ಮಹಾಶಿವರಾತ್ರಿಗೆ ಸೋಮನಾಥ ಮಂದಿರಕ್ಕೆ ಮುಖೇಶ್ ಅಂಬಾನಿ ಭೇಟಿ, 1.51 ಕೋಟಿ ರೂ ದೇಣಿಗೆ!

Published : Feb 18, 2023, 09:09 PM IST
ಮಹಾಶಿವರಾತ್ರಿಗೆ ಸೋಮನಾಥ ಮಂದಿರಕ್ಕೆ ಮುಖೇಶ್ ಅಂಬಾನಿ ಭೇಟಿ, 1.51 ಕೋಟಿ ರೂ ದೇಣಿಗೆ!

ಸಾರಾಂಶ

ಮಹಾಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಉದ್ಯಮಿ ಮುಖೇಶ್ ಅಂಬಾನಿ ಗುಜರಾತ್‌ನ ಸೋಮನಾಥ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೇ ದೇವಸ್ಥಾನಕ್ಕೆ 1.51 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಗುಜರಾತ್(ಫೆ.18): ದೇಶದೆಲ್ಲೆಡೆ ಮಹಾಶಿವರಾತ್ರಿ ಆಚರಣೆ ನಡೆಯುತ್ತಿದೆ. ಶಿವನ ಸ್ತ್ರೋತ್ರ,ಭಜನೆ ಮೂಲಕ ಶಿವರಾತ್ರಿ ಆಚರಣೆ ನಡೆಯುತ್ತಿದೆ. ಪವಿತ್ರ ಹಬ್ಬದ ಪ್ರಯುಕ್ತ ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಗುಜರಾತ್‌ನ ಸೋಮನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಪುತ್ರ ಅಕಾಶ್ ಜೊತೆ ಮಂದಿರಕ್ಕೆ ಭೇಟಿ ನೀಡಿದ ಮುಖೇಶ್ ಅಂಬಾನಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸೋಮನಾಥ ದೇವಾಲದ ಟ್ರಸ್ಟ್‌ಗೆ ಬರೋಬ್ಬರಿ 1.51 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಮುಖೇಶ್ ಅಂಬಾನಿ ಹಾಗೂ ಬಳಗವನ್ನು ಸೋಮನಾಥ್ ದೇಗುಲದ ಟ್ರಸ್ಟ್ ಮುಖ್ಯಸ್ಥ ಪಿಕೆ ಲಹಿರಿ, ಕಾರ್ಯದರ್ಶಿ ಯೋಗೇಂದ್ರ ಭಾಯಿ ದೇಸಾಯಿ ಸ್ವಾಗತಕೋರಿದರು.ಬಳಿಕ ಸೋಮನಾಥ ಮಂದಿರ ಪ್ರವೇಶಿಸಿ ಪೂಜೆ ಸಲ್ಲಿಸಿದರು. ಸೋಮನಾಥ್ ಮಂದಿರದಲ್ಲಿ ಕೆಲ ಹೊತ್ತು ಕುಳಿತು ಭಕ್ತಿಯಿಂದ  ಶಿವನ ಆರಾಧನೆ ಮಾಡಿದರು. ಮುಖೇಶ್ ಅಂಬಾನಿ ಹಾಗೂ ಆಕಾಶ್ ಅಂಬಾನಿ ವಿಶೇಷ ಪೂಜೆ ನೆರವೇರಿಸಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

 

 

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಮುಖೇಶ್ ಅಂಬಾನಿ ಆಂಧ್ರ ಪ್ರದೇಶದ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಪುತ್ರ ಅನಂತ್ ಅಂಬಾನಿ ಹಾಗೂ ಅನಂತ್ ಪತ್ನಿ ರಾಧಿಕ ಮರ್ಚೆಂಟ್, ರಿಯಲನ್ಸ್ ನಿರ್ದೇಶಕ ಮನೋಜ್ ಮೋದಿ ಸೇರಿದಂತೆ ಕೆಲ ಕುಟುಂಬಸ್ಥರು ಭೇಟಿ ನೀಡಿದ್ದರು. ವೆಂಕಟೇಶ್ವರ ದೇಗುದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!