ಪ್ರವಾಹದಲ್ಲಿ ಸಿಲುಕಿದ್ದ ಮಹಿಳೆಗೆ ಡೆಲಿವರಿ ಮಾಡಿಸಿದ ಪೊಲೀಸರು!

Published : Aug 07, 2021, 04:10 PM IST
ಪ್ರವಾಹದಲ್ಲಿ ಸಿಲುಕಿದ್ದ ಮಹಿಳೆಗೆ ಡೆಲಿವರಿ ಮಾಡಿಸಿದ ಪೊಲೀಸರು!

ಸಾರಾಂಶ

* ಪ್ರವಾಹದಲ್ಲಿ ಸಿಕ್ಕಾಕೊಂಡ ಗರ್ಭಿಣಿ ಮಹಿಳೆ * ದಾರಿ ಮಧ್ಯೆ ಮಹಿಳೆಗೆ ಹೆರಿಗೆ ನೋವು * ಸ್ಥಳಕ್ಕೆ ಧಾವಿಸಿದ ಪೊಲೀಸರಿಂದ ಡೆಲಿವರಿ

ಭೋಪಾಲ್(ಆ.07): ಪೊಲೀಸರ ಹೆಸರು ಕೇಳಿದ್ರೆ ಸ್ವಲ್ಪ ವಿಚಿತ್ರವೆನಿಸುತ್ತದೆ. ಅವರ ಬಗ್ಗೆ ಅನೇಕರು ದೂರು ನೀಡುತ್ತಿರುತ್ತಾರೆ. ಆದರೀಗ ಸದ್ಯ ವಿಭಿನ್ನ ಘಟನೆಯೊಂದು ವರದಿಯಾಗಿದ್ದು, ಈ ಪೊಲೀಸರು ಮಾಡಿದ ಸೇವೆಗೆ ಸೆಲ್ಯೂಟ್ ಎನ್ನುತ್ತೀರಿ. 

ಹೌದು ಮಧ್ಯಪ್ರದೇಶದ ರಾಜಗಢ ಜಿಲ್ಲೆಯಲ್ಲಿ ನಡೆದ ಘನೆ ಇದಾಗಿದೆ. ಸಸದ್ಯ ಇಲ್ಲಿ ಮಳೆಯಬ್ಬರಕ್ಕೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನ ಸಾಮಾನ್ಯರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ಗರ್ಭಿಣಿ ಮಹಿಳೆಯೊಬ್ಬರು ಸುಥೈಲಾ ರೋಡ್‌ನಲ್ಲಿ ಸಿಕ್ಕಾಕೊಂಡಿದ್ದರು. ಇದೇ ವೇಳೆಡ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ, ಸಬ್ ಇನ್ಸ್‌ಪೆಕ್ಟರ್ ಅರುಂಧತಿ ರಜಾವತ್ ಮತ್ತು ಕಾನ್ಸ್‌ಟೇಬಲ್ ಇತಿಶ್ರೀ ರಜಾವತ್ ಅವರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಸಮಯ ವ್ಯಯಿಸದ ಪೊಲೀಸ್ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತಲುಪಿದ್ದಾರೆ. ಮಹಿಳೆಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ಡೆಲಿವರಿ ಮಾಡಿಸಿದ್ದಾರೆ.

ಸದ್ಯ ಈ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳ ಈ ಮಾನವೀಯ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ. ಭಾರೀ ಮಳೆಯಿಂದಾಗಿ ರಸ್ತೆ ಬಂದ್ ಆಗಿತ್ತು. ಹೀಗಾಗಿ ಅವರು ನರ್ಸ್‌ ಕರೆಸಿ ಡೆಲಿವರಿ ಮಾಡಿಸಿದ್ದಾರೆ. ಮಹಿಳೆ ಹಾಗೂ ಮಗು ಆರೋಗ್ಯದಿಂದಿದ್ದಾರೆ ಎಂದು ತಿಳಿದು ಬಂದಿದೆ. ಮಳೆ ನಿಂತ ನಂತರ ಮಹಿಳೆಯನ್ನು ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು