ಏರ್‌ಇಂಡಿಯಾ ವಿಮಾನದ ಸೀಟ್‌ನಲ್ಲೇ ಮಲ-ಮೂತ್ರ ಮಾಡಿದ ವ್ಯಕ್ತಿಯ ಬಂಧನ!

Published : Jun 26, 2023, 09:54 PM IST
ಏರ್‌ಇಂಡಿಯಾ ವಿಮಾನದ ಸೀಟ್‌ನಲ್ಲೇ ಮಲ-ಮೂತ್ರ ಮಾಡಿದ ವ್ಯಕ್ತಿಯ ಬಂಧನ!

ಸಾರಾಂಶ

ವಿಮಾನದಲ್ಲಿ ಪ್ರಯಾಣಿಕರ ದುರ್ವತನೆಗಳ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ಘಟನೆ ದೊಡ್ಡ ಮಟ್ಟದಲ್ಲು ಸುದ್ದಿಯಾದ ಬೆನ್ನಲ್ಲಿಯೇ,  ಇತ್ತೀಚೆಗೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸೀಟ್‌ನಲ್ಲಿಯೇ ಮಲ-ಮೂತ್ರ ಮಾಡಿದ ಘಟನೆ ನಡೆದಿದೆ.

ನವದೆಹಲಿ (ಜೂನ್‌.26):  ಮುಂಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಮಾನದ ಸೀಟ್‌ನಲ್ಲಿಯೇ ಮಲ ಮತ್ತು ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಐಜಿಐ ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ಫ್ಲೈಟ್ ಕ್ಯಾಪ್ಟನ್ ದಾಖಲಿಸಿದ ಎಫ್‌ಐಆರ್ ಪ್ರಕಾರ, ಜೂನ್ 24 ರಂದು ಮುಂಬೈನಿಂದ ದೆಹಲಿಗೆ ಪ್ರಯಾಣ ಮಾಡಿದ್ದ ಏರ್ ಇಂಡಿಯಾ ವಿಮಾನವಾದ ಎಐಸಿ 866ಯಲ್ಲಿ ಪ್ರಯಾಣಿಕನೊಬ್ಬ ಸೀಟ್ ನಂ. 17ರಲ್ಲಿ ಮಲ-ಮೂತ್ರ ವಿಸರ್ಜೆನೆ ಹಾಗೂ ಉಗುಳಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈತ ಮಾಡಿದ್ದ ದುಷ್ಕೃತ್ಯವನ್ನು ಕ್ಯಾಬಿನ್‌ ಸಿಬ್ಬಂದಿ ಗಮನಿಸಿದ್ದಾರೆ. ಅದರ ಬೆನ್ನಲ್ಲಿಯೇ ಕ್ಯಾಬಿನ್‌ ಸೂಪರ್‌ವೈಸರ್‌ ಆತನಿಗೆ ಮೌಖಿಕವಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ತಿಳಿಸಲಾಗಿದೆ. ಬಳಿಕ ಫ್ಲೈಟ್ ಕ್ಯಾಪ್ಟನ್‌ಗೂ ದುರ್ವರ್ತನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಘಟನೆಯ ನಂತರ ದಾಖಲಾದ ಎಫ್‌ಐಆರ್ ಪ್ರಕಾರ, ತಕ್ಷಣವೇ ಕಂಪನಿಗೆ ಸಂದೇಶವನ್ನು ಕಳುಹಿಸಲಾಗಿದೆ ಮತ್ತು ಆಗಮನದ ನಂತರ ಪ್ರಯಾಣಿಕರನ್ನು ಹಿಡಿದಿಡಲು ವಿಮಾನ ನಿಲ್ದಾಣದ ಭದ್ರತೆಯನ್ನು ಕೋರಲಾಗಿತ್ತು. ಎಫ್‌ಐಆರ್‌ನ ಮಾಹಿತಿಯ ಪ್ರಕಾರ, ಸಹ ಪ್ರಯಾಣಿಕರು ಕೂಡ ವ್ಯಕ್ತಿಯ ವರ್ತನೆಯ ಬಗ್ಗೆ ಕಿಡಿಕಾರಿದ್ದಾರೆ. 

ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆ  ಏರ್ ಇಂಡಿಯಾದ ಭದ್ರತಾ ಮುಖ್ಯಸ್ಥರು ಹಾಜರಾಗಿ ಆರೋಪಿ ಪ್ರಯಾಣಿಕರನ್ನು ಐಜಿಐ ಏರ್‌ಪೋರ್ಟ್ ಪೊಲೀಸ್ ಠಾಣೆಗೆ ಕರೆದೊಯ್ದರು. ಆರೋಪಿಯಾಗಿರುವ ಪ್ರಯಾಣಿಕ ಆಫ್ರಿಕಾದಲ್ಲಿ ಅಡುಗೆ ಕೆಲಸದಲ್ಲಿದ್ದಾನೆ ಎನ್ನಲಾಗಿದೆ. ಅವರು ಜೂನ್ 24 ರಂದು ಏರ್ ಇಂಡಿಯಾ ವಿಮಾನ ಎಐಸಿ 866 ನಲ್ಲಿ ಮುಂಬೈನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು.

ಕಾಕ್‌ಪಿಟ್‌ಗೆ ಸ್ನೇಹಿತೆಯ ಕರೆತಂದ ಏರ್‌ ಇಂಡಿಯಾ ಪೈಲಟ್‌ ಸಸ್ಪೆಂಡ್‌

ಎಎನ್‌ಐಗೆ ಮಾತನಾಡಿದ ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು, "ಫ್ಲೈಟ್ ಕ್ಯಾಪ್ಟನ್‌ನ ದೂರಿನ ಮೇರೆಗೆ ದೆಹಲಿ ಪೊಲೀಸರು ಐಜಿಐ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಪೊಲೀಸ್ ಠಾಣೆಯಲ್ಲಿ ಆರೋಪಿ ಪ್ರಯಾಣಿಕನನ್ನು ಬಂಧಿಸಲಾಗಿದೆ. ಆತನನ್ನು ಕೋರ್ಟ್‌ಗೆ ಈಗಾಗಲೇ ಹಾಜರುಪಡಿಸಿದ್ದು, ಕೋರ್ಟ್‌ ಜಾಮೀನು ಮುಂಜೂರು ಮಾಡಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದಿದ್ದಾರೆ.

ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಚ್ಚಿದ ಚೇಳು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು