ಬೆಂಗಳೂರು (ಜುಲೈ 25): ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಶುಕ್ರವಾರ 4,078 ದಿನಗಳು ಪೂರ್ಣಗೊಳ್ಳುತ್ತಿದ್ದು, 4,077 ದಿನಗಳ ಕಾಲ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ದಾಖಲೆಯನ್ನು ಮುರಿಯಲಿದ್ದಾರೆ. 1966ರ ಜ.24ರಿಂದ 1977ರ ಮಾ.24ರವರೆಗೆ ಇಂದಿರಾ ಗಾಂಧಿ ನಿರಂತರವಾಗಿ ಪ್ರಧಾನಿ ಹುದ್ದೆಯಲ್ಲಿದ್ದರು. ಅತಿ ದೀರ್ಘಕಾಲ ಸೇವೆ ಸಲ್ಲಿಸಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಆ ಹೆಗ್ಗಳಿಕೆ ಮೋದಿಯವರ ಪಾಲಾಗಲಿದೆ. ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
09:28 PM (IST) Jul 25
06:44 PM (IST) Jul 25
06:14 PM (IST) Jul 25
ಮುಂಬೈನಲ್ಲಿ ನಡೆದ ಘಟನೆಯಲ್ಲಿ ತಾಯಿ ಮಗುವನ್ನು ಶೂ ರ್ಯಾಕ್ ಮೇಲೆ ಕೂರಿಸಿದ್ದ ವೇಳೆ ಕಿಟಕಿಯಿಂದ ಬಿದ್ದು ಮಗು ಸಾವನ್ನಪ್ಪಿದೆ. ಮತ್ತೊಂದು ಪ್ರಕರಣದಲ್ಲಿ ವಾಟರ್ ಪಾರ್ಕ್ ನಲ್ಲಿ ಅಪ್ಪನ ತೋಳಿನಿಂದ ಜಾರಿ ಬಿದ್ದ ಮಗುವೊಂದು ಸಾವನ್ನಪ್ಪಿದೆ.
05:26 PM (IST) Jul 25
ಮಹಾರಾಷ್ಟ್ರದ ಅಕೋಲಾದಲ್ಲಿ ಭಾರೀ ಮಳೆಯಿಂದಾಗಿ ಶತಮಾನಗಳಷ್ಟು ಹಳೆಯದಾದ ಬಾಲಾಪುರ ಕೋಟೆ ಕುಸಿದಿದೆ. ಮಳೆಯಿಂದಾಗಿ ದೇಶದ ಹಲವು ಭಾಗಗಳಲ್ಲಿ ಗುಡ್ಡ ಕುಸಿತ ಸೇರಿದಂತೆ ಹಲವು ಅವಾಂತರಗಳು ನಡೆದಿವೆ.
04:12 PM (IST) Jul 25
03:43 PM (IST) Jul 25
ಹಿತವಾದ ರೊಮ್ಯಾಂಟಿಕ್ ಹಾಸ್ಯಗಳಿಂದ ಹಿಡಿದು ಅದ್ಭುತವಾದ ಆಕ್ಷನ್ ಥ್ರಿಲ್ಲರ್ಗಳವರೆಗೆ ಎಲ್ಲಾ ಸಿನಿಮಾಗಳನ್ನೂ ನೀವು ರೆಂಟ್ನಲ್ಲಿ ಬಹಳ ಸುಲಭವಾಗಿ ವೀಕ್ಷಿಸಬಹುದು.
03:19 PM (IST) Jul 25
ಪೀಠಿಕೆಯಲ್ಲಿ ಎರಡು ಪದಗಳನ್ನು ಪರಿಚಯಿಸುವ 42 ನೇ ತಿದ್ದುಪಡಿಯನ್ನು ಪ್ರಶ್ನಿಸಿದ ಸವಾಲನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ನ ನವೆಂಬರ್ 2024 ರ ತೀರ್ಪನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಉಲ್ಲೇಖಿಸಿದರು.
02:55 PM (IST) Jul 25
ಕನಿಷ್ಠ ವೇತನ ಮಟ್ಟವು ತಿಂಗಳಿಗೆ ₹18,000 ರಿಂದ ₹30,000 ಕ್ಕೆ ಏರಿಕೆಯಾಗಬಹುದು ಎಂದು ಕೋಟಕ್ ಮುನ್ಸೂಚನೆ ನೀಡಿದೆ, ಇದು ಸುಮಾರು 1.8 ರಷ್ಟು ಫಿಟ್ಮೆಂಟ್ ಅಂಶ ಮತ್ತು ಸುಮಾರು 13% ರಷ್ಟು ನಿಜವಾದ ವೇತನ ಹೆಚ್ಚಳವನ್ನು ಸೂಚಿಸುತ್ತದೆ.
01:59 PM (IST) Jul 25
ITR Filing Last Date 2025: ವೈಯಕ್ತಿಕ ಮತ್ತು ಹಿಂದೂ ಕುಟುಂಬಗಳಿಗೆ (HUF) ಆದಾಯ ತೆರಿಗೆ ಇಲಾಖೆಯು 2024-25ನೇ ಹಣಕಾಸು ವರ್ಷದ ಐಟಿಆರ್ ಸಲ್ಲಿಕೆಯ ಗಡುವನ್ನು ಸೆಪ್ಟೆಂಬರ್ 15, 2025 ರವರೆಗೆ ವಿಸ್ತರಿಸಿದೆ.
01:16 PM (IST) Jul 25
ಇಟಲಿಯ ಬ್ರೆಸಿಕಾದಲ್ಲಿ ಪುಟ್ಟ ವಿಮಾನವೊಂದು ತುರ್ತು ಲ್ಯಾಂಡಿಂಗ್ಗೆ ಯತ್ನಿಸುತ್ತಿದ್ದ ವೇಳೆ ಹೆದ್ದಾರಿಯಲ್ಲೇ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
12:58 PM (IST) Jul 25
ಅಕ್ರಮ ಸಂಬಂಧಗಳು ಹೆಚ್ಚುತ್ತಿರುವ ಇತ್ತೀಚಿನ ದಿನಗಳಲ್ಲಿ ಭಾರತದ ಮೋಸದ ರಾಜಧಾನಿಯ ಪಟ್ಟಿ ಬಿಡುಗಡೆಯಾಗಿದೆ. ಬೆಂಗಳೂರಿಗೆ ಎಷ್ಟನೇ ಸ್ಥಾನ? ಶಾಕಿಂಗ್ ವರದಿ ಬಿಡುಗಡೆ
12:04 PM (IST) Jul 25
ಗಡಿಯಲ್ಲಿರುವ ಹಿಂದೂ ದೇವಸ್ಥಾನದ ಮೇಲಿನ ಅಧಿಕಾರದ ವಿಚಾರವಾಗಿ ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಸಂಘರ್ಷ ವಿಕೋಪಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಆ ದೇಗುಲದ ಹಿನ್ನೆಲೆಯ ಬಗ್ಗೆ ಇಲ್ಲಿದೆ ಮಾಹಿತಿ
11:53 AM (IST) Jul 25
ಕೇಂದ್ರ ಸರ್ಕಾರವು ಖಾಸಗಿ ವಾಹನಗಳಿಗೆ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ವ್ಯವಸ್ಥೆಯನ್ನು ಆಗಸ್ಟ್ 15 ರಿಂದ ಜಾರಿಗೆ ತರುತ್ತಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವವರಿಗೆ ಟೋಲ್ ಶುಲ್ಕದಲ್ಲಿ ಗಣನೀಯ ರಿಯಾಯಿತಿ ದೊರೆಯಲಿದೆ.
11:25 AM (IST) Jul 25
10:56 AM (IST) Jul 25
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸೋನಿಯಾ ಗಾಂಧಿಯವರ ಪತ್ರವನ್ನು ತಮ್ಮ "ಆಸ್ಕರ್, ನೊಬೆಲ್ ಮತ್ತು ಜೀವಮಾನ ಸಾಧನೆ ಪ್ರಶಸ್ತಿ" ಎಂದು ಕರೆದಿದ್ದು, ಇದು ವಿಪಕ್ಷ ಬಿಆರ್ಎಸ್ನಿಂದ ಅಪಹಾಸ್ಯಕ್ಕೆ ಕಾರಣವಾಗಿದೆ.
10:09 AM (IST) Jul 25
ರಾಜಸ್ಥಾನದ ಝಲಾವರ್ನಲ್ಲಿ ಶಾಲಾ ಕಟ್ಟಡ ಕುಸಿತದಿಂದ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
07:54 AM (IST) Jul 25
ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಶುಕ್ರವಾರ 4,078 ದಿನಗಳು ಪೂರ್ಣಗೊಳ್ಳುತ್ತಿದ್ದು, 4,077 ದಿನಗಳ ಕಾಲ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ದಾಖಲೆಯನ್ನು ಮುರಿಯಲಿದ್ದಾರೆ.
07:54 AM (IST) Jul 25
ಕಡಲ ಕಿನಾರೆಯ ಪುಟ್ಟ ರಾಜ್ಯವನ್ನು ಸುಂದರವಾಗಿ ಕಟ್ಟಿ ಬೆಳೆಸಿದ ಕನ್ನಡಿಗರು ಇನ್ನು ಮುಂದೆ ಇಲ್ಲಿ ಯಾವುದೇ ವಾಹನ ಖರೀದಿಸುವಂತಿಲ್ಲ!
07:54 AM (IST) Jul 25
ಮಹದಾಯಿ ವಿಷಯ ಕುರಿತು ಗೋವಾ ಸಿಎಂ ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆ ಭಾರತ ಸರ್ಕಾರದ ಹೇಳಿಕೆಯಲ್ಲ. ಅದು ಅವರ ವೈಯುಕ್ತಿಕ ಹೇಳಿಕೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
07:53 AM (IST) Jul 25
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ 6 ಆರೋಪಿಗಳಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್ನ ತೀರ್ಪಿನ ಒಂದೇ ವಾರದಲ್ಲಿ ಎರಡನೇ ಬಾರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್
07:53 AM (IST) Jul 25
ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಪ್ರಕರಣ ಇದೀಗ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಚುನಾವಣಾ ಆಯೋಗದ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದೆ.
07:52 AM (IST) Jul 25
ಆಸ್ಟ್ರೇಲಿಯಾದಲ್ಲಿ ಭಾರತೀಯರು ಮತ್ತು ಹಿಂದೂಗಳ ಮೇಲಿನ ಜನಾಂಗೀಯ ಹಿಂಸೆ ಮುಂದುವರಿದಿದ್ದು, ಗುರುವಾರ ಹಿಂದೂ ದೇಗುಲದ ಮೇಲೆ ಅನಾಮಿಕರು ಜನಾಂಗೀಯ ನಿಂದನೆಯ ಅಸಭ್ಯ ಪದಗಳನ್ನು ಬರೆದು ವಿಕೃತಿ ಮೆರೆದಿದ್ದಾರೆ.
07:52 AM (IST) Jul 25
ಪರಸ್ಪರ ಮುಕ್ತ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವ ಐತಿಹಾಸಿಕ ಒಪ್ಪಂದಕ್ಕೆ ಭಾರತ ಮತ್ತು ಬ್ರಿಟನ್, ಗುರುವಾರ ಇಲ್ಲಿ ಸಹಿ ಹಾಕಿವೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೇರ್ ಸ್ಟಾರ್ಮರ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಅಂಕಿತ ಬಿದ್ದಿದೆ.
07:52 AM (IST) Jul 25
ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ರಾಜೀನಾಮೆ ದಿಢೀರ್ ಎಂದು ಆಗಿದ್ದಲ್ಲ. ಸರ್ಕಾರ ಮತ್ತು ಧನಕರ್ ನಡುವೆ ಸುದೀರ್ಘ ಸಮಯದಿಂದ ನಾನಾ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಮೂಡಿತ್ತು.
07:51 AM (IST) Jul 25
ಬೆಳಗ್ಗೆದ್ದು ಹುರುಪಲ್ಲಿ ಕೆಲಸಕ್ಕೆ ಹಾಜರಾದ ಡ್ರೈವರ್ಗಳು ಎಂದಿನಂತೆ ಮದ್ಯಪತ್ತೆ ಪರೀಕ್ಷೆ ಮಾಡಿಸಿಕೊಂಡಾಗ, ಆ ಯಂತ್ರವು ಅವರನ್ನು ಪಾನಮತ್ತರೆಂದು ಘೋಷಿಸಿದ ಘಟನೆ ಇಲ್ಲಿನ ಪಂಡಾಲಂ ಡಿಪೋದಲ್ಲಿ ನಡೆದಿದೆ. ಆದರೆ ಅಸಲಿಗೆ ಅವರ್ಯಾರೂ ಮದ್ಯವನ್ನೇ ಸೇವಿಸಿರಲಿಲ್ಲ.
07:51 AM (IST) Jul 25
ಕಳೆದ ಕೆಲವು ವರ್ಷಗಳಿಂದ ಹಲವು ವಂಚನೆ ಪ್ರಕರಣಗಳಲ್ಲಿ ಗಂಭೀರ ಆರೋಪ ಎದುರಿಸುತ್ತಿರುವ ಉದ್ಯಮಿ ಅನಿಲ್ ಅಂಬಾನಿ, ಅವರು ಎಸಗಿರಬಹುದಾದ ಅಕ್ರಮದ ಮೊತ್ತ 14000 ಕೋಟಿ ರು.ಗೂ ಹೆಚ್ಚಿರಬಹುದು ಎಂದು ವರದಿಯೊಂದು ತಿಳಿಸಿದೆ.
07:50 AM (IST) Jul 25
2006ರ ಮುಂಬೈ ರೈಲು ಸ್ಫೋಟ ಪ್ರಕರಣದ 12 ಆರೋಪಿಗಳ ಖುಲಾಸೆಗೆ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಿಡುಗಡೆಯಾದ ಆರೋಪಿಗಳನ್ನು ಪುನಃ ಬಂಧಿಸುವ ಅಗತ್ಯವಿಲ್ಲ ಎಂದೂ ಸ್ಪಷ್ಟಪಡಿಸಿದೆ.