
ನವದೆಹಲಿ (ಫೆ. 21): ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾಗ್ಯೂ, ಪಕ್ಷ ಅಧಿಕಾರ ಹಿಡಿಯುವಲ್ಲಿ ವೈಫಲ್ಯ ಅನುಭವಿಸಿರುವುದಕ್ಕೆ ಬಿಜೆಪಿ ಪ್ರಚಾರದಲ್ಲಾದ ಅಚಾತುರ್ಯಗಳೇ ಕಾರಣ ಎಂದು ಆರ್ಎಸ್ಎಸ್ ಪ್ರತಿಪಾದಿಸಿದೆ.
ಈ ಸಂಬಂಧ ಆರ್ಎಸ್ಎಸ್ ಮುಖವಾಣಿಯಲ್ಲಿ ಸುದೀರ್ಘ ಸಂಪಾದಕೀಯದಲ್ಲಿ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಂಥ ದಿಗ್ಗಜರೇ ಎಲ್ಲಾ ಚುನಾವಣೆಗಳನ್ನು ಗೆಲ್ಲಿಸಲಾಗದು. ಹೀಗಾಗಿ, ದೆಹಲಿಯಲ್ಲಿ ಪಕ್ಷದ ಮರು ಸಂಘಟನೆಗೆ ಒತ್ತು ನೀಡುವಂತೆ ಬಿಜೆಪಿಗೆ ಸಲಹೆ ಮತ್ತು ಸೂಚನೆಗಳನ್ನು ನೀಡಲಾಗಿದೆ. ಇತ್ತೀಚೆಗಷ್ಟೇ ನಡೆದ ದಿಲ್ಲಿ ಚುನಾವಣೆಯಲ್ಲಿ ಆಪ್ 62 ಸ್ಥಾನ, ಬಿಜೆಪಿ 8 ಸ್ಥಾನ ಹಾಗೂ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ