ಶ್ರೀನಾಥ್‌ ದೋಸೆ ಕಾರ್ನರ್‌ ಎಂದು ಹೆಸರಿಟ್ಟ ಮುಸ್ಲಿಂ ವ್ಯಕ್ತಿಗೆ ಬೆದರಿಕೆ!

Published : Aug 30, 2021, 08:37 AM ISTUpdated : Aug 30, 2021, 09:40 AM IST
ಶ್ರೀನಾಥ್‌ ದೋಸೆ ಕಾರ್ನರ್‌ ಎಂದು ಹೆಸರಿಟ್ಟ ಮುಸ್ಲಿಂ ವ್ಯಕ್ತಿಗೆ ಬೆದರಿಕೆ!

ಸಾರಾಂಶ

* ಮುಸ್ಲಿಂ ವ್ಯಕ್ತಿಯೊಬ್ಬ ತಾನು ನಡೆಸುತ್ತಿದ್ದ ದೋಸೆ ಅಂಗಡಿಗೆ ಹಿಂದೂ ದೇವರ ಹೆಸರು * ಶ್ರೀನಾಥ್‌ ದೋಸೆ ಕಾರ್ನರ್‌ ಎಂದು ಹೆಸರಿಟ್ಟಮುಸ್ಲಿಂ ವ್ಯಕ್ತಿಗೆ ಮಥುರಾದಲ್ಲಿ ಬೆದರಿಕೆ

ಮಥುರಾ(ಆ.30): ಮುಸ್ಲಿಂ ವ್ಯಕ್ತಿಯೊಬ್ಬ ತಾನು ನಡೆಸುತ್ತಿದ್ದ ದೋಸೆ ಅಂಗಡಿಗೆ ಹಿಂದೂ ದೇವರ ಹೆಸರನ್ನು ಇಟ್ಟಿದ್ದ ಕಾರಣಕ್ಕೆ ಜನರ ಗುಂಪೊಂದು ಬೆದರಿಕೆ ಹಾಕಿದ್ದು, ಅಂಗಡಿಯನ್ನು ಹಾನಿಗೊಳಿಸಿರುವ ಘಟನೆ ಮಥರಾದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಗುಂಪಿನ ಸದಸ್ಯರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ವಿಕಾಸ್‌ ಬಜಾರ್‌ ಪ್ರದೇಶದಲ್ಲಿ ಆ.18ರಂದು ಈ ಘಟನೆ ನಡೆದಿದ್ದು, ‘ಶ್ರೀನಾಥ್‌ ದೋಸಾ ಕಾರ್ನರ್‌’ ಎಂದು ಬೋರ್ಡ್‌ ಹಾಕಿ ದೋಸೆ ಮಾರಾಟ ಮಾಡುತ್ತಿದ್ದ ಇರ್ಫಾನ್‌ ಎಂಬಾತನ ಮೇಲೆ ಜನರ ಗುಂಪು ಹಲ್ಲೆಗೆ ಯತ್ನಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಘಟನೆಯ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಶ್ರೀನಾಥ್‌ ದೋಸಾ ಕಾರ್ನರ್‌ ಎಂದು ಬೋರ್ಡ್‌ ಇದ್ದ ತನ್ನ ಅಂಡಿಯ ಮುಂದೆ ಇರ್ಫಾನ್‌ ಕಣ್ಣೀರಿಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಹಿಂದೂ ವ್ಯಕ್ತಿಗಳು ಕೂಡ ತಪ್ಪು ಭಾವಿಸಿಕೊಂಡು ಈತನಿಂದ ತಿಂಡಿಯನ್ನು ತಿನ್ನುತ್ತಿದ್ದರು ಎಂದು ವ್ಯಕ್ತಿಯೊಬ್ಬ ಆರೋಪಿಸಿದ್ದಾನೆ.

ಇನ್ನೊಬ್ಬ ವ್ಯಕ್ತಿ ದೋಸೆ ಕಾರ್ನರ್‌ಗೆ ಆತ ಮುಸ್ಲಿಂ ಹೆಸರನ್ನು ಬಿಟ್ಟು ಹಿಂದೂ ಹೆಸರನ್ನು ಇಟ್ಟಿದ್ದೇಕೆ ಎಂದು ಪ್ರಶ್ನಿಸಿದ್ದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಅಲ್ಲದೇ ಕೃಷ್ಣನ ಭಕ್ತರು ಮಥುರಾವನ್ನು ಶುದ್ಧಗೊಳಿಸಬೇಕು ಎಂದು ಜನರ ಗುಂಪು ಘೋಷಣೆಯನ್ನು ಕೂಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!