
ವಿಜಯವಾಡ (ಸೆ.7): ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುರುವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವಾಗ ರೈಲಿಗೆ ಸಿಲುಕುವುದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ. ಮಧುರಾನಗರದ ರೈಲ್ವೆ ಸೇತುವೆ ಮೇಲೆ ಈ ಘಟನೆ ನಡೆದಿದೆ. ಪ್ರವಾಹ ಪರಿಸ್ಥಿತಿ ಬಗ್ಗೆ ಸಿಎಂ ರೈಲ್ವೆ ಸೇತುವೆ ಮೇಲೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದರು. ಕೇವಲ ರೈಲ್ವೇ ಸಂಚಾರಕ್ಕೆಂದೇ ವಿನ್ಯಾಸಗೊಳಿಸಲಾದ ಸೇತುವೆಯಲ್ಲಿ ಪಾದಚಾರಿಗಳಿಗೆ ಕಿರಿದಾದ ಸ್ಥಳ ಬಿಟ್ಟು ದೊಡ್ಡ ಸ್ಥಳಾವಕಾಶವಿಲ್ಲ. ಆಗ ನಾಯ್ಡು ಹಳಿ ಮಧ್ಯದಲ್ಲೇ ನಡೆದು ಹೋಗುತ್ತಿದ್ದಾಗ, ಅದೇ ಹಳಿಯಲ್ಲಿ ಇದ್ದಕ್ಕಿದ್ದಂತೆ ರೈಲು ಬಂದಿದೆ. ತ್ವರಿತವಾಗಿ ಯೋಚಿಸಿದ ಭದ್ರತಾ ಸಿಬ್ಬಂದಿ ತಕ್ಷಣವೇ ನಾಯ್ಡು ಅವರನ್ನು ಟ್ರ್ಯಾಕ್ನ ಬದಿಗೆ ಎಳೆದು ಕಿರಿದಾದ ಪಾದಚಾರಿ ಮಾರ್ಗಕ್ಕೆ ತಂದಿದ್ದಾರೆ. ಕೆಲವೇ ಇಂಚಿನಲ್ಲಿ ನಾಯ್ಡು ಪಾರಾಗಿದ್ದಾರೆ.
Viral Video: ಕುತ್ತಿಗೆವರರೆಗೆ ಬಂದ ಪ್ರವಾಹದ ನೀರಿನಲ್ಲಿ ನವಜಾತ ಶಿಶುವನ್ನು ಕ್ರೇಟ್ನಲ್ಲಿ ಸಾಗಿಸಿದ ವ್ಯಕ್ತಿ!
ನಾಯ್ಡು ಕಳೆದ 5 ದಿನಗಳಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ, ಆಗಾಗ್ಗೆ ಭದ್ರತಾ ಪ್ರೋಟೋಕಾಲ್ಗಳನ್ನು ನಿರ್ಲಕ್ಷಿಸಿದ್ದಾರೆ. ಅವರು ಮೊಣಕಾಲು ಆಳದ ನೀರಿನಲ್ಲಿ ನಡೆದುಕೊಂಡು ಎನ್ಡಿಅರ್ಎಫ್ ಬೋಟ್ಗಳಿಗೆ ಜಿಗಿದ ಪ್ರಸಂಗಗಳೂ ನಡೆದಿವೆ.
ಮೋದಿ 3.0 ಸಂಚಕಾರದ ಸಂಚು!; ಪಾಕಿಸ್ತಾನದಲ್ಲಿ ಆಡಿದ ಆಟ ಭಾರತದಲ್ಲೂ ಆಡುತ್ತಾ ಅಮೆರಿಕಾ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ