LIVE NOW
Published : Apr 11, 2026, 07:31 AM ISTUpdated : Apr 11, 2026, 11:17 AM IST

National News Live: ಮದುವೆ ಪ್ರಪೋಸಲ್‌ ನಿರಾಕರಿಸಿದ್ದಕ್ಕೆ HIV ರಕ್ತ ಚುಚ್ಚಿದ ಬಾಯ್‌ಫ್ರೆಂಡ್‌, ಆ*ತ್ಮಹ*ತ್ಯೆ ಮಾಡಿಕೊಂಡ ಯುವತಿ

ಸಾರಾಂಶ

ನವದೆಹಲಿ (ಏ.11): 40 ದಿನಗಳ ಮಧ್ಯಪ್ರಾಚ್ಯ ಯುದ್ಧಕ್ಕೆ ಪೂರ್ಣವಿರಾಮ ಹಾಕುವ ಹುಟ್ಟಿನಲ್ಲಿ ಶನಿವಾರ ಪಾಕಿಸ್ತಾನದಲ್ಲಿ ನಿಗದಿಯಾಗಿರುವ ಸಂಧಾನ ಸಭೆಗೂ ಮುನ್ನ ಇರಾನ್‌ಗೆ ಮತ್ತೆ 24 ಗಂಟೆಗಳ ಡೆಡ್‌ಲೈನ್ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 'ಇರಾನಿಯನ್ನರ ಮುಂದೆ ಬೇರೆ ಯಾವುದೇ ಅವಕಾಶವೇ ಉಳಿದಿಲ್ಲ. ಇರಾನಿಯನ್ನರು ಬದುಕಿರೋದೇ ನಮ್ಮ ಜೊತೆ ಸಂಧಾನ ಮಾತುಕತೆ ನಡೆಸಲು. ಪಾಕಿಸ್ತಾನದ ಮಾತುಕತೆಯಲ್ಲಿ ಯಾವುದೇ ಡೀಲ್ ಹೊರಹೊಮ್ಮದೇ ಇದ್ದರೆ ನಾವು ಇರಾನ್ ಮೇಲೆ ಹಿಂದೆಂದಿಗಿಂತಲೂ ಭೀಕರ ದಾಳಿ ನಡೆಸುತ್ತೇವೆ' ಎಂದು ಗಂಭೀರ ಎಚ್ಚರಿಕೆಯನ್ನು ನೀಡಿದ್ದಾರೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

 

11:17 AM (IST) Apr 11

ಮದುವೆ ಪ್ರಪೋಸಲ್‌ ನಿರಾಕರಿಸಿದ್ದಕ್ಕೆ HIV ರಕ್ತ ಚುಚ್ಚಿದ ಬಾಯ್‌ಫ್ರೆಂಡ್‌, ಆ*ತ್ಮಹ*ತ್ಯೆ ಮಾಡಿಕೊಂಡ ಯುವತಿ

ಹೈದರಾಬಾದ್‌ನಲ್ಲಿ, ಎಚ್‌ಐವಿ ಪಾಸಿಟಿವ್ ಎಂದು ಮದುವೆ ನಿರಾಕರಿಸಿದ ಯುವತಿಯ ಮೇಲೆ ಯುವಕನೊಬ್ಬ ಸೇಡು ತೀರಿಸಿಕೊಂಡಿದ್ದಾನೆ. ಆತ ಎಚ್‌ಐವಿ ಪೀಡಿತ ರಕ್ತವನ್ನು ಆಕೆಗೆ ಇಂಜೆಕ್ಟ್ ಮಾಡಿದ್ದು, ಈ ಘಟನೆಯಿಂದ ಉಂಟಾದ ಮಾನಸಿಕ ಒತ್ತಡ ಮತ್ತು ಸಾಮಾಜಿಕ ಭಯದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Read Full Story

10:52 AM (IST) Apr 11

ಮೋದಿ-ರಾಹುಲ್ ಅಪರೂಪದ ಆತ್ಮೀಯ ಮಾತುಕತೆಯಲ್ಲಿ ಪ್ರಜಾಪ್ರಭುತ್ವದ ಸೌಂದರ್ಯ ಕಂಡ ನೆಟ್ಟಿಗರು

ಮಹಾತ್ಮ ಜ್ಯೋತಿಬಾ ಫುಲೆ ಅವರ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಆತ್ಮೀಯವಾಗಿ ಮಾತನಾಡಿಕೊಂಡರು. ರಾಜಕೀಯ ವೈರಿಗಳ ಈ ಅಪರೂಪದ ಕ್ಷಣವನ್ನು ನೆಟ್ಟಿಗರು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಶ್ಲಾಘಿಸಿದರು. ಇ

Read Full Story

10:51 AM (IST) Apr 11

ಲಖನೌ ಗೆಲ್ಲಿಸಿದ ಮುಕುಲ್ ಚೌಧರಿ; ಮಗನಿಗಾಗಿ ಮನೆ ಮಾರಾಟ, ಹೆಚ್ಚಾದ ಸಾಲ, ತಂದೆ ಜೈಲಿಗೆ!

ಕೆಕೆಆರ್‌ ವಿರುದ್ಧ ಸಿಕ್ಸರ್‌ಗಳ ಸುರಿಮಳೆಗೈದು ಲಖನೌಗೆ ಗೆಲುವು ತಂದುಕೊಟ್ಟ 21 ವರ್ಷದ ಮುಕುಲ್‌ ಚೌಧರಿ ರಾತ್ರೋರಾತ್ರಿ ಸ್ಟಾರ್ ಆಗಿದ್ದಾರೆ. ಎಂ.ಎಸ್. ಧೋನಿಯಿಂದ ಸ್ಫೂರ್ತಿ ಪಡೆದ ಇವರ ಯಶಸ್ಸಿನ ಹಿಂದೆ, ಮಗನ ಕ್ರಿಕೆಟ್‌ ಭವಿಷ್ಯಕ್ಕಾಗಿ ಮನೆ ಮಾರಿ, ಸಾಲ ಮಾಡಿ ಜೈಲಿಗೂ ಹೋಗಿ ಬಂದ ತಂದೆಯ ಅಪಾರ ತ್ಯಾಗದ ಕಥೆಯಿದೆ.
Read Full Story

10:24 AM (IST) Apr 11

'ಬ್ಯಾಟಿಂಗ್‌ ಮಾಡುವಾಗ ಬೌಲರ್‌ ಯಾರು ಅನ್ನೋದನ್ನ ನೋಡೋದಿಲ್ಲ' - ಆರ್‌ಸಿಬಿ ವಿರುದ್ಧದ ಇನ್ನಿಂಗ್ಸ್ ಬಳಿಕ ವೈಭವ್‌ ಗುಡುಗು

ಯುವ ಕ್ರಿಕೆಟಿಗ ವೈಭವ್, ಬುಮ್ರಾರಂತಹ ಬೌಲರ್‌ಗಳನ್ನು ನಿರ್ಭೀತಿಯಿಂದ ಎದುರಿಸಿ ಕೇವಲ 15 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ್ದಾರೆ. ಪಂದ್ಯದ ನಂತರವೂ ಸಂಭ್ರಮಕ್ಕಿಂತ ಶಿಸ್ತಿಗೆ ಆದ್ಯತೆ ನೀಡಿದ ಅವರ ವೃತ್ತಿಪರತೆ ಮತ್ತು ತಂದೆ-ಕೋಚ್‌ರ ಮಾರ್ಗದರ್ಶನವನ್ನು ನೆನಪಿಸಿಕೊಂಡಿದ್ದಾರೆ.

Read Full Story

10:04 AM (IST) Apr 11

ಶಹಬ್ಬಾಶ್ ವೈಭವ್! ಯುವ ಆಟಗಾರನ ಆರ್ಭಟಕ್ಕೆ ಮನಸೋತು ವಿಶೇಷ ಉಡುಗೊರೆ ನೀಡಿದ ವಿರಾಟ್ ಕೊಹ್ಲಿ

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ನ ಯುವ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅವರ ಆಟಕ್ಕೆ ಮನಸೋತ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿ ಪ್ರಶಂಸಿಸಿದ್ದಾರೆ.

Read Full Story

09:51 AM (IST) Apr 11

ಪ್ರಧಾನಿ ನರೇಂದ್ರ ಮೋದಿ ಹ*ತ್ಯೆಗೆ ಸಂಚು - ಮೂವರ ಬಂಧನ

ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಬಿಹಾರದ ಬಕ್ಸರ್‌ನಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ. ಪ್ರಧಾನಿ ಭದ್ರತೆಯನ್ನು ಭೇದಿಸಿ ಹತ್ಯೆ ಮಾಡುವುದಾಗಿ ಅಮೆರಿಕದ ಸಿಐಎಗೆ ಇ-ಮೇಲ್ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Read Full Story

09:49 AM (IST) Apr 11

ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈಗೆ ಡಬಲ್ ಗುಡ್ ನ್ಯೂಸ್! ತಂಡಕ್ಕೆ ಸ್ಟಾರ್ ಆಟಗಾರನ ಎಂಟ್ರಿ, ಧೋನಿ ಕಮ್‌ಬ್ಯಾಕ್ ಡೇಟ್ ಫಿಕ್ಸ್!

ಸತತ ಮೂರು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ ಸ್ಫೋಟಕ ಆಟಗಾರ ಡೆವಾಲ್ಡ್ ಬ್ರೆವಿಸ್ ಗಾಯದಿಂದ ಚೇತರಿಸಿಕೊಂಡು ಮರಳುತ್ತಿದ್ದಾರೆ. ಇದರ ಜೊತೆಗೆ, ಎಂ.ಎಸ್. ಧೋನಿ ಅವರ ಫಿಟ್ನೆಸ್ ಮತ್ತು ತಂಡಕ್ಕೆ ಅವರ ವಾಪಸಾತಿ ಬಗ್ಗೆಯೂ ಮಹತ್ವದ ಮಾಹಿತಿ ಲಭ್ಯವಾಗಿದೆ.
Read Full Story

09:37 AM (IST) Apr 11

ಇರಾನ್‌ನಲ್ಲಿ ಸಿಕ್ಕಿಬಿದ್ದಿದ್ದ ಅಮೆರಿಕ ಯೋಧನ ರಕ್ಷಿಸಿದ್ದು ಹಾರ್ಟ್‌ಬಿಟ್‌

ಇರಾನ್‌ನಲ್ಲಿ ಹೊಡೆದುರುಳಿಸಲಾದ ಯುದ್ಧವಿಮಾನದ ಪೈಲಟ್‌ನನ್ನು 'ಗೋಸ್ಟ್‌ ಮರ್ಮರ್‌' ಎಂಬ ತಂತ್ರಜ್ಞಾನ ಬಳಸಿ ಅಮೆರಿಕ ಸೇನೆ ರಕ್ಷಿಸಿದೆ. ಈ ಉಪಕರಣವು ಎಐ ಮತ್ತು ಕ್ವಾಂಟಂ ಮ್ಯಾಗ್ನೆಟೊಮೆಟ್ರಿ ತಂತ್ರಜ್ಞಾನ ಬಳಸಿ, ದೂರದಿಂದಲೇ ಮಾನವನ ಹೃದಯ ಬಡಿತದ ಸಂಕೇತಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಹೊಂದಿದೆ.

Read Full Story

09:08 AM (IST) Apr 11

ಆರ್‌ಸಿಬಿ ಸೋಲಿಗೆ ವೈಭವ್ ಸೂರ್ಯವಂಶಿ ಕಾರಣಾನಾ? ಅಲ್ಲವೇ ಅಲ್ಲ, ಇವರೇ ನೋಡಿ ರಾಜಸ್ಥಾನವನ್ನು ಗೆಲ್ಲಿಸಿದ್ದು!

ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಸೋಲು ಕಂಡಿದೆ. 15 ವರ್ಷದ ವೈಭವ್ ಸೂರ್ಯವಂಶಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರೂ, ಜೋಫ್ರಾ ಆರ್ಚರ್ ಮತ್ತು ರವಿ ಬಿಷ್ಣೋಯಿ ಅವರ ಬೌಲಿಂಗ್ ಪ್ರದರ್ಶನವೇ ರಾಜಸ್ಥಾನದ ಗೆಲುವಿಗೆ ಪ್ರಮುಖ ಕಾರಣವಾಯಿತು ಎಂದು ಲೇಖನ ವಿವರಿಸುತ್ತದೆ.
Read Full Story

08:22 AM (IST) Apr 11

IPL 2026 - ನಿನ್ನೆ ತಡರಾತ್ರಿ ನಡೆದ ಆರ್‌ಸಿಬಿ vs ರಾಜಸ್ಥಾನ ರಾಯಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

15 ವರ್ಷದ ಯುವ ಆಟಗಾರ ವೈಭವ್‌ ಸೂರ್ಯವಂಶಿಯ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್‌, ಆರ್‌ಸಿಬಿ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಆರ್‌ಸಿಬಿ ನೀಡಿದ್ದ 202 ರನ್‌ಗಳ ಗುರಿಯನ್ನು ವೈಭವ್ (78) ಮತ್ತು ಧ್ರುವ್ ಜುರೆಲ್ (81*) ಅವರ ಸ್ಫೋಟಕ ಆಟದಿಂದಾಗಿ ರಾಯಲ್ಸ್ 18 ಓವರ್‌ಗಳಲ್ಲೇ ತಲುಪಿ, ಸತತ 4ನೇ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಿತು.
Read Full Story

08:10 AM (IST) Apr 11

Justice Yashwant Varma resignation - ನ್ಯಾ। ವರ್ಮಾ ಕೊನೆಗೂ ರಾಜೀನಾಮೆ! ವಾಗ್ದಂಡನೆ ವಿಚಾರಣೆಯಿಂದ ಪಾರು, ಸಿಗಲಿದೆ ಪಿಂಚಣಿ

ಮನೆಯಲ್ಲಿ ಸುಟ್ಟ ನೋಟುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧ ವಾಗ್ದಂಡನೆ ಪ್ರಕ್ರಿಯೆ ಎದುರಿಸುತ್ತಿದ್ದ ಅಲಹಾಬಾದ್‌ ಹೈಕೋರ್ಟ್‌ನ ನ್ಯಾ। ಯಶವಂತ್‌ ವರ್ಮಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತನಿಖಾ ಸಮಿತಿಯ ಮುಂದೆ ಹಾಜರಾಗುವ ಮುನ್ನವೇ ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರ ನೀಡಿವಾಗ್ದಂಡನೆಯಿಂದ ಬಚಾವ್.

Read Full Story

07:48 AM (IST) Apr 11

ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ - ಭೂಮಿಗೆ ಮರಳಿದ ಆರ್ಟೆಮಿಸ್ 2 ಗಗನಯಾತ್ರಿಗಳು; ನಾಸಾದ ಚಂದ್ರಯಾನ ದಿಗ್ವಿಜಯ!

ನಾಸಾದ ಆರ್ಟೆಮಿಸ್ II ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನಾಲ್ವರು ಗಗನಯಾತ್ರಿಗಳು ಚಂದ್ರನ ಸುತ್ತ ಪ್ರದಕ್ಷಿಣೆ ಹಾಕಿ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಈ 10 ದಿನಗಳ ಐತಿಹಾಸಿಕ ಪಯಣದಲ್ಲಿ, ಗಗನಯಾತ್ರಿಗಳು ಅತಿ ಹೆಚ್ಚು ದೂರ ಪ್ರಯಾಣಿಸಿದ ದಾಖಲೆ ನಿರ್ಮಿಸಿದೆ.

Read Full Story

07:35 AM (IST) Apr 11

West bengal assembly election 2026 ಬಂಗಾಳ ಚುನಾವಣೆಗೆ ಕರ್ನಾಟಕ ರೀತಿ ಬಿಜೆಪಿಯಿಂದ ಗ್ಯಾರೆಂಟಿ ಭರವಸೆ!

ಪಶ್ಚಿಮ ಬಂಗಾಳ ಚುನಾವಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಿಂದ ಬಿಜೆಪಿ 'ಸಂಕಲ್ಪ ಪತ್ರ'ವನ್ನು ಬಿಡುಗಡೆ. ಅಧಿಕಾರಕ್ಕೆ ಬಂದರೆ ಆರು ತಿಂಗಳಲ್ಲಿಯುಸಿಸಿ ಜಾರಿ, ಮಹಿಳೆಯರಿಗೆ ಆರ್ಥಿಕ ನೆರವು, ಯುವಕರಿಗೆ ಮಾಸಿಕ ಭತ್ಯೆ, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಯಂತಹ ಪ್ರಮುಖ ಭರವಸೆಗಳನ್ನು ಒಳಗೊಂಡಿದೆ.

 

Read Full Story

07:34 AM (IST) Apr 11

ಭಾರತದ ಸೇನಾ ಓಡಾಟದ ಬಗ್ಗೆ ಪಾಕ್‌ಗೆ ಲೈವ್ ಪ್ರಸಾರ! 11 ದೇಶದ್ರೋಹಿಗಳ ಸೆರೆ

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ, ನಿಷೇಧಿತ ಬಬ್ಬರ್‌ ಖಾಲ್ಸಾ ಉಗ್ರರ ಮೂಲಕ ಭಾರತದ 4 ರಾಜ್ಯಗಳ ಸೇನಾ ನೆಲೆಗಳ ಬಳಿ ಸಿಸಿಟಿವಿ ಅಳವಡಿಸಿತ್ತು. ಈ ಮೂಲಕ ಭಾರತೀಯ ಸೇನೆಯ ಚಲನವಲನಗಳನ್ನು ನೇರವಾಗಿ ವೀಕ್ಷಿಸುತ್ತಿದ್ದ ಬೇಹುಗಾರಿಕಾ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದು, 11 ಮಂದಿ ಸೆರೆ.

 

Read Full Story

07:32 AM (IST) Apr 11

ಇರಾನ್ ಕದನ ನಿಲ್ಲಿಸಿದ್ದೇ ನಾನು ಎಂದಿದ್ದ ಪಾಕ್ ಮತ್ತೆ ಬೆತ್ತಲು;‍ ‍ ‍‍ಸಂದೇಶ ಬರೆದುಕೊಟ್ಟಿದ್ದೇ ಅಮೆರಿಕ, ಸ್ಫೋಟಕ ವರದಿ ಬಯಲು!

ಅಮೆರಿಕ-ಇರಾನ್ ನಡುವಿನ ಸಂಧಾನದ ಕೀರ್ತಿ ಪಡೆಯಲು ಯತ್ನಿಸಿದ ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಮುಖಭಂಗವಾಗಿದೆ. ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಅಮೆರಿಕದ ಶ್ವೇತಭವನವೇ ಬರೆದುಕೊಟ್ಟಿತ್ತು ಎಂದು 'ನ್ಯೂಯಾರ್ಕ್ ಟೈಮ್ಸ್' ವರದಿಯಲ್ಲಿ ಬಯಲು

 

Read Full Story

More Trending News