ಅನುಭವ ಮಂಟಪವನ್ನೇ ಇಂದು ವಕ್ಫ್ ತನ್ನ ಆಸ್ತಿಯೆಂದು ಹೇಳಲಾರಂಭಿಸಿದೆ: ತೇಜಸ್ವಿ ಸೂರ್ಯ ವಾಗ್ದಾಳಿ

Published : Dec 15, 2024, 07:20 AM IST
ಅನುಭವ ಮಂಟಪವನ್ನೇ ಇಂದು ವಕ್ಫ್ ತನ್ನ ಆಸ್ತಿಯೆಂದು ಹೇಳಲಾರಂಭಿಸಿದೆ: ತೇಜಸ್ವಿ ಸೂರ್ಯ ವಾಗ್ದಾಳಿ

ಸಾರಾಂಶ

ಕಾಂಗ್ರೆಸ್ ಸಂವಿಧಾನಕ್ಕೆ ಅಪಚಾರ ಮಾಡಿದೆ, ಡಾ. ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಮತ್ತು ಬಸವಣ್ಣನವರ ಅನುಭವ ಮಂಟಪವನ್ನು ವಕ್ಫ್ ಆಸ್ತಿ ಎಂದು ಹೇಳಲಾಗುತ್ತಿದೆ ಎಂದು ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನ ಜಾತ್ಯಾತೀತತೆಯ ವಿಕೃತ ಬ್ರಾಂಡ್‌ ಇದಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ.

ನವದೆಹಲಿ: ಸಂವಿಧಾನಕ್ಕೆ ಕಾಂಗ್ರೆಸ್‌ ಅಪಚಾರ ಮಾಡಿದೆ. ಸಂವಿಧಾನ ಶಿಲ್ಪಿ ಡಾ। ಬಿ.ಆರ್‌. ಅಂಬೇಡ್ಕರ್‌ ಅವರನ್ನೇ ಕಾಂಗ್ರೆಸ್‌ ಅವಮಾನಿಸಿತ್ತು. ಅಲ್ಲದೆ, ಕ್ರಾಂತಿಕಾರಿ ಬಸವಣ್ಣ ರಿಂದ ಸ್ಥಾಪಿತವಾದ ಅನುಭವ ಮಂಟಪವನ್ನೇ ಇಂದು ವಕ್ಫ್ ತನ್ನ ಆಸ್ತಿಯೆಂದು ಹೇಳಲಾರಂಭಿಸಿದೆ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ಲೋಕಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಅತನಾಡಿದ ಅವರು, ‘ಬಸವಣ್ಣನವರು ಪ್ರಜಾಪ್ರಭುತ್ವದ ತತ್ವಗಳನ್ನು ಬಿತ್ತಿದ ಅನುಭವ ಮಂಟಪವನ್ನು ವಕ್ಫ್ ಆಸ್ತಿ ಎಂದು ಹೇಳಲಾಗುತ್ತಿದೆ. ಇದು ಕಾಂಗ್ರೆಸ್‌ನ ಜಾತ್ಯಾತೀತತೆಯ ವಿಕೃತ ಬ್ರಾಂಡ್‌ನ ಪರಿಣಾಮವಾಗಿದೆ. ಪ್ರಜಾಪ್ರಭುತ್ವಕ್ಕೆ ಮಾದರಿ ಎನ್ನಬಹುದಾದ, ಕ್ರಾಂತಿಕಾರಿ ಬಸವಣ್ಣ ರಿಂದ ಸ್ಥಾಪಿತವಾದ ಅನುಭವ ಮಂಟಪವನ್ನೇ ಇಂದು ವಕ್ಫ್ ತನ್ನ ಆಸ್ತಿಯೆಂದು ಹೇಳಲಾರಂಭಿಸಿದೆ. ಕಾಂಗ್ರೆಸ್ ಸೆಕ್ಯುಲರಿಸಂ ದುರಂತ ಮಾದರಿಗೆ ಇದೊಂದು ಉದಾಹರಣೆ’ ಎಂದರು.

‘ಆರೆಸ್ಸೆಸ್ ಡಾ. ಅಂಬೇಡ್ಕರ್ ಅವರನ್ನು ವಿರೋಧಿಸಿತು ಎಂಬುದು ಸಂಪೂರ್ಣ ಸುಳ್ಳು. ಗಮನಾರ್ಹ ವಿಚಾರ ಎಂದರೆ ಅವರನ್ನು ಕಾಂಗ್ರೆಸ್ ಸೋಲಿಸಲು ಪ್ರಯತ್ನಿಸಿತು. ಆದರೆ ಆರ್‌ಎಸ್‌ಎಸ್ ಪ್ರಚಾರಕರು, ಅಂಬೇಡ್ಕರರ ಚುನಾವಣಾ ಏಜೆಂಟ್ ಆಗಿ ಕಾರ್ಯನಿರ್ವಹಿಸಿದರು’ ಎಂದು ಸ್ಮರಿಸಿದರು.

‘1951ರಲ್ಲಿ ಸಂವಿಧಾನದ 1ನೇ ತಿದ್ದುಪಡಿ ಹಾಗೂ 1975ರಲ್ಲಿ ಸಂವಿಧಾನದ 356ನೇ ವಿಧಿಯ ದುರುಪಯೋಗಗಳು ಕಾಂಗ್ರೆಸ್‌ ಪಕ್ಷ ಸಂವಿಧಾನದ ಮೇಲೆ ನಡೆಸಿದ ಆಕ್ರಮಣಗಳು. ಆದದರೆ ಬಿಜೆಪಿ ಅವರ ದಾಳಿಗಳ ವಿರುದ್ಧ ಹೋರಾಡಿದೆ ಮತ್ತು ಸಂವಿಧಾನವನ್ನು ರಕ್ಷಿಸುವ ಕೆಲಸ ಮಾಡಿದೆ’ ಎಂದು ಪ್ರಹಾರ ನಡೆಸಿದರು.

ಇದನ್ನೂ ಓದಿ:ಸಂವಿಧಾನ ಹಾಳು ಮಾಡಿದ್ದೇ ಕಾಂಗ್ರೆಸ್: ನೆಹರು ಕುಟುಂಬದ ಮೇಲೆ ಪ್ರಧಾನಿ ಮೋದಿ ಅಕ್ರೋಶ

‘ನವೆಂಬರ್ 26, 1957 ರಂದು ದ್ರಾವಿಡ ಚಳವಳಿಯ ಪಿತಾಮಹ ಇವಿ ರಾಮಸ್ವಾಮಿ ನಾಯ್ಕರ್ ಅವರು ಸಂವಿಧಾನವನ್ನು ಸುಟ್ಟುಹಾಕಿದರು ಮತ್ತು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವನ್ನು ಅವಮಾನಿಸಿದರು. ಇಂದು, ಡಿಎಂಕೆ, ಅವರ ನಿಷ್ಠ ಸೈದ್ಧಾಂತಿಕ ಅನುಯಾಯಿಗಳು, ಸಂವಿಧಾನದ ರಕ್ಷಕರು ಎಂದು ಧೈರ್ಯದಿಂದ ಹೇಳಿಕೊಳ್ಳುತ್ತಾರೆ. ಇದು ಬೂಟಾಟಿಕೆ ಅಲ್ಲವವೇ’ ಎಂದು ಪ್ರಶ್ನಿಸಿದರು.

‘1974ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಮಿಳುನಾಡಿನ ರಾಮೇಶ್ವರಂ ಕರಾವಳಿಯಲ್ಲಿ ಕಚ್ಚತೀವು ಎಂದು ಕರೆಯಲ್ಪಡುವ ಒಂದು ಪ್ರಮುಖ ಆಯಕಟ್ಟಿನ ದ್ವೀಪವನ್ನು ಶ್ರೀಲಂಕೆಗೆ ಬಿಟ್ಟುಕೊಟಟಿತು. ಅಗತ್ಯ ಸಾಂವಿಧಾನಿಕ ಪ್ರಕ್ರಿಯೆ ಅನುಸರಿಸದೇ ಸಂವಿಧಾನವನ್ನು ಗಾಳಿಗೆ ತೂರಲಾಯಿತು’ ಎಂದು ಸೂರ್ಯ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!