ಮೇನಲ್ಲೇ ದೇಶಕ್ಕೆ ಮುಂಗಾರು ಮಳೆ? ವಾಡಿಕೆಗಿಂತ ಮೊದಲೇ ಪ್ರವೇಶ ಸಾಧ್ಯತೆ

Published : May 14, 2020, 10:26 AM IST
ಮೇನಲ್ಲೇ ದೇಶಕ್ಕೆ ಮುಂಗಾರು ಮಳೆ? ವಾಡಿಕೆಗಿಂತ ಮೊದಲೇ ಪ್ರವೇಶ ಸಾಧ್ಯತೆ

ಸಾರಾಂಶ

ಮೇ ಅಂತ್ಯಕ್ಕೇ ಮುಂಗಾರು?| ವಾಡಿಕೆಗಿಂತ ಮೊದಲೇ ಪ್ರವೇಶ ಸಾಧ್ಯತೆ| ಅಂಡಮಾನ್‌ಗೆ ಈ ಸಲ 6 ದಿನ ಮೊದಲೇ ಆಗಮನ

ನವದೆಹಲಿ(ಮೇ.14): ದೇಶದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಈ ಬಾರಿ ಸಾಮಾನ್ಯಕ್ಕಿಂತ ಒಂದು ವಾರ ಮೊದಲೇ ಮಳೆ ಹೊತ್ತು ತರುವ ಸಾಧ್ಯತೆ ಕಂಡುಬರುತ್ತಿದೆ. ಸಾಮಾನ್ಯವಾಗಿ, ಮೇ 20-22ರ ವೇಳೆಗೆ ಅಂಡಮಾನ್‌- ನಿಕೋಬಾರ್‌ ಪ್ರವೇಶಿಸುತ್ತಿದ್ದ ಮುಂಗಾರು ಮಾರುತಗಳು, ಚಂಡಮಾರುತದ ಪ್ರಭಾವದಿಂದಾಗಿ ಈ ವರ್ಷ 6 ದಿನ ಮೊದಲೇ ಅಂದರೆ ಮೇ 16 ರ ವೇಳೆಗೆ ಆ ದ್ವೀಪ ಸಮೂಹಕ್ಕೆ ಆಗಮಿಸುತ್ತಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಂಡಮಾನ್‌ ಪ್ರವೇಶಿಸಿದ 10-11 ದಿನಗಳಲ್ಲಿ ಮುಂಗಾರು ಕೇರಳ ಪ್ರವೇಶಿಸುವುದು ವಾಡಿಕೆ. ಮೇ 20ರ ವೇಳೆಗೆ ಅಂಡಮಾನ್‌ಗೆ ಬರುವ ಮುಂಗಾರು, ಜೂನ್‌ 1ಕ್ಕೆ ಕೇರಳದಲ್ಲಿ ಮೊದಲ ಮಳೆ ತರುವುದು ಸಾಮಾನ್ಯ. ಆದರೆ ದ್ವೀಪಕ್ಕೆ ವಾರದ ಮೊದಲೇ ಮುಂಗಾರು ಆಗಮಿಸುತ್ತಿರುವ ಕಾರಣ ಕೇರಳಕ್ಕೂ ಅಷ್ಟೇ ಬೇಗ ಮಳೆ ಬರುವ ಸಾಧ್ಯತೆ ಇದೆ. ಆದರೆ ಕೇರಳಕ್ಕೆ ಮುಂಗಾರು ಪ್ರವೇಶದ ದಿನಾಂಕವನ್ನು ಹವಾಮಾನ ಇಲಾಖೆ ಇನ್ನೂ ಪ್ರಕಟಿಸಿಲ್ಲ. ಇದನ್ನು ಮುಂದಿನ ಕೆಲ ದಿನಗಳಲ್ಲೇ ಪ್ರಕಟಿಸುವುದಾಗಿ ಹೇಳಿದೆ.

ಚಂಡಮಾರುತ ಸೃಷ್ಟಿಯ ಮೊದಲ ಹಂತವಾದ ವಾಯುಭಾರ ಕುಸಿತವು, ಬುಧವಾರ ಅಂಡಮಾನ್‌ ನಿಕೋಬಾರ್‌ ದ್ವೀಪ ಸಮೂಹದ ಪ್ರದೇಶದಲ್ಲಿ ಕಂಡುಬಂದಿದೆ. ಇದು ಮುಂಗಾರು ಪ್ರವೇಶದ ಮೊದಲ ಸುಳಿವು ಎಂದು ಹವಾಮಾನ ಇಲಾಖೆ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
India Latest News Live: ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!