ಟಿಕ್ರಿ ಬಾರ್ಡರ್‌ನಲ್ಲಿ 12ಕ್ಕೂ ಹೆಚ್ಚು ರೈತರು ಸಾವು, ಕೇಂದ್ರದ ವಿರುದ್ಧ ಹೆಚ್ಚುತ್ತಿದೆ ಅನ್ನದಾತನ ಕಿಚ್ಚು!

Published : Dec 30, 2020, 04:52 PM IST
ಟಿಕ್ರಿ ಬಾರ್ಡರ್‌ನಲ್ಲಿ 12ಕ್ಕೂ ಹೆಚ್ಚು ರೈತರು ಸಾವು, ಕೇಂದ್ರದ ವಿರುದ್ಧ ಹೆಚ್ಚುತ್ತಿದೆ ಅನ್ನದಾತನ ಕಿಚ್ಚು!

ಸಾರಾಂಶ

ಕೇಂದ್ರದ ಕೃಷಿ ಕಾನೂನು ವಿರೋಧಿಸಿರುವ ಅನ್ನದಾತ| ಟೀಕ್ರಿ ಬಾರ್ಡರ್‌ನಲ್ಲಿ 12ಕ್ಕೂ ಹೆಚ್ಚು ರೈತರು ಸಾವು| ರೈತರ ಬಲಿದಾನದಿಂದ ಕೇಂದ್ರದ ವಿರುದ್ಧ ಮತ್ತಷ್ಟು ಆಕ್ರೋಶ

ನವದೆಹಲಿ(ಡಿ.30): ಕೇಂದ್ರದ ಕೃಷಿ ಕಾನೂನು ವಿರೋಧಿಸಿರುವ ಅನ್ನದಾತ ರಾಷ್ಟ್ರ ರಾಜಧಾನಿ ದೆಹಲಿಯ ಗಡಿ ಭಾಗ ಟಿಕ್ರಿಗೆ ತಲುಪಿ ಬರೋಬ್ಬರಿ ಒಂದು ತಿಂಗಳಾಗಿದೆ. ಈ ನಡುವೆ ಇಲ್ಲಿ 12ಕ್ಕೂ ಅಧಿಕ ಮಂದಿ ರೈತರು ಮೃತಪಟ್ಟಿದ್ದಾರೆ. ಲಭ್ಯವಾದ ಮಾಹಿತಿ ಅನ್ವಯ ಮೃತರಲ್ಲಿ ಅನೇಕ ಮಂದಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರದಂದೂ ಇಲ್ಲಿ ಓರ್ವ ವೃದ್ಧ ಚಳಿಯಿಂದಾಗಿ ಮೃತಪಟ್ಟಿದ್ದಾರೆ.

ತಾವು ದಿನಗಳೆದಂತೆ ರೈತರನ್ನು ಕಳೆದುಕೊಳ್ಳುತ್ತಿದ್ದೇವೆ, ಇದರಿಂದ ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶವೂ ಹೆಚ್ಚುತ್ತಿದೆ. ತೀವ್ರ ಚಳಿ ಇದ್ದರೂ ನಾವಿಲ್ಲಿ ನಮ್ಮ ಹಕ್ಕಿಗಾಗಿ ಕುಳಿತಿದ್ದೇವೆ. ನಾನು ರೈತರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಕೃಷಿಇ ಕಾನೂನು ಹಿಂಪಡೆದರಷ್ಟೇ ಇಲ್ಲಿಂದ ಮರಳುತ್ತೇವೆಂದಿದ್ದಾರೆ.

ಸರ್ಕಾರ ನಮ್ಮ ಬೇಡಿಕೆ ಒಪ್ಪಿಕೊಳ್ಳುತ್ತಿಲ್ಲ. ಪ್ರತಿದಿನ ಚಳಿಯಿಂದಾಗಿ ರೈತರು ಕೊನೆಯುಸಿರೆಳೆಯುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು ಸುಮಾರು ನಲ್ವತ್ತು ಮಂದಿ ರೈತರು ಮೃತಪಟ್ಟಿದ್ದಾರೆ. ಇದು ರೈತರನ್ನು ಮತ್ತಷ್ಟು ಕೆರಳಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!