
ಲಕ್ನೋ(ಜ.17): ಪೆರೋಲ್ ಮೇಲೆ ಬಿಡುಗಡೆಯಾಗಿ ಪರಾರಿಯಾಗಿದ್ದ 1993 ಮುಂಬೈ ಸ್ಫೋಟ ಪ್ರಕರಣದ ಅಪರಾಧಿ ಜಲೀಸ್ ಅನ್ಸಾರಿಯನ್ನು ಉತ್ತರಪ್ರದೇಶದಲ್ಲಿ ಮತ್ತೆ ಬಂಧಿಸಲಾಗಿದೆ.
ಡಾ.ಬಾಂಬ್ ಎಂದೇ ಕರೆಯಲ್ಪಡುವ ಈ ಕುಖ್ಯಾತ ಉಗ್ರ, ಬಾಂಬ್ ತಯಾರಿಕೆಯಲ್ಲಿ ಪರಿಣತಿ ಸಾಧಿಸಿದ್ದ. 1993ರ ಮುಂಬೈ ಸರಣಿ ಸ್ಫೋಟದಲ್ಲಿ ಈತ ಪ್ರಮುಖ ಪಾತ್ರವಹಿಸಿದ್ದು, ಜೈಲುಶಿಕ್ಷೆಗೆ ಗುರಿಯಾಗಿದ್ದಾನೆ.
ಆದರೆ 21 ದಿನಗಳ ಪೆರೋಲ್ ಪಡೆದು ಬಿಡುಗಡೆ ಹೊಂದಿದ್ದ ಅನ್ಸಾರಿ, ಪರಾರಿಯಾಗಿ ಉತ್ತರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ.
ಇನ್ನು ಜಲೀಸ್ ಪರಾರಿಯಾಗಿರುವ ಕುರಿತು ಖುದ್ದು ಆತನ ಕುಟುಂಬಸ್ಥರೇ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆತನ ಪತ್ತೆ ತಂಡ ರಚಿಸಿದ್ದ ಮುಂಬೈ ಪೊಲೀಸರು, ಉತ್ತರ ಪ್ರದೇಶದ ಕಾನ್ಪುರದಲ್ಲಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ