ಕೊರೋನಾ 2ನೇ ಅಲೆ; ಮಾರ್ಗಸೂಚಿ ಪಾಲಿಸದಿದ್ದರೆ ಮತ್ತೆ ಲಾಕ್‌ಡೌನ್ ಎಂದ ಮೇಯರ್!

Published : Feb 20, 2021, 08:13 PM IST
ಕೊರೋನಾ 2ನೇ ಅಲೆ; ಮಾರ್ಗಸೂಚಿ ಪಾಲಿಸದಿದ್ದರೆ ಮತ್ತೆ ಲಾಕ್‌ಡೌನ್ ಎಂದ ಮೇಯರ್!

ಸಾರಾಂಶ

ಕೊರೋನಾ ವೈರಸ್ ಮತ್ತೆ ಆರ್ಭಟ ಆರಂಭಿಸಿದೆ. ಕೆಲ ರಾಜ್ಯಗಳಲ್ಲಿ ಎರಡನೇ ಅಲೆ ಆರಂಭಗೊಂಡಿದೆ. ಇತ್ತ ಜನರ ನಿರ್ಲಕ್ಷ್ಯ ಕೂಡ ಎದ್ದು ಕಾಣುತ್ತಿದೆ. ಹೀಗಾಗಿ ಮೇಯರ್ ಖಡಕ್ ವಾರ್ನಿಂಗ್ ನೀಡಿದ್ದು, ಮತ್ತೆ ಲಾಕ್‌ಡೈನ್ ಆತಂಕ ಎದುರಾಗಿದೆ.

ಮುಂಬೈ(ಫೆ.20): ಕೊರೋನಾ ವೈರಸ್ 2ನೇ ಅಲೆ ಆರಂಭವಾಗುತ್ತಿದೆ ಅನ್ನೋ ಸೂಚನೆ ತಜ್ಞರಿಂದ ಬಂದಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಪ್ರಕರಣ ತೀವ್ರಗತಿಯಲ್ಲಿ ಹರಡುತ್ತಿದೆ. ಇದು ಕರ್ನಾಟಕಕ್ಕೂ ಆತಂಕ ತಂದಿದೆ. ಇದೀಗ ಮುಂಬೈನಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮುಂಬೈ ಮೇಯರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿದೆ ಕೊರೊನಾ ಕೇಸ್‌: ಆರೋಗ್ಯ ಸಚಿವರಿಂದ ಸುದ್ಧಿಗೋಷ್ಠಿ

ಮುಂಬೈನಲ್ಲಿ ಜನರು ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರ ಪಾಲಿಸುತ್ತಿಲ್ಲ. ಶುಚಿತ್ವದ ಕಡೆ ಗಮನಹರಿಸುತ್ತಿಲ್ಲ. ಜನರ ನಿರ್ಲಕ್ಷ್ಯ ಇದೇ ರೀತಿ ಮುಂದುವರಿದರೆ, ಮತ್ತೆ ಲಾಕ್‌ಡೌನ್ ಜಾರಿ ಮಾಡದೆ ಬೇರಿ ದಾರಿ ಇಲ್ಲ ಎಂದು ಮುಂಬೈ ಮೈಯರ್ ಕಿಶೋರ್ ಪೆಡ್ನೇಕರ್ ಎಚ್ಚರಿಸಿದ್ದಾರೆ.

ಮುಂಬೈನಲ್ಲಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಮಂಬೈ ಮಹಾನಗರಿಯಲ್ಲಿನ ಈ ಬೆಳವಣಿಗೆ ಮಹಾರಾಷ್ಟ್ರಕ್ಕೆ ಮತ್ತೆ ಸಂಕಷ್ಟ ತಂದೊಡ್ಡಿದೆ. ಮಹಾರಾಷ್ಟ್ರ ಜೊತೆ ಗಡಿ ಹಂಚಿಕೊಂಡಿರುವ ಕರ್ನಾಟಕಕ್ಕೂ ಸಂಕಷ್ಟ ಎದುರಾಗಿದೆ. ಮುಂಬೈನಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ