
ಮುಂಬೈ (ಜ.16) ಮುಂಬೈ ಮಹಾನಗರ ಪಾಲಿಕೆ ಚುನಾವಣೆ ದೇಶಾದ್ಯಂತ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿ, ಶಿವಸೇನೆ, ಅಜಿತ್ ಪವಾರ್ ಬಣದ ಎನ್ಸಿಪಿ ಮೈತ್ರಿ ಮಹಾಯುತಿಗೆ ಜನರು ಮಣೆ ಹಾಕಿದ್ದಾರೆ. ವಿಶೇಷ ಅಂದರೆ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಾಹಿತಿ, ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಪಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಕಾಂತ್ ಪಂಗಾರ್ಕರ್ ಗೆಲುವಿನ ಸಂಭ್ರಮ ಆಚರಿಸಿದ್ದಾರೆ.
ಮುಂಬೈನ ಜಲ್ನಾ ಮುನ್ಸಿಪಲ್ ಕಾರ್ಪೋರೇಶನ್ನ ವಾರ್ಡ್ 13ರಲ್ಲಿ ಶ್ರೀಕಾಂತ್ ಪಂಗಾರ್ಕರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿ, ಎಕನಾಥ ಶಿಂಧೆ ಶಿವಸೇನೆ ಸೇರಿದಂತೆ ಪ್ರಮುಖ ಪಕ್ಷಗಳಿಂದ ಪ್ರಬಲ ಸ್ಪರ್ಧೆ ಎದುರಿಸಿದ್ದರು. ಭರ್ಜರಿ 2,621 ಮತಗಳ ಅಂತರದಿಂದ ಶ್ರೀಕಾಂತ್ ಗೆಲುವು ದಾಖಲಿಸಿದ್ದಾರೆ. ಶ್ರೀಕಾಂತ್ ಪಂಗಾರ್ಕರ್ ಗೆಲುವಿನ ಬೆನ್ನಲ್ಲೇ ಜಲ್ನಾ ವಾರ್ಡ್ 13ರಲ್ಲಿ ಭಾರಿ ಸಂಭ್ರಮಾಚರಣೆ ಶುರುವಾಗಿದೆ. ಗೆಲುವಿನ ಬಳಿಕ ಮಾತನಾಡಿದ ಶ್ರೀಕಾಂತ್, ಜನತೆಗೆ ಧನ್ಯವಾದ ಹೇಳಿದ್ದಾರೆ. ಸತತ ಆರೋಪಗಳು,ಹಲವ ಪಕ್ಷಗಳಿಂದ ಆದ ಹಿನ್ನಡೆಗೆ ಜನರು ಉತ್ತರಿಸಿದ್ದಾರೆ. ಜನ ಸೇವೆಯಲ್ಲಿ ಆರೋಪಗಳು ಬರುತ್ತಲೇ ಇರುತ್ತದೆ. ಎಲ್ಲೀವರೆಗೆ ಜನರು ಬೆಂಬಲ ನೀಡುತ್ತಾರೆ, ಅಲ್ಲೀವರೆಗೆ ಸೇವೆ ಮಾಡುತ್ತೇನೆ ಎಂದು ಶ್ರೀಕಾಂತ್ ಪಂಗಾರ್ಕರ್ ಹೇಳಿದ್ದಾರೆ.
2017ರಲ್ಲಿ ಕನ್ನಡ ಜನಪ್ರಿಯತ ಲೇಖಕಿ, ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಎಡಪಂಥೀಯ ವಿಚಾರಧಾರೆ ಹೊಂದಿದ್ದ ಗೌರಿ ಲಂಕೇಶ್ ಮನೆ ಹೊರಭಾಗದಲ್ಲಿ ಹತ್ಯೆಯಾಗಿದ್ದರು. ಗೌರಿ ಲಂಕೇಶ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ಇದೇ ಶ್ರೀಕಾಂತ್ ಪಂಗಾರ್ಕರ್ ಪ್ರಮುಖ ಆರೋಪಿಯಾಗಿದ್ದಾರೆ.
2024ರಲ್ಲಿ ಶ್ರೀಕಾಂತ್ ಪಂಗಾರ್ಕರ್ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಪಕ್ಷ ಸೇರಿಕೊಂಡಿದ್ದರು. ಆದರೆ ಗೌರಿ ಲಂಕೇಶ್ ಆರೋಪಿಯನ್ನು ಶಿವಸೇನೆ ಪಕ್ಷಕ್ಕೆ ಸೇರಿಸಿಕೊಂಡಿದೆ ಎಂದು ತೀವ್ರ ವಿರೋಧಗಳು ವ್ಯಕ್ತವಾಗಿತ್ತು. ಹೀಗಾಗಿ ಶಿವಸೇನೆ ಪಕ್ಷದಿಂದ ಅನಿವಾರ್ಯವಾಗಿ ಶ್ರೀಕಾಂತ್ ಹಿಂದೆ ಸರಿಯಬೇಕಾಯಿತು. ಇತ್ತ ಶಿವಸೇನೆ, ಶ್ರೀಕಾಂತ್ ಪಂಗಾರ್ಕರ್ ಪಕ್ಷ ಸೇರ್ಪಡೆಯನ್ನು ರದ್ದುಗೊಳಿಸಿತ್ತು.
ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಗೆಲುವು ದಾಖಲಿಸಿದೆ. 227 ವಾರ್ಡ್ಗೆ ಚುನಾವಣೆ ನಡೆದಿತ್ತು. ಸಂಜೆ ವರೆಗಿನ ಫಲಿತಾಂಶ ಪ್ರಕರಾ, ಮಹಾಯುತಿ 116 ಸ್ಥಾನಗಳ ಗೆಲುವಿನ ಮೂಲಕ ಮ್ಯಾಜಿಕ್ ನಂಬರ್ ದಾಟಿದೆ. ಇತ್ತ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 85 ವಾರ್ಡ್ ಗೆದ್ದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ