ಸನಾತನ ಧರ್ಮದ ಹೇಳಿಕೆಗೆ ಮುಸ್ಲಿಂ ಧರ್ಮಗುರುಗಳಿಂದಲೂ ವಿರೋಧ

Published : Sep 08, 2023, 02:30 AM IST
ಸನಾತನ ಧರ್ಮದ ಹೇಳಿಕೆಗೆ ಮುಸ್ಲಿಂ ಧರ್ಮಗುರುಗಳಿಂದಲೂ ವಿರೋಧ

ಸಾರಾಂಶ

ಇದು ಅವಹೇಳನಕಾರಿ ಹೇಳಿಕೆ. ವಿಶ್ವದ ಅತ್ಯಂತ ಪುರಾತನ ಧರ್ಮದ ವಿರುದ್ಧ ಇಂಥ ಟೀಕೆ ಮಾಡಿದ್ದ ಉದಯನಿಧಿ ಕ್ಷಮೆಯಾಚಿಸಬೇಕು. ಜನರ ಭಾವನೆಗಳಿಗೆ ಧಕ್ಕೆ ತರುವ ಹಕ್ಕು ಯಾರಿಗೂ ಇಲ್ಲ ಎಂದ ಉತ್ತರಪ್ರದೇಶದ ಶಿಯಾ ಸುನ್ನಿ ಉಲೇಮಾ ಫ್ರಂಟ್‌ನ ಪ್ರಧಾನ ಕಾರ್ಯದರ್ಶಿ ಮೌಲಾನಾ ಹಬೀಬ್‌ ಹೈದರ್‌ 

ಲಖನೌ(ಸೆ.08):  ಸನಾತನ ಧರ್ಮದ ಕುರಿತ ಉದಯನಿಧಿ ಹೇಳಿಕೆಗೆ ಇದೀಗ ಮುಸ್ಲಿಂ ಧರ್ಮಗುರುಗಳೂ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಶ್ವದ ಅತ್ಯಂತ ಹಳೆಯ ಧರ್ಮದ ಕುರಿತ ಇಂಥ ಹೇಳಿಕೆಯನ್ನು ಒಪ್ಪಲಾಗದು. ಈ ವಿಷಯದಲ್ಲಿ ಡಿಎಂಕೆ ಮತ್ತು ಇಂಡಿಯಾ ಮೈತ್ರಿಕೂಟ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶದ ಶಿಯಾ ಸುನ್ನಿ ಉಲೇಮಾ ಫ್ರಂಟ್‌ನ ಪ್ರಧಾನ ಕಾರ್ಯದರ್ಶಿ ಮೌಲಾನಾ ಹಬೀಬ್‌ ಹೈದರ್‌ ‘ಇದು ಅವಹೇಳನಕಾರಿ ಹೇಳಿಕೆ. ವಿಶ್ವದ ಅತ್ಯಂತ ಪುರಾತನ ಧರ್ಮದ ವಿರುದ್ಧ ಇಂಥ ಟೀಕೆ ಮಾಡಿದ್ದ ಉದಯನಿಧಿ ಕ್ಷಮೆಯಾಚಿಸಬೇಕು. ಜನರ ಭಾವನೆಗಳಿಗೆ ಧಕ್ಕೆ ತರುವ ಹಕ್ಕು ಯಾರಿಗೂ ಇಲ್ಲ’ ಎಂದಿದ್ದಾರೆ.

ಸನಾತನ ಧರ್ಮವನ್ನು ಅಳಿಸಿ ಹಾಕುತ್ತೇನೆ ಎಂದವರೆಲ್ಲ ಅಳಿದು ಹೋಗಿದ್ದಾರೆ: ಯೋಗಿ ಆದಿತ್ಯನಾಥ್‌!

ಇನ್ನು ಅಖಿಲ ಭಾರತ ಮುಸ್ಲಿಂ ಜಮಾತ್‌ ಮೌಲಾನಾ ಅಧ್ಯಕ್ಷ ಶಹಬುದ್ದೀನ್‌ ರಿಜ್ವಿ ‘ಯಾವುದೇ ಧರ್ಮವನ್ನು ಟೀಕಿಸುವ ಹಕ್ಕು ಉದಯನಿಧಿಗೆ ಇಲ್ಲ. ಇಂತಹ ಹೇಳಿಕೆಗಳು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುತ್ತವೆ. ಧರ್ಮಗಳಿರುವುದು ಜನರನ್ನು ಒಗ್ಗೂಡಿಸಲು ಹೊರತು ಜಾತಿಯ ಆಧಾರದ ಮೇಲೆ ವಿಭಜಿಸಲು ಅಲ್ಲ’ ಎಂದಿದ್ದಾರೆ.

ಮತ್ತೊಬ್ಬ ಧರ್ಮಗುರು ಅಬು ಜಾಫರ್‌ ನೊಮಾನಿ ಕೂಡ ‘ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಟೀಕೆ ಮಾಡಬಾರದು. ಉದಯನಿಧಿ ಸ್ಟಾಲಿನ್‌ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಬೇಕು’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!