ಮುಂಬೈಯಿಂದ ಅಯೋಧ್ಯೆಗೆ ಮುಸ್ಲಿಂ ಮಹಿಳೆ ಕಾಲ್ನಡಿಗೆ ಯಾತ್ರೆ

Published : Dec 29, 2023, 08:03 AM ISTUpdated : Dec 29, 2023, 08:34 AM IST
ಮುಂಬೈಯಿಂದ ಅಯೋಧ್ಯೆಗೆ ಮುಸ್ಲಿಂ ಮಹಿಳೆ ಕಾಲ್ನಡಿಗೆ ಯಾತ್ರೆ

ಸಾರಾಂಶ

2024ರ ಜ.22ರಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆಗೆ ಸಜ್ಜಾಗುತ್ತಿರುವ ಹೊತ್ತಿನಲ್ಲೇ ರಾಮನ ದರ್ಶನಕ್ಕಾಗಿ ಮುಸ್ಲಿಂ ಮಹಿಳೆಯೊಬ್ಬರು ಪಾದಯಾತ್ರೆ ಕೈಗೊಂಡಿದ್ದಾರೆ

ನವದೆಹಲಿ: 2024ರ ಜ.22ರಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆಗೆ ಸಜ್ಜಾಗುತ್ತಿರುವ ಹೊತ್ತಿನಲ್ಲೇ ರಾಮನ ದರ್ಶನಕ್ಕಾಗಿ ಮುಸ್ಲಿಂ ಮಹಿಳೆಯೊಬ್ಬರು ಪಾದಯಾತ್ರೆ ಕೈಗೊಂಡಿದ್ದಾರೆ. ಇನ್ನೂ ವಿಶೇಷವೆಂದರೆ ಶಬ್ನಂ ಎಂಬ ಈ ಯುವತಿ ಮುಂಬೈನಿಂದ ಅಯೋಧ್ಯೆವರೆಗಿನ 1425 ಕಿ.ಮೀ ದೂರವನ್ನು ಪಾದಯಾತ್ರೆಯ ಮೂಲಕವೇ ಕ್ರಮಿಸಿ ರಾಮನ ದರ್ಶನ ಪಡೆಯಲು ನಿರ್ಧರಿಸಿದ್ದಾಳೆ.

ತನ್ನ ಇಬ್ಬರು ಸಹಚರರರಾದ ರಮಣ್‌ ಶರ್ಮಾ ಮತ್ತು ವಿನೀತ್‌ ಪಾಂಡೆ ಜೊತೆಗೆ ಈಗಾಗಲೇ ಕಾಲ್ನಡಿಗೆ ಯಾತ್ರೆ ಆರಂಭಿಸಿರುವ ಶಬ್ನಂ ಇದೀಗ ಮಧ್ಯಪ್ರದೇಶದ ಸಿಂಧವಾ ಪ್ರದೇಶ ತಲುಪಿದ್ದಾರೆ. ಪ್ರತಿದಿನ 25ರಿಂದ 30 ಕಿ.ಮೀ ದೂರ ಕ್ರಮಿಸುತ್ತಿರುವ ಶಬ್ನಂ, ಮಂದಿರ ಉದ್ಘಾಟನೆ ವೇಳೆಗೆ ಅಯೋಧ್ಯೆ ತಲುಪಬೇಕೆಂಬ ಗುರಿ ಏನೂ ಇಲ್ಲ. ಇದು ನನ್ನಲ್ಲಿನ ಅಧ್ಯಾತ್ಮದ ಪರಿಪೂರ್ಣತೆಯ ಅನ್ವೇಷಣೆಯ ಯತ್ನವಷ್ಟೇ ಎಂದು ಹೇಳಿದ್ದಾರೆ.

ರಾಮ ಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಲ್ಲಿ ಸ್ಟಾರ್ಸ್ ಮೆರಗು: ರಿಷಬ್ ಬಳಿಕ ಯಶ್‌ಗೂ ಬಂತು ಆಹ್ವಾನ!

ರಾಮನ ಪೂಜಿಸಲು ಹಿಂದೂ ಆಗಬೇಕಿಲ್ಲ:

ಭಗವಾನ್‌ ಶ್ರೀರಾಮನನ್ನು ಪೂಜಿಸಲು ಕೇವಲ ಹಿಂದೂವೇ ಆಗಿರಬೇಕು ಎಂಬ ಅಗತ್ಯವಿಲ್ಲ. ಒಬ್ಬ ಉತ್ತಮ ಮನುಷ್ಯನಾಗಿದ್ದರೆ ಸಾಕು. ಶ್ರೀರಾಮ ಯಾವುದೇ ನಿರ್ದಿಷ್ಟ ಧರ್ಮ ಮತ್ತು ಪ್ರದೇಶಕ್ಕೆ ಸೀಮಿತವಲ್ಲ. ಆತ ಎಲ್ಲರಿಗೂ ಸೇರಿದವನು. ನನ್ನ ಯಾತ್ರೆ ವೇಳೆ ಮುಸ್ಲಿಮರು ಕೂಡ ಜೈಶ್ರೀರಾಮ್ ಎಂದು ನನಗೆ ಬೆಂಬಲ ನೀಡಿದ್ದಾರೆ. ಈ ಯಾತ್ರೆ ಕೇವಲ ಪುರುಷರು ಮಾತ್ರವೇ ಇಂಥ ಸುದೀರ್ಘ ಯಾತ್ರೆಯನ್ನು ಕೈಗೊಳ್ಳಬಹುದು ಎಂಬ ಅಪನಂಬಿಕೆ ದೂರ ಮಾಡುವ ಉದ್ದೇಶವನ್ನೂ ಹೊಂದಿದೆ ಎಂದು ಶಬ್ನಮ್‌ ಹೇಳಿದ್ದಾರೆ.

ಅಯೋಧ್ಯೆ ರಾಮ ಮಂದಿರ ವಿಶ್ವದ ಮೂರನೇ ಅತಿದೊಡ್ಡ ದೇವಾಲಯ, ಟಾಪ್‌ 5 ಟೆಂಪಲ್ ಇಲ್ಲಿದೆ

ಶ್ರೀರಾಮನ ಮೇಲೆ ಅಪಾರ ಭಕ್ತಿ ಹೊಂದಿರುವ ಶಬ್ನಮ್‌ ಧರ್ಮವನ್ನೂ ಮೀರಿ ಸೌಹಾರ್ದತೆ ಮೆರೆದು ಮಾದರಿಯಾಗಿದ್ದಾರೆ. ಅದಾಗ್ಯೂ ಶಬ್ನಮ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. 

ಪೊಲೀಸರ ನೆರವು: ಶಬ್ನಂರ ಈ ಯಾತ್ರೆಗೆ ಮಹಾರಾಷ್ಟ್ರದಲ್ಲಿ ಪೊಲೀಸರೇ ಸಾಕಷ್ಟು ಭದ್ರತೆ, ಊಟ, ವಸತಿ ವ್ಯವಸ್ಥೆ ಮಾಡುವ ಮೂಲಕ ಆಕೆ ಮತ್ತು ಆಕೆಯ ಇಬ್ಬರು ಸ್ನೇಹಿತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ