ನವದೆಹಲಿ (ಮಾ.16): ಭಾರೀ ಜಿದ್ದಾಜಿದ್ದಿಗೆ ಸಾಕ್ಷಿಯಾಗುವ ನಿರೀಕ್ಷೆ ಇರುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಭಾನುವಾರ ಘೋಷಿಸಿದೆ. ಏ.9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
10:43 AM (IST) Mar 16
10:29 AM (IST) Mar 16
ಚೀನಾವು ತಕ್ಲಮಕನ್ ಮರುಭೂಮಿ ವಿಸ್ತರಣೆಯನ್ನು ತಡೆಯಲು ಅದರ ಸುತ್ತ 3,046 ಕಿಲೋಮೀಟರ್ ಉದ್ದದ 'ಮರಗಳ ಗೋಡೆ' ನಿರ್ಮಾಣ ಪೂರ್ಣಗೊಳಿಸಿದೆ. ದಶಕಗಳ ಈ ಬೃಹತ್ ಯೋಜನೆಯು ಮರಳಿನ ಹರಡುವಿಕೆಯನ್ನು ನಿಯಂತ್ರಿಸುವುದಲ್ಲದೆ, ವಾತಾವರಣದ ಇಂಗಾಲವನ್ನು ಹೀರಿಕೊಳ್ಳುವ 'ಕಾರ್ಬನ್ ಸಿಂಕ್' ಆಗಿ ಕಾರ್ಯನಿರ್ವಹಿಸುತ್ತಿದೆ.
10:19 AM (IST) Mar 16
ಚುನಾವಣಾ ಪೂರ್ವ ಸಮೀಕ್ಷೆ: ಬಂಗಾಳದಲ್ಲಿ ಮಮತಾ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆಯಿದ್ದರೆ, ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸೋಲನುಭವಿಸುವ ಮುನ್ಸೂಚನೆ ಇದೆ. ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಮರಳಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿದೆ.
09:54 AM (IST) Mar 16
09:29 AM (IST) Mar 16
ಭಾರತದಲ್ಲಿ ಎಂದಿಗೂ ನಷ್ಟ ಅನುಭವಿಸದ, ಸದಾ ಕಾಲ ಲಾಭ ತಂದುಕೊಡುವ ನಾಲ್ಕು ಪ್ರಮುಖ ಬಿಸಿನೆಸ್ಗಳ ಬಗ್ಗೆ ಇಲ್ಲಿ ನೋಡೋಣ. ಇವು ಮನುಷ್ಯನ ಮೂಲಭೂತ ಅವಶ್ಯಕತೆಗಳಿಗೆ ಸಂಬಂಧಿಸಿದ್ದರಿಂದ, ಇವುಗಳಿಗೆ ಯಾವಾಗಲೂ ಬೇಡಿಕೆ ಇದ್ದೇ ಇರುತ್ತದೆ. ಆ ವಿವರಗಳನ್ನು ನೋಡೋಣ ಬನ್ನು
09:14 AM (IST) Mar 16
ಚುನಾವಣಾ ಆಯೋಗವು ಪಂಚ ರಾಜ್ಯಗಳ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಇದರ ಬೆನ್ನಲ್ಲೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಸಂಹಿತೆ ಜಾರಿಗೆ ಕೆಲವೇ ನಿಮಿಷಗಳ ಮುನ್ನ ಮಾಡಿದ ಘೋಷಣೆಗಳು ವಿವಾದಕ್ಕೆ ಕಾರಣವಾಗಿವೆ.
08:56 AM (IST) Mar 16
ಪತಿ ಜಗತ್ ದೇಸಾಯಿ ಅವರನ್ನು ಭೇಟಿಯಾದ ಎರಡೇ ತಿಂಗಳಲ್ಲಿ ತಾನು ಗರ್ಭಿಣಿಯಾಗಿದ್ದೆ, ನಂತರವಷ್ಟೇ ಮದುವೆಯಾಗಿದ್ದು ಎಂದು ನಟಿ ಅಮಲಾ ಪೌಲ್ ಬಹಿರಂಗಪಡಿಸಿದ್ದಾರೆ. ಮಗ ಹುಟ್ಟಿದ ಮೇಲೆ ತಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗಿದೆ ಎಂದೂ ಅವರು ಹೇಳಿದ್ದಾರೆ.
08:46 AM (IST) Mar 16
ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಮತ್ತು ಮಿಥಾಲಿ ರಾಜ್ ಅವರಿಗೆ ಬಿಸಿಸಿಐ ಸಿ.ಕೆ.ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಶುಭಮನ್ ಗಿಲ್ ವರ್ಷದ ಶ್ರೇಷ್ಠ ಅಂತಾರಾಷ್ಟ್ರೀಯ ಕ್ರಿಕೆಟಿಗರಾದರೆ, ಸ್ಮೃತಿ ಮಂಧಾನ ಶ್ರೇಷ್ಠ ಮಹಿಳಾ ಕ್ರಿಕೆಟರ್ ಗೌರವಕ್ಕೆ ಪಾತ್ರರಾದರು.
08:42 AM (IST) Mar 16
ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನ್ ಮತ್ತೊಮ್ಮೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಿಂದ ಇಂಧನ ಟ್ಯಾಂಕ್ಗೆ ಬೆಂಕಿ ಹೊತ್ತಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
08:37 AM (IST) Mar 16
ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಐಸಿಯುನಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಹತ್ತು ರೋಗಿಗಳು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.
08:09 AM (IST) Mar 16
ಭಾರೀ ಜಿದ್ದಾಜಿದ್ದಿಗೆ ಸಾಕ್ಷಿಯಾಗುವ ನಿರೀಕ್ಷೆ ಇರುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಭಾನುವಾರ ಘೋಷಿಸಿದೆ. ಏ.9ರಂದು ಮೊದಲ ಹಂತದ ಮತದಾನ ನಡೆಯಲಿದೆ