ಮೋದಿ ಪ್ರಧಾನಿಯಾಗಿ ಇಂದಿಗೆ 8 ವರ್ಷ

Published : May 26, 2022, 04:22 AM ISTUpdated : May 26, 2022, 11:03 AM IST
ಮೋದಿ ಪ್ರಧಾನಿಯಾಗಿ ಇಂದಿಗೆ 8 ವರ್ಷ

ಸಾರಾಂಶ

*   2014ರ ಮೇ 26ರಂದು ಪ್ರಧಾನಿಯಾಗಿದ್ದ ಮೋದಿ *  ನಂತರ 2019ರಲ್ಲೂ ಗೆದ್ದಿದ್ದರು ನರೇಂದ್ರ ಮೋದಿ  *  ಇಂದು ಚೆನ್ನೈ, ಹೈದರಾಬಾದ್‌ಗೆ ಪ್ರಧಾನಿ   

ನವದೆಹಲಿ(ಮೇ.26): ನರೇಂದ್ರ ಮೋದಿ ಅವರು, ದೇಶದ ಪ್ರಧಾನಿಯಾಗಿ ಇಂದು (ಮೇ.26ರಂದು) 8 ವರ್ಷ ಪೂರ್ಣಗೊಳ್ಳಲಿದೆ. ಈ ದಿನದಂದು ಅವರು ಚೆನ್ನೈ ಹಾಗೂ ಹೈದರಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

"

ಮೋದಿ ಅವರು ಮೊದಲ ಬಾರಿ 2014ರ ಮೇ 26ರಂದು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅದಾದ ನಂತರ 2019ರಲ್ಲಿ ಪುನಃ ಅಧಿಕಾರಕ್ಕೆ ಬಂದಿದ್ದರು. 2ನೇ ಅವಧಿಯಲ್ಲಿ ಅವರು ಮೇ 30ರಂದು ಪ್ರಮಾಣವಚನ ಸ್ವೀಕಾರ ಮಾಡಿದ್ದರು.

ಮೋದಿ ಅಧಿಕಾರಕ್ಕೆ ಬಂದು 8 ವರ್ಷ ತುಂಬಿದ ಸಂಭ್ರಮಾಚರಣೆ ಮೇ 26ರ ಬದಲು, ಅವರು 2ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ದಿನಾಂಕವಾದ ಮೇ 30ರಿಂದ ಏರ್ಪಾಟಾಗಿದೆ. ಬಿಜೆಪಿ ಮೇ 30ರಿಂದ 15 ದಿನ ಕಾಲ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

Fact Check: ಕ್ವಾಡ್ ಶೃಂಗದಲ್ಲಿ ಪ್ರಧಾನಿ ಮೋದಿ ಕಡೆಗಣಿಸಿದ ಜೋ ಬೈಡೆನ್‌? ವೈರಲ್‌ ವಿಡಿಯೋ ಸತ್ಯಾಸತ್ಯತೆ ಏನು?

ಚೆನ್ನೈ, ಹೈದರಾಬಾದ್‌ಗೆ ಇಂದು ಮೋದಿ:

ಗುರುವಾರ ಬೆಂಗಳೂರು ಮತ್ತು ಚೆನ್ನೈ ನಡುವಿನ 262 ಕಿ.ಮೀ. ದೂರದ ಎಕ್ಸ್‌ಪ್ರೆಸ್‌ ವೇ ಸೇರಿದಂತೆ 31,400 ಕೋಟಿ ಮೌಲ್ಯದ 11 ಯೋಜನೆಗಳಿಗೆ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ನಡುವೆ, ಹೈದರಾಬಾದ್‌ನ ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌ನ 20ನೇ ವರ್ಷದ ಕಾರ್ಯಕ್ರಮದಲ್ಲಿ ಕೂಡ ಅವರು ಅಂದು ಭಾಗಿಯಾಗಲಿದ್ದಾರೆ.

ಈ 8 ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವ ದ ಸರ್ಕಾರವು ಆರ್ಥಿಕ, ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯ ವಿಭಾಗದಲ್ಲಿ ದೇಶದ ಜನರಿಗೆ ನೇರವಾಗಿ ಅನುಕೂಲವಾಗುವಂತಹ ಹಲವು ಯಶಸ್ವಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಅಧಿಕಾರದ ಅವಧಿಯನ್ನು ದೇಶದ ಸಮತೋಲಿತ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಭದ್ರತೆಗೆ ಮೀಸಲಿಡಲಾಗಿದೆ ಎಂದು ಮೋದಿ ಇತ್ತೀಚೆಗೆ ಹೇಳಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು