LIVE NOW
Published : Dec 26, 2025, 07:50 AM ISTUpdated : Dec 26, 2025, 11:08 PM IST

India News Live: ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ

ಸಾರಾಂಶ

ನವದೆಹಲಿ (ಡಿ.26): ದೀಪು ಚಂದ್ರದಾಸ್ ಎಂಬ ಹಿಂದು ವ್ಯಕ್ತಿಯನ್ನು ಹ*ತ್ಯೆಗೈದು, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ಭೀಕರ ಘಟನೆ ಮಾಸುವ ಮುನ್ನವೇ ಬಾಂಗ್ಲಾದೇಶ ದಲ್ಲಿ ಮತ್ತೊಬ್ಬ ಹಿಂದು ಯುವಕನನ್ನು ಗುಂಪೊಂ ದು ಹತ್ಯೆಗೈದಿದೆ. ಮೃತ ವ್ಯಕ್ತಿಯನ್ನು ಅಮೃತ್‌ ಮಂಡಲ್ ಗುರುತಿಸಲಾಗಿದೆ. ಕಳೆದ 5 ದಿನಗಳಲ್ಲಿ ಮೂರು ಕಡೆ 7 ಹಿಂದುಗಳ ಮನೆಗೆ ಬೆಂಕಿ ಹಾಕಲಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

 

11:08 PM (IST) Dec 26

ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ

ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ, ಜನವರಿ 2026ರಿಂದ ರೆನಾಲ್ಟ್ ತನ್ನ ಎಲ್ಲಾ ಕಾರುಗಳ ಬೆಲೆ ಏರಿಕೆ ಮಾಡುತ್ತಿದೆ. ಕಾರು ಖರೀದಿಗೆ ಪ್ಲಾನ್ ಮಾಡಿದ್ದರೆ 31ರ ಒಳಗೆ ಬುಕ್ ಮಾಡಿ

Read Full Story

09:29 PM (IST) Dec 26

ಗೋ ಟು ಹೆಲ್, ಗೆಳತಿಯೊಂದಿಗೆ ಡಿನ್ನರ್ ಡೇಟ್ ವೇಳೆ ಫ್ಯಾನ್ಸ್ ಬೈಗುಳ, ಹಾರ್ದಿಕ್ ಪಾಂಡ್ಯ ಮಾಡಿದ್ದೇನು?

ಗೆಳತಿ ಮಹೆಕಾ ಶರ್ಮಾ ಜೊತೆ ಡಿನ್ನರ್ ಡೇಟ್ ತೆರಳಿದ್ದ ಹಾರ್ದಿಕ್ ಪಾಂಡ್ಯಗೆ ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಇದರ ನಡುವೆ ಅಭಿಯಾನಿಯೊಬ್ಬ ಗೋ ಟು ಹೆಲ್ ಎಂದು ಅವಾಚ್ಯವಾಗಿ ಬೈದಿದ್ದಾನೆ. ಈ ವೇಳೆ ಗೆಳತಿಯನ್ನು ಕಾರಿನ ಒಳಬಿಟ್ಟು ಹಾರ್ದಿಕ್ ಪಾಂಡ್ಯ ಮಾಡಿದ್ದೇನು?

Read Full Story

08:39 PM (IST) Dec 26

ಎದ್ದೇಳಿ ಹಿಂದೂಗಳೇ ಮೌನ ನಿಮ್ಮನ್ನು ರಕ್ಷಿಸುವುದಿಲ್ಲ, ಬಾಂಗ್ಲಾದೇಶ ಘಟನೆ ಖಂಡಿಸಿ ನಟಿ ಕಾಜಲ್ ಎಚ್ಚರಿಕೆ

ಎದ್ದೇಳಿ ಹಿಂದೂಗಳೇ, ಇದು ನಟಿ ಕಾಜಲ್ ಅಗರ್ವಾಲ್ ಸನಾತನಿಗಳಿಗೆ ನೀಡಿದ ಕರೆ.ನೀವು ಮೌನವಾಗಿದ್ದರೆ ಅದರಿಂದ ರಕ್ಷಣೆ ಸಿಗುವುದಿಲ್ಲ. ಬಾಂಗ್ಲಾದೇಶ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ನಟಿ ಮಹತ್ವದ ಎಚ್ಚರಿಕೆ ನೀಡಿದ್ದಾರೆ.

Read Full Story

07:43 PM (IST) Dec 26

ಆಪರೇಷನ್ ಸಿಂದೂರ್ ವೇಳೆ ಯೋಧರಿಗೆ ನೆರವಾದ ಬಾಲಕನಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ 2026

ಆಪರೇಷನ್ ಸಿಂದೂರ್ ವೇಳೆ ಭಾರತ-ಪಾಕ್ ಗಡಿಯಲ್ಲಿ ಯೋಧರಿಗೆ ನೆರವಾದ 10 ವರ್ಷದ ಬಾಲಕ ಶ್ರವಣ್ ಸಿಂಗ್‌ಗೆ 2026ನೇ ಸಾಲಿನ ಪ್ರಧಾನಮಂತ್ರಿ ಬಾಲ ಪುರಸ್ಕಾರ ಲಭಿಸಿದೆ. ಅವರ ಅಸಾಧಾರಣ ಧೈರ್ಯ ಮತ್ತು ದೇಶಪ್ರೇಮವನ್ನು ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.

Read Full Story

07:37 PM (IST) Dec 26

ಸಿರಿಯಾ - ಶುಕ್ರವಾರದ ನಮಾಜ್ ವೇಳೆ ಮಸೀದಿಯಲ್ಲಿ ಸ್ಫೋಟ, 8 ಸಾವು, 18 ಮಂದಿಗೆ ಗಾಯ, ಎಲ್ಲೆಡೆ ಆಂಬ್ಯುಲೆನ್ಸ್ ಸೈರನ್‌ಗಳದ್ದೇ ಸದ್ದು!

Syria Mosque Bombing During Friday Prayers ಸಿರಿಯಾದ ಹೋಮ್ಸ್ ನಗರದಲ್ಲಿ ಶುಕ್ರವಾರದ ನಮಾಜ್ ವೇಳೆ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿ 18 ಮಂದಿ ಗಾಯಗೊಂಡಿದ್ದಾರೆ. ಮಸೀದಿಯೊಳಗೆ ಇರಿಸಲಾಗಿದ್ದ ಸ್ಫೋಟಕದಿಂದ ಈ ದುರ್ಘಟನೆ ನಡೆದಿದೆ.

Read Full Story

06:52 PM (IST) Dec 26

ಭಾರತದಲ್ಲಿ ಮೊಳಗಿದ ಬಾಯ್ಕಾಟ್ ಥಾಯ್ಲೆಂಡ್ ಕೂಗು, ವಿಷ್ಣಮೂರ್ತಿ ಧ್ವಂಸಕ್ಕೆ ಆಕ್ರೋಶ

ಭಾರತದಲ್ಲಿ ಮೊಳಗಿದ ಬಾಯ್ಕಾಟ್ ಥಾಯ್ಲೆಂಡ್ ಕೂಗು, ವಿಷ್ಣಮೂರ್ತಿ ಧ್ವಂಸಕ್ಕೆ ಆಕ್ರೋಶ, ಕಾಂಬೋಡಿಯಾ ಹಾಗೂ ಥಾಯ್ಲೆಂಡ್ ನಡುವಿನ ಗಡಿ ಸಮಸ್ಯೆ ತೀವ್ರಗೊಂಡಿದೆ. ಇದೇ ವೇಳೆ ಭಾರತದಲ್ಲಿ ಥಾಯ್ಲೆಂಡ್ ಪ್ರವಾಸ ಬಹಿಷ್ಕರಿಸಲು ಅಭಿಯಾನ ಶುರುವಾಗಿದೆ.

 

Read Full Story

06:50 PM (IST) Dec 26

ಚಳಿಗಾಲದಲ್ಲಿ ಹೆಂಡ್ತಿ ಕೈ ಕಾಲು ಕೋಲ್ಡ್​ ಆಗಿದ್ರೆ ಗಂಡನದ್ದು ಬೆಚ್ಚಗಿರತ್ತೆ ಕಾರಣ ಮಾತ್ರ ಬಲು ಕುತೂಹಲ

ಚಳಿಗಾಲದಲ್ಲಿ ಮಹಿಳೆಯರ ಪಾದಗಳು ಪುರುಷರಿಗಿಂತ ಹೆಚ್ಚಾಗಿ ತಣ್ಣಗಾಗಲು ವೈಜ್ಞಾನಿಕ ಕಾರಣಗಳಿವೆ. ಈಸ್ಟ್ರೊಜೆನ್ ಹಾರ್ಮೋನ್, ಕಡಿಮೆ ಸ್ನಾಯು ದ್ರವ್ಯರಾಶಿ ಮತ್ತು ದೇಹದ ಪ್ರಮುಖ ಅಂಗಗಳಿಗೆ ರಕ್ತವನ್ನು ಕೇಂದ್ರೀಕರಿಸುವ ಶಾರೀರಿಕ ಪ್ರವೃತ್ತಿಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. 

Read Full Story

06:33 PM (IST) Dec 26

ಕ್ಯಾನ್ಸರ್ ಪೀಡಿತರ ಆರೈಕೆಗಾಗಿ ಜೀವಮಾನದ ಉಳಿಕೆಯನ್ನೆಲ್ಲಾ ಎಮ್ಸ್‌ಗೆ ನೀಡಿದ ಹಿರಿಯ ಸ್ತ್ರೀರೋಗ ತಜ್ಞೆ

ಶತಾಯುಷಿ ಸ್ತ್ರೀ ರೋಗ ತಜ್ಞೆ ಡಾ. ಲಕ್ಷ್ಮಿಬಾಯಿ ಅವರು ತಮ್ಮ ಜೀವಮಾನದ ಉಳಿತಾಯವಾದ ಸುಮಾರು 3.4 ಕೋಟಿ ರೂಪಾಯಿಗಳನ್ನು ಭುವನೇಶ್ವರದ ಏಮ್ಸ್‌ಗೆ ದಾನ ಮಾಡಿದ್ದಾರೆ. ಅವರ ಈ ಮಹಾನ್ ಕಾರ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read Full Story

06:30 PM (IST) Dec 26

ಇಶಾನ್ ಕಿಶನ್ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಿಂದ ಹೊರಬಿದ್ದಿದ್ದೇಕೆ?

ಬೆಂಗಳೂರು: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಎರಡನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ ವಿಜಯ್ ಹಜಾರೆ ಟೂರ್ನಿಯ ಎರಡನೇ ಪಂದ್ಯಕ್ಕೆ ಅಲಭ್ಯರಾಗಿದ್ದು ಏಕೆ ಎನ್ನುವುದನ್ನು ನೋಡೋಣ ಬನ್ನಿ.

 

Read Full Story

06:19 PM (IST) Dec 26

ಪತಿ-ಪತ್ನಿಯ ಅಕ್ರಮ ಸಾಬೀತು ಮಾಡಲಾಗದೇ ಕಷ್ಟಪಡುವವರ ನೆರವಿಗೆ ಹೈಕೋರ್ಟ್​ - ಮಹತ್ವದ ತೀರ್ಪು ಪ್ರಕಟ

ಪತ್ನಿಯ ಅಕ್ರಮ ಸಂಬಂಧವನ್ನು ಸಾಬೀತುಪಡಿಸಲು ಪತಿ ನೀಡಿದ ಮೊಬೈಲ್ ಫೋಟೋಗಳನ್ನು ಸಾಕ್ಷ್ಯವಾಗಿ ಪರಿಗಣಿಸಿ ಮಧ್ಯಪ್ರದೇಶ ಹೈಕೋರ್ಟ್ ವಿಚ್ಛೇದನವನ್ನು ಎತ್ತಿಹಿಡಿದಿದೆ. ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65B ವಿಚ್ಛೇದನ ಪ್ರಕರಣಗಳಿಗೆ ಕಟ್ಟುನಿಟ್ಟಾಗಿ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Read Full Story

06:10 PM (IST) Dec 26

ವಿಧಾನಸಭೆ, ಲೋಕಸಭೆ ಮೀರಿಸಿದ ಪಾಲಿಕೆ ಎಲೆಕ್ಷನ್ , ಗೆದ್ರೆ ಥಾಯ್ಲೆಂಡ್ ಟ್ರಿಪ್, ಕಾರು ಸೇರಿ ಭರ್ಜರಿ ಭರವಸೆ

ವಿಧಾನಸಭೆ, ಲೋಕಸಭೆ ಮೀರಿಸಿದ ಪಾಲಿಕೆ ಎಲೆಕ್ಷನ್ , ಗೆದ್ರೆ ಥಾಯ್ಲೆಂಡ್ ಟ್ರಿಪ್, ಕಾರು ಸೇರಿ ಭರ್ಜರಿ ಭರವಸೆ ನೀಡಲಾಗಿದೆ. 1,100 ಚದರ ಅಡಿ ನಿವೇಷನ, ಚಿನ್ನದ ಸೇರಿ ಸೇರಿದಂತೆ ಹಲವು ಆಫರ್ ನೀಡಲಾಗಿದೆ. ಇದು ಭಾರತದ ಚುನಾವಣೆ ವ್ಯವಸ್ಥೆಯನ್ನು ಪ್ರಶ್ನಿಸಿದೆ.

 

Read Full Story

06:05 PM (IST) Dec 26

20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಧಾನ, ಇಬ್ಬರು ಮಕ್ಕಳಿಗೆ ಮರಣೋತ್ತರ ಪ್ರಶಸ್ತಿ ಕೊಟ್ಟಿದ್ಯಾಕೆ?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 20 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದರು. ಇದರಲ್ಲಿ, ಬೇರೆಯವರ ಪ್ರಾಣ ಉಳಿಸಲು ಹೋಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಬಿಹಾರದ ಕಮಲೇಶ್ ಕುಮಾರ್ ಮತ್ತು ತಮಿಳುನಾಡಿನ ವ್ಯೋಮ ಪ್ರಿಯಾ ಅವರಿಗೆ ಮರಣೋತ್ತರವಾಗಿ ಈ ಗೌರವ ಸಂದಿದೆ.  

Read Full Story

05:50 PM (IST) Dec 26

2025ರಲ್ಲಿ ಬ್ರೇಕ್ ಆದ ಕ್ರಿಕೆಟ್ ಜಗತ್ತಿನ ಅಪರೂಪದ ಟಾಪ್-5 ದಾಖಲೆಗಳಿವು!

ಬೆಂಗಳೂರು: ಕ್ರಿಕೆಟ್‌ನಲ್ಲಿ ಪ್ರತಿದಿನ ಒಂದಲ್ಲಾ ಒಂದು ದಾಖಲೆಗಳು ನಿರ್ಮಾಣವಾಗುತ್ತವೇ ಹಾಗೆಯೇ ಅಪರೂಪದ ದಾಖಲೆಗಳು ಬ್ರೇಕ್ ಆಗುತ್ತವೆ. ಬನ್ನಿ ನಾವಿಂದು 2025ರಲ್ಲಿ ದಾಖಲಾದ ಅಪರೂಪದಲ್ಲೇ ಅಪರೂಪದ ಟಾಪ್-5 ದಾಖಲೆಗಳು ಯಾವುವು ಎನ್ನುವುದನ್ನು ನೋಡೋಣ.

 

Read Full Story

05:30 PM (IST) Dec 26

ಸ್ವಂತ ಉದ್ಯೋಗಿಗೆ ಸಾಲ ಕೊಡದ ದೇಶದ ಪ್ರತಿಷ್ಠಿತ ಬ್ಯಾಂಕ್ - ಚಿಕಿತ್ಸೆ ನೀಡಲಾಗದೇ ಕ್ಯಾನ್ಸರ್ ಪೀಡಿತ ತಾಯಿ ಸಾವು

ವಾರಣಾಸಿಯ ಎಸ್‌ಬಿಐ  ಬ್ಯಾಂಕ್ ಉದ್ಯೋಗಿಯೊಬ್ಬರಿಗೆ, ಅನಾರೋಗ್ಯಪೀಡಿತ ತಾಯಿಯ ಚಿಕಿತ್ಸೆಗಾಗಿ ಬ್ಯಾಂಕ್ ಸಾಲ ನಿರಾಕರಿಸಿದ್ದಲ್ಲದೇ ಅವರ ಸಂಬಳವನ್ನು ತಡೆ ಹಿಡಿದಿದೆ. ಇದರಿಂದಾಗಿ ಚಿಕಿತ್ಸೆ ಸಿಗದೆ ಅವರ ತಾಯಿ ಮೃತಪಟ್ಟಿದ್ದು, ಈ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Read Full Story

05:11 PM (IST) Dec 26

ಎಲ್ಲಾ ದಾನ ಮಾಡಿ ಡಿ.25ಕ್ಕೆ ಜಗತ್ತು ಅಂತ್ಯ, ಪುಂಗಿ ಬಿಟ್ಟು ₹80 ಲಕ್ಷ ಕಾರು ಖರೀದಿಸಿದ ಘಾನಾ ಪ್ರವಾದಿ

ಎಲ್ಲಾ ದಾನ ಮಾಡಿ ಡಿ.25ಕ್ಕೆ ಜಗತ್ತು ಅಂತ್ಯ, ಪುಂಗಿ ಬಿಟ್ಟು ₹80 ಲಕ್ಷ ಕಾರು ಖರೀದಿಸಿದ ಘಾನಾ ಪ್ರವಾದಿ, ತಾನು ಹೇಳಿದ್ದು ಸುಳ್ಳಾದ ಬೆನ್ನಲ್ಲೇ ಮತ್ತೊಂದು ಎಚ್ಚರಿಕೆ ನೀಡಿದ್ದಾನೆ. ಪ್ರವಾಹ ರದ್ದಾಗಿಲ್ಲ, ವಿಳಂಬವಾಗಿದೆ.ನನಗೆ ಇನ್ನೊಂದು ಸಂದೇಶ ಬಂದಿದೆ ಎಂದಿದ್ದಾನೆ.

 

Read Full Story

04:33 PM (IST) Dec 26

4.7 ಮಹಿಳಾಸ್ನೇಹಿ ರೇಟಿಂಗ್ ಹೊಂದಿದ್ದ ಕಂಪನಿ ಸಿಇಒನಿಂದಲೇ ಉದ್ಯೋಗಿಯ ಗ್ಯಾಂಗ್‌ರೇ*ಪ್ - ಕೇಸ್‌ನಲ್ಲಿ ಮಹಿಳೆಯೂ ಭಾಗಿ

ಚಲಿಸುವ ಕಾರಿನಲ್ಲೇ ಡ್ರಾಪ್‌ ನೆಪದಲ್ಲಿ ಮಹಿಳಾ ಮ್ಯಾನೇಜರ್ ಮೇಲೆ ಕಂಪನಿ ಸಿಇಒ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಈಗ ಸಾಕಷ್ಟು ಸಂಚಲನ ಸೃಷ್ಟಿಸಿದ್ದು, ಪೊಲೀಸರ ತನಿಖೆಯಿಂದ ಹಲವು ವಿಚಾರಗಳು ಬೆಳಕಿಗೆ ಬಂದಿವೆ.

Read Full Story

04:31 PM (IST) Dec 26

ಲ್ಯಾಪ್‌ಟಾಪ್ ಬ್ಯಾಟರಿ ಸ್ಫೋಟಗೊಂಡು 20 ವರ್ಷದ ಯುವಕ ಸಾವು, ಸಹೋದರನಿಗೆ ಗಾಯ

ಲ್ಯಾಪ್‌ಟಾಪ್ ಬ್ಯಾಟರಿ ಸ್ಫೋಟಗೊಂಡು 20 ವರ್ಷದ ಯುವಕ ಸಾವು, ಸಹೋದರನಿಗೆ ಗಾಯ, ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ. ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟರೆ ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

 

Read Full Story

04:27 PM (IST) Dec 26

ಇಸ್ಲಾಮಿಕ್ ಮೂಲಭೂತವಾದಿಗಳ ನೆಚ್ಚಿನ ಬಾಂಗ್ಲಾ ಸುಂದರಿ ಬೀದಿಪಾಲು - ಹಿಂದೂಗಳೇ ಕಾಪಾಡಿ ಅಂತಿರೋದ್ಯಾಕೆ?

ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಭಾರತದ ವಿರುದ್ಧ ವಿಷ ಕಾರುತ್ತಿದ್ದ ಹಿಂದೂ ಯುವತಿ ಪ್ರಾಪ್ತಿ ತಪೋಶಿ ಈಗ ಬೀದಿಗೆ ಬಂದಿದ್ದಾಳೆ. ಹಿಂದೂಗಳೇ ಕಾಪಾಡಿ ಎಂದು ಗೋಗರೆಯುವ ಸ್ಥಿತಿ ಅವಳಿಗೆ ಆಗಿದೆ. ಅಷ್ಟಕ್ಕೂ ಆಗಿದ್ದೇನು? ಯಾರೀ ಯುವತಿ? 

Read Full Story

04:25 PM (IST) Dec 26

ಸೆರೆಬ್ರಲ್ ಪಾಲ್ಸಿ ನರದ ಸಮಸ್ಯೆ ಇದ್ದರೂ ಎಲ್ಲವನ್ನು ಮೆಟ್ಟಿನಿಂತು ಮೊದಲ ಪ್ರಯತ್ನದಲ್ಲೇ UPSC ಪಾಸಾದ ಮನ್ವೇಂದ್ರ!

ಸೆರೆಬ್ರಲ್ ಪಾಲ್ಸಿ ಎಂಬ ನರವೈಜ್ಞಾನಿಕ ಕಾಯಿಲೆಯಿಂದ ಬಳಲುತ್ತಿದ್ದರೂ, 24 ವರ್ಷದ ಐಐಟಿ ಪದವೀಧರ ಮನ್ವೇಂದ್ರ ಸಿಂಗ್ ತಮ್ಮ ಮೊದಲ ಪ್ರಯತ್ನದಲ್ಲೇ UPSC ಇಂಜಿನಿಯರಿಂಗ್ ಸೇವಾ ಪರೀಕ್ಷೆಯಲ್ಲಿ 112ನೇ ರ್‍ಯಾಂಕ್ ಪಡೆದಿದ್ದಾರೆ. ಬಾಲ್ಯದಿಂದಲೂ ದೈಹಿಕ ಸವಾಲುಗಳು  ಅವರ ಅಚಲ ಇಚ್ಛಾಶಕ್ತಿ ಸಾಧನೆಗೆ ಕಾರಣವಾಯಿತು.

Read Full Story

03:44 PM (IST) Dec 26

IPL 2026 ಟೂರ್ನಿಗೂ ಮೊದಲೇ ಅರೆಸ್ಟ್ ಆಗ್ತಾರಾ ಆರ್‌ಸಿಬಿ ವೇಗಿ ಯಶ್ ದಯಾಳ್‌?

ಬೆಂಗಳೂರು: 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಆರ್‌ಸಿಬಿ ಪಾಳಯದಲ್ಲಿ ತಳಮಳ ಶುರುವಾಗಿದೆ. ಆರ್‌ಸಿಬಿ ವೇಗಿ ಯಶ್ ದಯಾಳ್ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಆಗುವ ಭೀತಿಗೆ ಸಿಲುಕಿದ್ದಾರೆ.

 

Read Full Story

03:29 PM (IST) Dec 26

ಕೇರಳ ಇತಿಹಾಸದಲ್ಲೇ ಮೊದಲ ಬಿಜೆಪಿ ಮೇಯರ್, 45 ವರ್ಷದ ಸಿಪಿಎಂ ಅಧಿಪತ್ಯ ಅಂತ್ಯ

ಕೇರಳ ಇತಿಹಾಸದಲ್ಲೇ ಮೊದಲ ಬಿಜೆಪಿ ಮೇಯರ್, 45 ವರ್ಷದ ಸಿಪಿಎಂ ಅಧಿಪತ್ಯ ಅಂತ್ಯ, ರಾಜಧಾನಿಯಲ್ಲೇ ಎಲ್‌ಡಿಎಫ್ ಆಡಳಿತಕ್ಕೆ ಬಿಜೆಪಿ ಅಂತ್ಯಹಾಡಿದೆ. ಬಿಜೆಪಿಯ ಕೌನ್ಸಿಲರ್ ವಿ.ವಿ. ರಾಜೇಶ್ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

 

Read Full Story

02:59 PM (IST) Dec 26

'ಲಯನ್ ಕಿಂಗ್' ನಟಿಯ ದುರಂತ ಅಂತ್ಯ - ಬಾಯ್‌ಫ್ರೆಂಡ್‌ನಿಂದಲೇ ಕೊಲೆ

ಡಿಸ್ನಿಯ ಪ್ರಸಿದ್ಧ ದಿ ಲಯನ್ ಕಿಂಗ್ ಸಿನಿಮಾದಲ್ಲಿ ಯುವ ನಲಾ ನಾ ಪಾತ್ರ ಮಾಡಿ ಪ್ರಸಿದ್ಧಿಗೆ ಬಂದಿದ್ದ ನಟಿ ಇಮಾಮಿ ಸ್ಮಿತ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಆಕೆಯ ಬಾಯ್‌ಫ್ರೆಂಡ್‌ ಜೋರ್ಡಾನ್ ಡಿ. ಜಾಕ್ಸನ್-ಸ್ಮಾಲ್‌ನನ್ನು ಬಂಧಿಸಲಾಗಿದೆ. ಡಿಸೆಂಬರ್ 21ರಂದು ಈ ಘಟನೆ ನಡೆದಿದೆ.

Read Full Story

02:50 PM (IST) Dec 26

ಭಾರತದ ಅತೀ ಎತ್ತರದ ಫ್ಯಾಮಿಲಿ ದಾಖಲೆ ಬರೆದ ಕುಲಕರ್ಣಿ ಕುಟುಂಬ, ಸರಾಸರಿ 7ಅಡಿ ಹೈಟ್

ಭಾರತದ ಅತೀ ಎತ್ತರದ ಫ್ಯಾಮಿಲಿ ದಾಖಲೆ ಬರೆದ ಕುಲಕರ್ಣಿ ಕುಟುಂಬ, ಸರಾಸರಿ 7ಅಡಿ ಹೈಟ್, ಈ ಕುಟುಂಬದಲ್ಲಿ ಎಲ್ಲರೂ ಸರಾಸರಿ 7 ಅಡಿ ಎತ್ತರ. ಭಾರತದ ಅತೀ ಎತ್ತರದ ಕುಟುಂಬ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.

 

Read Full Story

01:09 PM (IST) Dec 26

ವಿಜಯ್ ಹಜಾರೆ ಟ್ರೋಫಿ ಟೂರ್ನಿಯಿಂದ ಹೊರಬಿದ್ದ ವೈಭವ್ ಸೂರ್ಯವಂಶಿ; ಕಾರಣ ತುಂಬಾ ಇಂಟ್ರೆಸ್ಟಿಂಗ್!

ವಿಜಯ್ ಹಜಾರೆ ಟ್ರೋಫಿಯಲ್ಲಿ ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದಿದ್ದ ಬಿಹಾರದ 14 ವರ್ಷದ ವೈಭವ್ ಸೂರ್ಯವಂಶಿ, ಮಣಿಪುರದ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಸ್ವೀಕರಿಸಲು ದೆಹಲಿಗೆ ತೆರಳಿದ್ದು, ಬಳಿಕ ಅವರು ಅಂಡರ್-19 ವಿಶ್ವಕಪ್ ಶಿಬಿರಕ್ಕೆ ಸೇರಲಿದ್ದಾರೆ.
Read Full Story

01:08 PM (IST) Dec 26

ಟೊರೆಂಟೋ ವಿವಿ ಆವರಣದಲ್ಲಿ ಭಾರತೀಯ ಸಂಶೋಧನಾ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಕೆನಡಾದ ಟೊರೆಂಟೋ ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾರತೀಯ ವಿದ್ಯಾರ್ಥಿಯೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 20 ವರ್ಷದ ಶಿವಾಂಕ್ ಅವಸ್ಥಿ ಸಾವಿಗೀಡಾದ ವಿದ್ಯಾರ್ಥಿ.

Read Full Story

12:40 PM (IST) Dec 26

ಭಾರತದಲ್ಲಿ ಈ ವರ್ಷ ಗರಿಷ್ಠ ಮಾರಾಟವಾದ ಕಾರ್‌ಗಳ ಲಿಸ್ಟ್‌, ಮಾರುತಿಗೆ ಸಾಟಿಯೇ ಇಲ್ಲ!

2025ರ ಜನವರಿಯಿಂದ ನವೆಂಬರ್ ಅವಧಿಯಲ್ಲಿ ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಕಾರುಗಳ ಅಂಕಿಅಂಶಗಳು ಇಲ್ಲಿವೆ. ಈ ವರ್ಷದ ವಿಶೇಷವೆಂದರೆ ಎಸ್‌ಯುವಿಗಳ ಅಬ್ಬರದ ನಡುವೆಯೂ ಸೆಡಾನ್ ಮತ್ತು ಹ್ಯಾಚ್‌ಬ್ಯಾಕ್ ಕಾರುಗಳು ತಮ್ಮ ಪ್ರಾಬಲ್ಯ ಮೆರೆದಿವೆ.

Read Full Story

12:23 PM (IST) Dec 26

ಸಿಸಿಟಿವಿಗಾದ್ರೂ ಸ್ವಲ್ಪ ಮರ್ಯಾದೆ ಕೊಡಿ - ಮನೆಯಲ್ಲಿ ಏನೂ ಸಿಗದೆ ರೊಚ್ಚಿಗೆದ್ದ ಕಳ್ಳ ಬರೆದ ಪತ್ರದಲ್ಲಿ ಏನಿದೆ?

ತಮಿಳುನಾಡಿನ ಮನೆಯೊಂದಕ್ಕೆ ನುಗ್ಗಿದ ಕಳ್ಳ, ಸಿಸಿಟಿವಿ ಇದ್ದರೂ ಹಣ ಸಿಗದಿದ್ದಕ್ಕೆ ನಿರಾಶೆಗೊಂಡಿದ್ದಾನೆ. ಮನೆಯಲ್ಲಿ ಹಣವಿಲ್ಲದ ಮೇಲೆ ಸಿಸಿಟಿವಿ ಯಾಕೆ ಎಂದು ಮಾಲೀಕನಿಗೆ ಪತ್ರ ಬರೆದು, 2 ಸಾವಿರ ರೂ. ಹಾಗೂ ಸಿಸಿಟಿವಿ ಹಾರ್ಡ್ ಡಿಸ್ಕ್ ಕದ್ದೊಯ್ದಿದ್ದಾನೆ.
Read Full Story

12:23 PM (IST) Dec 26

ಸಾಕುನಾಯಿಯ ಅನಾರೋಗ್ಯದಿಂದ ಖಿನ್ನತೆ - ಫಿನಾಯಿಲ್ ಸೇವಿಸಿ ಸೋದರಿಯರಿಬ್ಬರು ಸಾವಿಗೆ ಶರಣು

ಲಕ್ನೋದಲ್ಲಿ, ದೀರ್ಘಕಾಲದ ಖಿನ್ನತೆ ಮತ್ತು ತಮ್ಮ ಸಾಕುನಾಯಿಯ ಅನಾರೋಗ್ಯದಿಂದ ಮನನೊಂದಿದ್ದ ಇಬ್ಬರು ಸಹೋದರಿಯರು ಫಿನಾಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.
Read Full Story

12:16 PM (IST) Dec 26

ವಿಜಯ್ ಹಜಾರೆ ಟ್ರೋಫಿ - ಎರಡನೇ ಪಂದ್ಯದಲ್ಲೂ ಅಬ್ಬರಿಸಿದ ಕೊಹ್ಲಿ! ಗುಜರಾತ್ ಎದುರು ವಿರಾಟ್ ಗಳಿಸಿದ ಸ್ಕೋರ್ ಎಷ್ಟು?

2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ, 15 ವರ್ಷಗಳ ಬಳಿಕ ಆಡುತ್ತಿರುವ ವಿರಾಟ್ ಕೊಹ್ಲಿ ಗುಜರಾತ್ ವಿರುದ್ಧ 77 ರನ್ ಗಳಿಸಿ ಶತಕ ವಂಚಿತರಾದರು. ಕೊಹ್ಲಿ ಔಟಾದ ನಂತರ, ನಾಯಕ ರಿಷಭ್ ಪಂತ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಆಸರೆಯಾದರು.
Read Full Story

11:35 AM (IST) Dec 26

online betting app tragedy - ಆನ್ಲೈನ್ ಬೆಟ್ಟಿಂಗ್‌ನಲ್ಲಿ ಒಂದು ಲಕ್ಷ ಕಳೆದುಕೊಂಡ ವಿದ್ಯಾರ್ಥಿ ಸಾವಿಗೆ ಶರಣು

ಆನ್‌ಲೈನ್ ಬೆಟ್ಟಿಂಗ್ ಆಪ್‌ನಲ್ಲಿ ಹಣ ಹೂಡಿಕೆ ಮಾಡಿ ಬರೋಬ್ಬರಿ ಒಂದು ಲಕ್ಷ ರೂಪಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಯೋರ್ವ ಸಾವಿಗೆ ಶರಣಾದ ದುರಂತ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವಕನನ್ನು 18 ವರ್ಷದ ವಿಕ್ರಮ್ ಎಂದು ಗುರುತಿಸಲಾಗಿದೆ.

Read Full Story

11:15 AM (IST) Dec 26

ಕ್ರಿಶ್ಚಿಯನ್ನರ ಮೇಲೆ ದಾಳಿ, ಕ್ರಿಸ್‌ಮಸ್ ದಿನವೇ ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೆರಿಕ!

ನೈಜೀರಿಯಾವು ವರ್ಷಗಳಿಂದ ಐಸಿಸ್ ಭಯೋತ್ಪಾದಕರು ಮತ್ತು ಬೊಕೊ ಹರಾಮ್‌ನಿಂದ ಉಗ್ರಗಾಮಿ ಹಿಂಸಾಚಾರವನ್ನು ಎದುರಿಸುತ್ತಿದೆ, ದೇಶದ ಉತ್ತರದಾದ್ಯಂತ ನಾಗರಿಕರು ಮತ್ತು ಧಾರ್ಮಿಕ ಸಮುದಾಯಗಳ ಮೇಲೆ ಆಗಾಗ್ಗೆ ದಾಳಿಗಳು ನಡೆಯುತ್ತಿವೆ.

 

Read Full Story

10:51 AM (IST) Dec 26

ಮಹಿಳಾ ಟಿ20 - ಸರಣಿ ಜಯದ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತೀಯ ಮಹಿಳಾ ತಂಡ, 3ನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ತಂಡದ ಅಗ್ರ ಆಟಗಾರ್ತಿಯರ ಭರ್ಜರಿ ಫಾರ್ಮ್ ನಲ್ಲಿರುವ ಸ್ಪಿನ್ನರ್ ವೈಷ್ಣವಿ ಶರ್ಮಾ ಉತ್ತಮ ಪ್ರದರ್ಶನವು ಮುಂಬರುವ ವಿಶ್ವಕಪ್‌ ತಯಾರಿಗೆ ಬಲ ತುಂಬಿದೆ.

Read Full Story

09:53 AM (IST) Dec 26

ವಿಜಯ್‌ ಹಜಾರೆ ಟೂರ್ನಿ - ಕೇರಳ ಎದುರು ಕರ್ನಾಟಕಕ್ಕೆ 2ನೇ ಜಯದ ಗುರಿ!

ವಿಜಯ್‌ ಹಜಾರೆ ಟ್ರೋಫಿಯ ತನ್ನ ಎರಡನೇ ಪಂದ್ಯದಲ್ಲಿ ಕರ್ನಾಟಕವು ಬಲಿಷ್ಠ ಕೇರಳ ತಂಡವನ್ನು ಎದುರಿಸಲಿದೆ. ಮೊದಲ ಪಂದ್ಯದಲ್ಲಿ ದಾಖಲೆಯ ಮೊತ್ತ ಬೆನ್ನತ್ತಿ ಗೆದ್ದರೂ, ಕರ್ನಾಟಕದ ಬೌಲಿಂಗ್ ವಿಭಾಗವು ಸುಧಾರಣೆ ಕಾಣಬೇಕಿದ್ದು, ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಮತ್ತೊಂದು ರನ್ ಹೊಳೆ ನಿರೀಕ್ಷಿಸಲಾಗಿದೆ.
Read Full Story

07:52 AM (IST) Dec 26

ರಾಗಾ-ವೈಷ್ಣವ್‌ ಉದ್ಯೋಗ ಸೃಷ್ಟಿ ‘ಕ್ರೆಡಿಟ್‌ ವಾರ್’

ಫಾಕ್ಸ್‌ಕಾನ್‌ ಐಫೋನ್‌ ಘಟಕ 8 ತಿಂಗಳಲ್ಲಿ 30 ಸಾವಿರ ನೌಕರರ ನೇಮಿಸಿಕೊಂಡಿದೆ. ಇದು ಕಾಂಗ್ರೆಸ್‌ ಸರ್ಕಾರದ ಶ್ರಮದ ಫಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೊಗಳಿದ್ದಾರೆ. ಆದರೆ ಇದು ಮೋದಿ ಸರ್ಕಾರದ ಮೇಕ್‌ ಇನ್‌ ಇಂಡಿಯಾ ಶ್ರಮದ ಫಲ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಿರುಗೇಟು ನೀಡಿದ್ದಾರೆ.

 

Read Full Story

07:52 AM (IST) Dec 26

ಅರುಣಾಚಲದ ಮೇಲೆ ಚೀನಾ ಕಣ್ಣು : ಅಮೆರಿಕ

ತೈವಾನ್‌ನಂತೆ ಅರುಣಾಚಲ ಪ್ರದೇಶವನ್ನು ತನ್ನ ಭಾಗವಾಗಿಸಿಕೊಳ್ಳುವುದನ್ನು ಪ್ರಮುಖ ಆಸಕ್ತಿಗಳಲ್ಲೊಂದು ಎಂದು ಪರಿಗಣಿಸಿರುವುದಾಗಿ ಅಮೆರಿಕದ ವರದಿ ಹೇಳಿದೆ. ‘ತೈವಾನ್‌, ದಕ್ಷಿಣ ಚೀನಾ ಸಮುದ್ರ, ಸೆಂಕಾಕು ದ್ವೀಪಗಳ ಜತೆ ಅರುಣಾಚಲವನ್ನೂ ಸೇರಿಸಿಕೊಂಡು, 2047ರ ಹೊತ್ತಿಗೆ ಅಖಂಡ ಚೀನಾವನ್ನು ನಿರ್ಮಿಸುವ ಗುರಿ

 

Read Full Story

07:52 AM (IST) Dec 26

370ನೇ ವಿಧಿ ರದ್ದತಿ ಬಿಜೆಪಿಯ ಹೆಮ್ಮೆ : ಪ್ರಧಾನಿ ಮೋದಿ ಹರ್ಷ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಸಾರಿ ಹೇಳುವ ‘ರಾಷ್ಟ್ರೀಯ ಪ್ರೇರಣಾ ಸ್ಥಳ’ವನ್ನು, ಅವರ 101ನೇ ಜನ್ಮದಿನದಂದು ಲಖನೌದಲ್ಲಿ ಗುರುವಾರ ಲೋಕಾರ್ಪಣೆ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಈ ಸ್ಮಾರಕವನ್ನು ಉದ್ಘಾಟಿಸಿದರು.

 

Read Full Story

07:51 AM (IST) Dec 26

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಬರ್ಬರ ಹತ್ಯೆ

ದೀಪು ಚಂದ್ರದಾಸ್‌ ಎಂಬ ಹಿಂದು ವ್ಯಕ್ತಿಯನ್ನು ಹತ್ಯೆಗೈದು, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ಭೀಕರ ಘಟನೆ ಮಾಸುವ ಮುನ್ನವೇ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನನ್ನು ಗುಂಪೊಂದು ಹತ್ಯೆಗೈದಿದೆ. ಮೃತ ವ್ಯಕ್ತಿಯನ್ನು ಅಮೃತ್‌ ಮಂಡಲ್‌ ಎಂದು ಗುರುತಿಸಲಾಗಿದೆ.

 

Read Full Story

07:51 AM (IST) Dec 26

3500 ಕಿ.ಮೀ ಸಾಗಬಲ್ಲ ಕೆ - 4ಬ್ಯಾಲಿಸ್ಟಿಕ್‌ ಕ್ಷಿಪಣಿ ಯಶಸ್ವಿ

3500 ಕಿ.ಮೀ ದೂರದವರೆಗೆ ತಲುಪಬಲ್ಲ ಸಾಮರ್ಥ್ಯದ ಕೆ-4 ಬ್ಯಾಲಿಸ್ಟಿಕ್‌ ಕ್ಷಿಪಣಿಯನ್ನು ಭಾರತ ಗುರುವಾರ ಯಶಸ್ವಿಯಾಗಿ ಪ್ರಯೋಗಿಸಿದೆ. ಬಂಗಾಳಕೊಲ್ಲಿಯಲ್ಲಿ ಬೀಡುಬಿಟ್ಟಿರುವ 6000 ಟನ್‌ ತೂಕದ ಐಎನ್‌ಎಸ್‌ ಅರಿಘಾತ್‌ ಸಬ್‌ಮರೀನ್‌ನಿಂದ ಇದು ಕ್ಷಿಪಣಿಯ 2ನೇ ಪರೀಕ್ಷೆಯಾಗಿದೆ.

 

Read Full Story

07:51 AM (IST) Dec 26

₹1.1 ಕೋಟಿ ಇನಾಮು ಇದ್ದ ಟಾಪ್ ನಕ್ಸಲ್‌ ಹತ್ಯೆ

ಒಡಿಶಾದಲ್ಲಿ ನಡೆಸಿದ ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ತಲೆಗೆ 1.1 ಕೋಟಿ ರು. ಬಹುಮಾನ ಹೊಂದಿದ್ದ ಗಣೇಶ್‌ ಉಯಿಕೆ (69) ಸೇರಿದಂತೆ 6 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ. ಇದು ಇನ್ನು 3 ತಿಂಗಳಲ್ಲಿ ದೇಶವನ್ನು ನಕ್ಸಲ್‌ ಮುಕ್ತ ಮಾಡುವ ಕೇಂದ್ರ ಸರ್ಕಾರ ಪ್ರಯತ್ನಕ್ಕೆ ದೊಡ್ಡ ಯಶಸ್ಸು ಎಂದು ಬಣ್ಣಿಸಲಾಗಿದೆ.

 

Read Full Story

More Trending News