LIVE NOW
Published : Dec 19, 2025, 07:43 AM ISTUpdated : Dec 19, 2025, 11:02 PM IST

India News Live: ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ

ಸಾರಾಂಶ

ನವದೆಹಲಿ (ಡಿ.19): ಪರಮಾಣು ಇಂಧನ ಕ್ಷೇತ್ರವನ್ನು ಖಾಸಗಿಯವರಿಗೂ ತೆರೆಯುವ ‘ಶಾಂತಿ’ ಮಸೂದೆಗೆ ಸಂಸತ್ತಿನ ಅನುಮೋದನೆ ಲಭಿಸಿದೆ. ಬುಧವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಈ ಬಿಲ್‌ಗೆ ಗುರುವಾರ ರಾಜ್ಯಸಭೆಯಲ್ಲೂ ಧ್ವನಿಮತದ ಮೂಲಕ ಹಸಿರುನಿಶಾನೆ ತೋರಲಾಗಿದೆ. ರಾಷ್ಟ್ರಪತಿಯ ಅಂಕಿತದಿಂದಿಗೆ ಅದು ಕಾಯ್ದೆಯಾಗುವುದಷ್ಟೇ ಬಾಕಿ ಇದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

 

11:02 PM (IST) Dec 19

ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ

ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ, ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಬಳಿಕ ಬೌಲಿಂಗ್‌ನಲ್ಲೂ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ. 201 ರನ್‌ಗೆ ಕಟ್ಟಿ ಹಾಕಿ 30 ರನ್ ಗೆಲುವು ಕಂಡಿದೆ. ಜೊತೆಗೆ ಸರಣಿ ಗೆದ್ದುಕೊಂಡಿದೆ.

Read Full Story

09:37 PM (IST) Dec 19

Breaking ಸ್ಮೋಕ್ ಬಾಂಬ್ ಎಸೆದು ಸಿಕ್ಕ ಸಿಕ್ಕವರಿಗೆ ಚಾಕು ಇರಿದು ದುಷ್ಕರ್ಮಿ, 3 ಸಾವು, ಐವರು ಗಂಭೀರ

Breaking ಸ್ಮೋಕ್ ಬಾಂಬ್ ಎಸೆದು ಸಿಕ್ಕ ಸಿಕ್ಕವರಿಗೆ ಚಾಕು ಇರಿದು ದುಷ್ಕರ್ಮಿ, 3 ಸಾವು, ಐವರು ಗಂಭೀರ, ತೈಪಿ ರೈಲು ನಿಲ್ದಾಣದ ಪಕ್ಕದಲ್ಲಿ ಈ ಘಟನೆ ನಡೆದಿದೆ. ದುರ್ಷರ್ಮಿಯ ದಾಳಿ ದೃಶ್ಯಗಳು ಸೆರೆಯಾಗಿದೆ. ಭೀಕರ ಘಟನೆಯಿಂದ ಸಾರ್ವಜನಿಕರು ಶಾಕ್‌ಗೆ ಒಳಗಾಗಿದ್ದರೆ.

Read Full Story

09:03 PM (IST) Dec 19

ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್

ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್ ನೀಡಲಾಗಿದೆ. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟೀಂ ಇಂಡಿಯಾ 5ನೇ ಹಾಗೂ ಅಂತಿಮ ಟಿ20 ಪಂದ್ಯ ಗೆದ್ದು ಟ್ರೋಫಿ ಗೆಲುವಿನ ವಿಶ್ವಾಸದಲ್ಲಿದೆ.

Read Full Story

08:16 PM (IST) Dec 19

ಹೇಯ್ ನಿಮ್ಮ ಫೋಟೋ ನೋಡಿದೆ, ವ್ಯಾಟ್ಸಾಪ್‌ನಲ್ಲಿ ಈ ರೀತಿಯ ಸಂದೇಶ ಓಪನ್ ಮಾಡಬೇಡಿ

ಹೇಯ್ ನಿಮ್ಮ ಫೋಟೋ ನೋಡಿದೆ, ವ್ಯಾಟ್ಸಾಪ್‌ನಲ್ಲಿ ಈ ರೀತಿಯ ಸಂದೇಶ ಓಪನ್ ಮಾಡಬೇಡಿ, ಮುಖ್ಯವಾಗಿ ನೀವು ವ್ಯಾಟ್ಸಾಪ್‌ನ್ನು ಸಿಸ್ಟಮ್‌ಗೆ ಲಿಂಕ್ ಮಾಡ್ತಿದ್ದೀರಾ? ಘೋಸ್ಟ್ ಫೇರಿಂಗ್ ಸ್ಕ್ಯಾಮ್ ಇದೀಗ ಸದ್ದಿಲ್ಲದೆ ನಡೆಯುತ್ತಿದೆ ಎಚ್ಚರ.

Read Full Story

07:44 PM (IST) Dec 19

11 ನಿಮಿಷ ಉಸಿರು ಚೆಲ್ಲಿ ಬದುಕಿದ ಮಹಿಳೆ - ಸ್ವರ್ಗ- ನರಕದ ನಂಬಲಾಗದ ಅನುಭವ ಬಿಚ್ಚಿಟ್ಟಿದ್ದು ಹೀಗೆ

11 ನಿಮಿಷಗಳ ಕಾಲ ಸತ್ತು ಬದುಕಿದ ಮಹಿಳೆಯೊಬ್ಬರು ತಮ್ಮ ಸಾವಿನಾಚೆಯ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಸಮಯದಲ್ಲಿ ಸ್ವರ್ಗಕ್ಕೆ ಹೋಗಿ, ಅಲ್ಲಿ ದೇವತೆಗಳು ಮತ್ತು ಮೃತ ಕುಟುಂಬ ಸದಸ್ಯರನ್ನು ಭೇಟಿಯಾದೆ ಎಂದಿದ್ದಾರೆ. ಜೊತೆಗೆ ನರಕದ ದರ್ಶನವಾದ ಬಗ್ಗೆಯೂ ಅವರು ವಿವರಿಸಿದ್ದಾರೆ.
Read Full Story

07:19 PM (IST) Dec 19

ತಮಿಳುನಾಡಿನಲ್ಲಿ 97 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಹೊರಕ್ಕೆ, SIRನಿಂದ ಲೆಕ್ಕಾಚಾರ ಬಡುಮೇಲು

ತಮಿಳುನಾಡಿನಲ್ಲಿ 97 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಹೊರಕ್ಕೆ, SIRನಿಂದ ಲೆಕ್ಕಾಚಾರ ಬಡುಮೇಲು ಆಗಿದೆ. ಡಿಎಂಕೆ ಸೇರಿದಂತೆ ಇಂಡಿಯಾ ಮೈತ್ರಿ ಕೂಟಗಳು ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ವಿರೋಧಿಸಿದ ಬೆನ್ನಲ್ಲೇ ತಮಿಳುನಾಡಿನಲ್ಲಿ ಅಂಕಿ ಅಂಶ ರಾಜಕೀಯ ಲೆಕ್ಕಾಚಾರ ಬದಲಿಸಲಿದೆ.

Read Full Story

07:17 PM (IST) Dec 19

14 ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರ ಸಂಖ್ಯೆ ಎಷ್ಟು? ಈ ವಲಸೆಗೆ ಏನು ಕಾರಣ?

ಕಳೆದ 14 ವರ್ಷಗಳಲ್ಲಿ 25 ಲಕ್ಷ ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಹಾಗೆಯೇ ಕಳೆದ 5 ವರ್ಷಗಳಲ್ಲಿ ಕೇವಲ 9 ಲಕ್ಷ ಜನ ವಿದೇಶಗಳಿಗೆ ವಲಸೆ ಹೋಗಿದ್ದು, ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಭಾರತೀಯರ ಈ ವಲಸೆಗೆ ಕಾರಣವೇನು ಇಲ್ಲಿದೆ ಡಿಟೇಲ್ ಸ್ಟೋರಿ.

Read Full Story

06:45 PM (IST) Dec 19

ಸೈಕಲ್‌ನಲ್ಲಿ ಓಡಾಡ್ತಿದ್ದ ಯೂಟ್ಯೂಬರ್ ಬಳಿ ಈಗ ಹಲವು ಐಷಾರಾಮಿ ಕಾರು - ದುಬೈನಲ್ಲಿ ಅದ್ದೂರಿ ಮದುವೆ - ಇಡಿ ದಾಳಿ

ಒಂದು ಕಾಲದಲ್ಲಿ ಸೈಕಲ್ ಬೈಕ್‌ನಲ್ಲಿ ಓಡಾಡ್ತಿದ್ದ ಯುವಕನೋರ್ವ ಈಗ ದುಬೈನಲ್ಲಿ ಕ್ರೂಸ್ ಶಿಪ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದು, ಆತನ ಈ ಅನಿರೀಕ್ಷಿತ ಸಂಪತ್ತಿನ ಬಗ್ಗೆ ಈಗ ಇಡಿ ಕಣ್ಣು ಬಿದ್ದಿದೆ.

Read Full Story

06:38 PM (IST) Dec 19

ಒಮ್ಮೆ ಕುಳಿತು ನೋಡಿ, ಮದುವೆಯಲ್ಲಿ ಆಫೀಸ್ ಕೆಲಸ ಮಾಡಿ ಟೀಕೆ ಗುರಿಯಾಗಿದ್ದ ವಧುವಿನ ಬೆಂಕಿ ಉತ್ತರ

ಒಮ್ಮೆ ಕುಳಿತು ನೋಡಿ, ಮದುವೆಯಲ್ಲಿ ಆಫೀಸ್ ಕೆಲಸ ಮಾಡಿ ಟೀಕೆ ಗುರಿಯಾಗಿದ್ದ ವಧುವಿನ ಬೆಂಕಿ ಉತ್ತರ ನೀಡಿದ್ದಾರೆ. ಹನಿಮೂನ್‌ನಲ್ಲೂ ಕಚೇರಿ ಮೀಟಿಂಗ್ ಮಾಡುತ್ತಿದ್ದ ನವ ವಧು ಭಾರಿ ಟೀಕೆಗೆ ಗುರಿಯಾಗಿದ್ದರು. ಇದೀಗ ವಧು ತಿರುಗೇಟು ನೀಡಿದ್ದಾರೆ.

Read Full Story

06:02 PM (IST) Dec 19

ಐಪಿಎಲ್ ಹರಾಜಿನಲ್ಲಿ ಜಾಕ್‌ಪಾಟ್‌; 8 ಕೋಟಿಗಾಗಿ ಹನಿಮೂನ್ ತ್ಯಾಗಕ್ಕೆ ರೆಡಿಯಾದ ಈ ಸ್ಟಾರ್ ಕ್ರಿಕೆಟರ್!

ಮದುವೆಯ ಕಾರಣದಿಂದಾಗಿ ಕೆಲವೇ ಪಂದ್ಯಗಳಿಗೆ ಲಭ್ಯವಿದ್ದರೂ, ಐಪಿಎಲ್ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ಜೋಶ್ ಇಂಗ್ಲಿಶ್ ಅವರನ್ನು ಲಖನೌ ಸೂಪರ್ ಜೈಂಟ್ಸ್ 8.6 ಕೋಟಿ ರೂ. ನೀಡಿ ಖರೀದಿಸಿದೆ. ಇದರ ಬೆನ್ನಲ್ಲೇ ಇಂಗ್ಲಿಶ್ ತಮ್ಮ ಹನಿಮೂನ್ ಯೋಜನೆಯನ್ನು ಮುಂದೂಡುವ ಸಾಧ್ಯತೆಯಿದೆ ಎಂದು ವರದಿಗಳು ಹೇಳುತ್ತಿವೆ.

Read Full Story

05:58 PM (IST) Dec 19

ಐದು ವರ್ಷ ಬಳಿಕ ಖುಲಾಯಿಸಿದ ಅದೃಷ್ಠ, 24 ಲಕ್ಷ ರೂ ದುಬೈ ಲಾಟರಿ ಗೆದ್ದ ಭಾರತ ಮೂಲದ ನರ್ಸ್‌

ಐದು ವರ್ಷ ಬಳಿಕ ಖುಲಾಯಿಸಿದ ಅದೃಷ್ಠ, 24 ಲಕ್ಷ ರೂ ದುಬೈ ಲಾಟರಿ ಗೆದ್ದ ಭಾರತ ಮೂಲದ ನರ್ಸ್‌, ಸೋಶಿಯಲ್ ಮೀಡಿಯಾದಲ್ಲಿ ನೋಡಿ ಲಾಟರಿ ಟಿಕೆಟ್ ಖರೀದಿಸಿದ ನರ್ಸ್, ಕಳೆದ 5 ವರ್ಷ ನಿರಾಸೆ ಅನುಭವಿಸಿದ್ದರು. ಆದರೆ ಇದೀಗ 24.56 ಲಕ್ಷ ರೂಪಾಯಿ ಗೆದ್ದಿದ್ದಾರೆ.

Read Full Story

05:11 PM (IST) Dec 19

ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ - ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮುಸ್ಲಿಂ ಯುವತಿಯ ಬುರ್ಖಾ ಎಳೆದ ವಿವಾದದ ಬಗ್ಗೆ ಜಮ್ಮು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ತೀವ್ರವಾಗಿ ಖಂಡಿಸಿದ್ದಾರೆ. ಇದೇ ವೇಳೆ, ತಮ್ಮ ರಾಜಕೀಯ ಪ್ರತಿಸ್ಪರ್ಧಿ ಮೆಹಬೂಬಾ ಮುಫ್ತಿ ಕೂಡ 2004ರಲ್ಲಿ ಇದೇ ರೀತಿಯ ಕೃತ್ಯ ಎಸಗಿದ್ದರು ಎಂದು ಆರೋಪಿಸಿದ್ದಾರೆ.

Read Full Story

05:00 PM (IST) Dec 19

ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡ ಆಯ್ಕೆ ಮಾಡಿದ ಆಕಾಶ್ ಚೋಪ್ರಾ; ಗಿಲ್‌ಗಿಲ್ಲ ಉಪನಾಯಕ ಪಟ್ಟ!

ಟಿ20 ವಿಶ್ವಕಪ್‌ಗೆ ಭಾರತೀಯ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಈ ನಡುವೆ, ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ತಮ್ಮ ಸಂಭಾವ್ಯ ತಂಡವನ್ನು ಆಯ್ಕೆ ಮಾಡಿದ್ದು, ಶುಭಮನ್ ಗಿಲ್ ಬದಲಿಗೆ ಹಾರ್ದಿಕ್ ಪಾಂಡ್ಯರನ್ನು ಉಪನಾಯಕರನ್ನಾಗಿ ಹೆಸರಿಸಿದ್ದಾರೆ.  

Read Full Story

04:58 PM (IST) Dec 19

ಉರ್ವಶಿ ರೌಟೇಲಾ, ಯುವರಾಜ್ ಸಿಂಗ್, ಸೋನು ಸೂದ್‌ಗೆ ಇಡಿ ಶಾಕ್, ₹7.9ಕೋಟಿ ಆಸ್ತಿ ಮುಟ್ಟುಗೋಲು

ಉರ್ವಶಿ ರೌಟೇಲಾ, ಯುವರಾಜ್ ಸಿಂಗ್, ಸೋನು ಸೂದ್‌ಗೆ ಇಡಿ ಶಾಕ್, ₹7.9ಕೋಟಿ ಆಸ್ತಿ ಮುಟ್ಟುಗೋಲು ಮಾಡಲಾಗಿದೆ. ಈ ಮೂವರು ದಿಗ್ಗಜರ ವಿರುದ್ಧ ಇಡಿ ಕ್ರಮ ಕೈಗೊಂಡಿದ್ದೇಕೆ? ಇಡಿ ದಾಳಿ ನಡೆಸಿ ಆಸ್ತಿ ಮುಟ್ಟುಗೋಲು ನಡೆಸಲು ಕಾರಣವೇನು?

Read Full Story

04:15 PM (IST) Dec 19

ಏರ್ ಇಂಡಿಯಾದ ಪ್ರತಿ ಪ್ರಯಾಣಿಕರಿಗೆ ಕ್ರಿಸ್ಮಸ್ ಗಿಫ್ಟ್, ಬೆಂಗಳೂರಿನಿಂದ ಹೊರಟವರಿಗೆ ಸರ್ಪ್ರೈಸ್

ಏರ್ ಇಂಡಿಯಾದ ಪ್ರತಿ ಪ್ರಯಾಣಿಕರಿಗೆ ಕ್ರಿಸ್ಮಸ್ ಗಿಫ್ಟ್, ಬೆಂಗಳೂರಿನಿಂದ ಹೊರಟವರಿಗೆ ಸರ್ಪ್ರೈಸ್, ದೇಶದಲ್ಲಿ ಕ್ರಿಸ್ಮಸ್ ಸಂಭ್ರಮ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಹಲವು ಕಂಪನಿಗಳು ಉಡುಗೊರೆ ನೀಡುತ್ತಿದೆ.

Read Full Story

04:09 PM (IST) Dec 19

ಶ್ರೀರಾಮ ಹಿಂದು ಅಲ್ಲ, ಆತ ಮುಸ್ಲಿಂ ಎಂದ ಟಿಎಂಸಿ ಶಾಸಕ, ಬಿಜೆಪಿ ತಿರುಗೇಟು!

ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಅವರು 'ರಾಮ ಮುಸ್ಲಿಂ' ಎಂದು ಹೇಳಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ವಿಡಿಯೋ ಹಳೆಯದು ಮತ್ತು ಎಡಿಟ್ ಮಾಡಲಾಗಿದೆ ಎಂದು ಅವರು ಹೇಳಿದ್ದು, ಇದು ಬಂಗಾಳ ಚುನಾವಣೆಗೆ ಮುನ್ನ ಟಿಎಂಸಿ ಮತ್ತು ಬಿಜೆಪಿ ನಡುವಿನ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.
Read Full Story

04:09 PM (IST) Dec 19

ಎರಡು ಕುಟುಂಬಗಳ ನಡುವಿನ ಕಲಹ ಕೊಲೆಯಲ್ಲಿ ಅಂತ್ಯ - ದೇಹದಲ್ಲಿತ್ತು 69 ಬುಲೆಟ್

ದೆಹಲಿಯ ಅಯಾ ನಗರದಲ್ಲಿ, ಎರಡು ಕುಟುಂಬಗಳ ನಡುವಿನ ದೀರ್ಘಕಾಲದ ದ್ವೇಷವು 52 ವರ್ಷದ ರತನ್ ಲೋಹಿಯಾ ಅವರ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. 

Read Full Story

03:37 PM (IST) Dec 19

ಭಾರತದಲ್ಲಿ 40 ಲಕ್ಷ ಮಂದಿಯಲ್ಲಿದೆ ಲೈಸೆನ್ಸ್ ಗನ್, ಯಾವ ರಾಜ್ಯಕ್ಕೆ ಮೊದಲ ಸ್ಥಾನ?

ಭಾರತದಲ್ಲಿ 40 ಲಕ್ಷ ಮಂದಿಯಲ್ಲಿದೆ ಲೈಸೆನ್ಸ್ ಗನ್, ಯಾವ ರಾಜ್ಯಕ್ಕೆ ಮೊದಲ ಸ್ಥಾನ?, ಕರ್ನಾಟಕದಲ್ಲಿ ಎಷ್ಟು ಮಂದಿ ಬಳಿ ಇದೆ ಲೈಸೆನ್ಸ್ ಗನ್? ಗರಿಷ್ಠ ಲೈಸೆನ್ಸ್ ಗನ್ ಬಳಸುವ ರಾಜ್ಯ ಯಾವುದು? ಈ ಕುರಿತ ಕುತೂಹಲ ಮಾಹಿತಿ ಇಲ್ಲಿದೆ.

 

Read Full Story

03:04 PM (IST) Dec 19

ದಕ್ಷಿಣ ಆಫ್ರಿಕಾ ಎದುರಿನ ಕೊನೆಯ ಟಿ20 ಪಂದ್ಯಕ್ಕೆ ಭಾರತ ತಂಡದಲ್ಲಿ 2 ಮೇಜರ್ ಚೇಂಜ್! ಇಲ್ಲಿದೆ ಹೊಸ ಅಪ್‌ಡೇಟ್ಸ್‌

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಹಾಗೂ ಅಂತಿಮ ಟಿ20 ಪಂದ್ಯ ಇಂದು ಅಹಮದಾಬಾದ್‌ನಲ್ಲಿ ನಡೆಯಲಿದೆ. ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಭಾರತ, ಗಾಯಾಳು ಗಿಲ್ ಬದಲಿಗೆ ಸಂಜು ಸ್ಯಾಮ್ಸನ್ ಮತ್ತು ಬುಮ್ರಾ ವಾಪಸಾತಿಯೊಂದಿಗೆ ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.
Read Full Story

02:50 PM (IST) Dec 19

ಪ್ರತಿ ಟ್ವೀಟ್‌ಗೆ ಗರಿಷ್ಠ ಲೈಕ್ಸ್ , ಭಾರತದಲ್ಲಿ ನಂ.1 ಪ್ರಧಾನಿ ಮೋದಿ, ನಂತರದ ಸ್ಥಾನ ಯಾರಿಗೆ?

ಪ್ರತಿ ಟ್ವೀಟ್‌ಗೆ ಗರಿಷ್ಠ ಲೈಕ್ಸ್ , ಭಾರತದಲ್ಲಿ ನಂ.1 ಪ್ರಧಾನಿ ಮೋದಿ, ನಂತರದ ಸ್ಥಾನ ಯಾರಿಗೆ? ರಾಜಕೀಯ ನಾಯಕರ ಪೈಕಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ನಾಯಕರು ಸೋಶಿಯಲ್ ಮೀಡಿಯಾ ಮೂಲಕ ಸಕ್ರಿಯವಾಗಿದ್ದಾರೆ. ಯರಿಗೆಲ್ಲಾ ಸಿಕ್ಕಿದೆ ಗರಿಷ್ಠ ಲೈಕ್ಸ್

Read Full Story

02:15 PM (IST) Dec 19

2ನೇ ಪತ್ನಿಯ ಸಾಕುವ ತಾಕತ್ತಿರುವವ ಮೊದಲ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ - ಹೈಕೋರ್ಟ್ ತೀರ್ಪು

2ನೇ ಪತ್ನಿಯನ್ನು ಪೋಷಿಸುವ ಗಂಡ ಮೊದಲ ಪತ್ನಿಗೆ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 

Read Full Story

01:25 PM (IST) Dec 19

ಬರೋಬ್ಬರಿ 39,600 ಕೋಟಿ ರೂಪಾಯಿಗೆ ಶ್ರೀರಾಮ್‌ ಫೈನಾನ್ಸ್‌ನ ಶೇ. 20ರಷ್ಟು ಪಾಲು ಖರೀದಿಸಿದ MUFG

Shriram Finance: MUFG Invests ₹39,600 Crore for 20% Stake ಶ್ರೀರಾಮ್ ಫೈನಾನ್ಸ್ ಮಂಡಳಿಯಲ್ಲಿ ಇಬ್ಬರು ನಾಮನಿರ್ದೇಶಿತ ನಿರ್ದೇಶಕರನ್ನು ನೇಮಿಸುವ ಹಕ್ಕನ್ನು MUFG ಹೊಂದಿರುತ್ತದೆ.

Read Full Story

01:15 PM (IST) Dec 19

ಅಂಡರ್ 19 ಏಷ್ಯಾಕಪ್‌ ಭಾರತ-ಶ್ರೀಲಂಕಾ ಸೆಮಿಫೈನಲ್ ರದ್ದಾದ್ರೆ ಫೈನಲ್‌ಗೇರೋದು ಯಾರು?

ಅಂಡರ್ 19 ಏಷ್ಯಾಕಪ್‌ನ ಭಾರತ-ಶ್ರೀಲಂಕಾ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಪಂದ್ಯ ರದ್ದಾದರೆ, ಗುಂಪು ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತ ತಂಡವು ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದೆ. ಇದೇ ರೀತಿ, ಇನ್ನೊಂದು ಸೆಮಿಫೈನಲ್ ರದ್ದಾದರೆ ಬಾಂಗ್ಲಾದೇಶ ಫೈನಲ್‌ಗೆ ತಲುಪಲಿದೆ.
Read Full Story

12:44 PM (IST) Dec 19

ಬಾಂಗ್ಲಾದೇಶದಲ್ಲಿ ಅಶಾಂತಿಯ ನಡುವೆ, ಪ್ರವಾದಿ ನಿಂದನೆ ಆರೋಪದಲ್ಲಿ ಹಿಂದೂ ವ್ಯಕ್ತಿಯ ಕೊಲೆ!

ಬಾಂಗ್ಲಾದೇಶದ ಮೈಮೆನ್‌ಸಿಂಗ್‌ನಲ್ಲಿ ಪ್ರವಾದಿ ನಿಂದನೆ ಆರೋಪದ ಮೇಲೆ ದೀಪು ಚಂದ್ರ ದಾಸ್ ಎಂಬ ಹಿಂದೂ ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದಿದೆ. ಹಲ್ಲೆಕೋರರು ನಂತರ ಆತನ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read Full Story

12:29 PM (IST) Dec 19

ಮತಾಂತರವಾದ ವ್ಯಕ್ತಿ ಸಮಾಧಿ ವಿಚಾರಕ್ಕೆ ಗಲಾಟೆ - ಮತಾಂತರಿಗಳ ಬೆನ್ನಟ್ಟಿ ಚರ್ಚ್‌ಗೆ ಬೆಂಕಿ ಹಚ್ಚಿದ ಬುಡಕಟ್ಟು ಜನ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯ ಅಂತ್ಯಸಂಸ್ಕಾರದ ವಿಚಾರವಾಗಿ ಆದಿವಾಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ನಡುವೆ ತೀವ್ರ ಹಿಂಸಾಚಾರ ನಡೆದಿದೆ. ಈ ಘರ್ಷಣೆಯಲ್ಲಿ ಚರ್ಚ್‌ಗಳಿಗೆ ಬೆಂಕಿ ಹಚ್ಚಲಾಗಿದ್ದು, ಹಲವರು ಗಾಯಗೊಂಡಿದ್ದಾರೆ ಮತ್ತು ಪರಿಸ್ಥಿತಿ ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

Read Full Story

12:22 PM (IST) Dec 19

ಟೇಕಾಫ್‌ ಆದ ಕೆಲವೇ ಕ್ಷಣದಲ್ಲಿ ರನ್‌ವೇಗೆ ಬಿದ್ದು ಪತನವಾದ ವಿಮಾನ, ಎಲ್ಲಾ ಪ್ರಯಾಣಿಕರ ಸಾವು!

ಅಮೆರಿಕದ ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣದಲ್ಲಿ ಸೆಸ್ನಾ ಸಿ550 ವಿಮಾನವು ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾಗಿದೆ. ಈ ದುರಂತದಲ್ಲಿ ಖ್ಯಾತ ನ್ಯಾಸ್ಕಾರ್ ರೇಸಿಂಗ್ ಚಾಲಕ ಗ್ರೆಗ್ ಬಿಫಲ್ ಮತ್ತು ಅವರ ಕುಟುಂಬ ಸಾವನ್ನಪ್ಪಿದ್ದಾರೆ.

Read Full Story

12:13 PM (IST) Dec 19

ಸಯ್ಯದ್‌ ಮುಷ್ತಾಕ್‌ ಅಲಿ ಟಿ20 - ಜಾರ್ಖಂಡ್‌ಗೆ ಚೊಚ್ಚಲ ಕಿರೀಟ, ಶತಕ ಚಚ್ಚಿ ಅಪರೂಪದ ದಾಖಲೆ ಬರೆದ ಇಶಾನ್ ಕಿಶನ್!

ಸಯ್ಯದ್‌ ಮುಷ್ತಾಕ್‌ ಅಲಿ ರಾಷ್ಟ್ರೀಯ ಟಿ20 ಟೂರ್ನಿಯ ಫೈನಲ್‌ನಲ್ಲಿ ಹರ್ಯಾಣವನ್ನು 69 ರನ್‌ಗಳಿಂದ ಮಣಿಸಿ ಜಾರ್ಖಂಡ್‌ ಚೊಚ್ಚಲ ಬಾರಿಗೆ ಚಾಂಪಿಯನ್‌ ಆಗಿದೆ. ನಾಯಕ ಇಶಾನ್‌ ಕಿಶನ್‌ ಅವರ ಸ್ಫೋಟಕ ಶತಕದ (101) ನೆರವಿನಿಂದ ಜಾರ್ಖಂಡ್‌ 262 ರನ್‌ಗಳ ದಾಖಲೆಯ ಮೊತ್ತ ಕಲೆಹಾಕಿತು.
Read Full Story

12:00 PM (IST) Dec 19

ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!

ಒಡಿಶಾ ಶಾಸಕರ ವೇತನ ಮತ್ತು ಭತ್ಯೆಗಳನ್ನು ಮೂರು ಪಟ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಆಡಳಿತಾರೂಢ ಬಿಜೆಪಿ ಶಾಸಕರೇ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಿಗೆ ಈ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

Read Full Story

11:19 AM (IST) Dec 19

ಆ್ಯಶಸ್‌ ಮೂರನೇ ಟೆಸ್ಟ್‌ನಲ್ಲಿ ಭುಗಿಲೆದ್ದ ಸ್ನಿಕೋ ಮೀಟರ್ ವಿವಾದ!

ಆಸ್ಟ್ರೇಲಿಯಾ-ಇಂಗ್ಲೆಂಡ್‌ ನಡುವಿನ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಸ್ನಿಕೋ ಮೀಟರ್ ತಂತ್ರಜ್ಞಾನವು ವಿವಾದಕ್ಕೆ ಕಾರಣವಾಗಿದೆ. ಅಡಿಲೇಡ್ ಟೆಸ್ಟ್‌ನಲ್ಲಿ 3 ಬಾರಿ ತಪ್ಪಾದ ತೀರ್ಪು ನೀಡಿದ್ದು, ಆಸೀಸ್ ವೇಗಿ ಸ್ಟಾರ್ಕ್ ಸೇರಿದಂತೆ ಹಲವು ಆಟಗಾರರು ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Read Full Story

11:14 AM (IST) Dec 19

ಭಾರತ ವಿರೋಧಿ ತೀವ್ರಗಾಮಿ ನಾಯಕನ ಹತ್ಯೆಯ ನಂತರ ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

ತೀವ್ರಗಾಮಿ ನಾಯಕ ಷರೀಫ್ ಉಸ್ಮಾನ್ ಹಾದಿಯ ಹತ್ಯೆಯ ನಂತರ ಬಾಂಗ್ಲಾದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಢಾಕಾ ಸೇರಿದಂತೆ ಹಲವು ನಗರಗಳಲ್ಲಿ ಪ್ರತಿಭಟನಾಕಾರರು ಮಾಧ್ಯಮ ಸಂಸ್ಥೆಗಳು ಮತ್ತು ರಾಜಕೀಯ ಕಚೇರಿಗಳಿಗೆ ಬೆಂಕಿ ಹಚ್ಚಿದ್ದು, ಆ ದೇಶದಲ್ಲಿ ಭಾರತ ವಿರೋಧಿ ಭಾವನೆಗಳು ತೀವ್ರಗೊಂಡಿವೆ.

Read Full Story

10:55 AM (IST) Dec 19

Ind vs SA 5th T20I - ಇಂದು ಭಾರತ vs ದಕ್ಷಿಣ ಆಫ್ರಿಕಾ ಫೈನಲ್ ಫೈಟ್

ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಸರಣಿ ಗೆಲುವಿನ ಗುರಿ ಹೊಂದಿದೆ. 2-1 ಮುನ್ನಡೆಯಲ್ಲಿದ್ದರೂ, ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಶುಭ್‌ಮನ್‌ ಗಿಲ್‌ ಅವರ ಫಾರ್ಮ್‌ ತಂಡಕ್ಕೆ ಚಿಂತೆಯುಂಟುಮಾಡಿದೆ. ಜಸ್‌ಪ್ರೀತ್ ಬೂಮ್ರಾ ತಂಡಕ್ಕೆ ಮರಳಿರುವುದು ತಂಡದ ಬಲ ಹೆಚ್ಚಿಸಿದೆ.
Read Full Story

10:20 AM (IST) Dec 19

Epstein Sex Scandal - 68 ಹೊಸ ಫೋಟೋ ರಿಲೀಸ್‌, ಮಹಿಳೆಯರ ಜೊತೆ ಬಿಲ್‌ಗೇಟ್ಸ್‌, ಸೆರ್ಗಿ ಬ್ರಿನ್‌!

ಎಪ್ಸ್ಟೀನ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ 68 ಹೊಸ ಫೋಟೋಗಳು ಬಿಡುಗಡೆಯಾಗಿದ್ದು, ಇದರಲ್ಲಿ ಬಿಲ್ ಗೇಟ್ಸ್, ವುಡಿ ಅಲೆನ್, ಸೆರ್ಗೆ ಬ್ರಿನ್ ಸೇರಿದಂತೆ ಹಲವು ಪ್ರಮುಖರು ಕಾಣಿಸಿಕೊಂಡಿದ್ದಾರೆ. ಮಹಿಳೆಯ ದೇಹದ ಮೇಲೆ 'ಲೋಲಿಟಾ' ಪುಸ್ತಕದ ಸಂದೇಶಗಳನ್ನು ಬರೆದಿರುವ ಚಿತ್ರಗಳು ಬಹಿರಂಗಗೊಂಡಿದೆ.

Read Full Story

07:46 AM (IST) Dec 19

ಕಾಂಡೋಮ್‌ನ ಜಿಎಸ್‌ಟಿ ಕಡಿತ ಮಾಡಲಾಗದ ದುಸ್ಥಿತಿಗೆ ಪಾಕ್‌!

ವಿದೇಶಿ ಸಾಲದ ನೆರವಿನಿಂದಲೇ ಸರ್ಕಾರ ನಡೆಸುತ್ತಿರುವ ಪಾಕಿಸ್ತಾನ ಇದೀಗ ಕಾಂಡೋಮ್‌ ಸೇರಿದಂತೆ ಗರ್ಭನಿರೋಧಕಗಳ ಮೇಲಿನ ತೆರಿಗೆ ಕಡಿತ ಮಾಡಲಾಗದ ಪರಿಸ್ಥಿತಿ ತಲುಪಿದೆ. ನಿಜ. ಐಎಂಎಫ್‌ನಿಂದ ಸಾಲ ಪಡೆದಿರುವ ಪಾಕಿಸ್ತಾನ, ಇದೀಗ ಆ ಹಣಕಾಸು ಸಂಸ್ಥೆಯ ಸೂಚನೆ ಅನ್ವಯವೇ ನಡೆದುಕೊಳ್ಳಬೇಕಾಗಿ ಬಂದಿದೆ.

 

Read Full Story

07:46 AM (IST) Dec 19

ನೌಕರರಿಗೆ ಸಂಬಳ, ಪಿಂಚಣಿ ನೀಡಲು ಕೇರಳದಲ್ಲಿ ತತ್ವಾರ

ಕೇರಳ ಸರ್ಕಾರದ ಆರ್ಥಿಕ ನಿರ್ವಹಣೆ ಹಳಿ ತಪ್ಪಿದ ಕಾರಣ ನೀಡಿ, 2025-26ನೇ ಆರ್ಥಿಕ ವರ್ಷದ ಕೊನೆಯ 3 ತಿಂಗಳಲ್ಲಿ ರಾಜ್ಯ ಸಾಲ ಪಡೆಯಬಹುದಾದ ಮೊತ್ತದ ಮಿತಿಯಲ್ಲಿ ಕೇಂದ್ರ ಸರ್ಕಾರ ಸುಮಾರು 6,000 ಕೋಟಿ ರು.ಗಳಷ್ಟು ಕಡಿತ ಮಾಡಿದೆ. ಇದು ಕೇರಳ ಮತ್ತು ಕೇಂದ್ರದ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.

 

Read Full Story

07:45 AM (IST) Dec 19

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ

ಭಾರತ ಮತ್ತು ಒಮಾನ್‌ ದೇಶಗಳು ಮಹತ್ವದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಗುರುವಾರ ಇಲ್ಲಿ ಸಹಿಹಾಕಿವೆ. ಇದರನ್ವಯ ಇನ್ನುಮುಂದೆ ಭಾರತದಿಂದ ಆಮದಾಗುವ ಶೇ.98 ವಿಧದ ವಸ್ತುಗಳ ಮೇಲಿನ ತೆರಿಗೆಯನ್ನು ಒಮಾನ್‌ ಶೂನ್ಯಕ್ಕೆ ಇಳಿಸಿದೆ.

 

Read Full Story

07:45 AM (IST) Dec 19

ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ

ಪರಮಾಣು ಇಂಧನ ಕ್ಷೇತ್ರವನ್ನು ಖಾಸಗಿಯವರಿಗೂ ತೆರೆಯುವ ‘ಶಾಂತಿ’ ಮಸೂದೆಗೆ ಸಂಸತ್ತಿನ ಅನುಮೋದನೆ ಲಭಿಸಿದೆ. ಬುಧವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಈ ಬಿಲ್‌ಗೆ ಗುರುವಾರ ರಾಜ್ಯಸಭೆಯಲ್ಲೂ ಧ್ವನಿಮತದ ಮೂಲಕ ಹಸಿರುನಿಶಾನೆ ತೋರಲಾಗಿದೆ. ರಾಷ್ಟ್ರಪತಿಯ ಅಂಕಿತದಿಂದಿಗೆ ಅದು ಕಾಯ್ದೆಯಾಗುವುದಷ್ಟೇ ಬಾಕಿ ಇದೆ.

 

Read Full Story

07:45 AM (IST) Dec 19

ಚುನಾವಣೆ ಸೋಲಿನ ಬಳಿಕ ಸಿಪಿಎಂಗೆ ಅಯ್ಯಪ್ಪನ ಭಕ್ತಿ!

ಶಬರಿಮಲೆ ಚಿನ್ನ ಕಳವು ಪ್ರಕರಣದಿಂದಾಗಿ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನಗಾದ ಹಿನ್ನಡೆಯಿಂದ ಹತಾಶೆಗೊಂಡಿರುವ ಕೇರಳದ ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಸರ್ಕಾರ, ಚುನಾವಣೆ ವೇಳೆ ವೈರಲ್‌ ಆಗಿದ್ದ ಅಯ್ಯಪ್ಪನ ಭಕ್ತಿಗೀತೆ ಹೋಲುವ ವೈರಲ್‌ ಗೀತೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

 

Read Full Story

07:44 AM (IST) Dec 19

ಸಿಡ್ನಿಯಲ್ಲಿ ಇನ್ನೊಂದು ದಾಳಿ ಸಂಚು ವಿಫಲ

15 ಅಮಾಯಕ ಯಹೂದಿಗಳನ್ನು ಬಲಿ ಪಡೆದ ಬೋಂಡಿ ಬೀಚ್‌ ಉಗ್ರ ದಾಳಿಯ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಮುನ್ನವೇ ಆಸ್ಟ್ರೇಲಿಯಾ ಪೊಲೀಸರು ಮತ್ತೊಂದು ಸಂಭವನೀಯ ದಾಳಿಯ ಸಂಚು ವಿಫಲಗೊಳಿಸಿದ್ದಾರೆ.

 

Read Full Story

07:44 AM (IST) Dec 19

ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!

ಮರುಭೂಮಿ ದೇಶ ಸೌದಿ ಅರೇಬಿಯಾದಲ್ಲಿ ಅಪರೂಪದ ಹಿಮಪಾತ ಮತ್ತು ಗುಡುಗುಸಹಿತ ಮಳೆಯಾಗಿದೆ. ಉತ್ತರದ ತಬೂಕ್ ಪ್ರದೇಶದ ಜಬಲ್ ಅಲ್ ಲಾವ್ಜ್ ಬೆಟ್ಟ ಮತ್ತು ಇತರ ಬೆಟ್ಟಗಳು ಹಿಮದಿಂದ ಆವೃತವಾದ ಅದ್ಭುತ ದೃಶ್ಯಗಳ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

 

Read Full Story

More Trending News