LIVE NOW
Published : Mar 16, 2026, 08:08 AM ISTUpdated : Mar 16, 2026, 10:43 AM IST

India News Live: ಪಶ್ಚಿಮ ಬಂಗಾಳದ ಕದನ ಕಣ - ಸಿಎಂ ಮಮತಾ ಬ್ಯಾನರ್ಜಿ ಬತ್ತಳಿಕೆಯಲ್ಲಿರೋ ಅಸ್ತ್ರ ಯಾವುದು?

ಸಾರಾಂಶ

ನವದೆಹಲಿ (ಮಾ.16): ಭಾರೀ ಜಿದ್ದಾಜಿದ್ದಿಗೆ ಸಾಕ್ಷಿಯಾಗುವ ನಿರೀಕ್ಷೆ ಇರುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಭಾನುವಾರ ಘೋಷಿಸಿದೆ. ಏ.9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

 

10:43 AM (IST) Mar 16

ಪಶ್ಚಿಮ ಬಂಗಾಳದ ಕದನ ಕಣ - ಸಿಎಂ ಮಮತಾ ಬ್ಯಾನರ್ಜಿ ಬತ್ತಳಿಕೆಯಲ್ಲಿರೋ ಅಸ್ತ್ರ ಯಾವುದು?

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಈ ಲೇಖನವು ಟಿಎಂಸಿ, ಬಿಜೆಪಿ, ಕಾಂಗ್ರೆಸ್ ಮತ್ತು ಸಿಪಿಎಂ ಪಕ್ಷಗಳ ಶಕ್ತಿ, ದೌರ್ಬಲ್ಯ, ಅವಕಾಶಗಳು ಮತ್ತು ಸವಾಲುಗಳನ್ನು ಆಳವಾಗಿ ವಿಶ್ಲೇಷಿಸುತ್ತದೆ.
Read Full Story

10:29 AM (IST) Mar 16

ಮರಳುಗಾಡಿನ ಸುತ್ತ ಹಸಿರು ಕೋಟೆ - 3,046 ಕಿಮೀ ಉದ್ದದ ಮರಗಳ ಗೋಡೆ ನಿರ್ಮಿಸಿ ಇತಿಹಾಸ ಬರೆದ ಚೀನಾ!

ಚೀನಾವು ತಕ್ಲಮಕನ್ ಮರುಭೂಮಿ ವಿಸ್ತರಣೆಯನ್ನು ತಡೆಯಲು ಅದರ ಸುತ್ತ 3,046 ಕಿಲೋಮೀಟರ್ ಉದ್ದದ 'ಮರಗಳ ಗೋಡೆ' ನಿರ್ಮಾಣ ಪೂರ್ಣಗೊಳಿಸಿದೆ. ದಶಕಗಳ ಈ ಬೃಹತ್ ಯೋಜನೆಯು ಮರಳಿನ ಹರಡುವಿಕೆಯನ್ನು ನಿಯಂತ್ರಿಸುವುದಲ್ಲದೆ, ವಾತಾವರಣದ ಇಂಗಾಲವನ್ನು ಹೀರಿಕೊಳ್ಳುವ 'ಕಾರ್ಬನ್ ಸಿಂಕ್' ಆಗಿ ಕಾರ್ಯನಿರ್ವಹಿಸುತ್ತಿದೆ.

Read Full Story

10:19 AM (IST) Mar 16

ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಅಚ್ಚರಿ ಫಲಿತಾಂಶ - ಯಾರಿಗೆ ಸಿಗಲಿಗೆ ಅಧಿಕಾರದ ಗದ್ದುಗೆ?

ಚುನಾವಣಾ ಪೂರ್ವ ಸಮೀಕ್ಷೆ: ಬಂಗಾಳದಲ್ಲಿ ಮಮತಾ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆಯಿದ್ದರೆ, ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸೋಲನುಭವಿಸುವ ಮುನ್ಸೂಚನೆ ಇದೆ. ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಮರಳಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿದೆ.

Read Full Story

09:54 AM (IST) Mar 16

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ ಟಾಪ್ 10 ಭಾರತೀಯ ಆಟಗಾರರಿವರೇ ನೋಡಿ!

ಐಪಿಎಲ್ 2026ಕ್ಕೆ ಎಲ್ಲವೂ ಸಿದ್ಧವಾಗಿದೆ. ಬ್ಯಾಟರ್‌ಗಳು ರನ್ ಹೊಳೆ ಹರಿಸಲು, ಬೌಲರ್‌ಗಳು ತಮ್ಮ ಬೌಲಿಂಗ್ ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ. ಹಾಗಾದ್ರೆ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ ಟಾಪ್ 10 ಭಾರತೀಯ ಆಟಗಾರರು ಯಾರು ಗೊತ್ತಾ?
Read Full Story

09:29 AM (IST) Mar 16

ನಷ್ಟದ ಮಾತೇ ಇಲ್ಲ, ಸದಾ ಬೇಡಿಕೆಯಿರುವ, ಯಾವಾಗಲೂ ಲಾಭ ತರುವ 4 ಬಿಸಿನೆಸ್‌ಗಳು!

ಭಾರತದಲ್ಲಿ ಎಂದಿಗೂ ನಷ್ಟ ಅನುಭವಿಸದ, ಸದಾ ಕಾಲ ಲಾಭ ತಂದುಕೊಡುವ ನಾಲ್ಕು ಪ್ರಮುಖ ಬಿಸಿನೆಸ್‌ಗಳ ಬಗ್ಗೆ ಇಲ್ಲಿ ನೋಡೋಣ. ಇವು ಮನುಷ್ಯನ ಮೂಲಭೂತ ಅವಶ್ಯಕತೆಗಳಿಗೆ ಸಂಬಂಧಿಸಿದ್ದರಿಂದ, ಇವುಗಳಿಗೆ ಯಾವಾಗಲೂ ಬೇಡಿಕೆ ಇದ್ದೇ ಇರುತ್ತದೆ. ಆ ವಿವರಗಳನ್ನು ನೋಡೋಣ ಬನ್ನು

Read Full Story

09:14 AM (IST) Mar 16

ಚುನಾವಣೆ ಘೋಷಣೆಗೂ ಕೆಲ ನಿಮಿಷಕ್ಕೂ ಮುನ್ನ ಮಮತಾ ಬಂಪರ್‌ ಘೋಷಣೆ; ದೀದಿ ಕೊನೇ ಕ್ಷಣದ ಆಟ?

ಚುನಾವಣಾ ಆಯೋಗವು ಪಂಚ ರಾಜ್ಯಗಳ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಇದರ ಬೆನ್ನಲ್ಲೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಸಂಹಿತೆ ಜಾರಿಗೆ ಕೆಲವೇ ನಿಮಿಷಗಳ ಮುನ್ನ ಮಾಡಿದ ಘೋಷಣೆಗಳು ವಿವಾದಕ್ಕೆ ಕಾರಣವಾಗಿವೆ. 

Read Full Story

08:56 AM (IST) Mar 16

Amala Paul - ಭೇಟಿಯಾದ 2 ತಿಂಗಳಲ್ಲೇ ಗರ್ಭಿಣಿ, ಆಮೇಲೆ ಮದುವೆ; ಸತ್ಯ ಬಿಚ್ಚಿಟ್ಟ ನಟಿ!

ಪತಿ ಜಗತ್‌ ದೇಸಾಯಿ ಅವರನ್ನು ಭೇಟಿಯಾದ ಎರಡೇ ತಿಂಗಳಲ್ಲಿ ತಾನು ಗರ್ಭಿಣಿಯಾಗಿದ್ದೆ, ನಂತರವಷ್ಟೇ ಮದುವೆಯಾಗಿದ್ದು ಎಂದು ನಟಿ ಅಮಲಾ ಪೌಲ್ ಬಹಿರಂಗಪಡಿಸಿದ್ದಾರೆ. ಮಗ ಹುಟ್ಟಿದ ಮೇಲೆ ತಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗಿದೆ ಎಂದೂ ಅವರು ಹೇಳಿದ್ದಾರೆ.

Read Full Story

08:46 AM (IST) Mar 16

ರಾಹುಲ್ ದ್ರಾವಿಡ್‌, ರೋಜರ್‌ ಬಿನ್ನಿ, ಮಿಥಾಲಿಗೆ ಬಿಸಿಸಿಐ ಜೀವಮಾನ ಸಾಧನೆ ಗೌರವ!

ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಮತ್ತು ಮಿಥಾಲಿ ರಾಜ್ ಅವರಿಗೆ ಬಿಸಿಸಿಐ ಸಿ.ಕೆ.ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಶುಭಮನ್ ಗಿಲ್ ವರ್ಷದ ಶ್ರೇಷ್ಠ ಅಂತಾರಾಷ್ಟ್ರೀಯ ಕ್ರಿಕೆಟಿಗರಾದರೆ, ಸ್ಮೃತಿ ಮಂಧಾನ ಶ್ರೇಷ್ಠ ಮಹಿಳಾ ಕ್ರಿಕೆಟರ್ ಗೌರವಕ್ಕೆ ಪಾತ್ರರಾದರು.

Read Full Story

08:42 AM (IST) Mar 16

ದುಬೈ ವಿಮಾನ ನಿಲ್ದಾಣದ ಸಮೀಪ ಇರಾನ್ ಮತ್ತೆ ಡ್ರೋನ್ ದಾಳಿ, ಭಾರಿ ಬೆಂಕಿ - ವಿಮಾನಗಳ ಹಾರಾಟ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನ್ ಮತ್ತೊಮ್ಮೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಿಂದ ಇಂಧನ ಟ್ಯಾಂಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Read Full Story

08:37 AM (IST) Mar 16

ಒಡಿಶಾ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ದುರಂತ, 10 ರೋಗಿಗಳು ಸಾವು!

ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಐಸಿಯುನಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಹತ್ತು ರೋಗಿಗಳು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.

Read Full Story

08:09 AM (IST) Mar 16

ಪಂಚರಾಜ್ಯ ಚುನಾವಣೆ ಘೋ಼ಷಣೆ

ಭಾರೀ ಜಿದ್ದಾಜಿದ್ದಿಗೆ ಸಾಕ್ಷಿಯಾಗುವ ನಿರೀಕ್ಷೆ ಇರುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಭಾನುವಾರ ಘೋಷಿಸಿದೆ. ಏ.9ರಂದು ಮೊದಲ ಹಂತದ ಮತದಾನ ನಡೆಯಲಿದೆ

 

Read Full Story

More Trending News