ಬಾಲ ಬಿಚ್ಚಿದ್ರೆ ಹುಷಾರ್, ಕುದುರೆ ಏರಿ ಬರ್ತಾರೆ!

Published : Jan 20, 2020, 07:41 PM IST
ಬಾಲ ಬಿಚ್ಚಿದ್ರೆ ಹುಷಾರ್, ಕುದುರೆ ಏರಿ ಬರ್ತಾರೆ!

ಸಾರಾಂಶ

ಮುಂಬೈ ಪೊಲೀಸ್ ಪ್ರಪಂಚದಲ್ಲಿ ಹೊಸ ಪ್ರಯೋಗ/ 88  ವರ್ಷಗಳ ನಂತರ ಅಶ್ವದಳ/ ಗಣರಾಜ್ಯೋತ್ಸವದಿಂದ ಆರಂಭ/ ಹಬ್ಬ-ಹರಿದಿನಗಳ ಜನಜಂಗುಳಿ ನಿಯಂತ್ರಣಕ್ಕೆ ಬ್ರಹ್ಮಾಸ್ತ್ರ

ಮುಂಬೈ(ಜ.20) ಮುಂಬೈ ಪೊಲೀಸರು ಹೊಸ ಬದಲಾವಣೆಯೊಂದಕ್ಕೆ ಸಿದ್ಧವಾಗಬೇಕಿದೆ. ಮುಂಬೈ ಪೊಲೀಸರಿಗೆ ಅಶ್ವದಳ ಒದಗಿಸಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್ ಮುಖ್ ತಿಳಿಸಿದ್ದಾರೆ.

ಟ್ರಾಫಿಕ್ ಕಂಟ್ರೋಲ್ ಮತ್ತು ಜನಜಂಗುಳಿ ನಿಯಂತ್ರಣಕ್ಕೆ ಅಶ್ವದಳ ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬರೋಬ್ಬರಿ 88 ವರ್ಷಗಳ ನಂತರ ಅಶ್ವದಳ ಮತ್ತೆ ಮುಂಬೈನಲ್ಲಿ ಕಾರ್ಯನಿರ್ವಹಿಸಲಿದೆ. ಈ ವರ್ಷದ ಗಣರಾಜ್ಯೋತ್ಸವ ದಿನದಿಂದ ಚಾಲನೆ ಸಿಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಗತ್ಯ ಬಿದ್ದರೆ ಪುಣೆ ಮತ್ತು ನಾಗಪುರದಿಂದ ಅಗತ್ಯ ಪರಿಕರಗಳನ್ನು ತರಿಸಿಕೊಳ್ಳಲಾಗುವುದು. 1932 ರಲ್ಲಿಸಾರಿಗೆ ಸಂಪರ್ಕ ಅಭಿವೃದ್ಧಿಗೊಂಡಾಗ ಅಶ್ವದಳವನ್ನು ಕೈ ಬಿಡಲಾಗಿತ್ತು. 

ಮುಂಬೈ ಪೊಲೀಸರು ಅತ್ಯಾಧುನಿಕ ಜೀಪ್ ಮತ್ತು ಬೈಕ್ ಗಳನ್ನು ಹೊಂದಿದ್ದಾರೆ. ಆದರೆ ಹಬ್ಬ ಹರಿದಿನದ ಸಂದರ್ಭ ಕುದುರೆಯಲ್ಲಿ ತೆರಳುವುದೇ ಅನುಕೂಲ. ಒಬ್ಬ ಪೊಲೀಸ್ ಕುದುರೆ ಮೇಲೆ ಇದ್ದರೆ  30 ಜನ ಪೊಲೀಸರು ಗ್ರೌಂಡ್ ನಲ್ಲಿ ಇದ್ದಂತೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಈಗ ಪಾರ್ಟೋಲ್ ಮಾಡುವ ಸ್ಥಿತಿ 7 ರಿಂದ 10  ಕಿಮೀ ಇದೆ. ಈಗಾಗಲೇ ಮೂವತ್ತು ಕುದುರೆಗಳಿಗೆ ಸರ್ಕಾರ ಅನುಮತಿ ನೀಡಿದೆ. ಯುನಿಟ್ ಒಂದರಲ್ಲಿ ಒಬ್ಬ ಸಬ್ ಇನ್ಸ್ ಪೆಕ್ಟರ್, ಒಬ್ಬ ಅಸಿಸ್ಟಂಟ್ ಪಿಎಸ್‌ಐ, ನಾಲ್ಕು ಹವಾಲ್ದಾರ್ ಗಳು, ಮೂವತ್ತೆರಡು ಜನ ಪೇದೆ ಇರುತ್ತಾರೆ. ಮುಂದಿನ ಆರು ತಿಂಗಳಿನಲ್ಲಿ ಯುನಿಟ್ ಗೆ ಸ್ಪಷ್ಟ ರೂಪ ಬರಲಿದೆ ಎಂದು ತಿಳಿಸಿದರು.

ವಾಕಿ ಟಾಕಿ ಇಲ್ಲದೆ ಕೆಲಸ ಮಾಡುವುದು, ಟೆಂಟ್ ಜಂಪಿಂಗ್ ತರಬೇತಿಯನ್ನು ನೀಡಲಾಗುವುದು. ಪ್ರತಿಯೊಬ್ಬ ಕುದುರೆ ಸವಾರ ಪೊಲೀಸರು ಬಾಡಿ ಕ್ಯಾಮರಾದೊಂದಿಗೆ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ