ತಮಿಳ್ನಾಡಲ್ಲಿ ರಾಹುಲ್‌ ಭರ್ಜರಿ ರೋಡ್‌ ಶೋ, ಮೋದಿ ವಿರುದ್ಧ ವಾಗ್ದಾಳಿ!

Published : Jan 24, 2021, 09:56 AM ISTUpdated : Jan 24, 2021, 10:00 AM IST
ತಮಿಳ್ನಾಡಲ್ಲಿ ರಾಹುಲ್‌ ಭರ್ಜರಿ ರೋಡ್‌ ಶೋ, ಮೋದಿ ವಿರುದ್ಧ ವಾಗ್ದಾಳಿ!

ಸಾರಾಂಶ

ತಮಿಳ್ನಾಡಲ್ಲಿ ರಾಹುಲ್‌ ಭರ್ಜರಿ ರೋಡ್‌ ಶೋ, ಮೋದಿ ವಿರುದ್ಧ ವಾಗ್ದಾಳಿ| ತಮಿಳ್ನಾಡು ನಿಯಂತ್ರಿಸುವುದು ತಮಿಳರು ಮಾತ್ರ, ನಾಗಪುರ ಅಲ್ಲ

ಕೊಯಮತ್ತೂರು(ಜ.24): ಈ ಬೇಸಿಗೆಯಲ್ಲಿ ಚುನಾವಣೆ ನಡೆಯಲಿರುವ ತಮಿಳುನಾಡಿನಲ್ಲಿ ಪ್ರಚಾರ ಆರಂಭಿಸಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಶನಿವಾರ ಕೊಯಮತ್ತೂರಿನಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

"

ನಗರದ ಅನೇಕ ಸ್ಥಳದಲ್ಲಿ ಮಾತನಾಡಿದ ಅವರು, ‘ಮೋದಿ ಸರ್ಕಾರದ ಜತೆ ಶಾಮೀಲಾಗಿ ಅಣ್ಣಾ ಡಿಎಂಕೆ ಸರ್ಕಾರ ರಾಜ್ಯದ ಹಿತ ಬಲಿ ಕೊಟ್ಟಿದೆ. ಮೋದಿ ಅವರು ತಮಗೆ ಬೇಕಾದದ್ದನ್ನು ಈಡೇರಿಸಿಕೊಳ್ಳಲು ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಾರೆ.

ತಮಿಳು ಜನರನ್ನು ನಿಯಂತ್ರಿಸಲು ಮೋದಿ ಬಯಸುತ್ತಾರೆ. ಆದರೆ ತಮಿಳುನಾಡನ್ನು ನಿಯಂತ್ರಿಸುವುದು ತಮಿಳರು ಮಾತ್ರ. ನಾಗಪುರ (ಆರೆಸ್ಸೆಸ್‌) ಅಲ್ಲ’ ಎಂದು ಗುಡುಗಿದರು. ‘ಆದರೆ ನಿಮಗೆ ಬೇಕಾದ ಸರ್ಕಾರ ಬರುವಂತಾಗಲು ನಾನು ತಮಿಳುನಾಡಿನ ಜನರ ಪರ ಕೆಲಸ ಮಾಡುತ್ತೇನೆ’ ಎಂದು ಜನತೆಗೆ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?