Published : Aug 21, 2025, 07:42 AM ISTUpdated : Aug 21, 2025, 08:11 PM IST

India Latest News Live: ಸ್ವಿಗ್ಗಿ ಡೆಲಿವರಿ ಬಾಯ್ಸ್‌ಗೆ ಗುಡ್‌ನ್ಯೂಸ್‌ ಕೊಟ್ಟ ಬೆಂಗಳೂರಿನ ಕಂಪನಿ; ಗಿಫ್ಟ್ ಪಡೆಯಲು ಮಾಡಬೇಕಿರೋದು ಇಷ್ಟೇ!

ಸಾರಾಂಶ

ಬೆಂಗಳೂರು (ಆ.21): ದೇಶದಲ್ಲಿ ಮನಿ ಗೇಮಿಂಗ್‌ಗೆ ನಿಷೇಧ ವಿಧಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಹಣವಿಟ್ಟು ಆಡುವ ಎಲ್ಲಾ ಗೇಮ್‌ಗಳು ಇನ್ನು ಕಡ್ಡಾಯವಾಗಿ ನಿಷೇಧವಾಗಲಿದೆ. ನಿಯಮ ಉಲ್ಲಂಘಿಸಿದರೆ 3 ವರ್ಷ ಜೈಲು ಶಿಕ್ಷೆ ಹಾಗೂ 1 ಕೋಟಿವರೆಗೆ ದಂಡ ವಿಧಿಸಲಾಗುತ್ತದೆ. ಆನ್‌ಲೈನ್‌ ಗೇಮ್‌ ನಿಯಂತ್ರಣ ವಿಧೇಯಕ-2025 ಲೋಕಸಭೆಯಲ್ಲಿ ಪಾಸ್‌ ಆಗಿದೆ. ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

 

08:11 PM (IST) Aug 21

ಸ್ವಿಗ್ಗಿ ಡೆಲಿವರಿ ಬಾಯ್ಸ್‌ಗೆ ಗುಡ್‌ನ್ಯೂಸ್‌ ಕೊಟ್ಟ ಬೆಂಗಳೂರಿನ ಕಂಪನಿ; ಗಿಫ್ಟ್ ಪಡೆಯಲು ಮಾಡಬೇಕಿರೋದು ಇಷ್ಟೇ!

ಸ್ವಿಗ್ಗಿ ಡೆಲಿವರಿ ಪಾರ್ಟ್‌ನರ್‌ಗಳಿಗೆ ಗುಡ್‌ ನ್ಯೂಸ್ ಸಿಗಲಿದೆ.  ಬೆಂಗಳೂರು ಮತ್ತು ದೆಹಲಿಯಲ್ಲಿ ಮೊದಲ ಹಂತ ಜಾರಿ. ಪರಿಸರ ಸ್ನೇಹಿ ಡೆಲಿವರಿಗೆ ಉತ್ತೇಜನ.

Read Full Story

04:28 PM (IST) Aug 21

'ಸತ್ತ ಆರ್ಥಿಕತೆ' ಎಂದ ಅಮೆರಿಕಕ್ಕೆ ಭಾರತದ ತಿರುಗೇಟು - ರಷ್ಯಾ ಜೊತೆ ಮುಕ್ತ ವ್ಯಾಪಾರ ಒಪ್ಪಂದ! ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡ ಟ್ರಂಪ್

ಅಮೆರಿಕದ ಸುಂಕ ಹೆಚ್ಚಳದ ನಂತರ, ಭಾರತವು ರಷ್ಯಾ ನೇತೃತ್ವದ ಯುರೇಷಿಯನ್ ಆರ್ಥಿಕ ಒಕ್ಕೂಟದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದವು ಭಾರತದ ಜವಳಿ ಮತ್ತು ಔಷಧ ವಲಯಕ್ಕೆ ಹೊಸ ಮಾರುಕಟ್ಟೆಗಳನ್ನು ತೆರೆಯಲಿದ್ದು, ಅಮೆರಿಕದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Read Full Story

03:46 PM (IST) Aug 21

ಸುತ್ತಲೂ ನಿರ್ಜನ ಪ್ರದೇಶ, ಗಿಡದ ಕೆಳಗೆ ವಿಹರಿಸ್ತಿದ್ದ ಜೋಡಿಯ ತುಂಟಾಟ ಕ್ಯಾಮೆರಾದಲ್ಲಿ ಸೆರೆ

ಕ್ಯಾಮೆರಾ ಕಂಡ ಕೂಡಲೇ ಜೋಡಿ ಆತಂಕಕ್ಕೊಳಗಾಗಿ ಬಟ್ಟೆ ಸರಿಪಡಿಸಿಕೊಂಡು ಪರಾರಿಯಾಗುವ ದೃಶ್ಯ ಸೆರೆಯಾಗಿದೆ. ಈ ವಿಡಿಯೋ ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story

02:29 PM (IST) Aug 21

10ನೇ ಕ್ಲಾಸ್ ವಿದ್ಯಾರ್ಥಿಯನ್ನ ಕೊಂದ 8ನೇ ಕ್ಲಾಸ್ ಹುಡುಗನ ಚಾಟ್ ಬಹಿರಂಗ

ಅಹಮದಾಬಾದ್‌ನ ಖಾಸಗಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಯನ್ನು ಥಳಿಸಿ ಕೊಲೆಗೈದಿದ್ದಾನೆ. ಘಟನೆಗೆ ಕೋಮು ಬಣ್ಣ ಬಳಿದಿದ್ದು, ಆರೋಪಿ ಮತ್ತು ಆತನ ಸ್ನೇಹಿತನ ನಡುವಿನ ಆಘಾತಕಾರಿ ಚಾಟ್ ಬಹಿರಂಗವಾಗಿದೆ.
Read Full Story

11:11 AM (IST) Aug 21

ಅಮೆರಿಕ, ಸೋಶಿಯಲ್‌ ಮೀಡಿಯಾದ ಪ್ರೀತಿಪಾತ್ರ ಜಡ್ಜ್‌ ಫ್ರಾಂಕ್‌ ಕ್ಯಾಪ್ರಿಯೋ ಕ್ಯಾನ್ಸರ್‌ನಿಂದ ನಿಧನ!

ಕ್ಯಾಟ್ ಇನ್ ಪ್ರಾವಿಡೆನ್ಸ್ ಕಾರ್ಯಕ್ರಮದ ಮೂಲಕ ಖ್ಯಾತಿ ಪಡೆದಿದ್ದ ನ್ಯಾಯಾಧೀಶ ಫ್ರಾಂಕ್ ಕ್ಯಾಪ್ರಿಯೊ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಅವರು, ಸಾಮಾಜಿಕ ಮಾಧ್ಯಮದಲ್ಲಿ ಪ್ರಾರ್ಥನೆ ಕೋರಿದ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆಳೆದಿದ್ದಾರೆ.
Read Full Story

08:49 AM (IST) Aug 21

ಪೋಷಕರ ವರ್ಕ್‌ ಫ್ರಮ್ ಹೋಮ್ ಮಿಮಿಕ್ ಮಾಡಿದ ಬಾಲಕ - ವೀಡಿಯೋ ಭಾರಿ ವೈರಲ್

ವರ್ಕ್‌ ಫ್ರಮ್‌ ಹೋಮ್‌ ಸಮಯದಲ್ಲಿ ಪೋಷಕರ ವರ್ತನೆಯನ್ನು ಅನುಕರಿಸುವ ಪುಟ್ಟ ಬಾಲಕನ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಲಕನ ವರ್ತನೆಗಳು ನೆಟ್ಟಿಗರನ್ನು ರಂಜಿಸಿದ್ದು, ಹಲವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.
Read Full Story

08:44 AM (IST) Aug 21

ಮುಸ್ಲಿಮೇತರ ಶಿಕ್ಷಣ ಸಂಸ್ಥೆಗೂ ಅಲ್ಪಸಂಖ್ಯಾತ ಸ್ಥಾನಮಾನ

ಉತ್ತರಾಖಂಡದಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಮಸೂದೆ 2025 ಅಂಗೀಕಾರವಾಗಿದ್ದು, ಮುಸ್ಲಿಮೇತರ ಸಮುದಾಯಗಳಿಗೂ ಶಿಕ್ಷಣ ಸೌಲಭ್ಯಗಳು ಲಭ್ಯವಾಗಲಿವೆ. ಈ ಮಸೂದೆಯು ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2016 ಮತ್ತು ಸರ್ಕಾರೇತರ ಅರೇಬಿಕ್ ಮತ್ತು ಪರ್ಷಿಯನ್ ಮದರಸಾ ಮಾನ್ಯತೆ ನಿಯಮಗಳು 2019 ಅನ್ನು ರದ್ದುಗೊಳಿಸುತ್ತದೆ.
Read Full Story

08:01 AM (IST) Aug 21

ಇಂದಿನ ಟಾಪ್ 5 ಸುದ್ದಿಗಳು - ದಲಿತರ ದುಡ್ಡು ಗ್ಯಾರಂಟಿಗೆ ಬಳಕೆ, ಆನ್‌ಲೈನ್‌ ಗೇಮಿಂಗ್‌ ಇನ್ನು ನಿಷೇಧ!

ಆನ್‌ಲೈನ್ ಗೇಮಿಂಗ್ ನಿಷೇಧ, ಎಸ್‌ಸಿ/ಎಸ್‌ಟಿ ಹಣ ಗ್ಯಾರಂಟಿಗೆ ಬಳಕೆ, ಪ್ರಧಾನಿ/ಸಿಎಂ ಜೈಲು ಶಿಕ್ಷೆಯಲ್ಲಿ ವಜಾ ಮಸೂದೆ, ರಷ್ಯಾದಿಂದ ತೈಲ ರಿಯಾಯಿತಿ, ಮತ್ತು ಆರೋಗ್ಯ ವಿಮೆಗೆ ಶೂನ್ಯ ಜಿಎಸ್‌ಟಿ ಪ್ರಸ್ತಾಪದಂತಹ ಪ್ರಮುಖ ಸುದ್ದಿಗಳನ್ನು ಒಳಗೊಂಡಿದೆ.
Read Full Story

07:47 AM (IST) Aug 21

ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ

ನೈಜ ಹಣಬಳಸಿ ಆಡುವ ಎಲ್ಲಾ ರೀತಿಯ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವ ಆನ್‌ಲೈನ್‌ ಗೇಮಿಂಗ್‌ ಉತ್ತೇಜನ ಮತ್ತು ನಿಯಂತ್ರಣ-2025 ವಿಧೇಯಕವು ಬುಧವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ.

 

Read Full Story

07:47 AM (IST) Aug 21

ಗುಂಡಿ ಬಿದ್ದ ಹೆದ್ದಾರಿಯಲ್ಲಿ ಸುಂಕ ವಸೂಲಾತಿ ಇಲ್ಲ: ಸುಪ್ರೀಂ ತೀರ್ಪು

‘ಅಪೂರ್ಣವಾಗಿರುವ, ಗುಂಡಿಗಳು ಬಿದ್ದಿರುವ ಅಥವಾ ಸಂಚರಿಸಲು ಸಾಧ್ಯವಾಗದಷ್ಟು ದಟ್ಟಣೆ ಇರುವ ಹೆದ್ದಾರಿಗಳಲ್ಲಿ ಟೋಲ್‌ ಕಟ್ಟುವಂತೆ ಪ್ರಯಾಣಿಕರನ್ನು ಒತ್ತಾಯಿಸುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.

 

Read Full Story

07:46 AM (IST) Aug 21

ಆರೋಗ್ಯ, ಜೀವ ವಿಮೆಗೆ ಶೂನ್ಯ ಜಿಎಸ್‌ಟಿಗೆ ಸರ್ಕಾರದ ಒಲವು

ಆರೋಗ್ಯ ಮತ್ತು ಜೀವ ವಿಮೆ ಪ್ರೀಮಿಯಂಗೆ ಪ್ರಸ್ತುತ ಇರುವ ಶೇ.18ರಷ್ಟು ಜಿಎಸ್ಟಿಯನ್ನು ಶೂನ್ಯಕ್ಕೆ ಇಳಿಸುವ ಕುರಿತು ಕೇಂದ್ರ ಸರ್ಕಾರ ಪ್ರಸ್ತಾಪ ಮಾಡಿದೆ.

 

Read Full Story

07:46 AM (IST) Aug 21

ಯುರೋಪ್‌ ನಾಯಕರ ಶಾಲೆ ಮಕ್ಕಳಂತೆ ಕೂರಿಸಿದ ಟ್ರಂಪ್‌ !

ರಷ್ಯಾ-ಉಕ್ರೇನ್‌ ಕದನ ವಿರಾಮ ಮಾತುಕತೆಗಾಗಿ ತಮ್ಮ ಗೃಹ ಕಚೇರಿ ಶ್ವೇತಭವನಕ್ಕೆ ಆಗಮಿಸಿದ್ದ ಉಕ್ರೇನ್‌ ಅಧ್ಯಕ್ಷ ಜೆಲೆನ್ಸ್ಕಿಮತ್ತು ಹಲವು ಯುರೋಪ್‌ ದೇಶಗಳ ಅಧ್ಯಕ್ಷರು ಮತ್ತು ಪ್ರಧಾನಿಗಳನ್ನು ತಮ್ಮ ಎದುರು ಅಮೆರಿಕ ಅಧ್ಯಕ್ಷ ಟ್ರಂಪ್‌ ಕೂರಿಸಿದ ರೀತಿ ಜಾಗತಿಕ ಮಟ್ಟದಲ್ಲಿ ಭಾರೀ ಟ್ರೋಲ್‌

 

Read Full Story

07:46 AM (IST) Aug 21

ಭಾರತ-ಚೀನಾ ಒಪ್ಪಂದ ನಡುವೆ ನೇಪಾಳ ಗಡಿ ಕ್ಯಾತೆ

ಭಾರತ-ಚೀನಾ ಐತಿಹಾಸಿಕ ಗಡಿ ವ್ಯಾಪಾರ ಪುನಾರಂಭಗೊಳಿಸುತ್ತಿದ್ದಂತೆ ಅತ್ತ ನೇಪಾಳ ಗಡಿ ತಗಾದೆ ತೆಗೆದಿದೆ. ಭಾರತ-ಚೀನಾ ನಡುವೆ 3 ಗಡಿ ಪ್ರದೇಶಗಳಲ್ಲಿ ಲೆಪುಲೇಖ್‌ ಪ್ರದೇಶವು ನೇಪಾಳದ ಗಡಿ ಭಾಗವೆಂದು ಅಲ್ಲಿನ ಸರ್ಕಾರ ಆಕ್ಷೇಪ

 

Read Full Story

07:45 AM (IST) Aug 21

ಟ್ರಂಪ್ ಬೆದರಿಕೆ ಇದ್ರೂ ಭಾರತಕ್ಕೆ ರಷ್ಯಾದಿಂದ ಶೇ.5 ತೈಲ ಡಿಸ್ಕೌಂಟ್!

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ಹಿನ್ನೆಲೆ ಕೆಲ ಕಾಲ ರಷ್ಯಾ ತೈಲ ಖರೀದಿ ಕಡಿತಗೊಳಿಸಿದ್ದ ಭಾರತದ ತೈಲ ಕಂಪನಿಗಳು ಮತ್ತೆ ರಷ್ಯಾದಿಂದ ತೈಲ ಖರೀದಿ ಪುನಾರಂಭ ಮಾಡಿವೆ.

 

Read Full Story

07:45 AM (IST) Aug 21

ಭಾರತದಲ್ಲಿನ ಶೇ.10 ಸಿಬ್ಬಂದಿಗೆ ಒರಾಕಲ್‌ ಕಂಪನಿ ಗೇಟ್‌ಪಾಸ್‌

ವಿದೇಶಗಳಲ್ಲಿ ಹುದ್ದೆ ಕಡಿತ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಸೂಚನೆ ಮತ್ತು ಒಪನ್ ಎಐ ಸಂಸ್ಥೆ ಜತೆಗಿನ ಒಪ್ಪಂದದ ಬೆನ್ನಲ್ಲೇ ವಿಶ್ವದ ಅತಿದೊಡ್ಡ ಸಾಫ್ಟವೇರ್‌ ಕಂಪನಿಗಳ ಪೈಕಿ ಒಂದಾದ ಒರಾಕಲ್‌, ಭಾರತದಲ್ಲಿನ ತನ್ನ ಒಟ್ಟು ಸಿಬ್ಬಂದಿಗಳ ಪೈಕಿ ಶೇ.10ರಷ್ಟು ಜನರನ್ನು ತೆಗೆದು ಹಾಕಲು ನಿರ್ಧರಿಸಿದೆ.

 

Read Full Story

07:44 AM (IST) Aug 21

ಜಿಮ್‌ನಲ್ಲಿ ಕಸ ಗುಡಿಸುತ್ತಿದ್ದ ವ್ಯಕ್ತಿ ಈಗ ಸ್ಥಳೀಯ ಬಾಡಿ ಬಿಲ್ಡಿಂಗ್‌ನಲ್ಲಿ ಚಾಂಪಿಯನ್‌!

ಮನಸ್ಸಿದ್ದರೆ ಮಾರ್ಗ ಎಂಬುದಕ್ಕೆ ಇಲ್ಲಿನ ಘಟನೆಯೊಂದು ಉದಾಹರಣೆಯಾಗಿದೆ. ಜಿಮ್‌ಗಳಲ್ಲಿ ಕಸ ಗುಡಿಸಿ, ಸ್ವಚ್ಛತೆ ಮಾಡುತ್ತಿದ್ದ ವ್ಯಕ್ತಿಯೋರ್ವ ತನ್ನ ಪರಿಶ್ರಮದಿಂದ ಸ್ಥಳೀಯ ಬಾಡಿ ಬಿಲ್ಡಿಂಗ್‌ ಸ್ಪರ್ಧೆಯಲ್ಲಿ ವಿಜೇತನಾಗಿದ್ದಾನೆ.

 

Read Full Story

07:44 AM (IST) Aug 21

ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ

5 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಗೆ ಗುರಿಯಾಗುವ ಆರೋಪದ ಪ್ರಕರಣದಲ್ಲಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರ ವಜಾಕ್ಕೆ ಅವಕಾಶ ಕಲ್ಪಿಸುವ ಮಹತ್ವದ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಲೋಕಸಭೆಯಲ್ಲಿ ಮಂಡಿಸಿದರು.

 

Read Full Story

07:44 AM (IST) Aug 21

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.

 

Read Full Story

07:43 AM (IST) Aug 21

ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌

ಪ್ರಧಾನಿ ಅಥವಾ ಮುಖ್ಯಮಂತ್ರಿಯಾದವರು ಜೈಲಿನಿಂದಲೇ ಅಧಿಕಾರ ನಡೆಸಬೇಕೇ? ಬೇಡವೇ ಎಂಬುದರ ಬಗ್ಗೆ ದೇಶದ ಜನತೆ ತೀರ್ಮಾನಿಸಬೇಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

 

Read Full Story

07:43 AM (IST) Aug 21

AI ಸತ್ತವರನ್ನು ಮಾತನಾಡುವಂತೆ ಮಾಡುತ್ತಿದೆಯೇ? ಈ ಹೊಸ ತಂತ್ರಜ್ಞಾನ ನಿಮ್ಮನ್ನು ಬೆಚ್ಚಿಬೀಳಿಸುತ್ತೆ!

ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಸತ್ತವರ ಧ್ವನಿಯನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯವನ್ನು ಪಡೆದಿದೆ. ಈ 'Creepy AI' ಸಾಫ್ಟ್‌ವೇರ್ ಮೂಲಕ ನಿಧನರಾದವರೊಂದಿಗೆ ಮಾತನಾಡಬಹುದಾದರೂ, ಇದರ ದೀರ್ಘಕಾಲೀನ ಪರಿಣಾಮಗಳು ಮತ್ತು ಗೌಪ್ಯತೆಯ ಸಮಸ್ಯೆಗಳು ಚಿಂತೆಯನ್ನು ಹುಟ್ಟುಹಾಕಿವೆ.

 

Read Full Story

More Trending News