ನವದೆಹಲಿ (ಜ.28): ಭಾರತ ಮತ್ತು ಯುರೋಪ್ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ. ಅಮೆರಿಕದ ತೆರಿಗೆ ಕಿರಿಕ್ಗೆ ಜಗತ್ತಿನ ಅತಿದೊಡ್ಡ ಆರ್ಥಿಕತೆಗಳು ತಿರುಗೇಟು ನೀಡಿವೆ. ಪರ್ಯಾಯ ಮಾರುಕಟ್ಟೆ ಸ್ಥಾಪನೆ ಕಡೆ ಭಾರತ ಮುಖ ಮಾಡಿದ್ದು, ಎನ್ಡಿಎ ಸರ್ಕಾರದ 8ನೇ ಡೀಲ್ ಇದಾಗಿದೆ. ಇದು 200 ಕೋಟಿ ಜನರ ಮೇಲೆ ಪರಿಣಾಮ ಬೀರಲಿದೆ. ಡೀಲ್ನ ಮೊತ್ತ ವಿಶ್ವದ ಜಿಡಿಪಿಯ ಶೇ. 25ರಷ್ಟಿದ್ದು, ಭಾರತದ ಶೇ. 93 ಉತ್ಪನ್ನಕ್ಕೆ ಯುರೋಪ್ನಲ್ಲಿ ಶೂನ್ಯ ತೆರಿಗೆ ಇರಲಿದೆ. ಭಾರತಕ್ಕೆ ಅಮೆರಿಕದ ಹೊರತಾದ ಹೊಸ ಮಾರುಕಟ್ಟೆ ಸಿಕ್ಕಂತಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
09:43 PM (IST) Jan 28
ತಮಿಳು ನಟ ಧನುಷ್ ತಮ್ಮ ಇಬ್ಬರು ಮಕ್ಕಳಾದ ಯಾತ್ರಾ ಮತ್ತು ಲಿಂಗಾ ಅವರೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಟಿ ಮೃಣಾಲ್ ಠಾಕೂರ್ ಅವರೊಂದಿಗಿನ ಮದುವೆಯ ವದಂತಿಗಳು ಹಬ್ಬಿರುವ ಬೆನ್ನಲ್ಲೇ, ಧನುಷ್ ಅವರ ಈ ದೇಗುಲ ಭೇಟಿ ಮತ್ತು ಸಾಂಪ್ರದಾಯಿಕ ಉಡುಗೆಯಲ್ಲಿನ ಫೋಟೋಗಳು ವೈರಲ್ ಆಗಿವೆ.
08:58 PM (IST) Jan 28
ಪಲಾಶ್ ಮುಚ್ಚಲ್ ಹಾಗೂ ಸ್ಮೃತಿ ಮಂಧಾನ ನಡುವಿನ ವಿವಾಹ ಮುರಿದು ಬಿದ್ದ ನಂತರ ಗಾಯಕ ಪಲಾಶ್ ಮುಚ್ಚಲ್ ಗ್ರಹಚಾರ ಸಂಪೂರ್ಣ ಕೆಟ್ಟಂತೆ ಕಾಣುತ್ತಿದೆ. ಪಲಾಶ್ ಮುಚ್ಚಲ್ ವಾಕಿಂಗ್ ಸ್ಟೈಲ್ ಕೂಡ ಇತ್ತೀಚೆಗೆ ನೆಟ್ಟಿಗರಿಂದ ಸಖತ್ ಟ್ರೋಲ್ ಆಗ್ತಿದ್ದು, ಅವರು ಏನ್ ಕಾಮೆಂಟ್ ಮಾಡಿದ್ದಾರೆ ನೋಡಿ..
08:49 PM (IST) Jan 28
Baramati Plane Crash Live video ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದ ಸಿಸಿಟಿವಿ ದೃಶ್ಯಗಳು ಲಭ್ಯ., ವಿಮಾನ ನೆಲಕ್ಕೆ ಅಪ್ಪಳಿಸಿ ಸ್ಫೋಟಗೊಂಡು ಅಗ್ನಿ ಉಂಡೆಯಾಗಿ ಮಾರ್ಪಟ್ಟಿದೆ. ನಡೆದ ಘಟನೆ ಕಂಡ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
08:26 PM (IST) Jan 28
ಪತಿಯ ಅತಿಯಾದ ಲೈಂ*ಗಿಕ ಕಿರುಕುಳದಿಂದ ಬೇಸತ್ತ ಪತ್ನಿಯೊಬ್ಬಳು, ಆತನಿಗೆ ವಿಷ ನೀಡಿ ನಂತರ ಉಸಿರುಗಟ್ಟಿಸಿ ಹ*ತ್ಯೆ ಮಾಡಿದ್ದಾಳೆ. ಸಹಜ ಸಾವು ಎಂದು ನಂಬಲಾಗಿದ್ದ ಈ ಪ್ರಕರಣ, ಅಂತ್ಯಕ್ರಿಯೆ ವಿಚಾರವಾಗಿ ನಡೆದ ಜಗಳದಿಂದಾಗಿ ಕೊ*ಲೆ ಎಂದು ಬಯಲಾಗಿದ್ದು, ಪೊಲೀಸರು ಆರೋಪಿ ಪತ್ನಿಯನ್ನು ಬಂಧಿಸಿದ್ದಾರೆ.
08:15 PM (IST) Jan 28
ಅಪ್ಪಾ ಇವತ್ತು ಅಜಿತ್ ಪವಾರ್ ಜೊತೆ ಪ್ರಯಾಣ, ಬಾರಮತಿ ವಿಮಾನ ಅಪಘಾತದಲ್ಲಿ ಐವರು ಸುಟ್ಟುಕರಲಾದ ಪೈಕಿ ಪಿಂಕಿ ಮಾಲಿಕ್ ಕೂಡ ಒಬ್ಬಳು. ಪ್ರಯಾಣಕ್ಕೂ ಮೊದಲು ತಂದೆಗೆ ಕೊನೆಯ ಕರೆ ಮಾಡಿದ್ದರು. ಕೊನೆಯದಾಗಿ ತಂದೆಗೆ ಹೇಳಿದ್ದೇನು?
06:56 PM (IST) Jan 28
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 6 ವರ್ಷದ ಬಾಲಕಿಯ ಮೇಲೆ ಆಕೆಯ ಮೃತ ಸಹೋದರನ ಅಪ್ರಾಪ್ತ ಸ್ನೇಹಿತರೇ ಸಾಮೂಹಿಕ ಅತ್ಯಾ*ಚಾರ ಎಸಗಿದ್ದಾರೆ. ಆಹಾರದ ಆಸೆ ತೋರಿಸಿ ಖಾಲಿ ಕಟ್ಟಡಕ್ಕೆ ಕರೆದೊಯ್ದು ಈ ಪೈಶಾಚಿಕ ಕೃತ್ಯ ಎಸಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
06:04 PM (IST) Jan 28
ಮದುವೆಯಾಗಿ 20 ವರ್ಷಗಳ ನಂತರ, ಯೆಮನ್ನ ಮಹಿಳೆಯೊಬ್ಬಳು ತನ್ನ ಸ್ನೇಹಿತೆ ನೀಡಿದ್ದ ಬೆಳ್ಳಿಯ ಸೊಂಟದ ಪಟ್ಟಿಯನ್ನು ಮಾರಲು ಹೋದಾಗ ಆಘಾತಕಾರಿ ಸತ್ಯವೊಂದು ಬಯಲಾಗಿದೆ. ಆ ಸೊಂಟದ ಪಟ್ಟಿಯನ್ನು ಕತ್ತರಿಸಿ ಜ್ಯುವೆಲ್ಲರಿ ಶಾಪ್ ಮಾಲೀಕರೇ ಆಘಾತಗೊಂಡಿದ್ದರು ಹಾಗಿದ್ದರೆ ಒಳಗಿದ್ದಿದ್ದು ಏನು?
05:35 PM (IST) Jan 28
ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೇಜರ್ ಟ್ವಿಸ್ಟ್ ಸಿಗುವ ಸಾಧ್ಯತೆಯಿದೆ. ಬಾಂಗ್ಲಾದೇಶಕ್ಕೆ ಬೆಂಬಲಿಸಲು ಹೋಗಿ ಇದೀಗ ಪಾಕಿಸ್ತಾನವೇ ಹಳ್ಳಕ್ಕೆ ಬೀಳುವ ಪರಿಸ್ಥಿತಿಗೆ ಬಂದಂತೆ ಕಾಣುತ್ತಿದೆ. ಅಷ್ಟಕ್ಕೂ ಹೊಸ ಟ್ವಿಸ್ಟ್ ಏನು ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ
05:05 PM (IST) Jan 28
ಅಜಿತ್ ಪವಾರ್, ಕ್ಯಾಪ್ಟನ್ ಶಾಂಭವಿ ಸೇರಿ ವಿಮಾನ ದುರಂತದಲ್ಲಿ ಅಂತ್ಯಕಂಡು ಐವರು ಯಾರು? ನಂ.1 ಏರ್ಫೋರ್ಸ್ ಸ್ಕೂಲ್ನಿಂದ ಬಂದ ಶಾಂಭವಿ ಸೇರಿದಂತೆ ಬಾರಮತಿ ವಿಮಾನ ಅಪಘಾತದಲ್ಲಿ ಸಾವೀಗೀಡಾದ ಪ್ರಮುಖರು ಯಾರೆಲ್ಲಾ?
04:06 PM (IST) Jan 28
ಈಗಾಗಲೇ ಟಿ20 ಸರಣಿ ಗೆದ್ದಿರುವ ಭಾರತ, ವಿಶಾಖಪಟ್ಟಣದಲ್ಲಿ ನಡೆಯಲಿರುವ 4ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಕಳಪೆ ಫಾರ್ಮ್ನಲ್ಲಿರುವ ಸಂಜು ಸ್ಯಾಮ್ಸನ್ ಅವರ ವಿಶ್ವಕಪ್ ಸ್ಥಾನದ ದೃಷ್ಟಿಯಿಂದ ನಿರ್ಣಾಯಕ ಎನಿಸಲಿದೆ.
03:46 PM (IST) Jan 28
ಅದೃಷ್ಟ ಕೂಡ ಡಿಸ್ಕೌಂಟ್ನಲ್ಲಿ ಬರುತ್ತೆ, ಆದರೆ ದುರದೃಷ್ಟ ಬೋನಸ್ ಜೊತೆ ಬರುತ್ತೆ. ಇದು ಒಂದು ಸಿನಿಮಾದ ಡೈಲಾಗ್. ಅದೃಷ್ಟ ಡಿಸ್ಕೌಂಟ್ನಲ್ಲಿ ಬರುತ್ತೆ ಅನ್ನೋದಕ್ಕೆ ಲಾಟರಿಗಳೇ ಬೆಸ್ಟ್ ಉದಾಹರಣೆ. ಲಾಟರಿಯಲ್ಲಿ ಒಂದು ಕೋಟಿ ಗೆದ್ದರೆ ಕೈಗೆ ಎಷ್ಟು ಹಣ ಸಿಗುತ್ತೆ ಗೊತ್ತಾ?
03:41 PM (IST) Jan 28
ಅಜಿತ್ ಪವಾರ್ ದುರಂತ ಅಂತ್ಯಕಂಡ ವಿಮಾನ ಪತನದ ಮೊದಲ ವಿಡಿಯೋ, ಕಾರ್ಯಕ್ರಮ ನಿಮಿತ್ತ ಪ್ರಯಾಣಿಸುತ್ತಿದ್ದ ಅಜಿತ್ ಪವಾರ್ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಾಗಿದೆ. ಅಜಿತ್ ಪವಾರ್ ಅಂತಿಮ ಕ್ಷಣದ ವಿಡಿಯೋ ಬಹಿರಂಗವಾಗಿದೆ.
03:36 PM (IST) Jan 28
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿ ಬಳಿ ನಡೆದ ಚಾರ್ಟರ್ಡ್ ವಿಮಾನ ಅಪಘಾತದಲ್ಲಿ ನಿಧನರಾದರು. ಈ ದುರಂತದಲ್ಲಿ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ್ದು, ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ.
03:14 PM (IST) Jan 28
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಚಾರ್ಟರ್ಡ್ ವಿಮಾನವು ಬಾರಾಮತಿ ಬಳಿ ಪತನಗೊಂಡು, ಅವರೂ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಅನುಭವಿ ಪೈಲಟ್ಗಳಾದ ಕ್ಯಾಪ್ಟನ್ ಶಾಂಭವಿ ಪಾಠಕ್ ಮತ್ತು ಕ್ಯಾಪ್ಟನ್ ಸುಮಿತ್ ಕಪೂರ್ ಕೂಡ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
02:21 PM (IST) Jan 28
ಜೀವನ ಗುಣಮಟ್ಟ ಸೂಚ್ಯಂಕ 2026: ಏಷ್ಯಾದಲ್ಲಿ ಅತ್ಯುತ್ತಮ ಜೀವನಮಟ್ಟವನ್ನು ಹೊಂದಿರುವ ಜನರು ಯಾವ ದೇಶದಲ್ಲಿದ್ದಾರೆ? ಭಾರತ, ಚೀನಾ, ಪಾಕಿಸ್ತಾನದ ಜನರ ಸ್ಥಿತಿ ಹೇಗಿದೆ. ಈ ದೇಶಗಳಲ್ಲಿ ಉತ್ತಮ ಸ್ಥಾನ ಯಾರದ್ದು?
02:17 PM (IST) Jan 28
ಆಂಬುಲೆನ್ಸ್ನ ಹಿಂಬಾಗಿಲು ಜ್ಯಾಮ್ ಆದ ಕಾರಣ 67 ವರ್ಷದ ರೋಗಿಯೊಬ್ಬರು ಒಳಗೆಯೇ ಸಿಲುಕಿ ಸಾವನ್ನಪ್ಪಿದ್ದಾರೆ. ಜಿಲ್ಲಾ ಆಸ್ಪತ್ರೆಯ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬಾಗಿಲು ತೆರೆಯುವಷ್ಟರಲ್ಲಿಯೇ ರೋಗಿ ಪ್ರಾಣ ಬಿಟ್ಟಿದ್ದು, ಇದು ಆರೋಗ್ಯ ವ್ಯವಸ್ಥೆಯ ಲೋಪವನ್ನು ಬಹಿರಂಗಪಡಿಸಿದೆ.
01:12 PM (IST) Jan 28
ಚಿರಂಜೀವಿ ನಟನೆಯ 'ಮನ ಶಂಕರ ವರಪ್ರಸಾದ್ ಗಾರು' ಸಿನಿಮಾ ವಿಚಾರದಲ್ಲಿ ಒಂದು ಘಟನೆ ನಡೆದಿದೆ. ಆ ತಪ್ಪು ಆಗಿದ್ದರೆ ಸಿನಿಮಾ ಫ್ಲಾಪ್ ಆಗುವ ಸಾಧ್ಯತೆ ಹೆಚ್ಚಿತ್ತು. ಹಾಗಾಗದಂತೆ ಒಬ್ಬ ವ್ಯಕ್ತಿ ಕಾಪಾಡಿದ್ದಾರೆ. ಆ ವಿವರಗಳು ಇಲ್ಲಿವೆ ನೋಡಿ
12:52 PM (IST) Jan 28
ಅಕ್ರಮ ಗಣಿಗಾರಿಕೆ ತಡೆಯಲು ಹೋದಾಗ, ಫೋನ್ನಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನೇ 'ನೀವು ಯಾರು' ಎಂದು ಪ್ರಶ್ನಿಸಿದ್ದ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಅವರ ವಿಡಿಯೋ ವೈರಲ್ ಆಗಿದೆ. ಈ ಲೇಖನವು ಈ ಘಟನೆ, ಅಜಿತ್ ಪವಾರ್ ನೀಡಿದ ಸ್ಪಷ್ಟನೆ ಸಂಪೂರ್ಣ ವಿವರವನ್ನು ನೀಡುತ್ತದೆ.
11:52 AM (IST) Jan 28
11:26 AM (IST) Jan 28
Indian VIPs Lost in Aviation Tragedies: From Sanjay Gandhi to Ajit Pawar ಈ ಲೇಖನವು ಸಂಜಯ್ ಗಾಂಧಿ, ವೈ.ಎಸ್. ರಾಜಶೇಖರ ರೆಡ್ಡಿ, ಮತ್ತು ಜನರಲ್ ಬಿಪಿನ್ ರಾವತ್ ಸೇರಿದಂತೆ ವಿಮಾನ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡ ಭಾರತದ ಪ್ರಮುಖ ರಾಜಕಾರಣಿಗಳು ಮತ್ತು ಗಣ್ಯರ ಪಟ್ಟಿ.
11:00 AM (IST) Jan 28
ಸಹಕಾರಿ ಕ್ಷೇತ್ರದಿಂದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹುದ್ದೆಯವರೆಗೂ ಸಾಗಿಬಂದ ಅಜಿತ್ ಪವಾರ್, ತಮ್ಮ ರಾಜಕೀಯ ರಣತಂತ್ರಗಳಿಂದ 'ಪವರ್' ಎಂದೇ ಗುರುತಿಸಿಕೊಂಡಿದ್ದರು. ಚಿಕ್ಕಪ್ಪ ಶರದ್ ಪವಾರ್ರಿಂದ ಬೇರ್ಪಟ್ಟು ಎನ್ಸಿಪಿ ಇಬ್ಬಾಗ ಮಾಡಿದ ಅವರ ರಾಜಕೀಯ ಜೀವನ ಅನಿರೀಕ್ಷಿತ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದೆ.
10:54 AM (IST) Jan 28
10:36 AM (IST) Jan 28
ಭಾರಮತಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶದ ವೇಳೆ ನಡೆದ ಸಮಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಆರು ಮಂದಿಯೂ ಕೊನೆಯುಸಿರೆಳೆದಿದ್ದಾರೆ. ಅಷ್ಟಕ್ಕೂ ಅವರು ಎಲ್ಲಿಗೆ ಹೋಗುತ್ತಿದ್ದರು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.
10:31 AM (IST) Jan 28
09:56 AM (IST) Jan 28
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿಯಲ್ಲಿ ಪತನಗೊಂಡಿದೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವೇಳೆ ಲ್ಯಾಂಡಿಂಗ್ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.
08:47 AM (IST) Jan 28
ಜಮ್ಮು ಕಾಶ್ಮೀರದ ಪ್ರವಾಸಿ ತಾಣ ಸೋನಾಮಾರ್ಗ್ನಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, ಹಿಮದ ಪ್ರವಾಹವು ಹಲವು ಮನೆಗಳು ಮತ್ತು ವಾಹನಗಳನ್ನು ಸಮಾಧಿ ಮಾಡಿದೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
07:59 AM (IST) Jan 28
ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ತಮಗೆ ಮತ್ತು ರಾಹುಲ್ ಗಾಂಧಿಗೆ 3ನೇ ಸಾಲಿನಲ್ಲಿ ಆಸನ ನೀಡಿ ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಇದು ಶಿಷ್ಟಾಚಾರದ ಉಲ್ಲಂಘನೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
07:41 AM (IST) Jan 28
ಭಾರತ ಮತ್ತು ಐರೋಪ್ಯ ಒಕ್ಕೂಟ ನಡುವಿನ ಮುಕ್ತ ವ್ಯಾಪಾರ ಒಪ್ಪಂದದಿಂದಾಗಿ ಯುರೋಪಿಗೆ ರಫ್ತಾಗುವ ಭಾರತದ ಶೇ.93ರಷ್ಟು ಉತ್ಪನ್ನಗಳು ಡ್ಯೂಟಿ ಫ್ರೀ ಆಗಲಿವೆ. ಅದೇ ರೀತಿ ಯುರೋಪ್ನಿಂದ ಆಮದಾಗುವ ದುಬಾರಿ ಐಷಾರಾಮಿ ಕಾರುಗಳು, ಔಷಧ, ವೈನ್, ಮದ್ಯ ಬೆಲೆ ಭಾರತೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ತಗ್ಗಲಿದೆ.
07:41 AM (IST) Jan 28
ರಷ್ಯಾ ತೈಲ ಖರೀದಿ, ಗ್ರೀನ್ಲ್ಯಾಂಡ್ ವಶ ವಿಷಯದಲ್ಲಿ ಭಾರತ ಹಾಗೂ ಐರೋಪ್ಯ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ಯಾಕ್ಸ್ ವಾರ್ ನಡೆಸುತ್ತಿರುವ ಹೊತ್ತಿನಲ್ಲೇ, ಐತಿಹಾಸಿಕ ಮುಕ್ತ ತೆರಿಗೆ ವ್ಯಾಪಾರ ಒಪ್ಪಂದ ವನ್ನು ಭಾರತ ಮತ್ತು ಯುರೋಪಿಯನ್ ಒಕ್ಕೂಟಗಳು ಮಂಗಳವಾರ ಅಂತಿಮಗೊಳಿಸಿವೆ
07:41 AM (IST) Jan 28
ಜಮ್ಮು ಕಾಶ್ಮೀರದಲ್ಲಿನ ತೀವ್ರ ಹಿಮಪಾತದಿಂದ ರಸ್ತೆಗಳು ಬಂದ್ ಆಗಿದ್ದವು. ಈ ಸಂದರ್ಭದಲ್ಲಿ, ಶೋಪಿಯಾನ್ ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಬಶರತ್ ಪಂಡಿತ್ ಅವರು, ತುರ್ತು ಶಸ್ತ್ರಚಿಕಿತ್ಸೆಗಾಗಿ 3 ಕಿಲೋ ಮೀಟರ್ ನಡೆದು, ನಂತರ ಜೆಸಿಬಿ ಮೂಲಕ ಆಸ್ಪತ್ರೆ ತಲುಪಿ ತಮ್ಮ ಕರ್ತವ್ಯ ಮೆರೆದಿದ್ದಾರೆ.
07:40 AM (IST) Jan 28
ವಿಶ್ವವಿದ್ಯಾಲಯಗಳಲ್ಲಿ ಎಸ್ಸಿ-ಎಸ್ಟಿ, ಒಬಿಸಿಗಳ ಜಾತಿ ತಾರತಮ್ಯ ಹತ್ತಿಕ್ಕುವ ಸಲುವಾಗಿ ಸಮಿತಿ ರಚಿಸಲು ಯುಜಿಸಿ ಹೊರಡಿಸಿರುವ ಹೊಸ ಆದೇಶ ವಿವಾದಕ್ಕೀಡಾಗಿದೆ. ‘ಈ ಸಮಿತಿಯಿಂದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ’ ಎಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
07:40 AM (IST) Jan 28
ಬಜೆಟ್ ಅಧಿವೇಶನ ಬುಧವಾರದಿಂದ ಆರಂಭವಾಗಲಿದೆ. ಏಪ್ರಿಲ್ 2ಕ್ಕೆ ಅಂತ್ಯಗೊಳ್ಳಲಿದೆ. ಬಜೆಟ್ ಮಂಡನೆಯ ಕುತೂಹಲ ಒಂದೆಡೆಯಾದರೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಕಾಯ್ದೆ ರದ್ದು ಮಾಡಿ ಜಾರಿಗೆ ತಂದಿರುವ ಜಿ ರಾಮ್ ಜಿ ಕಾಯ್ದೆಯ ವಿರುದ್ಧ ಪ್ರತಿಪಕ್ಷಗಳು ಕೋಲಾಹಲ ಎಬ್ಬಿಸುವುದು ನಿಶ್ಚಿತ
07:39 AM (IST) Jan 28
ಅಮೆರಿಕ- ಚೀನಾ ನಡುವೆ ವ್ಯಾಪಾರ ಸಂಬಂಧ ಬಿಕ್ಕಟ್ಟು ತಾರಕಕ್ಕೆ ಏರಿರುವ ಹೊತ್ತಿನಲ್ಲೇ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ವಿರುದ್ಧ ಕ್ಷಿಪ್ರಕ್ರಾಂತಿಗೆ ಯತ್ನ ನಡೆಸಿದ್ದರು ಎನ್ನಲಾದ ಅವರ ಬಲಗೈ ಬಂಟ, ಜನರಲ್ ಜಾಂಗ್ ಯೂಕ್ಸಿಯಾ ಅವರನ್ನು ಬಂಧಿಸಲಾಗಿದೆ.