
ಹೈದರಾಬಾದ್(ಏ.19): ಕೊರೋನಾ ತಡೆಗಾಗಿ ದೇಶಾದ್ಯಂತ ಹೇರಲಾಗಿರುವ ಲಾಕ್ಡೌನ್ ಹೊಡೆತಕ್ಕೆ ಬಡವರು ಮತ್ತು ವಲಸೆ ಕೂಲಿ ಕಾರ್ಮಿಕರು ತತ್ತರಿಸಿ ಹೋಗಿರುವ ವಿಚಾರ ಸಂಶೋಧನೆಯೊಂದರಿಂದ ಬೆಳಕಿಗೆ ಬಂದಿದೆ. ಲಾಕ್ಡೌನ್ ಅವಧಿಯಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲದಂತೆ ಇರಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡ ಹೊರತಾಗಿಯೂ, ಬಹುತೇಕ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಇನ್ನಿತರ ವರ್ಗಗಳಿಗೆ ಸರ್ಕಾರದ ಯೋಜನೆಗಳು ತಲುಪಿಲ್ಲ ಎಂಬುದನ್ನು ಈ ಸಂಶೋಧನೆ ಹೇಳಿದೆ.
ಅಲ್ಲದೆ, ಕೆಲವು ಮಹಿಳೆಯರ ಜನ್ ಧನ್ ಖಾತೆಗಳಿಗೆ 500 ರು. ನೇರ ನಗದು ಪಾವತಿ ಹೊರತುಪಡಿಸಿದರೆ, ಪಡಿತರ ವಿತರಣೆ ಸೇರಿದಂತೆ ಇನ್ಯಾವುದೇ ಯೋಜನೆಗಳು ತಮಗೆ ತಲುಪಿಲ್ಲ ಎಂದು ಈ ಸಂಶೋಧನಾ ವರದಿಯಲ್ಲಿ ದೂರಲಾಗಿದೆ.
ಲಾಕ್ಡೌನ್: ಮೃತ ತಂದೆಯ ಹೆಸರಲ್ಲಿ ಪಾಸ್ ಪಡೆದ ಭೂಪ!
ಹೌದು, ಸ್ವಾನ್(ಸಂಕಷ್ಟಕ್ಕೆ ಸಿಲುಕಿದ ಕೆಲಸಗಾರರ ಕಾರ್ಯಪಡೆ ಜಾಲ) ಎಂಬ ಸಂಸ್ಥೆಗೆ ದೇಶಾದ್ಯಂತ 11 ಸಾವಿರ ಕೂಲಿ ಕಾರ್ಮಿಕರು ಕರೆ ಮಾಡಿ ತಾವು ಎದುರಿಸುತ್ತಿರುವ ಬವಣೆಯನ್ನು ಹಂಚಿಕೊಂಡಿದ್ದಾರೆ. ಇದರನ್ವಯ ಸ್ವಾನ್ ಜೊತೆ ತಮ್ಮ ಸಮಸ್ಯೆ ಹೇಳಿಕೊಂಡವರ ಪೈಕಿ ಶೇ.50ರಷ್ಟುಜನರಲ್ಲಿ ಕೇವಲ ಒಂದು ದಿನಕ್ಕೆ ಆಗುವಷ್ಟುದಿನಸಿ ಶೇಖರಣೆ ಇದೆ. ಅಲ್ಲದೆ, ಹೆಚ್ಚು ಆಹಾರ ಸೇವಿಸಿದರೆ ದಿನಸಿ ಮತ್ತು ಅಡುಗೆ ಸಾಮಗ್ರಿಗಳು ಖಾಲಿಯಾಗುತ್ತವೆ ಎಂಬ ಭೀತಿಗಾಗಿ ಬೆಂಗಳೂರಿನಿಂದ ತವರಿಗ ಹೊರಟಿರುವ 240 ಜನರ ಒಂದು ಗುಂಪು ದಿನಕ್ಕೆ 1 ಹೊತ್ತಿನ ಊಟ ಮಾತ್ರವೇ ಮಾಡುತ್ತಿದೆ ಎಂಬುದು ಬೆಳಕಿಗೆ ಬಂದಿದೆ. ಈ ಮೂಲಕ ವಲಸೆ ಕಾರ್ಮಿಕರಿಗೆ ಕೊರೋನಾಕ್ಕಿಂತಲೂ ಹಸಿವಿನ ಬೇಗೆಯೇ ಹೆಚ್ಚಾಗಿ ಹಿಂಸಿಸುತ್ತಿರುವುದು ಸ್ಪಷ್ಟವಾಗಿದೆ ಎಂಬ ವಿಶ್ಲೇಷಣೆಗಳು ವ್ಯಕ್ತವಾಗಿವೆ.
ಈ ವರದಿಯಲ್ಲಿ ಏನೆಲ್ಲಾ ಅಂಶಗಳಿವೆ?
ಶೇ.90: ತಮಗೆ ಸರ್ಕಾರದಿಂದ ಯಾವುದೇ ಪಡಿತರ ಸಿಕ್ಕಿಲ್ಲ
ಶೇ.70: ನಮಗೆ ಯಾವುದೇ ಸಿದ್ಧಪಡಿಸಿದ ಆಹಾರ ಸಿಕ್ಕಿಲ್ಲ
ಶೇ.78: ಜನರ ಬಳಿ 300 ರು.ಗಿಂತ ಕಡಿಮೆ ನಗದು
ಶೇ.70: ಕೇವಲ 200 ರು. ಉಳಿಸಿಕೊಂಡ ಕಾರ್ಮಿಕರು
ಶೇ.98: ನಮಗೆ ಸರ್ಕಾರದಿಂದ ನಗದು ನೆರವು ಸಿಕ್ಕಿಲ್ಲ
ಶೇ.79: ಕರೆ ಮಾಡಿದ ಇಷ್ಟು ಜನ ಕಟ್ಟಡ ಕಾರ್ಮಿಕರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ