MSRTC ಬಸ್ ಕಂಡಕ್ಟರ್ ಆತ್ಮಹತ್ಯೆ, ಸಂಬಳ ನೀಡದ ಉದ್ಧವ್ ಸರ್ಕಾರ ವಿರುದ್ಧ ಆಕ್ರೋಶ!

Published : Nov 09, 2020, 05:57 PM IST
MSRTC ಬಸ್ ಕಂಡಕ್ಟರ್ ಆತ್ಮಹತ್ಯೆ, ಸಂಬಳ ನೀಡದ ಉದ್ಧವ್ ಸರ್ಕಾರ ವಿರುದ್ಧ ಆಕ್ರೋಶ!

ಸಾರಾಂಶ

ಕೊರೋನಾ ವೈರಸ್ ಕಾರಣ ಹಲವು ರಾಜ್ಯಗಳ ಸಾರಿಗೆ ವಾಹನ ಇಲಾಖೆ ಸಿಬ್ಬಂದಿಗಳಿಗೆ ಸಂಬಳ ಸರಿಯಾಗಿ ನೀಡುತ್ತಿಲ್ಲ. ಇದರಿಂದ ಸಿಬ್ಬಂದಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. 3 ತಿಂಗಳಿನಿಂದ ಸಂಬಳ ಸಿಗದೆ ಪರದಾಡಿದ ಮಹಾರಾಷ್ಟ್ರ ಸಾರಿಗೆ ಇಲಾಖೆ ಸಿಬ್ಬಂಧಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಉದ್ಧವ್ ಠಾಕ್ರೆ ಹೆಸರು.

ಮುಂಬೈ(ನ.09):  ಕೊರೋನಾ ವೈರಸ್ ಕಾರಣ ಮಹಾರಾಷ್ಟ್ರ ಸಾರಿಗೆ ಇಲಾಖೆ ಕಳೆದ 3 ತಿಂಗಳಿನಿಂದ ಸಿಬ್ಬಂದಿಗಳಿಗೆ ಸಂಬಳ ನೀಡಿಲ್ಲ. ಸಾರಿಗೆ ಇಲಾಖೆ ನಷ್ಟದಲ್ಲಿದೆ ಎಂಬ ಕಾರಣ ನೀಡಿ ತಿಂಗಳ ಸಂಬಳ ಮುಂದೂಡುತ್ತಿದೆ. ಇದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ ಕಂಡ್ಟರ್ ಕುಟುಂಬ ನಿರ್ವಹಣೆ ಮಾಡಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾರದ ಸ್ಕಾಲರ್‌ಶಿಪ್, ಡೇಟಾ ಪ್ಯಾಕ್ ಹಾಕಲು ದುಡ್ಡಿಲ್ಲ.. ಟಾಪರ್ ಸುಸೈಡ್

ಕಳದ 3 ತಿಂಗಳನಿಂದ ಸಂಬಳ ನೀಡದೆ ಸತಾಯಿಸಿದ ಉದ್ದವ್ ಠಾಕ್ರೆ ಸರ್ಕಾರವ ಸಾವಿಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಹೇಳಿಕೊಂಡಿದ್ದಾರೆ. ಈ ಕುರಿತು ಕಂಡಕ್ಟರ್ ಸಹೋದರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  

ಜಲಗಾಂವ್ ಡಿಪ್ಪೋದಲ್ಲಿ ಕೆಲಸ ನಿರ್ವಹಿಸುತ್ತಿದ್ದ ತನ್ನ ಪುತ್ರನಿಗೆ ಕಡಿಮೆ ಸಂಬಳ ಇತ್ತು. ಕಳೆದ 3 ತಿಂಗಳಿನಿಂದ ಸಂಬಳ ನೀಡಿಲ್ಲ. ಮನನೊಂದು, ಕುಟುಂಬ ನಿರ್ವಹಣೆ ಮಾಡಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಂಡಕ್ಟರ್ ತಂದೆ ಹೇಳಿದ್ದಾರೆ.

ದೀಪಾವಳಿಗೂ ಮೊದಲು ಮಹಾರಾಷ್ಟ್ರ ಸಾರಿಗೆ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ಸಂಬಳ ನೀಡಲಾಗುವುದು ಎಂದು ಸಾರಿಗೆ ಸಚಿವ ಅನಿಲ್ ಪರಬ್ ಭರವಸೆ ನೀಡಿದ್ದಾರೆ. ಸಂಬಳ ವಿಳಂಬ ಕಾರಣಕ್ಕೆ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಜೊತೆಗೆ ಯಾರು ನಿರಾಶರಾಗಬೇಡಿ ಎಂದು ಅನಿಲ್ ಪರಬ್ ಮನವಿ ಮಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್