ಬಸ್‌ ಓಡಿಸುತ್ತಿದ್ದಾಗ ಚಾಲಕನಿಗೆ ಹೃದಯಾಘಾತ, ಪ್ರಯಾಣಿಕರು ಪಾರು!

Published : Oct 21, 2020, 09:08 AM IST
ಬಸ್‌ ಓಡಿಸುತ್ತಿದ್ದಾಗ ಚಾಲಕನಿಗೆ ಹೃದಯಾಘಾತ, ಪ್ರಯಾಣಿಕರು ಪಾರು!

ಸಾರಾಂಶ

ಬಸ್‌ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ| ಪವಾಡಸದೃಶ ರೀತಿಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರು| ಫಿಕ್‌ ಸಿಗ್ನಲ್‌ ಪೋಸ್ಟ್‌ಗೆ ಡಿಕ್ಕಿ 

ಮುಂಬೈ(ಅ.21): ಬಸ್‌ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಉಂಟಾಗಿ, ಅದರಲ್ಲಿದ್ದ 9 ಜನ ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿರುವ ಘಟನೆ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದಿದೆ.

ಮಂಗಳವಾರ ಬೆಳಿಗ್ಗೆ 11 ಗಂಟೆ ವೇಳೆಗೆ ಬೃಹನ್ಮುಂಬೈ ಎಲೆಕ್ಟ್ರಿಕ್‌ ಸಪ್ಲೈ ಆ್ಯಂಡ್‌ ಟ್ರಾನ್ಸ್‌ಪೋರ್ಟ್‌ (ಬಿಇಎಸ್‌ಟಿ) ಸಂಸ್ಥೆಯ ಬಸ್‌ ಮುಂಬೈನ ಚೆಂಬೂರಿನಿಂದ ಟಾಟಾ ಪವರ್‌ ಹೌಸ್‌ ಕಡೆಗೆ ಹೊರಟಿತ್ತು. ಈ ವೇಳೆ ಚಾಲಕ ಹೃದಯಾಘಾತಕ್ಕೆ ತುತ್ತಾಗಿದ್ದರಿಂದ ಬಸ್‌ ನಿಯಂತ್ರಣ ತಪ್ಪಿ ಟ್ರಾಫಿಕ್‌ ಸಿಗ್ನಲ್‌ ಪೋಸ್ಟ್‌ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಬಸ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಸೇರಿದಂತೆ 9 ಜನ ಪ್ರಯಾಣಿಕರಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಚಾಲಕನ್ನು ಆಸ್ಪತ್ರಗೆ ದಾಖಲಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!