲ್ಲಿ ಶೇ.8ರಷ್ಟುಮಳೆ ಕೊರತೆ
ಕಳೆದ 2 ವರ್ಷ ಜೂನ್ ತಿಂಗಳಲ್ಲಿ ಹೆಚ್ಚಾಗಿ ಸುರಿದಿದ್ದ ಮುಂಗಾರು ಮಳೆ ಈ ವರ್ಷ ದೇಶದಲ್ಲಿ ಶೇ.8ರಷ್ಟುಕುಂಠಿತಗೊಂಡಿದೆ. ಈ ವರ್ಷದ ಜೂನ್ನಲ್ಲಿ ದೇಶದಲ್ಲಿ ಸರಾಸರಿ 15.23 ಸೆಂ.ಮೀ. ಮಳೆಯಾಗಿದೆ. ಇದು ಸಾಮಾನ್ಯಕ್ಕಿಂತಲೂ ಕಡಿಮೆಯಾಗಿದೆ. ಸಾಮಾನ್ಯವಾಗಿ ಜೂನ್ನಲ್ಲಿ ಭಾರತದ ಸರಾಸರಿ ಮಳೆಯ ಪ್ರಮಾಣ 16.53 ಸೆಂ.ಮೀ.
ಇನ್ನು ಕರ್ನಾಟದಲ್ಲೂ ಜೂನ್ನಲ್ಲಿ ಮಳೆಯ ಕೊರತೆ ಎದುರಾಗಿದ್ದು, ಒಟ್ಟಾರೆ 14.5 ಸೆಂ.ಮೀ. ಮಳೆಯಾಗಿದೆ. ಕರ್ನಾಟಕದಲ್ಲಿ ಸಾಮಾನ್ಯ ಮಳೆಯ ಪ್ರಮಾಣ ಶೇ.19.1 ಸೆಂ.ಮೀ ಆಗಿದೆ.
ಕೇರಳ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ಒಟ್ಟು 18 ರಾಜ್ಯಗಳು ಈ ಬಾರಿ ಮಳೆಯ ಕೊರತೆ ಎದುರಿಸಿವೆ. ಇದು ಕಳೆದ 7 ವರ್ಷಗಳಲ್ಲೇ ಜೂನ್ನಲ್ಲಿ ಬಿದ್ದ ಕಡಿಮೆ ಮಳೆ ಪ್ರಮಾಣವಾಗಿದೆ. ಈ ಬಾರಿ ನೈಋುತ್ಯ ಮಾನ್ಸೂನ್ ಮೇ 29ರಂದು ಕೇರಳಕ್ಕೆ ಪ್ರವೇಶ ಪಡೆದರೂ, ಅದರ ಪ್ರಗತಿ ಮಂದಗತಿಯಲ್ಲಿದೆ. ಈ ಬಾರಿ ದಕ್ಷಿಣ ಪರ್ಯಾಯ ದ್ವೀಪ, ಪೂರ್ವ, ಈಶಾನ್ಯ ಮತ್ತು ಕೇಂದ್ರ ಭಾರತಗಳಲ್ಲಿ ಮಳೆಯ ತೀವ್ರ ಕೊರತೆ ಎದುರಾಗಿದೆ.
ಭಾರತದಲ್ಲಿ ಮಾನ್ಸೂನ್ ಮಳೆ ಹೆಚ್ಚಾಗಿ ಬೀಳುವ ತಿಂಗಳು ಜೂನ್ ಆಗಿದೆ. ಈ ತಿಂಗಳಿನಲ್ಲಿ ಮಳೆಯ ಏರಿಳಿತ ಹೆಚ್ಚಾಗಿರುತ್ತದೆ. ಜುಲೈನಲ್ಲಿ ಮಳೆ ಹೆಚ್ಚಾಗಬಹುದು ಎಂದು ಹವಾಮಾನ ಅಧಿಕಾರಿಯೊಬ್ಬರು ಹೇಳಿದ್ದಾರೆ. ದೆಹಲಿಯಲ್ಲಿ ಈ ವರ್ಷದ ಜೂನ್ನಲ್ಲಿ ಶೇ.-70ರಷ್ಟುಮಳೆ ಕೊರತೆಯಾಗಿದೆ. ಉಳಿದಂತೆ ಗುಜರಾತ್ನಲ್ಲಿ ಶೇ.-54, ಜಾರ್ಖಂಡ್ನಲ್ಲಿ ಶೇ.-49, ಒಡಿಶಾದಲ್ಲಿ ಶೇ.-37, ಹರ್ಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಶೇ.-34, ಮಹಾರಾಷ್ಟ್ರದಲ್ಲಿ ಶೇ.-30, ಉತ್ತರಾಖಂಡದಲ್ಲಿ ಶೇ.-29, ಮಿಜೋರಾಂನಲ್ಲಿ ಶೇ.-26ರಷ್ಟುಮಳೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ