ನವದೆಹಲಿ (ಜ.16): ಮುಂಬೈ: 74 ಸಾವಿರ ಕೋಟಿ ರು. ಬಜೆಟ್ ಗಾತ್ರದಿಂದಾಗಿ ದೇಶದ ಶ್ರೀಮಂತ ನಗರ ಪಾಲಿಕೆ ಎಂಬ ಹಿರಿಮೆ ಹೊಂದಿರುವ ಬೃಹನ್ಮುಂಬೈ ಪಾಲಿಕೆಗೆ ಗುರುವಾರ ಚುನಾವಣೆ ನಡೆದಿದ್ದು, ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತು ಶಿವಸೇನೆ (ಶಿಂಧೆ) ಕೂಟಕ್ಕೆ ಸ್ಪಷ್ಟ ಬಹುಮತದ ಸುಳಿವು ನೀಡಿವೆ. ಜೊತೆಗೆ ಇದೇ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಹುದ್ದೆ ಲಭ್ಯವಾಗುವ ಸಾಧ್ಯತೆ ಕಂಡುಬಂದಿದೆ. ಮತ್ತೊಂದೆಡೆ 30 ವರ್ಷಗಳಲ್ಲೇ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಬಣದ ಶಿವಸೇನೆ ಅಧಿಕಾರದಿಂದ ವಂಚಿತವಾಗುವತ್ತ ಹೆಜ್ಜೆ ಹಾಕಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..

09:39 PM (IST) Jan 16
ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು? ಪ್ರತಿ ಬಣ್ಣಕ್ಕೆ ವಿಶೇಷ ಮಹತ್ವವಿದೆ. ಇದು ಕ್ಲಾಸ್ ಸೂಚಿಸುತ್ತದೆ. ಅಷ್ಟಕ್ಕೂ ರೈಲಿನ ಬಣ್ಣದ ಹಿಂದಿನ ರಹಸ್ಯ ಇಲ್ಲಿದೆ.
09:25 PM (IST) Jan 16
ಯುವಕನೋರ್ವ ತನ್ನ ಅಜ್ಜ-ಅಜ್ಜಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದಿದ್ದಾನೆ. ಅವರ ಮೊದಲ ವಿಮಾನ ಪ್ರಯಾಣದ ಭಾವುಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅಜ್ಜ-ಅಜ್ಜಿಯ ಕನಸನ್ನು ನನಸು ಮಾಡಿದ ಮೊಮ್ಮಗನ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
08:28 PM (IST) Jan 16
07:44 PM (IST) Jan 16
07:37 PM (IST) Jan 16
ಯೂಟ್ಯೂಬ್ನಲ್ಲಿ 140 ವರ್ಷಗಳ ಅವಧಿ ತೋರಿಸುವ ವೀಡಿಯೋವೊಂದು ವೈರಲ್ ಆಗಿ ಜನರಲ್ಲಿ ಗೊಂದಲ ಸೃಷ್ಟಿಸಿದೆ. ವಿಡಿಯೋದ ವಿವರಣೆ ಅರೇಬಿಕ್ ಭಾಷೆಯಲ್ಲಿದ್ದು ಭಾಷಾಂತರಿಸಿದಾಗ 'ನರಕದಲ್ಲಿ ನನ್ನನ್ನು ಭೇಟಿ ಮಾಡಿ' ಎಂಬ ಅರ್ಥವನ್ನು ನೀಡುತ್ತದೆ. ಈ ಬಗ್ಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.
07:20 PM (IST) Jan 16
ಮುಂಬೈ ಪಾಲಿಕೆ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಭರ್ಜರಿ ಗೆಲುವು ಕಂಡಿದ್ದಾರೆ. ಬಿಜೆಪಿ, ಶಿವಸೇನೇ ಸರಿದಂತೆ ಪ್ರಮುಖ ಪಕ್ಷಗಳಿಂದ ಪ್ರಬಲ ಸ್ಪರ್ಧೆ ಎದುರಿಸಿದ ಅಭ್ಯರ್ಥಿ ಅಭೂತಪೂರ್ವ ಗೆಲುವು ಕಂಡಿದ್ದಾರೆ.
06:54 PM (IST) Jan 16
2025ರ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ, ವೆನೆಜುವೆಲಾದ ಮಾರಿಯಾ ಕೊರಿನಾ ಮಚಾಡೊ ಅವರು ತಮ್ಮ ಪ್ರಶಸ್ತಿಯನ್ನು ಅಮೆರಿಕದ ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ಗೆ ಹಸ್ತಾಂತರಿಸಿದ್ದಾರೆ. ಈ ವಿಚಿತ್ರ ಘಟನೆ ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಆದರೆ ನಿಯಮ ಇರೋದೇನು?
06:10 PM (IST) Jan 16
ಹೊರಗಿನ ಪ್ರಪಂಚದ ಜೊತೆಗೆ ಯಾವುದೇ ಸಂಪರ್ಕವೇ ಇಲ್ಲದ ಅಮೇಜಾನ್ ಕಾಡಿನ ಬುಡಕಟ್ಟು ಸಮುದಾಯದ ಜನರನ್ನು ಬಹಳ ಹತ್ತಿರದಿಂದ ವೀಡಿಯೋ ಮಾಡಿರುವಂತ ದೃಶ್ಯಾವಳಿಯನ್ನು ಸಂರಕ್ಷಣಾವಾದಿ ಪಾಲ್ ರೊಸೋಲಿ ಅವರು ಬಿಡುಗಡೆ ಮಾಡಿದ್ದಾರೆ. ಈ ವಿಚಾರವೀಗ ಜಾಗತಿಕ ಮಟ್ಟದಲ್ಲಿ ಜನರ ಗಮನ ಸೆಳೆಯುತ್ತಿದೆ.
05:28 PM (IST) Jan 16
ಟೆಸ್ಟ್ ನಿವೃತ್ತಿ ನಂತರ ಏಕದಿನ ಕ್ರಿಕೆಟ್ ಆಡುತ್ತಿರುವ ವಿರಾಟ್ ಕೊಹ್ಲಿ ನಿರ್ಧಾರವನ್ನು ಸಂಜಯ್ ಮಂಜ್ರೇಕರ್ ಪ್ರಶ್ನಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಹರ್ಭಜನ್ ಸಿಂಗ್, ಯಾವುದೇ ಫಾರ್ಮ್ಯಾಟ್ನಲ್ಲಿ ರನ್ ಗಳಿಸುವುದು ಸುಲಭವಲ್ಲ ಎಂದು ಹೇಳಿದ್ದಾರೆ.
05:16 PM (IST) Jan 16
04:58 PM (IST) Jan 16
ಅಪಘಾತದಲ್ಲಿ ಬಾಲಕ ಸ್ಥಳದಲ್ಲೇ ಸಾವು, ನೆರವಿನ ಬದಲು ಲಾರಿಯಿಂದ ಚೆಲ್ಲಿದ ಮೀನಿಗಾಗಿ ಮುಗಿಬಿದ್ದ ಜನ ವಿಡಿಯೋ ಭಾರತೀಯರ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ನೆರವಿನ ಬದಲು ಜನರಿಗೆ ರಸ್ತೆಯಲ್ಲಿ ಬಿದ್ದಿದ್ದ ಫ್ರಿ ಮೀನು ಹೆಚ್ಚಾಯಿತು.
04:13 PM (IST) Jan 16
ಬೆಂಗಳೂರು: ಮುಂಬರುವ 2026ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳು ನಗರದ ಎಂ ಚಿನ್ನಸ್ವಾಮಿ ಸ್ಟೇಡಿಯಂನಿಂದ ಬೇರೆ ಕಡೆ ಶಿಫ್ಟ್ ಆಗಲಿದೆ ಎನ್ನುವ ಸುದ್ದಿ ಜೋರಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ, ಆರ್ಸಿಬಿ ಫ್ರಾಂಚೈಸಿಯು ಇದೀಗ ಅಧಿಕೃತ ಅಪ್ಡೇಟ್ಸ್ ನೀಡಿದೆ.
04:10 PM (IST) Jan 16
ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವೂ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ನಾಯಕ ತೇಜಿಂದರ್ ಬಗ್ಗಾ ಅವರು ವಿರೋಧಿ ಬಣವಾದ ಶಿವಸೇನೆಯ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ಹಾಗೂ ಆದಿತ್ಯ ಠಾಕ್ರೆ ಅವರಿಗೆ ಸಿಹಿತಿನಿಸಾದ ರಸಮಲೈ ಅನ್ನು ಕಳುಹಿಸಿಕೊಟ್ಟಿದ್ದಾರೆ.
03:59 PM (IST) Jan 16
ಇನ್ಫೋಸಿಸ್ ಷೇರು ಮೌಲ್ಯ ಹೆಚ್ಚಳ, ಶುಕ್ರವಾರ ಶೇಕಡಾ 5ರಷ್ಟು ಏರಿಕೆಯಾಗಿದೆ. ಸಂಸ್ಥಾಪಕರಾದ ನಾರಾಯಣಮೂರ್ತಿ, ಸುಧಾ ಮೂರ್ತಿ ಸೇರಿ ಹೂಡಿಕೆದಾರರು ಒಂದೇ ದಿನ ಗಳಿಸಿದ ಆದಾಯವೆಷ್ಟು? ಶುಕ್ರವಾರದ ಶುಭ ಘಳಿಗೆಯಲ್ಲಿ ಗಳಿಕೆ
02:43 PM (IST) Jan 16
ಕೇರಳದ ಕಣ್ಣೂರಿನಿಂದ ಬೆಂಗಳೂರಿಗೆ ಎಂಜಿನಿಯರಿಂಗ್ ಮಾಡುವುದಕ್ಕಾಗಿ ಬಂದಿದ್ದ ವಿದ್ಯಾರ್ಥಿಯೋರ್ವನಿಗೆ ಬೆಂಗಳೂರಿನ ಟ್ರಾಫಿಕ್ ಪೊಲೀಸರು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸುಮಾರು 1.11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಹಾಗಿದ್ರೆ ಆತ ಮಾಡಿದ್ದೇನು ಇಲ್ಲಿದೆ ಡಿಟೇಲ್ ಸ್ಟೋರಿ.
01:28 PM (IST) Jan 16
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಮಹಾರಾಷ್ಟ್ರದ ಅಲಿಬಾಗ್ನಲ್ಲಿ ಜಂಟಿಯಾಗಿ ಕೋಟ್ಯಾಂತರ ಮೌಲ್ಯದ ಆಸ್ತಿಯನ್ನು ಖರೀದಿಸಿದ್ದಾರೆ. ಸುಮಾರು 21,010 ಚದರ ಮೀಟರ್ ವಿಸ್ತೀರ್ಣದ ಆಸ್ತಿಗಾಗಿ ಅವರು 2.27 ಕೋಟಿ ರೂ. ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ.
01:06 PM (IST) Jan 16
12:31 PM (IST) Jan 16
12:18 PM (IST) Jan 16
ಟಿವಿ ನಟಿ ರಶ್ಮಿ ದೇಸಾಯಿ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಎರಡನೇ ಮದುವೆಯ ಬಗ್ಗೆ ಮಾತನಾಡಿದ್ದಾರೆ. ತಮ್ಮ ಪೋಷಕರು ತನಗಾಗಿ ಸಂಗಾತಿಯನ್ನು ಹುಡುಕುತ್ತಿದ್ದು, ಸರಿಯಾದ ಸಮಯದಲ್ಲಿ ಸರಿಯಾದ ವ್ಯಕ್ತಿ ಸಿಗುತ್ತಾರೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ.
12:11 PM (IST) Jan 16
11:45 AM (IST) Jan 16
ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಹೊರಗಿಟ್ಟಿರುವುದಕ್ಕೆ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಉತ್ತಮ ಪ್ರದರ್ಶನ ನೀಡಿದರೂ ಅವಕಾಶ ನಿರಾಕರಿಸುವುದು ಬೌಲರ್ನ ಆತ್ಮವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ.
11:14 AM (IST) Jan 16
ನರೇಗಾ ನಂತರ, ಕೇಂದ್ರ ಸರ್ಕಾರವು ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ (RTE) ಮತ್ತು ಆಹಾರ ಭದ್ರತಾ ಕಾಯ್ದೆಗಳನ್ನು (FSA) ತಿದ್ದುಪಡಿ ಮಾಡಲು ಸಿದ್ಧತೆ ನಡೆಸುತ್ತಿದೆ. ಯೋಜನೆಗಳ ಪ್ರಯೋಜನಗಳು ಫಲಾನುಭವಿಗಳನ್ನು ತಲುಪುವುದನ್ನು ಖಚಿತಪಡಿಸುವುದು ಮುಖ್ಯ ಉದ್ದೇಶವಾಗಿದೆ.
10:04 AM (IST) Jan 16
1962ರ ಭಾರತ- ಚೀನಾ ಯುದ್ಧದ ಸಂದರ್ಭದಲ್ಲಿ ದೇಶದ ರಕ್ಷಣೆಗಾಗಿ ಬರೋಬ್ಬರಿ 600 ಕೆ.ಜಿ.ಚಿನ್ನ ಹಾಗೂ ಮೂರು ಖಾಸಗಿ ವಿಮಾನವನ್ನು ದಾನವಾಗಿ ನೀಡಿದ್ದ ದರ್ಭಾಂಗ ರಾಜಮನೆತನದ ಕೊನೆಯ ರಾಣಿ ಕಾಮಸುಂದರಿ ದೇವಿ( 96) ನಿಧನರಾಗಿದ್ದಾರೆ.
09:34 AM (IST) Jan 16
ಬಿಸಿಬಿ ನಿರ್ದೇಶಕ ನಜ್ಮುಲ್ ಇಸ್ಲಾಂ ಅವರ ವಿವಾದಾತ್ಮಕ ಹೇಳಿಕೆಯಿಂದಾಗಿ ಬಾಂಗ್ಲಾ ಕ್ರಿಕೆಟಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣದಿಂದ ಬಾಂಗ್ಲಾ ಪ್ರೀಮಿಯರ್ ಲೀಗ್ ಪಂದ್ಯಗಳು ಮುಂದೂಡಿಕೆಯಾಗಿದ್ದು, ಆಟಗಾರರು ತಮ್ಮ ಬೇಡಿಕೆ ಈಡೇರದಿದ್ದರೆ ಲೀಗ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ,
09:01 AM (IST) Jan 16
ಐಸಿಸಿ ಅಂಡರ್-19 ಏಕದಿನ ವಿಶ್ವಕಪ್ನ ಆರಂಭಿಕ ಪಂದ್ಯದಲ್ಲಿ ಭಾರತವು ಯುಎಸ್ಎ ವಿರುದ್ಧ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಹೆನಿಲ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ (6 ವಿಕೆಟ್) ತತ್ತರಿಸಿದ ಯುಎಸ್ಎ 107 ರನ್ಗಳಿಗೆ ಆಲೌಟ್ ಆಯಿತು. ಅಭಿಗ್ಯಾನ್ ಅಜೇಯ 42 ರನ್ಗಳ ನೆರವಿನಿಂದ ಭಾರತ ಗೆದ್ದಿತು.
07:55 AM (IST) Jan 16
ಕೇವಲ ಗಾಳಿ ಮತ್ತು ನೌಕಾಯಾನದ ಪರದೆಗಳ (Sails) ಸಹಾಯದಿಂದ ಸಾಗಿದ ಈ ನೌಕೆಯು, ‘ವಿರುದ್ಧ ದಿಕ್ಕಿನ ಗಾಳಿ, ಗಾಳಿಯಿಲ್ಲದ ಶಾಂತ ಸ್ಥಿತಿ (Dead calms), ಭೋರ್ಗರೆಯುವ ಅಲೆಗಳು ಮತ್ತು ಆಧುನಿಕ ಹಡಗು ಸಂಚಾರ ಮಾರ್ಗಗಳ’ ಅಡಚಣೆ ಸೇರಿದಂತೆ ಹಲವು ಸವಾಲುಗಳನ್ನು ಈ ನೌಕೆಯು ಎದುರಿಸಬೇಕಾಯಿತು.
07:55 AM (IST) Jan 16
ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಹ್ಯಾಕಾಶ ಯಾನಿಯೊಬ್ಬರನ್ನು ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ತುರ್ತು ಕಾರ್ಯಾಚರಣೆಯೊಂದರಲ್ಲಿ ಯಶಸ್ವಿಯಾಗಿ ಭೂಮಿಗೆ ಮರಳಿ ಕರೆತಂದಿದೆ.
07:54 AM (IST) Jan 16
ಗುರುವಾರ ನಡೆದ ಮುಂಬೈ ಸೇರಿದಂತೆ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರ ಬೆರಳಿಗೆ ಹಾಕಲಾದ ಅಳಿಸಲು ಆಗದ ಇಂಕಿನ ಗುರುತು ಅಳಿಸಿ ಹೋಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.
07:54 AM (IST) Jan 16
ಪ್ರಯಾಣಿಕರ ರೈಲಿನ ಟಿಕೆಟ್ ದರ ನಿಗದಿ ಹೇಗೆ ಮಾಡಲಾಗುತ್ತದೆ ಎಂದು ಹೇಳಲಾಗದು. ಯಾಕೆಂದರೆ ಅದು ವ್ಯಾಪಾರದ ಸೀಕ್ರೆಟ್. ಈ ದರ ನಿಗದಿ ಪ್ರಕ್ರಿಯೆಗೆ ಮಾಹಿತಿ ಹಕ್ಕುಗಳ ಕಾಯ್ದೆಯಿಂದ ರಕ್ಷಣೆ ಇದೆ ಎಂದು ಭಾರತೀಯ ರೈಲ್ವೆಯು ಕೇಂದ್ರ ಮಾಹಿತಿ ಆಯೋಗ (ಸಿಐಸಿ)ಕ್ಕೆ ತಿಳಿಸಿದೆ.
07:54 AM (IST) Jan 16
ಇರಾನ್ನೊಂದಿಗೆ ಸಂಘರ್ಷ ದಿನೇ ದಿನೇ ಹೆಚ್ಚುತ್ತಿರುವ ನಡುವೆಯೇ, ತನ್ನ ನೌಕಾಪಡೆಯ ಮುಂಚೂಣಿ ದಾಳಿಯ ನೌಕೆಗಳನ್ನು ಅಮೆರಿಕ ಸರ್ಕಾರವು ಮಧ್ಯಪ್ರಾಚ್ಯದತ್ತ ರವಾನಿಸಿದೆ. ಇದರೊಂದಿಗೆ ಇರಾನ್ ಮೇಲೆ ಅಮೆರಿಕದ ದಾಳಿ ಮತ್ತಷ್ಟು ಸನ್ನಿಹಿತವಾಗಿರಬಹುದು ಎಂಬ ವಿಶ್ಲೇಷಣೆ ಕೇಳಿಬಂದಿದೆ.
07:53 AM (IST) Jan 16
ನಮಗೆ ಗ್ರೀನ್ಲ್ಯಾಂಡ್ ಬೇಕೇ ಬೇಕು ಎಂದು ಅಮೆರಿಕ ಪಟ್ಟು ಹಿಡಿದು ಕೂತಿರುವ ನಡುವೆಯೇ ಅಮೆರಿಕದ್ದೇ ನೇತೃತ್ವ ಹೊಂದಿರುವ ನ್ಯಾಟೋ ಮಿಲಿಟರಿ ಕೂಟದ ಭಾಗವಾಗಿರುವ ಫ್ರಾನ್ಸ್, ಜರ್ಮನಿ ಸೇರಿ ಇತರೆ ಯುರೋಪಿಯನ್ ದೇಶಗಳು ಗ್ರೀನ್ಲ್ಯಾಂಡ್ ರಕ್ಷಣೆಗಾಗಿ ತಮ್ಮ ಸೇನೆಯನ್ನು ಕಳುಹಿಸಿಕೊಟ್ಟಿವೆ
07:53 AM (IST) Jan 16
ಭಾರತದ ಮುಂಚೂಣಿ ಕಾರು ಮತ್ತು ಎಸ್ಯುವಿಗಳ ತಯಾರಿಕಾ ಸಂಸ್ಥೆಯಾದ ಟಾಟಾ ಮೋಟರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಲಿ., (ಟಿಎಂಪಿವಿ) ಹೆಚ್ಚು ವೇಗ, ಹೆಚ್ಚು ಸ್ಮಾರ್ಟ್ ಹೊಂದಿರುವ ಹೊಸ ಟಾಟಾ ‘ಪಂಚ್ ಕಮಾಂಡ್ ಮ್ಯಾಕ್ಸ್’ ಎಂಬ ಹೆಸರಿನ ಕಾರು ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
07:52 AM (IST) Jan 16
ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆ ಎಂಬ ಹಿರಿಮೆ ಹೊಂದಿರುವ ಬೃಹನ್ಮುಂಬೈ ಪಾಲಿಕೆಗೆ ಗುರುವಾರ ಶಾಂತಿಯುತ ಚುನಾವಣೆ ನಡೆದಿದ್ದು, ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತು ಶಿವಸೇನೆ (ಶಿಂಧೆ) ಕೂಟಕ್ಕೆ ಸ್ಪಷ್ಟ ಬಹುಮತದ ಸುಳಿವು ನೀಡಿವೆ.
07:52 AM (IST) Jan 16
ಕಾಶ್ಮೀರದ ಪಹಲ್ಗಾಂನಲ್ಲಿ 26 ಅಮಾಯಕ ಪ್ರವಾಸಿಗರನ್ನು ಹತ್ಯೆಗೈದಿದ್ದಕ್ಕೆ ಪ್ರತೀಕಾರವಾಗಿ ಭಾರತ ಕೈಗೊಂಡ ‘ಆಪರೇಷನ್ ಸಿಂದೂರ’ವು, ನಮ್ಮ ಕಾರ್ಯಾಚರಣೆಯ ಕೇಂದ್ರ ಸ್ಥಾನವಾದ ಮುರೀದ್ಕೆ ಮಸೀದಿಯನ್ನು ನಾಮಾವಶೇಷ ಮಾಡಿತ್ತು ಎಂದು ಸ್ವತಃ ಲಷ್ಕರ್ ಉಗ್ರ ಹಫೀಜ್ ಅಬ್ದುಲ್ ರೌಫ್ ಒಪ್ಪಿಕೊಂಡಿದ್ದಾನೆ.
07:52 AM (IST) Jan 16
ಎಲಾನ್ ಮಸ್ಕ್ ಒಡೆತನದ ಎಐ ಚಾಟ್ಬಾಟ್ ಗ್ರೋಕ್ನಲ್ಲಿ ಅಶ್ಲೀಲ ಚಿತ್ರಗಳನ್ನು ಎಡಿಟ್ ಮಾಡುತ್ತಿರುವ ಕುರಿತು ಜಾಗತಿಕ ಮಟ್ಟದಲ್ಲಿ ಕಳವಳ ವ್ಯಕ್ತವಾದ ಬೆನ್ನಲ್ಲೇ, ಯಾವುದೇ ನೈಜ ವ್ಯಕ್ತಿಯ ಚಿತ್ರವನ್ನು ಬೆತ್ತಲೆ/ಅಶ್ಲೀಲಗೊಳಿಸುವ ಆಯ್ಕೆಯನ್ನು ಗ್ರೋಕ್ನಿಂದ ತೆಗೆದುಹಾಕಲು ನಿರ್ಧರಿಸಿದೆ.
07:51 AM (IST) Jan 16
ಕ್ಷಣಕ್ಷಣಕ್ಕೂ ಅಮೆರಿಕ ದಾಳಿಯ ಭೀತಿ ಹೆಚ್ಚಾಗುತ್ತಿರುವ ನಡುವೆಯೇ ಇರಾನ್ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯರನ್ನು ವಿಮಾನದ ಮೂಲಕ ತವರಿಗೆ ಕರೆತರಲು ಭಾರತ ಸರ್ಕಾರ ಸಜ್ಜಾಗಿದೆ. ಎಲ್ಲವೂ ಅಂದುಕೊಂಡರೆ ನಡೆದರೆ ಮೊದಲ ತಂಡ ಶುಕ್ರವಾರ ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ.
07:51 AM (IST) Jan 16
ಇರಾನ್ ಮತ್ತು ಅಮೆರಿಕ ನಡುವೆ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಇರಾನ್ ಹತ್ಯೆಯ ಬೆದರಿಕೆ ಹಾಕಿದೆ. ಈ ಬಾರಿ ಗುಂಡು ಗುರಿ ತಪ್ಪಲ್ಲ ಎಂದು ಇರಾನ್ನ ಸರ್ಕಾರಿ ಸ್ವಾಮ್ಯದ ಟೀವಿ ವಾಹಿನಿ ಎಚ್ಚರಿಕೆ ನೀಡಿದೆ.
07:50 AM (IST) Jan 16
ರಷ್ಯಾ ತೈಲ ಖರೀದಿ ವಿಷಯ ಉಭಯ ದೇಶಗಳ ನಡುವೆ ಬಿಕ್ಕಟ್ಟು, ತೆರಿಗೆ ದಾಳಿಗೆ ಕಾರಣವಾದ ಹೊರತಾಗಿಯೂ ಅಮೆರಿಕ ಮತ್ತು ಭಾರತ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆ ಅಂತಿಮ ಹಂತಕ್ಕೆ ತಲುಪಿದೆ. ಎರಡೂ ಕಡೆಯವರು ಸಿದ್ಧವಾದಾಗ ಅದನ್ನು ಘೋಷಿಸಲಾಗುವುದು ಎಂದು ಭಾರತ ಸರ್ಕಾರ ಹೇಳಿದೆ.