Rape Case: 4ರ ಕಂದನ ರೇಪ್, ಒಂದೇ ದಿನದಲ್ಲಿ ತೀರ್ಪು ಪ್ರಕಟಿಸಿದ ಕೋರ್ಟ್‌, ಬಾಲಾಪರಾಧಿಗೆ ಜೈಲು!

Published : Nov 27, 2021, 07:27 PM ISTUpdated : Nov 28, 2021, 03:05 AM IST
Rape Case: 4ರ ಕಂದನ ರೇಪ್, ಒಂದೇ ದಿನದಲ್ಲಿ ತೀರ್ಪು ಪ್ರಕಟಿಸಿದ ಕೋರ್ಟ್‌, ಬಾಲಾಪರಾಧಿಗೆ ಜೈಲು!

ಸಾರಾಂಶ

* ನಾಲ್ಕು ವರ್ಷದ ಕಂದನ ಅತ್ಯಾಚಾರ * ಒಂದೇ ದಿನದಲ್ಲಿ ತೀರ್ಪು ಪ್ರಕಟಿಸಿದ ಕೋರ್ಟ್‌ * ಶಿಕ್ಷೆಗೊಳಗಾದ ಬಾಲಾಪರಾಧಿಗೆ 14 ವರ್ಷ

ಪಾಟ್ನಾ(ನ.27): ಬಿಹಾರದ ನಳಂದಾ (Nalanda Bihar) ಜಿಲ್ಲೆಯ ಬಿಹಾರಶರೀಫ್‌ನಲ್ಲಿರುವ ಬಿಹೇವಿಯರಲ್ ಕೋರ್ಟ್‌ನಲ್ಲಿ ಜುವೆನೈಲ್ ಜಸ್ಟಿಸ್ ಕೌನ್ಸಿಲ್ ನ್ಯಾಯಾಧೀಶ ಮನ್ವೇಂದ್ರ ಮಿಶ್ರಾ ಅವರು ನಾಲ್ಕು ವರ್ಷದ ಬಾಲಕಿಯೊಂದಿಗೆ ಅಪ್ರಾಪ್ತ ಬಾಲಕಿಯ (Minor Girl) ಅತ್ಯಾಚಾರ ಪ್ರಕರಣದಲ್ಲಿ ಕೇವಲ ಒಂದೇ ದಿನದಲ್ಲಿ ತೀರ್ಪು (Verdict) ನೀಡುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. ನ್ಯಾಯಾಧೀಶರಾದ ಮನ್ವೇಂದ್ರ ಮಿಶ್ರಾ ಮತ್ತು ಪಾಲಿಕೆ ಸದಸ್ಯೆ ಉಷಾ ಕುಮಾರಿ ಅವರು ಇದೊಂದು ಅಮಾನುಷ ಪ್ರವೃತ್ತಿ ಎಂದು ಪರಿಗಣಿಸಿ, ಅಂತಹವರನ್ನು ಶಿಕ್ಷಿಸಿ ಸಮಾಜವನ್ನು ಜಾಗೃತಗೊಳಿಸುವುದು ಬಹಳ ಮುಖ್ಯ ಎಂದಿದ್ದಾರೆ. 

ಶಿಕ್ಷೆಗೊಳಗಾದ ಬಾಲಾಪರಾಧಿ (Juvenile) 14 ವರ್ಷ ವಯಸ್ಸಿನವನೆಂಬುವುದು ಉಲ್ಲೇಖನೀಯ. ಹೀಗಿದ್ದರೂ ಯೋಜಿತ ರೀತಿಯಲ್ಲಿ ಈ ಅಪರಾಧ ಎಸಗಿದ್ದಾರೆ. ಸಂತ್ರಸ್ತ ಬಾಲಕಿಯೊಂದಿಗೆ ಅಸ್ವಾಭಾವಿಕ ಸಂಭೋಗ ನಡೆಸಿದ್ದು, ಆಕೆಯ ತಾಯಿ ಬರುವ ಬಗ್ಗೆ ಮಾಹಿತಿ ಪಡೆದು ಪರಾರಿಯಾಗಿದ್ದಾನೆ. ಬಾಲಾಪರಾಧಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಅಪರಾಧ (Crime) ಮಾಡುವ ಸಾಮರ್ಥ್ಯವನ್ನು ಹೊಂದಿದ್ದನೆಂದು ಇದು ಸಾಬೀತುಪಡಿಸುತ್ತದೆ. ಆದ್ದರಿಂದ, ಬಾಲಾಪರಾಧಿಗಳ ಅಪರಾಧಕ್ಕಾಗಿ ಗರಿಷ್ಠ ಶಿಕ್ಷೆಯ ಸೆಕ್ಷನ್ 377 ರ ಅಡಿಯಲ್ಲಿ ಅವನಿಗೆ ಮೂರು ವರ್ಷಗಳ ಜೈಲು ಶಿಕ್ಷೆ (Jail) ವಿಧಿಸಲಾಗುತ್ತದೆ.

ಶನಿವಾರ, ಜುವೆನೈಲ್ ಜಸ್ಟಿಸ್ ಕೌನ್ಸಿಲ್ ನ್ಯಾಯಾಧೀಶ ಮನ್ವೇಂದ್ರ ಮಿಶ್ರಾ ಅವರು ಪ್ರಕರಣದ ವಿಚಾರಣೆ ನಡೆಸುವಾಗ, ಕೇವಲ ಒಂದು ದಿನದಲ್ಲಿ ಎಲ್ಲಾ ಐದು ಸಾಕ್ಷಿಗಳ ಸಾಕ್ಷ್ಯವನ್ನು ತೆಗೆದುಕೊಂಡರು. ಇದರೊಂದಿಗೆ ಹತ್ತು ಮಂದಿ ಪ್ರತ್ಯಕ್ಷದರ್ಶಿಗಳನ್ನೂ ಪರೀಕ್ಷೆಗೊಳಪಡಿಸುವ ಮೂಲಕ ಚರ್ಚೆಯನ್ನು ಪೂರ್ಣಗೊಳಿಸಲಾಯಿತು. ಒಂದೇ ದಿನದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅವರು ತಮ್ಮ ತೀರ್ಪು ನೀಡಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಷನ್ ಜಯಪ್ರಕಾಶ ಮಾತನಾಡಿ, ಶಿಕ್ಷೆಗೊಳಗಾದ ಬಾಲಾಪರಾಧಿ ನಾಲ್ಕು ವರ್ಷದ ಬಾಲಕಿಯೊಂದಿಗೆ ಹುಣಸೆಹಣ್ಣು ಮತ್ತು ಚಾಕೊಲೇಟ್ ನೀಡಿ ಆಮಿಷ ಒಡ್ಡಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ (Sexual Assault) ನಡೆಸಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ.

ಅಕ್ಟೋಬರ್ 8, 2021 ರಂದು, ನಳಂದಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ, ಹದಿಹರೆಯದವರು ನಾಲ್ಕು ವರ್ಷದ ಬಾಲಕಿಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಯನ್ನು ಹೊಂದಿದ್ದರು ಎಂಬುವುದು ಉಲ್ಲೇಖನೀಯ. ಸಂತ್ರಸ್ತೆಯ ಚಿಕ್ಕಮ್ಮ ಆರೋಪಿ ಹದಿಹರೆಯದ ತನ್ನ ಮುಗ್ಧ ಸೊಸೆಯೊಂದಿಗೆ ತಪ್ಪು ಮಾಡುತ್ತಿದ್ದುದನ್ನು ನೋಡಿದ್ದಳು ಮತ್ತು ಆಕೆ ಈ ಬಗ್ಗೆ ಎಚ್ಚರಿಸದ್ದಾರೆ. ಜನರು ಬರುತ್ತಿರುವ ಸುದ್ದಿ ತಿಳಿದ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ.

ನಂತರ ಆಕ್ರೋಶಗೊಂಡ ಗ್ರಾಮಸ್ಥರು ಆರೋಪಿ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿ ಬಾಲಾಪರಾಧಿ ಮತ್ತು ಸಂತ್ರಸ್ತೆಯ ಫೊರೆನ್ಸಿಕ್ ತನಿಖೆ ನಡೆಸಿದ್ದು, ಅತ್ಯಾಚಾರ ದೃಢಪಟ್ಟಿದೆ.

 3 ರೇಪಿಸ್ಟ್‌ಗಳ ಗಲ್ಲು ಶಿಕ್ಷೆ, ಜೀವಾವಧಿಯಾಗಿ ಬದಲು!

 

2013ರಲ್ಲಿ ಸೆಂಟ್ರಲ್‌ ಮುಂಬೈನ ಶಕ್ತಿಮಿಲ್ಸ್‌ ಆವರಣದಲ್ಲಿ 22 ವರ್ಷದ ಫೋಟೋ ಜರ್ನಲಿಸ್ಟ್ (Photo Journalist) ಮೇಲೆ ನಡೆದ ಸಾಮೂಹಿಕ ಅತ್ಯಾಚಾರ (Shakti Mills gangrape case) ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ (Bombay High Court) ಜೀವಾವಧಿ ಶಿಕ್ಷೆಗೆ ಇಳಿಸಿದೆ. ಈ ಪ್ರಕರಣದ ದೋಷಿಗಳಾದ ವಿಜಯ್‌ ಜಾಧವ್‌, ಮೊಹಮ್ಮದ್‌ ಕ್ವಾಸಿಂ ಬೆಂಗಾಲಿ ಶೇಖ್‌ ಮತ್ತು ಮೊಹಮ್ಮದ್‌ ಅನ್ಸಾರಿಗೆ 7 ವರ್ಷಗಳ ಹಿಂದೆಯೇ ವಿಚಾರಣಾಧೀನ ನ್ಯಾಯಾಲಯವೊಂದು ಗಲ್ಲು ಶಿಕ್ಷೆ (Death Penalty) ವಿಧಿಸಿತ್ತು. ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಅತ್ಯಾಚಾರವೆಸಗಿದ ದೋಷಿಗಳಿಗೆ ಮರಣದಂಡನೆ ವಿಧಿಸುವುದರಿಂದ ತಮ್ಮ ಕೃತ್ಯದ ಪಾಪಪ್ರಜ್ಞೆ ಕಾಡುವುದಿಲ್ಲ. ಹೀಗಾಗಿ ತಮ್ಮ ತಪ್ಪಿನ ಅರಿವಾಗಲು ಅವರು ಸಾಯುವವರೆಗೆ ಜೈಲು ಶಿಕ್ಷೆಗೆ ಅರ್ಹವಾಗಿದ್ದಾರೆ. ಇದರಿಂದ ಜೀವನದುದ್ದಕ್ಕೂ ಪಶ್ಚಾತ್ತಾಪ ಪಡುತ್ತಾರೆ ಎಂದಿದೆ.

ಬಿಜೆಪಿ ಶಾಸಕನಿಂದ 2 ವರ್ಷದಿಂದ 38 ವರ್ಷದ ಮಹಿಳೆಯ ರೇಪ್, 10 ತಿಂಗಳಲ್ಲಿ ಎರಡನೇ FIR!

ಮರಣದಂಡನೆ ಬದಲು

ನ್ಯಾಯಮೂರ್ತಿ ಸಾಧನಾ ಜಾಧವ್ ಮತ್ತು ನ್ಯಾಯಮೂರ್ತಿ ಪೃಥ್ವಿರಾಜ್ ಚೌಹಾಣ್ ಅವರ ವಿಭಾಗೀಯ ಪೀಠವು ಅಪರಾಧಿಗಳಾದ ವಿಜಯ್ ಜಾಧವ್, ಮೊಹಮ್ಮದ್ ಕಾಸಿಂ ಶೇಖ್ ಮತ್ತು ಮೊಹಮ್ಮದ್ ಅನ್ಸಾರಿ ಅವರಿಗೆ ನೀಡಲಾದ ಮರಣದಂಡನೆಯನ್ನು ಎತ್ತಿಹಿಡಿಯಲು ನಿರಾಕರಿಸಿತು. ಪೀಠವು ಆಅವರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!