Mann Ki Baatನಲ್ಲಿ ಕರ್ನಾಟಕದ ಯುವತಿ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ: ವರ್ಷಾಗೆ ಮೆಚ್ಚುಗೆ

Published : Nov 26, 2023, 12:38 PM ISTUpdated : Nov 26, 2023, 02:28 PM IST
Mann Ki Baatನಲ್ಲಿ ಕರ್ನಾಟಕದ ಯುವತಿ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ: ವರ್ಷಾಗೆ ಮೆಚ್ಚುಗೆ

ಸಾರಾಂಶ

ಕರ್ನಾಟಕದ ಯುವತಿಯ ಬಗ್ಗೆ ಮೋದಿ ನವೆಂಬರ್ ತಿಂಗಳ ಮನ್‌ ಕೀ ಬಾತ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಚಾಮರಾಜನಗರದ ವರ್ಷಾ ಹೆಸರನ್ನು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ನವದೆಹಲಿ (ನವೆಂಬರ್ 26, 2023): ಪ್ರತಿ ತಿಂಗಳ ಕೊನೆಯ ವಾರ ಪ್ರಧಾನಿ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕೀ ಬಾತ್‌ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇದೇ ರೀತಿ, ಇಂದು  ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮವಾದ 107 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಕಾರ್ಯಕ್ರಮದ ಮೂಲಕ ಪ್ರಧಾನಿಯವರು ದೇಶದ ಜನತೆಗೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲು ಮತ್ತು ಪ್ರೇರೇಪಿಸಲು ಪ್ರಯತ್ನಿಸುತ್ತಿದ್ದಾರೆ. ಇದೇ ರೀತಿ ಇಂದು ಕರ್ನಾಟಕದ ಯುವತಿಯ ಬಗ್ಗೆ ಮೋದಿ ಪ್ರಸ್ತಾಪಿಸಿರೋದು ವಿಶೇಷ.

ಚಾಮರಾಜನಗರದ ವರ್ಷಾ ಹೆಸರನ್ನು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ. ಮನ್‌ ಕೀ ಬಾತ್‌ ಸಂಚಿಕೆಯೊಂದರಿಂದ ಪ್ರೇರೇಪಣೆಗೊಂಡಿದ್ದ ವರ್ಷಾ ಕರಕುಶಲ ಉದ್ಯಮ ಆರಂಭಿಸಿದ್ದಾರೆ. ಅಲಂಕಾರಿಕ ವಸ್ತುಗಳು ಮತ್ತು ವ್ಯಾನಿಟಿ ಬ್ಯಾಗ್‌ನಂತಹ ವಸ್ತುಗಳ ಉತ್ಪಾದನೆ ಮಾಡುತ್ತಾರೆ. ಇವರು ಸ್ವಾವಲಂಬಿಯಾಗುವುದರ ಜೊತೆಗೆ ಹಲವರಿಗೆ ಉದ್ಯೋಗವನ್ನೂ ನೀಡಿದ್ದಾರೆ. ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮೋದಿ, ವೋಕಲ್ ಫಾರ್ ಲೋಕಲ್‌ನಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದಿದ್ದಾರೆ. ಮನ್ ಕೀ ಬಾತ್ ನಿಂದಲೇ  ಪ್ರೇರಣೆಗೊಂಡ ಚಾಮರಾಜನಗರದ ಮಹಿಳೆಯೊಬ್ಬರು ಕಸದಿಂದ ರಸ ಮಾಡಿದ್ದ ಬಗ್ಗೆ ಆಗಸ್ಟ್‌ ತಿಂಗಳಲ್ಲೇ ಸುವರ್ಣ ನ್ಯೂಸ್‌ ವರದಿ ಮಾಡಿತ್ತು.

ಇದನ್ನು ಓದಿ: ಮೋದಿ ಮನ್ ಕೀ ಬಾತ್ ಐಡಿಯಾ: ಬಾಳೆ ದಿಂಡಿನಿಂದ ರಸವಾಯ್ತು ಬದುಕು!

ಇನ್ನು, 26/11 ಮುಂಬೈ ಉಗ್ರರ ದಾಳಿ ನಡೆದು 15 ವರ್ಷಗಳಾಗಿದೆ. ಈ ಹಿನ್ನೆಲೆ 15 ನೇ ವಾರ್ಷಿಕೋತ್ಸವದಂದು ಪ್ರಧಾನಿ ಮೋದಿ ನಮನ ಸಲ್ಲಿಸಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ‘ಸ್ವಚ್ಛ ಭಾರತ್ ಅಭಿಯಾನ’ ಮತ್ತು ‘ಸ್ಥಳೀಯರಿಗೆ ಧ್ವನಿ’ ಅಭಿಯಾನಗಳನ್ನು ಶ್ಲಾಘಿಸಿದರು. 

ಸ್ಥಳೀಯ ಉತ್ಪನ್ನಗಳನ್ನು ಬಳಸುವ ಈ ಆಶಯವು ಹಬ್ಬಗಳಿಗೆ ಸೀಮಿತವಾಗಿರಬಾರದು. ಮದುವೆಯ ಸೀಸನ್ ಬರಲಿರುವುದರಿಂದ ಮದುವೆಯ ಶಾಪಿಂಗ್‌ನಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಪ್ರಾಮುಖ್ಯತೆ ನೀಡುವಂತೆ ನಾನು ನಿಮ್ಮನ್ನು ಮನವಿ ಮಾಡುತ್ತೇನೆ ಎಂದು ಮೋದಿ ಹೇಳಿದ್ದಾರೆ. ಅಲ್ಲದೆ, ವಿದೇಶದಲ್ಲಿ ಮದುವೆಯಾಗದೆ ಭಾರತದಲ್ಲಿ ಮದುವೆಯಾಗುವಂತೆ ಮೋದಿ ಜನರನ್ನು ಪ್ರೇರೇಪಿಸಿದ್ದಾರೆ.

Mann Ki Baat: ‘ವೋಕಲ್ ಫಾರ್‌ ಲೋಕಲ್‌’ಗೆ ಮೋದಿ ಒತ್ತು; ಯುಪಿಐ ಬಳಸಿ ಎಂದೂ ಪ್ರಧಾನಿ ಕರೆ


ಮುಂದಿನ ತಿಂಗಳ ಎಲ್ಲಾ ಪಾವತಿಗಳಿಗೆ ಯುಪಿಐ ಬಳಸಲು ಮನವಿ ಮಾಡಿದ ಮೋದಿ  
ಎಲ್ಲಾ ಪಾವತಿಗಳಿಗೆ ಯುಪಿಐ ಬಳಸುವುದನ್ನು ಮುಂದುವರಿಸುವಂತೆ ಪ್ರಧಾನಿ ಮೋದಿ ಜನರನ್ನು ಕೇಳಿಕೊಂಡಿದ್ದಾರೆ. ಕಳೆದ ತಿಂಗಳುಗಳಲ್ಲಿ UPI ಪಾವತಿ ಹೆಚ್ಚಿವೆ ಮತ್ತು ಮುಂಬರುವ ತಿಂಗಳಿಗೆ UPI ಪಾವತಿಗಳನ್ನು ಮಾತ್ರ ಮಾಡಲು ಮತ್ತು ನಿಮ್ಮ ಅನುಭವದ ಬಗ್ಗೆ ನನಗೆ ಬರೆಯಲು ನಾನು ನಿಮ್ಮನ್ನು ಮನವಿ ಮಾಡುತ್ತೇನೆ ಎಂದು ನಮೋ ಹೇಳಿದ್ದಾರೆ.

ಹಾಗೂ, ಮೇಳಗಳಲ್ಲಿ ಛಾಯಾಗ್ರಹಣ ಪ್ರಶಸ್ತಿಗಳನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಬಳಿಕ, ಸ್ವಚ್ಛತೆಯ ಬಗ್ಗೆ ಮಾತನಾಡಿದ ಮೋದಿ, ಸ್ವಚ್ಛತೆ ಒಂದು ದಿನದ ಅಭಿಯಾನವಲ್ಲ, ಬದಲಾಗಿ ಜೀವನದ ಭಾಗ ಎಂದು ಮನ್‌ ಕೀ ಬಾತ್‌ನಲ್ಲಿ ಹೇಳಿದ್ದಾರೆ.

Mann ki baat: ಚಂದ್ರಯಾನ ಮಿಷನ್ ನವ ಭಾರತದ ಸ್ಪೂರ್ತಿ, ನಾರಿ ಶಕ್ತಿಯ ಜೀವಂತ ಉದಾಹರಣೆ: ಪ್ರಧಾನಿ ಮೋದಿ

ಮನ್ ಕಿ ಬಾತ್ ರೇಡಿಯೊದಲ್ಲಿ ಜನರ ಆಸಕ್ತಿಯನ್ನು ಪುನರುಜ್ಜೀವನಗೊಳಿಸುತ್ತಿದೆ ಎಂದೂ ಪ್ರಧಾನಿ ಮೋದಿ ಹೇಳಿದ್ದು, ಗುರುನಾನಕ್ ಜಯಂತಿ ಮತ್ತು ಕಾರ್ತಿಕ ಹುಣ್ಣಿಮೆಗೆ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ
 
ನಂತರ, ಈ ವರ್ಷ ಭಾರತಕ್ಕೆ ಅಪಾರ ಸಾಧನೆಗಳ ವರ್ಷವಾಗಿದೆ ಎಂದು ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಹೊಯ್ಸಳ ದೇಗುಲಗಳಿಗೆ ವಿಶ್ವ ಮಾನ್ಯತೆ: ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ