ಸಂಸತ್ತಿನ ಮುಂಗಾರು ಅಧಿವೇಶನ ಅರ್ಧ ಆನ್‌ಲೈನ್‌?

Published : Jun 11, 2020, 10:45 AM ISTUpdated : Jun 11, 2020, 11:41 AM IST
ಸಂಸತ್ತಿನ ಮುಂಗಾರು ಅಧಿವೇಶನ ಅರ್ಧ ಆನ್‌ಲೈನ್‌?

ಸಾರಾಂಶ

ಸಂಸತ್ತಿನ ಮುಂಗಾರು ಅಧಿವೇಶನ ಅರ್ಧ ಆನ್‌ಲೈನ್‌?| ಆಯಾ ದಿನ ಅಗತ್ಯವಿರುವ ಸಂಸದರು ಮಾತ್ರ ಸಂಸತ್ತಿಗೆ| ಇನ್ನುಳಿದವರು ಮನೆಯಿಂದಲೇ ಆನ್‌ಲೈನ್‌ನಲ್ಲಿ ಭಾಗಿ

ನವದೆಹಲಿ(ಜೂ.11): ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನ ಭಾಗಶಃ ಆನ್‌ಲೈನ್‌ನಲ್ಲಿ ನಡೆಯುವ ಸಾಧ್ಯತೆಯಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ‘ಹೈಬ್ರೀಡ್‌ ಸೀಟಿಂಗ್‌’ ವ್ಯವಸ್ಥೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನದ ಸಿದ್ಧತೆಯಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳು ಈ ಕುರಿತು ಸುಳಿವು ನೀಡಿದ್ದಾರೆ.

ಅಧಿಕಾರಿಗೆ ಕೊರೋನಾ ಸಂಸತ್ತಿನ 2 ಮಹಡಿ ಸೀಲ್‌ಡೌನ್‌!

ಮುಂಗಾರು ಅಧಿವೇಶನ ಸಾಮಾನ್ಯವಾಗಿ ಜುಲೈ ಮೊದಲ ವಾರ ಆರಂಭವಾಗುತ್ತದೆ. ಅದರಂತೆ ಈಗ ಸಿದ್ಧತೆ ಆರಂಭವಾಗಿದ್ದು, ಆಯಾ ದಿನ ಯಾವ ಸಂಸದರು ಕಲಾಪದಲ್ಲಿ ಪಾಲ್ಗೊಳ್ಳುವುದು ಅಗತ್ಯವಿದೆಯೋ ಅವರಿಗೆ ಮಾತ್ರ ಭೌತಿಕವಾಗಿ ಕಲಾಪದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಅಂದರೆ, ಯಾವ ಸಂಸದರು ಪ್ರಶ್ನೆ ಕೇಳಲು ಅಥವಾ ವಿಷಯ ಪ್ರಸ್ತಾಪಿಸಲು ಅವಕಾಶ ಕೇಳಿದ್ದಾರೋ ಅವರನ್ನು ಮತ್ತು ಯಾವ ಸಂಸದರನ್ನು ರಾಜಕೀಯ ಪಕ್ಷಗಳು ಚರ್ಚೆಯಲ್ಲಿ ಪಾಲ್ಗೊಳ್ಳಲು ನಿಯೋಜಿಸಿವೆಯೋ ಅವರನ್ನು ಮಾತ್ರ ಕಲಾಪಕ್ಕೆ ಕರೆಸಬೇಕು. ಇನ್ನುಳಿದವರು ಮನೆಯಿಂದಲೇ ಆನ್‌ಲೈನ್‌ ಮೂಲಕ ಕಲಾಪದಲ್ಲಿ ಪಾಲ್ಗೊಳ್ಳಲು ವ್ಯವಸ್ಥೆ ಮಾಡಬೇಕು ಎಂಬ ಬಗ್ಗೆ ಚಿಂತನೆ ನಡೆದಿದೆ.

ಹೀಗೆ ಮಾಡಿದಾಗ ಲೋಕಸಭೆ ಮತ್ತು ರಾಜ್ಯಸಭೆಗೆ ಆಗಮಿಸುವ ಸಂಸದರ ಸಂಖ್ಯೆ ಕಡಿಮೆಯಾಗುತ್ತದೆ. ಆಗ ಸಾಮಾಜಿಕ ಅಂತರ ಕಾಯ್ದುಕೊಂಡು ‘ಹೈಬ್ರೀಡ್‌ ಸೀಟಿಂಗ್‌’ ರೀತಿಯಲ್ಲಿ ಸಂಸದರಿಗೆ ದೂರ-ದೂರ ಆಸನದ ವ್ಯವಸ್ಥೆ ಮಾಡಬಹುದು ಎಂದು ಯೋಜಿಸಲಾಗಿದೆ. ಮಂಗಳವಾರ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಮತ್ತು ರಾಜ್ಯಸಭೆ ಚೇರ್ಮನ್‌ ವೆಂಕಯ್ಯ ನಾಯ್ಡು ಅವರು ಉಭಯ ಸದನಗಳ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಈ ಕುರಿತು ಸಲಹೆ ಬಂದಿದೆ. ಅಂತಿಮ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ.

ಈ ಬಾರಿ ಸಂಸತ್ ಅಧಿವೇಶನ ನಡೆಸಬೇಕಾ, ಬೇಡ್ವಾ? ದ್ವಂದದಲ್ಲಿ ಸರ್ಕಾರ

ಇಡೀ ಅಧಿವೇಶನವನ್ನು ಆನ್‌ಲೈನ್‌ ಮೂಲಕ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಭಾಗವಾದ ಎನ್‌ಐಸಿ ಹೇಳಿದೆ. ಹೀಗಾಗಿ ಭಾಗಶಃ ಆನ್‌ಲೈನ್‌ ಅಧಿವೇಶನ ನಡೆಸುವ ಸಾಧ್ಯತೆಯೇ ಹೆಚ್ಚಿದೆ. ಈ ಹಿಂದೆ ರಾಜ್ಯಸಭೆಯ ಕಲಾಪವನ್ನು ಲೋಕಸಭೆಗೆ ಸ್ಥಳಾಂತರಿಸಿ, ಲೋಕಸಭೆಯ ಕಲಾಪವನ್ನು ಸೆಂಟ್ರಲ್‌ ಹಾಲ್‌ ಅಥವಾ ವಿಜ್ಞಾನ ಭವನದಲ್ಲಿ ನಡೆಸುವ ಬಗ್ಗೆ ಯೋಚಿಸಲಾಗಿತ್ತು. ಆದರೆ, ಆಗಲೂ ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಆ ಯೋಚನೆ ಕೈಬಿಡಲಾಗಿದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್