ನವದೆಹಲಿ (ಡಿ.26): ದೀಪು ಚಂದ್ರದಾಸ್ ಎಂಬ ಹಿಂದು ವ್ಯಕ್ತಿಯನ್ನು ಹ*ತ್ಯೆಗೈದು, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ಭೀಕರ ಘಟನೆ ಮಾಸುವ ಮುನ್ನವೇ ಬಾಂಗ್ಲಾದೇಶ ದಲ್ಲಿ ಮತ್ತೊಬ್ಬ ಹಿಂದು ಯುವಕನನ್ನು ಗುಂಪೊಂ ದು ಹತ್ಯೆಗೈದಿದೆ. ಮೃತ ವ್ಯಕ್ತಿಯನ್ನು ಅಮೃತ್ ಮಂಡಲ್ ಗುರುತಿಸಲಾಗಿದೆ. ಕಳೆದ 5 ದಿನಗಳಲ್ಲಿ ಮೂರು ಕಡೆ 7 ಹಿಂದುಗಳ ಮನೆಗೆ ಬೆಂಕಿ ಹಾಕಲಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
11:08 PM (IST) Dec 26
ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ, ಜನವರಿ 2026ರಿಂದ ರೆನಾಲ್ಟ್ ತನ್ನ ಎಲ್ಲಾ ಕಾರುಗಳ ಬೆಲೆ ಏರಿಕೆ ಮಾಡುತ್ತಿದೆ. ಕಾರು ಖರೀದಿಗೆ ಪ್ಲಾನ್ ಮಾಡಿದ್ದರೆ 31ರ ಒಳಗೆ ಬುಕ್ ಮಾಡಿ
09:29 PM (IST) Dec 26
ಗೆಳತಿ ಮಹೆಕಾ ಶರ್ಮಾ ಜೊತೆ ಡಿನ್ನರ್ ಡೇಟ್ ತೆರಳಿದ್ದ ಹಾರ್ದಿಕ್ ಪಾಂಡ್ಯಗೆ ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಇದರ ನಡುವೆ ಅಭಿಯಾನಿಯೊಬ್ಬ ಗೋ ಟು ಹೆಲ್ ಎಂದು ಅವಾಚ್ಯವಾಗಿ ಬೈದಿದ್ದಾನೆ. ಈ ವೇಳೆ ಗೆಳತಿಯನ್ನು ಕಾರಿನ ಒಳಬಿಟ್ಟು ಹಾರ್ದಿಕ್ ಪಾಂಡ್ಯ ಮಾಡಿದ್ದೇನು?
08:39 PM (IST) Dec 26
ಎದ್ದೇಳಿ ಹಿಂದೂಗಳೇ, ಇದು ನಟಿ ಕಾಜಲ್ ಅಗರ್ವಾಲ್ ಸನಾತನಿಗಳಿಗೆ ನೀಡಿದ ಕರೆ.ನೀವು ಮೌನವಾಗಿದ್ದರೆ ಅದರಿಂದ ರಕ್ಷಣೆ ಸಿಗುವುದಿಲ್ಲ. ಬಾಂಗ್ಲಾದೇಶ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ನಟಿ ಮಹತ್ವದ ಎಚ್ಚರಿಕೆ ನೀಡಿದ್ದಾರೆ.
07:43 PM (IST) Dec 26
ಆಪರೇಷನ್ ಸಿಂದೂರ್ ವೇಳೆ ಭಾರತ-ಪಾಕ್ ಗಡಿಯಲ್ಲಿ ಯೋಧರಿಗೆ ನೆರವಾದ 10 ವರ್ಷದ ಬಾಲಕ ಶ್ರವಣ್ ಸಿಂಗ್ಗೆ 2026ನೇ ಸಾಲಿನ ಪ್ರಧಾನಮಂತ್ರಿ ಬಾಲ ಪುರಸ್ಕಾರ ಲಭಿಸಿದೆ. ಅವರ ಅಸಾಧಾರಣ ಧೈರ್ಯ ಮತ್ತು ದೇಶಪ್ರೇಮವನ್ನು ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.
07:37 PM (IST) Dec 26
Syria Mosque Bombing During Friday Prayers ಸಿರಿಯಾದ ಹೋಮ್ಸ್ ನಗರದಲ್ಲಿ ಶುಕ್ರವಾರದ ನಮಾಜ್ ವೇಳೆ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿ 18 ಮಂದಿ ಗಾಯಗೊಂಡಿದ್ದಾರೆ. ಮಸೀದಿಯೊಳಗೆ ಇರಿಸಲಾಗಿದ್ದ ಸ್ಫೋಟಕದಿಂದ ಈ ದುರ್ಘಟನೆ ನಡೆದಿದೆ.
06:52 PM (IST) Dec 26
ಭಾರತದಲ್ಲಿ ಮೊಳಗಿದ ಬಾಯ್ಕಾಟ್ ಥಾಯ್ಲೆಂಡ್ ಕೂಗು, ವಿಷ್ಣಮೂರ್ತಿ ಧ್ವಂಸಕ್ಕೆ ಆಕ್ರೋಶ, ಕಾಂಬೋಡಿಯಾ ಹಾಗೂ ಥಾಯ್ಲೆಂಡ್ ನಡುವಿನ ಗಡಿ ಸಮಸ್ಯೆ ತೀವ್ರಗೊಂಡಿದೆ. ಇದೇ ವೇಳೆ ಭಾರತದಲ್ಲಿ ಥಾಯ್ಲೆಂಡ್ ಪ್ರವಾಸ ಬಹಿಷ್ಕರಿಸಲು ಅಭಿಯಾನ ಶುರುವಾಗಿದೆ.
06:50 PM (IST) Dec 26
ಚಳಿಗಾಲದಲ್ಲಿ ಮಹಿಳೆಯರ ಪಾದಗಳು ಪುರುಷರಿಗಿಂತ ಹೆಚ್ಚಾಗಿ ತಣ್ಣಗಾಗಲು ವೈಜ್ಞಾನಿಕ ಕಾರಣಗಳಿವೆ. ಈಸ್ಟ್ರೊಜೆನ್ ಹಾರ್ಮೋನ್, ಕಡಿಮೆ ಸ್ನಾಯು ದ್ರವ್ಯರಾಶಿ ಮತ್ತು ದೇಹದ ಪ್ರಮುಖ ಅಂಗಗಳಿಗೆ ರಕ್ತವನ್ನು ಕೇಂದ್ರೀಕರಿಸುವ ಶಾರೀರಿಕ ಪ್ರವೃತ್ತಿಯೇ ಇದಕ್ಕೆ ಪ್ರಮುಖ ಕಾರಣವಾಗಿದೆ.
06:33 PM (IST) Dec 26
ಶತಾಯುಷಿ ಸ್ತ್ರೀ ರೋಗ ತಜ್ಞೆ ಡಾ. ಲಕ್ಷ್ಮಿಬಾಯಿ ಅವರು ತಮ್ಮ ಜೀವಮಾನದ ಉಳಿತಾಯವಾದ ಸುಮಾರು 3.4 ಕೋಟಿ ರೂಪಾಯಿಗಳನ್ನು ಭುವನೇಶ್ವರದ ಏಮ್ಸ್ಗೆ ದಾನ ಮಾಡಿದ್ದಾರೆ. ಅವರ ಈ ಮಹಾನ್ ಕಾರ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
06:30 PM (IST) Dec 26
ಬೆಂಗಳೂರು: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಎರಡನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಫಾರ್ಮ್ನಲ್ಲಿರುವ ಇಶಾನ್ ಕಿಶನ್ ವಿಜಯ್ ಹಜಾರೆ ಟೂರ್ನಿಯ ಎರಡನೇ ಪಂದ್ಯಕ್ಕೆ ಅಲಭ್ಯರಾಗಿದ್ದು ಏಕೆ ಎನ್ನುವುದನ್ನು ನೋಡೋಣ ಬನ್ನಿ.
06:19 PM (IST) Dec 26
ಪತ್ನಿಯ ಅಕ್ರಮ ಸಂಬಂಧವನ್ನು ಸಾಬೀತುಪಡಿಸಲು ಪತಿ ನೀಡಿದ ಮೊಬೈಲ್ ಫೋಟೋಗಳನ್ನು ಸಾಕ್ಷ್ಯವಾಗಿ ಪರಿಗಣಿಸಿ ಮಧ್ಯಪ್ರದೇಶ ಹೈಕೋರ್ಟ್ ವಿಚ್ಛೇದನವನ್ನು ಎತ್ತಿಹಿಡಿದಿದೆ. ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65B ವಿಚ್ಛೇದನ ಪ್ರಕರಣಗಳಿಗೆ ಕಟ್ಟುನಿಟ್ಟಾಗಿ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
06:10 PM (IST) Dec 26
ವಿಧಾನಸಭೆ, ಲೋಕಸಭೆ ಮೀರಿಸಿದ ಪಾಲಿಕೆ ಎಲೆಕ್ಷನ್ , ಗೆದ್ರೆ ಥಾಯ್ಲೆಂಡ್ ಟ್ರಿಪ್, ಕಾರು ಸೇರಿ ಭರ್ಜರಿ ಭರವಸೆ ನೀಡಲಾಗಿದೆ. 1,100 ಚದರ ಅಡಿ ನಿವೇಷನ, ಚಿನ್ನದ ಸೇರಿ ಸೇರಿದಂತೆ ಹಲವು ಆಫರ್ ನೀಡಲಾಗಿದೆ. ಇದು ಭಾರತದ ಚುನಾವಣೆ ವ್ಯವಸ್ಥೆಯನ್ನು ಪ್ರಶ್ನಿಸಿದೆ.
06:05 PM (IST) Dec 26
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 20 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದರು. ಇದರಲ್ಲಿ, ಬೇರೆಯವರ ಪ್ರಾಣ ಉಳಿಸಲು ಹೋಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಬಿಹಾರದ ಕಮಲೇಶ್ ಕುಮಾರ್ ಮತ್ತು ತಮಿಳುನಾಡಿನ ವ್ಯೋಮ ಪ್ರಿಯಾ ಅವರಿಗೆ ಮರಣೋತ್ತರವಾಗಿ ಈ ಗೌರವ ಸಂದಿದೆ.
05:50 PM (IST) Dec 26
ಬೆಂಗಳೂರು: ಕ್ರಿಕೆಟ್ನಲ್ಲಿ ಪ್ರತಿದಿನ ಒಂದಲ್ಲಾ ಒಂದು ದಾಖಲೆಗಳು ನಿರ್ಮಾಣವಾಗುತ್ತವೇ ಹಾಗೆಯೇ ಅಪರೂಪದ ದಾಖಲೆಗಳು ಬ್ರೇಕ್ ಆಗುತ್ತವೆ. ಬನ್ನಿ ನಾವಿಂದು 2025ರಲ್ಲಿ ದಾಖಲಾದ ಅಪರೂಪದಲ್ಲೇ ಅಪರೂಪದ ಟಾಪ್-5 ದಾಖಲೆಗಳು ಯಾವುವು ಎನ್ನುವುದನ್ನು ನೋಡೋಣ.
05:30 PM (IST) Dec 26
ವಾರಣಾಸಿಯ ಎಸ್ಬಿಐ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ, ಅನಾರೋಗ್ಯಪೀಡಿತ ತಾಯಿಯ ಚಿಕಿತ್ಸೆಗಾಗಿ ಬ್ಯಾಂಕ್ ಸಾಲ ನಿರಾಕರಿಸಿದ್ದಲ್ಲದೇ ಅವರ ಸಂಬಳವನ್ನು ತಡೆ ಹಿಡಿದಿದೆ. ಇದರಿಂದಾಗಿ ಚಿಕಿತ್ಸೆ ಸಿಗದೆ ಅವರ ತಾಯಿ ಮೃತಪಟ್ಟಿದ್ದು, ಈ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
05:11 PM (IST) Dec 26
ಎಲ್ಲಾ ದಾನ ಮಾಡಿ ಡಿ.25ಕ್ಕೆ ಜಗತ್ತು ಅಂತ್ಯ, ಪುಂಗಿ ಬಿಟ್ಟು ₹80 ಲಕ್ಷ ಕಾರು ಖರೀದಿಸಿದ ಘಾನಾ ಪ್ರವಾದಿ, ತಾನು ಹೇಳಿದ್ದು ಸುಳ್ಳಾದ ಬೆನ್ನಲ್ಲೇ ಮತ್ತೊಂದು ಎಚ್ಚರಿಕೆ ನೀಡಿದ್ದಾನೆ. ಪ್ರವಾಹ ರದ್ದಾಗಿಲ್ಲ, ವಿಳಂಬವಾಗಿದೆ.ನನಗೆ ಇನ್ನೊಂದು ಸಂದೇಶ ಬಂದಿದೆ ಎಂದಿದ್ದಾನೆ.
04:33 PM (IST) Dec 26
ಚಲಿಸುವ ಕಾರಿನಲ್ಲೇ ಡ್ರಾಪ್ ನೆಪದಲ್ಲಿ ಮಹಿಳಾ ಮ್ಯಾನೇಜರ್ ಮೇಲೆ ಕಂಪನಿ ಸಿಇಒ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಈಗ ಸಾಕಷ್ಟು ಸಂಚಲನ ಸೃಷ್ಟಿಸಿದ್ದು, ಪೊಲೀಸರ ತನಿಖೆಯಿಂದ ಹಲವು ವಿಚಾರಗಳು ಬೆಳಕಿಗೆ ಬಂದಿವೆ.
04:31 PM (IST) Dec 26
ಲ್ಯಾಪ್ಟಾಪ್ ಬ್ಯಾಟರಿ ಸ್ಫೋಟಗೊಂಡು 20 ವರ್ಷದ ಯುವಕ ಸಾವು, ಸಹೋದರನಿಗೆ ಗಾಯ, ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ. ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟರೆ ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
04:27 PM (IST) Dec 26
ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಭಾರತದ ವಿರುದ್ಧ ವಿಷ ಕಾರುತ್ತಿದ್ದ ಹಿಂದೂ ಯುವತಿ ಪ್ರಾಪ್ತಿ ತಪೋಶಿ ಈಗ ಬೀದಿಗೆ ಬಂದಿದ್ದಾಳೆ. ಹಿಂದೂಗಳೇ ಕಾಪಾಡಿ ಎಂದು ಗೋಗರೆಯುವ ಸ್ಥಿತಿ ಅವಳಿಗೆ ಆಗಿದೆ. ಅಷ್ಟಕ್ಕೂ ಆಗಿದ್ದೇನು? ಯಾರೀ ಯುವತಿ?
04:25 PM (IST) Dec 26
ಸೆರೆಬ್ರಲ್ ಪಾಲ್ಸಿ ಎಂಬ ನರವೈಜ್ಞಾನಿಕ ಕಾಯಿಲೆಯಿಂದ ಬಳಲುತ್ತಿದ್ದರೂ, 24 ವರ್ಷದ ಐಐಟಿ ಪದವೀಧರ ಮನ್ವೇಂದ್ರ ಸಿಂಗ್ ತಮ್ಮ ಮೊದಲ ಪ್ರಯತ್ನದಲ್ಲೇ UPSC ಇಂಜಿನಿಯರಿಂಗ್ ಸೇವಾ ಪರೀಕ್ಷೆಯಲ್ಲಿ 112ನೇ ರ್ಯಾಂಕ್ ಪಡೆದಿದ್ದಾರೆ. ಬಾಲ್ಯದಿಂದಲೂ ದೈಹಿಕ ಸವಾಲುಗಳು ಅವರ ಅಚಲ ಇಚ್ಛಾಶಕ್ತಿ ಸಾಧನೆಗೆ ಕಾರಣವಾಯಿತು.
03:44 PM (IST) Dec 26
ಬೆಂಗಳೂರು: 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಆರ್ಸಿಬಿ ಪಾಳಯದಲ್ಲಿ ತಳಮಳ ಶುರುವಾಗಿದೆ. ಆರ್ಸಿಬಿ ವೇಗಿ ಯಶ್ ದಯಾಳ್ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಆಗುವ ಭೀತಿಗೆ ಸಿಲುಕಿದ್ದಾರೆ.
03:29 PM (IST) Dec 26
ಕೇರಳ ಇತಿಹಾಸದಲ್ಲೇ ಮೊದಲ ಬಿಜೆಪಿ ಮೇಯರ್, 45 ವರ್ಷದ ಸಿಪಿಎಂ ಅಧಿಪತ್ಯ ಅಂತ್ಯ, ರಾಜಧಾನಿಯಲ್ಲೇ ಎಲ್ಡಿಎಫ್ ಆಡಳಿತಕ್ಕೆ ಬಿಜೆಪಿ ಅಂತ್ಯಹಾಡಿದೆ. ಬಿಜೆಪಿಯ ಕೌನ್ಸಿಲರ್ ವಿ.ವಿ. ರಾಜೇಶ್ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
02:59 PM (IST) Dec 26
ಡಿಸ್ನಿಯ ಪ್ರಸಿದ್ಧ ದಿ ಲಯನ್ ಕಿಂಗ್ ಸಿನಿಮಾದಲ್ಲಿ ಯುವ ನಲಾ ನಾ ಪಾತ್ರ ಮಾಡಿ ಪ್ರಸಿದ್ಧಿಗೆ ಬಂದಿದ್ದ ನಟಿ ಇಮಾಮಿ ಸ್ಮಿತ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಆಕೆಯ ಬಾಯ್ಫ್ರೆಂಡ್ ಜೋರ್ಡಾನ್ ಡಿ. ಜಾಕ್ಸನ್-ಸ್ಮಾಲ್ನನ್ನು ಬಂಧಿಸಲಾಗಿದೆ. ಡಿಸೆಂಬರ್ 21ರಂದು ಈ ಘಟನೆ ನಡೆದಿದೆ.
02:50 PM (IST) Dec 26
ಭಾರತದ ಅತೀ ಎತ್ತರದ ಫ್ಯಾಮಿಲಿ ದಾಖಲೆ ಬರೆದ ಕುಲಕರ್ಣಿ ಕುಟುಂಬ, ಸರಾಸರಿ 7ಅಡಿ ಹೈಟ್, ಈ ಕುಟುಂಬದಲ್ಲಿ ಎಲ್ಲರೂ ಸರಾಸರಿ 7 ಅಡಿ ಎತ್ತರ. ಭಾರತದ ಅತೀ ಎತ್ತರದ ಕುಟುಂಬ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.
01:09 PM (IST) Dec 26
01:08 PM (IST) Dec 26
ಕೆನಡಾದ ಟೊರೆಂಟೋ ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾರತೀಯ ವಿದ್ಯಾರ್ಥಿಯೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 20 ವರ್ಷದ ಶಿವಾಂಕ್ ಅವಸ್ಥಿ ಸಾವಿಗೀಡಾದ ವಿದ್ಯಾರ್ಥಿ.
12:40 PM (IST) Dec 26
2025ರ ಜನವರಿಯಿಂದ ನವೆಂಬರ್ ಅವಧಿಯಲ್ಲಿ ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಕಾರುಗಳ ಅಂಕಿಅಂಶಗಳು ಇಲ್ಲಿವೆ. ಈ ವರ್ಷದ ವಿಶೇಷವೆಂದರೆ ಎಸ್ಯುವಿಗಳ ಅಬ್ಬರದ ನಡುವೆಯೂ ಸೆಡಾನ್ ಮತ್ತು ಹ್ಯಾಚ್ಬ್ಯಾಕ್ ಕಾರುಗಳು ತಮ್ಮ ಪ್ರಾಬಲ್ಯ ಮೆರೆದಿವೆ.
12:23 PM (IST) Dec 26
12:23 PM (IST) Dec 26
12:16 PM (IST) Dec 26
11:35 AM (IST) Dec 26
ಆನ್ಲೈನ್ ಬೆಟ್ಟಿಂಗ್ ಆಪ್ನಲ್ಲಿ ಹಣ ಹೂಡಿಕೆ ಮಾಡಿ ಬರೋಬ್ಬರಿ ಒಂದು ಲಕ್ಷ ರೂಪಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಯೋರ್ವ ಸಾವಿಗೆ ಶರಣಾದ ದುರಂತ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವಕನನ್ನು 18 ವರ್ಷದ ವಿಕ್ರಮ್ ಎಂದು ಗುರುತಿಸಲಾಗಿದೆ.
11:15 AM (IST) Dec 26
ನೈಜೀರಿಯಾವು ವರ್ಷಗಳಿಂದ ಐಸಿಸ್ ಭಯೋತ್ಪಾದಕರು ಮತ್ತು ಬೊಕೊ ಹರಾಮ್ನಿಂದ ಉಗ್ರಗಾಮಿ ಹಿಂಸಾಚಾರವನ್ನು ಎದುರಿಸುತ್ತಿದೆ, ದೇಶದ ಉತ್ತರದಾದ್ಯಂತ ನಾಗರಿಕರು ಮತ್ತು ಧಾರ್ಮಿಕ ಸಮುದಾಯಗಳ ಮೇಲೆ ಆಗಾಗ್ಗೆ ದಾಳಿಗಳು ನಡೆಯುತ್ತಿವೆ.
10:51 AM (IST) Dec 26
ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತೀಯ ಮಹಿಳಾ ತಂಡ, 3ನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ತಂಡದ ಅಗ್ರ ಆಟಗಾರ್ತಿಯರ ಭರ್ಜರಿ ಫಾರ್ಮ್ ನಲ್ಲಿರುವ ಸ್ಪಿನ್ನರ್ ವೈಷ್ಣವಿ ಶರ್ಮಾ ಉತ್ತಮ ಪ್ರದರ್ಶನವು ಮುಂಬರುವ ವಿಶ್ವಕಪ್ ತಯಾರಿಗೆ ಬಲ ತುಂಬಿದೆ.
09:53 AM (IST) Dec 26
07:52 AM (IST) Dec 26
ಫಾಕ್ಸ್ಕಾನ್ ಐಫೋನ್ ಘಟಕ 8 ತಿಂಗಳಲ್ಲಿ 30 ಸಾವಿರ ನೌಕರರ ನೇಮಿಸಿಕೊಂಡಿದೆ. ಇದು ಕಾಂಗ್ರೆಸ್ ಸರ್ಕಾರದ ಶ್ರಮದ ಫಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಗಳಿದ್ದಾರೆ. ಆದರೆ ಇದು ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾ ಶ್ರಮದ ಫಲ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿರುಗೇಟು ನೀಡಿದ್ದಾರೆ.
07:52 AM (IST) Dec 26
ತೈವಾನ್ನಂತೆ ಅರುಣಾಚಲ ಪ್ರದೇಶವನ್ನು ತನ್ನ ಭಾಗವಾಗಿಸಿಕೊಳ್ಳುವುದನ್ನು ಪ್ರಮುಖ ಆಸಕ್ತಿಗಳಲ್ಲೊಂದು ಎಂದು ಪರಿಗಣಿಸಿರುವುದಾಗಿ ಅಮೆರಿಕದ ವರದಿ ಹೇಳಿದೆ. ‘ತೈವಾನ್, ದಕ್ಷಿಣ ಚೀನಾ ಸಮುದ್ರ, ಸೆಂಕಾಕು ದ್ವೀಪಗಳ ಜತೆ ಅರುಣಾಚಲವನ್ನೂ ಸೇರಿಸಿಕೊಂಡು, 2047ರ ಹೊತ್ತಿಗೆ ಅಖಂಡ ಚೀನಾವನ್ನು ನಿರ್ಮಿಸುವ ಗುರಿ
07:52 AM (IST) Dec 26
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಸಾರಿ ಹೇಳುವ ‘ರಾಷ್ಟ್ರೀಯ ಪ್ರೇರಣಾ ಸ್ಥಳ’ವನ್ನು, ಅವರ 101ನೇ ಜನ್ಮದಿನದಂದು ಲಖನೌದಲ್ಲಿ ಗುರುವಾರ ಲೋಕಾರ್ಪಣೆ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಈ ಸ್ಮಾರಕವನ್ನು ಉದ್ಘಾಟಿಸಿದರು.
07:51 AM (IST) Dec 26
ದೀಪು ಚಂದ್ರದಾಸ್ ಎಂಬ ಹಿಂದು ವ್ಯಕ್ತಿಯನ್ನು ಹತ್ಯೆಗೈದು, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ಭೀಕರ ಘಟನೆ ಮಾಸುವ ಮುನ್ನವೇ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನನ್ನು ಗುಂಪೊಂದು ಹತ್ಯೆಗೈದಿದೆ. ಮೃತ ವ್ಯಕ್ತಿಯನ್ನು ಅಮೃತ್ ಮಂಡಲ್ ಎಂದು ಗುರುತಿಸಲಾಗಿದೆ.
07:51 AM (IST) Dec 26
3500 ಕಿ.ಮೀ ದೂರದವರೆಗೆ ತಲುಪಬಲ್ಲ ಸಾಮರ್ಥ್ಯದ ಕೆ-4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತ ಗುರುವಾರ ಯಶಸ್ವಿಯಾಗಿ ಪ್ರಯೋಗಿಸಿದೆ. ಬಂಗಾಳಕೊಲ್ಲಿಯಲ್ಲಿ ಬೀಡುಬಿಟ್ಟಿರುವ 6000 ಟನ್ ತೂಕದ ಐಎನ್ಎಸ್ ಅರಿಘಾತ್ ಸಬ್ಮರೀನ್ನಿಂದ ಇದು ಕ್ಷಿಪಣಿಯ 2ನೇ ಪರೀಕ್ಷೆಯಾಗಿದೆ.
07:51 AM (IST) Dec 26
ಒಡಿಶಾದಲ್ಲಿ ನಡೆಸಿದ ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ತಲೆಗೆ 1.1 ಕೋಟಿ ರು. ಬಹುಮಾನ ಹೊಂದಿದ್ದ ಗಣೇಶ್ ಉಯಿಕೆ (69) ಸೇರಿದಂತೆ 6 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ. ಇದು ಇನ್ನು 3 ತಿಂಗಳಲ್ಲಿ ದೇಶವನ್ನು ನಕ್ಸಲ್ ಮುಕ್ತ ಮಾಡುವ ಕೇಂದ್ರ ಸರ್ಕಾರ ಪ್ರಯತ್ನಕ್ಕೆ ದೊಡ್ಡ ಯಶಸ್ಸು ಎಂದು ಬಣ್ಣಿಸಲಾಗಿದೆ.