ಕೊರೋನಾ ನಿಯಂತ್ರಣಕ್ಕೆ ಕನಿಷ್ಠ 6 ರಿಂದ 8 ವಾರ ಲಾಕ್‌ಡೌನ್ ಅನಿವಾರ್ಯ; ICMR!

Published : May 12, 2021, 10:15 PM ISTUpdated : May 13, 2021, 03:59 PM IST
ಕೊರೋನಾ ನಿಯಂತ್ರಣಕ್ಕೆ ಕನಿಷ್ಠ 6 ರಿಂದ 8 ವಾರ ಲಾಕ್‌ಡೌನ್ ಅನಿವಾರ್ಯ; ICMR!

ಸಾರಾಂಶ

ಭಾರತದ ಕೊರೋನಾ ನಿಯಂತ್ರಣಕ್ಕೆ ಲಾಕ್‌ಡೌನ್ ಸೂಚಿಸಿದ ICMR ಮುಖ್ಯಸ್ಥ ಕನಿಷ್ಠ 6 ರಿಂದ 8 ವಾರ ಲಾಕ್‌ಡೌನ್ ಅಗತ್ಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸೂಚನೆ ಪಾಲಿಸುತ್ತಾ ಕೇಂದ್ರ?

ನವದೆಹಲಿ(ಮೇ.12): ಭಾರತದ ಬಹುತೇಕ ರಾಜ್ಯಗಳಲ್ಲಿ ಲಾಕ್‌ಡೌನ್, ಕರ್ಫ್ಯೂ ಸೇರಿದಂತೆ ಕಠಿಣ ನಿರ್ಬಂಧ ಹೇರಲಾಗಿದೆ. ಆದರೂ ಕೊರೋನಾ ಪ್ರಕರಣ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿಲ್ಲ. ಇದೀಗ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ಲಾಕ್‌ಡೌನ್  ಅನಿವಾರ್ಯ ಎಂದಿದೆ.

ಕರ್ನಾಟಕದಲ್ಲಿ ಲಸಿಕೆಗೆ ಹಾಹಾಕಾರ: 18-44 ವರ್ಷದವರಿಗಿಲ್ಲ ವ್ಯಾಕ್ಸಿನ್!.

ಶೇಕಡಾ 10ಕ್ಕಿಂತ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿರುವ ಜಿಲ್ಲೆಗಳನ್ನು ಕನಿಷ್ಠ 6 ರಿಂದ 8 ವಾರ ಲಾಕ್‌ಡೌನ್ ಮಾಡುವ ಅಗತ್ಯವಿದೆ. ಹೀಗಾದಲ್ಲಿ ಮಾತ್ರ ಭಾರತದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ತರಲು ಸಾಧ್ಯ ಎಂದು ಐಸಿಎಂಆರ್  ಮುಖ್ಯಸ್ಥ ಡಾ. ಬಲರಾಮ್ ಬಾರ್ಗವ್ ಹೇಳಿದ್ದಾರೆ.

"

ಐಸಿಎಂಆರ್ ಹೇಳುವ ಪ್ರಕಾರ ಶೇಕಡಾ 10ಕ್ಕಿಂತ ಹೆಚ್ಚು ಕೊರೋನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್‌ಡೌನ್‌ಗೆ ಪರಿಗಣಿಸಿದರೆ 718 ಜಿಲ್ಲೆಗಳು ಲಾಕ್ ಆಗಲಿದೆ.  ಅಂದರೆ ಬಹುತೇಕ ಭಾರತ ಲಾಕ್‌ ಆಗಲಿದೆ. ಕೊರೋನಾ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಅಗತ್ಯ ಎಂದು ಐಸಿಎಂಆರ್ ಒತ್ತಿ ಹೇಳಿದೆ.

ಕೊರೋನಾ 2ನೇ ಅಲೆ ಭೀಕರವಾಗಿದ್ದರೂ, ಕೇಂದ್ರ ಸರ್ಕಾರ ಲಾಕ್‌ಡೌನ್ ನಿರ್ಧಾರದತ್ತ ಮನಸ್ಸು ಮಾಡಿಲ್ಲ. ಕಳೆದ ವರ್ಷ ಲಾಕ್‌‌ಡೌನ್ ಪರಿಣಾಮ ಇನ್ನೂ ಗೋಚರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಇದರ ನಡುವೆ ಮತ್ತೊಂದು ಲಾಕ್‌ಡೌನ್‌ಗೆ  ಕೇಂದ್ರ ಮಸ್ಸು ಮಾಡುವ ಸಾಧ್ಯತೆ ಕಡಿಮೆ.

ಮಹಾರಾಷ್ಟ್ರ, ಕರ್ನಾಟಕ, ದೆಹಲಿ ಸೇರಿದಂತೆ ಪ್ರಮುಖ ರಾಜ್ಯಗಳು ಲಾಕ್‌ಡೌನ್ ಹೇರಿದೆ. ಇನ್ನು ಹಲವು ರಾಜ್ಯಗಳು ಕೊರೋನಾ ಕರ್ಪ್ಯೂ ಸೇರಿದಂತೆ ಕಠಿಣ ನಿರ್ಬಂಧಗಳನ್ನು ವಿಧಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!