LIVE NOW
Published : Jan 28, 2026, 07:39 AM ISTUpdated : Jan 28, 2026, 11:26 AM IST

India News Live: ಅಜಿತ್‌ ಪವಾರ್‌, ಸೌಂದರ್ಯ, ಜನರಲ್‌ ಬಿಪಿನ್‌ ರಾವತ್‌; ವಿಮಾನ ದುರಂತದಲ್ಲಿ ಸಾವು ಕಂಡ ಭಾರತದ ವಿಐಪಿಗಳು

ಸಾರಾಂಶ

ನವದೆಹಲಿ (ಜ.28): ಭಾರತ ಮತ್ತು ಯುರೋಪ್‌ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ. ಅಮೆರಿಕದ ತೆರಿಗೆ ಕಿರಿಕ್‌ಗೆ ಜಗತ್ತಿನ ಅತಿದೊಡ್ಡ ಆರ್ಥಿಕತೆಗಳು ತಿರುಗೇಟು ನೀಡಿವೆ. ಪರ್ಯಾಯ ಮಾರುಕಟ್ಟೆ ಸ್ಥಾಪನೆ ಕಡೆ ಭಾರತ ಮುಖ ಮಾಡಿದ್ದು, ಎನ್‌ಡಿಎ ಸರ್ಕಾರದ 8ನೇ ಡೀಲ್‌ ಇದಾಗಿದೆ. ಇದು 200 ಕೋಟಿ ಜನರ ಮೇಲೆ ಪರಿಣಾಮ ಬೀರಲಿದೆ. ಡೀಲ್‌ನ ಮೊತ್ತ ವಿಶ್ವದ ಜಿಡಿಪಿಯ ಶೇ. 25ರಷ್ಟಿದ್ದು, ಭಾರತದ ಶೇ. 93 ಉತ್ಪನ್ನಕ್ಕೆ ಯುರೋಪ್‌ನಲ್ಲಿ ಶೂನ್ಯ ತೆರಿಗೆ ಇರಲಿದೆ. ಭಾರತಕ್ಕೆ ಅಮೆರಿಕದ ಹೊರತಾದ ಹೊಸ ಮಾರುಕಟ್ಟೆ ಸಿಕ್ಕಂತಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

 

11:26 AM (IST) Jan 28

ಅಜಿತ್‌ ಪವಾರ್‌, ಸೌಂದರ್ಯ, ಜನರಲ್‌ ಬಿಪಿನ್‌ ರಾವತ್‌; ವಿಮಾನ ದುರಂತದಲ್ಲಿ ಸಾವು ಕಂಡ ಭಾರತದ ವಿಐಪಿಗಳು

Indian VIPs Lost in Aviation Tragedies: From Sanjay Gandhi to Ajit Pawar ಈ ಲೇಖನವು ಸಂಜಯ್ ಗಾಂಧಿ, ವೈ.ಎಸ್. ರಾಜಶೇಖರ ರೆಡ್ಡಿ, ಮತ್ತು ಜನರಲ್ ಬಿಪಿನ್ ರಾವತ್ ಸೇರಿದಂತೆ ವಿಮಾನ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡ ಭಾರತದ ಪ್ರಮುಖ ರಾಜಕಾರಣಿಗಳು ಮತ್ತು ಗಣ್ಯರ ಪಟ್ಟಿ.

Read Full Story

11:00 AM (IST) Jan 28

ಎನ್‌ಸಿಪಿಯ ಗಡಿಯಾರ ಗೆದ್ದು ರಾಜಕೀಯ ಜೀವನ ನಡೆಸಿದ್ದ ಅಜಿತ್‌ ಪವಾರ್‌ಗೆ ಕೈಕೊಟ್ಟ ಟೈಮ್‌!

ಸಹಕಾರಿ ಕ್ಷೇತ್ರದಿಂದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹುದ್ದೆಯವರೆಗೂ ಸಾಗಿಬಂದ ಅಜಿತ್ ಪವಾರ್, ತಮ್ಮ ರಾಜಕೀಯ ರಣತಂತ್ರಗಳಿಂದ 'ಪವರ್' ಎಂದೇ ಗುರುತಿಸಿಕೊಂಡಿದ್ದರು. ಚಿಕ್ಕಪ್ಪ ಶರದ್ ಪವಾರ್‌ರಿಂದ ಬೇರ್ಪಟ್ಟು ಎನ್‌ಸಿಪಿ ಇಬ್ಬಾಗ ಮಾಡಿದ ಅವರ ರಾಜಕೀಯ ಜೀವನ ಅನಿರೀಕ್ಷಿತ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದೆ.

Read Full Story

10:54 AM (IST) Jan 28

ಅತೀವ ಪ್ರೀತಿ ಇಟ್ಟಿದ್ದ ಬಾರಾಮತಿಯಲ್ಲೇ ದುರಂತ ಅಂತ್ಯ ಕಂಡ ಅಜಿತ್ ಪವಾರ್ ಯಾರು? ರಾಜಕೀಯ ಜೀವನ, ಸಾಧನೆಗಳಿವು

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ತಮ್ಮ ಸ್ವಕ್ಷೇತ್ರ ಬಾರಾಮತಿಗೆ ಪ್ರಯಾಣಿಸುತ್ತಿದ್ದಾಗ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಲೇಖನವು ಅವರ ರಾಜಕೀಯ ಜೀವನ, ಕುಟುಂಬದ ಹಿನ್ನೆಲೆ, ಸಾಧನೆಗಳು, ವಿವಾದಗಳು ಮತ್ತು ಅವರ ದುರಂತ ಅಂತ್ಯದ ಸಂಪೂರ್ಣ ವಿವರಗಳನ್ನು ಒದಗಿಸುತ್ತದೆ.
Read Full Story

10:36 AM (IST) Jan 28

ವಿಮಾನ ದುರಂತದಲ್ಲಿ ಕೊನೆಯುಸಿರೆಳೆದ ಅಜಿತ್ ಪವಾರ್ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದರು?

ಭಾರಮತಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶದ ವೇಳೆ ನಡೆದ ಸಮಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಆರು ಮಂದಿಯೂ ಕೊನೆಯುಸಿರೆಳೆದಿದ್ದಾರೆ. ಅಷ್ಟಕ್ಕೂ ಅವರು ಎಲ್ಲಿಗೆ ಹೋಗುತ್ತಿದ್ದರು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.

 

Read Full Story

10:31 AM (IST) Jan 28

ದುರಂತದಲ್ಲಿ ಚೂರುಚೂರಾದ Learjet 45 ವಿಮಾನ, ಅಜಿತ್‌ ಪವಾರ್‌ ದೇಹ ಸುಟ್ಟು ಭಸ್ಮ!

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ಸಂಭವಿಸಿದ ಲಿಯರ್‌ಜೆಟ್ 45 ವಿಮಾನ ಅಪಘಾತದಲ್ಲಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಅವರೊಂದಿಗೆ ವಿಮಾನದಲ್ಲಿದ್ದ ಇನ್ನೂ ನಾಲ್ವರು ಸಹ ಮೃತಪಟ್ಟಿದ್ದು, ಈ ಘಟನೆಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ದೃಢಪಡಿಸಿದೆ.
Read Full Story

09:56 AM (IST) Jan 28

Breaking - ವಿಮಾನ ದುರಂತದಲ್ಲಿ ಮಹಾ ಡಿಸಿಎಂ Ajit Pawar ಸೇರಿದಂತೆ 6 ಮಂದಿ ದುರ್ಮರಣ!

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿಯಲ್ಲಿ ಪತನಗೊಂಡಿದೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವೇಳೆ ಲ್ಯಾಂಡಿಂಗ್ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

Read Full Story

08:47 AM (IST) Jan 28

ಸೋನಾಮಾರ್ಗ್‌ನಲ್ಲಿ ಹಿಮದ ರೌದ್ರ ನರ್ತನ - ಕ್ಷಣಾರ್ಧದಲ್ಲಿ ಮನೆಗಳ ಸಮಾಧಿ ಮಾಡಿದ ಹಿಮಪಾತ - ವೀಡಿಯೋ

ಜಮ್ಮು ಕಾಶ್ಮೀರದ ಪ್ರವಾಸಿ ತಾಣ ಸೋನಾಮಾರ್ಗ್‌ನಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, ಹಿಮದ ಪ್ರವಾಹವು ಹಲವು ಮನೆಗಳು ಮತ್ತು ವಾಹನಗಳನ್ನು ಸಮಾಧಿ ಮಾಡಿದೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Read Full Story

07:59 AM (IST) Jan 28

ಪರೇಡ್‌ ವೇಳೆ 3ನೇ ಸಾಲಲ್ಲಿ ಕೂರಿಸಿ ರಾಹುಲ್‌ ಗಾಂಧಿ ಹಾಗೂ ನನಗೆ ಅವಮಾನ - ಮಲ್ಲಿಕಾರ್ಜುನ ಖರ್ಗೆ

ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ತಮಗೆ ಮತ್ತು ರಾಹುಲ್‌ ಗಾಂಧಿಗೆ 3ನೇ ಸಾಲಿನಲ್ಲಿ ಆಸನ ನೀಡಿ ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಇದು ಶಿಷ್ಟಾಚಾರದ ಉಲ್ಲಂಘನೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

Read Full Story

07:41 AM (IST) Jan 28

ಯುರೋಪ್‌ನಲ್ಲಿ ಭಾರತದ ಶೇ.93ರಷ್ಟು ರಫ್ತು ಇನ್ನು ಡ್ಯೂಟಿ ಫ್ರೀ

ಭಾರತ ಮತ್ತು ಐರೋಪ್ಯ ಒಕ್ಕೂಟ ನಡುವಿನ ಮುಕ್ತ ವ್ಯಾಪಾರ ಒಪ್ಪಂದದಿಂದಾಗಿ ಯುರೋಪಿಗೆ ರಫ್ತಾಗುವ ಭಾರತದ ಶೇ.93ರಷ್ಟು ಉತ್ಪನ್ನಗಳು ಡ್ಯೂಟಿ ಫ್ರೀ ಆಗಲಿವೆ. ಅದೇ ರೀತಿ ಯುರೋಪ್‌ನಿಂದ ಆಮದಾಗುವ ದುಬಾರಿ ಐಷಾರಾಮಿ ಕಾರುಗಳು, ಔಷಧ, ವೈನ್‌, ಮದ್ಯ ಬೆಲೆ ಭಾರತೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ತಗ್ಗಲಿದೆ.

 

Read Full Story

07:41 AM (IST) Jan 28

ಟ್ರಂಪ್ ವಿರುದ್ಧವೇ ಟ್ರಂಪ್‌ ಕಾರ್ಡ್‌

ರಷ್ಯಾ ತೈಲ ಖರೀದಿ, ಗ್ರೀನ್‌ಲ್ಯಾಂಡ್ ವಶ ವಿಷಯದಲ್ಲಿ ಭಾರತ ಹಾಗೂ ಐರೋಪ್ಯ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಟ್ಯಾಕ್ಸ್‌ ವಾರ್‌ ನಡೆಸುತ್ತಿರುವ ಹೊತ್ತಿನಲ್ಲೇ, ಐತಿಹಾಸಿಕ ಮುಕ್ತ ತೆರಿಗೆ ವ್ಯಾಪಾರ ಒಪ್ಪಂದ ವನ್ನು ಭಾರತ ಮತ್ತು ಯುರೋಪಿಯನ್‌ ಒಕ್ಕೂಟಗಳು ಮಂಗಳವಾರ ಅಂತಿಮಗೊಳಿಸಿವೆ

 

Read Full Story

07:41 AM (IST) Jan 28

ಜಮ್ಮುಕಾಶ್ಮೀರದಲ್ಲಿ ತೀವ್ರ ಹಿಮಪಾತ: ತುರ್ತು ಚಿಕಿತ್ಸೆ ನೀಡಲು ಜೇಸಿಬಿ ಬಳಸಿ ಆಸ್ಪತ್ರೆ ತಲುಪಿದ ವೈದ್ಯರು

ಜಮ್ಮು ಕಾಶ್ಮೀರದಲ್ಲಿನ ತೀವ್ರ ಹಿಮಪಾತದಿಂದ ರಸ್ತೆಗಳು ಬಂದ್ ಆಗಿದ್ದವು. ಈ ಸಂದರ್ಭದಲ್ಲಿ, ಶೋಪಿಯಾನ್ ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಬಶರತ್ ಪಂಡಿತ್ ಅವರು, ತುರ್ತು ಶಸ್ತ್ರಚಿಕಿತ್ಸೆಗಾಗಿ 3 ಕಿಲೋ ಮೀಟ‌ರ್ ನಡೆದು, ನಂತರ ಜೆಸಿಬಿ ಮೂಲಕ ಆಸ್ಪತ್ರೆ ತಲುಪಿ ತಮ್ಮ ಕರ್ತವ್ಯ ಮೆರೆದಿದ್ದಾರೆ.

 

Read Full Story

07:40 AM (IST) Jan 28

ಯುಜಿಸಿಯ ತಾರತಮ್ಯ ತಡೆ ಸಮಿತಿ : ಜನರಲ್‌ ವರ್ಗ ಕಿಡಿ

ವಿಶ್ವವಿದ್ಯಾಲಯಗಳಲ್ಲಿ ಎಸ್ಸಿ-ಎಸ್ಟಿ, ಒಬಿಸಿಗಳ ಜಾತಿ ತಾರತಮ್ಯ ಹತ್ತಿಕ್ಕುವ ಸಲುವಾಗಿ ಸಮಿತಿ ರಚಿಸಲು ಯುಜಿಸಿ ಹೊರಡಿಸಿರುವ ಹೊಸ ಆದೇಶ ವಿವಾದಕ್ಕೀಡಾಗಿದೆ. ‘ಈ ಸಮಿತಿಯಿಂದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ’ ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

 

Read Full Story

07:40 AM (IST) Jan 28

ಇಂದಿನಿಂದ ಬಜೆಟ್ ಅಧಿವೇಶನ

ಬಜೆಟ್‌ ಅಧಿವೇಶನ ಬುಧವಾರದಿಂದ ಆರಂಭವಾಗಲಿದೆ. ಏಪ್ರಿಲ್ 2ಕ್ಕೆ ಅಂತ್ಯಗೊಳ್ಳಲಿದೆ. ಬಜೆಟ್‌ ಮಂಡನೆಯ ಕುತೂಹಲ ಒಂದೆಡೆಯಾದರೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಕಾಯ್ದೆ ರದ್ದು ಮಾಡಿ ಜಾರಿಗೆ ತಂದಿರುವ ಜಿ ರಾಮ್‌ ಜಿ ಕಾಯ್ದೆಯ ವಿರುದ್ಧ ಪ್ರತಿಪಕ್ಷಗಳು ಕೋಲಾಹಲ ಎಬ್ಬಿಸುವುದು ನಿಶ್ಚಿತ

 

Read Full Story

07:39 AM (IST) Jan 28

ಚೀನಾ ಅಧ್ಯಕ್ಷ ಜಿನ್‌ಪಿಂಗ್‌ ವಿರುದ್ಧ ಕ್ಷಿಪ್ರಕ್ರಾಂತಿ ಯತ್ನ?

ಅಮೆರಿಕ- ಚೀನಾ ನಡುವೆ ವ್ಯಾಪಾರ ಸಂಬಂಧ ಬಿಕ್ಕಟ್ಟು ತಾರಕಕ್ಕೆ ಏರಿರುವ ಹೊತ್ತಿನಲ್ಲೇ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ವಿರುದ್ಧ ಕ್ಷಿಪ್ರಕ್ರಾಂತಿಗೆ ಯತ್ನ ನಡೆಸಿದ್ದರು ಎನ್ನಲಾದ ಅವರ ಬಲಗೈ ಬಂಟ, ಜನರಲ್ ಜಾಂಗ್ ಯೂಕ್ಸಿಯಾ ಅವರನ್ನು ಬಂಧಿಸಲಾಗಿದೆ.

 

Read Full Story

More Trending News