ಭೂಕಂಪನಕ್ಕೆ ತರ ತರ ನಡುಗಿದ ಉತ್ತರ: ನೇಪಾಳದಲ್ಲೂ ಕಂಪಿಸಿದ ಧರಣಿ

Published : Nov 09, 2022, 10:09 AM ISTUpdated : Nov 09, 2022, 11:48 AM IST
ಭೂಕಂಪನಕ್ಕೆ ತರ ತರ ನಡುಗಿದ ಉತ್ತರ: ನೇಪಾಳದಲ್ಲೂ ಕಂಪಿಸಿದ ಧರಣಿ

ಸಾರಾಂಶ

 ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ರಾಷ್ಟ್ರ ರಾಜಧಾನಿ ದೆಹಲಿ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ.  ದೆಹಲಿ, ನೋಯ್ಡಾ ಸೇರಿದಂತೆ ಎನ್‌ಸಿಆರ್ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ದೆಹಲಿ/ನೇಪಾಳ: ನಿನ್ನೆ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ರಾಷ್ಟ್ರ ರಾಜಧಾನಿ ದೆಹಲಿ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ.  ದೆಹಲಿ, ನೋಯ್ಡಾ ಸೇರಿದಂತೆ ಎನ್‌ಸಿಆರ್ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಕಂಪನದ ಕೇಂದ್ರ ಬಿಂದು ಭೂಮಿಯಿಂದ 10 ಕಿಲೋ ಮೀಟರ್ ಕೆಳಭಾಗದಲ್ಲಿ ಕಂಡು ಬಂದಿದೆ ಎಂದು ಭೂಕಂಪನಶಾಸ್ತ್ರ ಸಂಸ್ಥೆ ಹೇಳಿದೆ. 

ಹಾಗೆಯೇ ಉತ್ತರಾಖಂಡ್‌ನಲ್ಲಿಯೂ ಇಂದು ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6.27ರ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ  4.3 ತೀವ್ರತೆ ದಾಖಲಾಗಿದೆ. ಈ ಕಂಪನದ ಕೇಂದ್ರ ಬಿಂದು ಭೂಮಿಯ ಒಳಗೆ ನಾಲ್ಕು ಕಿಲೋ ಮೀಟರ್ ಕೆಳಭಾಗದಲ್ಲಿ ಎಂದು ಕಂಡು ಬಂದಿದೆ.

ಇತ್ತ ನೇಪಾಳದಲ್ಲಿ(Nepal) ಸಂಭವಿಸಿದ ಭೂಕಂಪನದ (earthquake) ಪರಿಣಾಮ ಮನೆಯೊಂದು ಕುಸಿದು ಆರು ಜನ ಸಾವಿಗೀಡಾಗಿದ್ದಾರೆ. ನೇಪಾಳದ ದೋತಿ (Doti) ಜಿಲ್ಲೆಯಲ್ಲಿ ಈ ಅವಘಡ ಸಂಭವಿಸಿದೆ. 
 

 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ