ಕುಂಭಮೇಳದಲ್ಲಿ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ; ಗಂಗಾ ಸ್ನಾನ ಬಳಿಕ ಚೇತರಿಕೆ

Published : Jan 15, 2025, 07:45 AM ISTUpdated : Jan 15, 2025, 03:59 PM IST
ಕುಂಭಮೇಳದಲ್ಲಿ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ; ಗಂಗಾ ಸ್ನಾನ ಬಳಿಕ ಚೇತರಿಕೆ

ಸಾರಾಂಶ

ಉತ್ತರಪ್ರದೇಶದಲ್ಲಿ ಆರಂಭವಾದ ಕುಂಭಮೇಳದಲ್ಲಿ ಮಕರ ಸಂಕ್ರಾಂತಿಯಂದು 3.5 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಆ್ಯಪಲ್‌ ಸ್ಥಾಪಕ ಸ್ಟೀವ್‌ ಜಾಬ್ಸ್‌ರ ಪತ್ನಿ ಲಾರೆನ್ ಪೊವೆಲ್ ಕೂಡ ಕುಂಭಮೇಳದಲ್ಲಿ ಭಾಗವಹಿಸಿದ್ದರು.

ಪ್ರಯಾಗ್‌ರಾಜ್: ಉತ್ತರಪ್ರದೇಶದಲ್ಲಿ ಸೋಮವಾರದಿಂದ ಕುಂಭಮೇಳ ಆರಂಭವಾಗಿದೆ. ಮಕರ ಸಂಕ್ರಾಂತಿಯಾದ ಮಂಗಳವಾರ 13 ಅಖಾಡದ ಮುಖ್ಯ ಸಂತರು ಸೇರಿದಂತೆ 3.5 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಮುಳುಗಿ 'ಪ್ರಥಮ ಶಾಹಿ ಸ್ಥಾನ' ಮಾಡಿದ್ದಾರೆ. ಮೊದಲಿಗೆ ಶ್ರೀ ಪಂಚಯತಿ ಅಖಾಡ ಮಹಾನಿರ್ವಾಣಿ ಹಾಗೂ ಶ್ರೀ ಶಂಭು ಪಂಚ ಯತಿ ಆಟಲ್ ಅಖಾಡದವರು ಅಮೃತ ಸ್ನಾನ ಮಾಡಿದರು. ಬಳಿಕ ಅನ್ಯ ಅಖಾಡ ದವರು, ಭಸ್ಮ ಲೇಹಿತ ನಾಗಾ ಸಾಧುಗಳು, ಸಂತರು, ಕಲ್ಪವಾಸಿಗಳು ಹಾಗೂ ಭಕ್ತಾದಿಗಳು ಸ್ನಾನ ಮಾಡಿದರು. ಈ ವೇಳೆ ಹೆಲಿಕಾಪ್ಟರ್ ಮೂಲಕ ಹೂವಿನ ಮಳೆ ಸುರಿಸಲಾಯಿತು.

ಈ ಕುರಿತು ಎಕ್ಸ್‌ನಲ್ಲಿ ಟ್ವಿಟ್ ಮಾಡಿರುವ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, 'ಮಕರ ಸಂಕ್ರಾಂತಿಯಂದು ತ್ರಿವೇಣಿ ಸಂಗಮ ದಲ್ಲಿ ಮಿಂದೆದ್ದು ಪುಣ್ಯ ಪ್ರಾಪ್ತಿ ಮಾಡಿಕೊಂಡ ಭಕ್ತರಿಗೆ ಅಭಿನಂದನೆ, ಇದು ನಂಬಿಕೆ, ಸಮಾಜ, ಸಂಸ್ಕೃತಿಯ ಸಂಗಮ' ಎಂದಿದ್ದಾರೆ. ಅಂತೆಯೇ, ಕುಂಭದ ಆಡಳಿತ, ಸ್ಥಳೀಯ ಆಡಳಿತ, ಸ್ವಚ್ಛತಾ ಕರ್ಮಿಗಳು, ಸ್ವಯಂಸೇವಕರು ಹಾಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಅವರು ಧನ್ಯವಾದ ಸಲ್ಲಿಸಿದರು. ಕುಂಭದ ಮೊದಲ ದಿನವಾದ ಸೋಮವಾರ 1.5 ಕೋಟಿ ಮಂದಿ ಪೌಶ್ ಸ್ಥಾನ ಮಾಡಿದ್ದರು.

ಸ್ಟೀವ್ಸ್‌ ಪತ್ನಿ ಅಸ್ವಸ್ಥ: ಗಂಗಾ ಸ್ನಾನ ಬಳಿಕ ಚೇತರಿಕೆ
ಮಹಾಕುಂಭಮೇಳಕ್ಕೆ ಆಗಮಿಸಿರುವ ಆ್ಯಪಲ್‌ ಸ್ಥಾಪಕ ಸ್ಟೀವ್‌ ಜಾಬ್ಸ್‌ರ ಪತ್ನಿ ಲಾರೆನ್ ಪೊವೆಲ್ ಸೋಮವಾರ ಜನಸಂದಣಿಯಿಂದಾಗಿ ಕೊಂಚ ಅಸ್ವಸ್ಥರಾಗಿದ್ದು, ಗಂಗಾ ಸ್ನಾನದ ಬಳಿಕ ಚೇತರಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟೊಂದು ಜನಸಂದಣಿಯಲ್ಲಿ ಬೆರೆತ ಕಾರಣ ಅವರಿಗೆ ಅಲರ್ಜಿ ಉಂಟಾಗಿತ್ತು ಎನ್ನಲಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಉತ್ತರಪ್ರದೇಶ ಸರ್ಕಾರ, ‘ಅಸ್ವಸ್ಥರಾಗಿದ್ದ ಲಾರೆನ್ ಗಂಗೆಯಲ್ಲಿ ಮಿಂದೆದ್ದು, ವಿಶ್ರಾಂತಿ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಸನಾತನ ಧರ್ಮದ ಕುರಿತು ಆಳವಾಗಿ ಅಧ್ಯಯನ ಮಾಡುವ ಉತ್ಸಾಹ ಅವರಲ್ಲಿ ಬಲವಾಗಿದೆ’ ಎಂದು ಸ್ವಾಮಿ ಕೈಲಾಸಾನಂದರ ಹೇಳಿಕೆಯನ್ನು ಉಲ್ಲೇಖಿಸಿದೆ.

ಇದನ್ನೂ ಓದಿ: ತಲೆಹರಟೆ ಮಾಡಿದ ಯೂಟ್ಯೂಬರ್‌ಗೆ ಇಕ್ಕಳದಲ್ಲಿ ಬಾರಿಸಿದ ಸಾಧು: ವೀಡಿಯೋ ವೈರಲ್

ಲಾರೆನ್‌ರನ್ನು ಸರಳ, ಪುಣ್ಯವಂತೆ ಹಾಗೂ ನಮ್ರ ಎಂದಿರುವ ಕೈಲಾಸಾನಂದರು, ‘ಅವರಲ್ಲಿ ಅಹಂ ಇಲ್ಲ. ಗುರುಗಳ ಪ್ರತಿ ಸಂಪೂರ್ಣ ಸಮರ್ಪಣಾ ಭಾವವನ್ನು ಹಿಂದಿದ್ದಾರೆ. ಆಕೆಯ ಎಲ್ಲಾ ಪ್ರಶ್ನೆಗಳು ಸನಾತನ ಧರ್ಮದ ಕುರಿತಾಗಿಯೇ ಇದ್ದು, ಅವುಗಳಿಗೆ ಉತ್ತರ ಕಂಡುಕೊಂಡು ಆಕೆ ತೃಪ್ತರಾಗಿದ್ದಾರೆ’ ಎಂದರು.

ಅಖಿಲ ಭಾರತೀಯ ಅಖಾಡ ಪರಿಷತ್‌ನ ಅಧ್ಯಕ್ಷರೂ ಆಗಿರುವ ಪಂಚಯತಿ ಅಖಾಡದ ಮುಖ್ಯಸ್ಥರಾದ ಮಹಾಂತ ರವೀಂದ್ರ ಪುರಿ ಮಾತನಾಡಿ, ‘ಅವರು ಸನಾತನ ಸಂಸ್ಕೃತಿಯಿಂದ ಸ್ಫೂರ್ತಿ ಪಡೆದಿದ್ದಾರೆ. ಆಧ್ಯಾತ್ಮದ ಕುರಿತ ದಾಹ ಅವರನ್ನಿಲ್ಲಿಗೆ ಕರೆತಂದಿತು. ವಿಶ್ವದ ಶ್ರೀಮಂತರಲ್ಲೊಬ್ಬರಾದರೂ ಸರಳವಾಗಿದ್ದಾರೆ’ ಎಂದರು. ಲಾರೆನ್‌ರಿಗೆ ಕೈಲಾಸಾನಂದ ಸ್ವಾಮಿಗಳು ‘ಕಮಲಾ‘ ಎಂದು ಮರುನಾಮಕರಣ ಮಾಡಿದ್ದರು.

ಇದನ್ನೂ ಓದಿ: ಕುಂಭಮೇಳದ ಪವಿತ್ರ ಸ್ನಾನದ ವೇಳೆ ಮುಟ್ಟಾದರೆ ನಾಗಸಾಧುಗಳು ಏನ್​ ಮಾಡ್ತಾರೆ? ಇಲ್ಲಿದೆ ಕುತೂಹಲದ ವಿವರ...

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!