ನವದೆಹಲಿ (ಫೆ.5): ವಿಪಕ್ಷದ ಮಹಿಳಾ ಸಂಸದರು, ಲೋಕಸಭೆಯಲ್ಲಿ ಪ್ರಧಾನಿ ಕುಳಿತುಕೊಳ್ಳುವ ಸ್ಥಳಕ್ಕೆ ಮುತ್ತಿಗೆ ಹಾಕಿದ ಪರಿಣಾಮ ನರೇಂದ್ರ ಮೋದಿ ಅವರ ಭಾಷಣವನ್ನೇ ರದ್ದುಪಡಿಸಿದ ಅಪರೂಪದ ಬೆಳವಣಿಗೆಯೊಂದು ಬುಧವಾರ ನಡೆದಿದೆ.ಆದರೆ ಘಟನೆ ನಡೆದಾಗ ಮೋದಿ ಸ್ಥಳದಲ್ಲಿ ಹಾಜರಿರದ ಕಾರಣ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಲಾಪವನ್ನೇ ಗುರುವಾರಕ್ಕೆ ಮುಂದೂಡಲಾಯಿತು. ಪ್ರಧಾನಿ ಮೋದಿ ಇಂದು ಲೋಕಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
10:36 AM (IST) Feb 05
10:11 AM (IST) Feb 05
ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ ಸ್ಟೀನ್ನ ಕಡತದಲ್ಲಿ ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್ ಮತ್ತು ಅನುರಾಗ್ ಕಶ್ಯಪ್ ಅವರ ಹೆಸರುಗಳು ಉಲ್ಲೇಖವಾಗಿವೆ. ಬಚ್ಚನ್ ದಂಪತಿಗಳು ಸಹ-ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವೊಂದಕ್ಕೆ ಎಪ್ಸ್ಟೀನ್ ಆಹ್ವಾನಿತರಾಗಿದ್ದರು.
09:49 AM (IST) Feb 05
ರಣವೀರ್ ಸಿಂಗ್ ಅಭಿನಯದ ಬ್ಲಾಕ್ಬಸ್ಟರ್ ಚಿತ್ರ 'ಧುರಂಧರ್ 2' ಸಿನಿಮಾದ OTT ಡೀಲ್ ಡಿಜಿಟಲ್ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ವರದಿಗಳ ಪ್ರಕಾರ, ಈ ಚಿತ್ರದ ಸ್ಟ್ರೀಮಿಂಗ್ ಹಕ್ಕುಗಳು ಭಾರೀ ಮೊತ್ತಕ್ಕೆ ಮಾರಾಟವಾಗಿದ್ದು, ಬಾಲಿವುಡ್ನ ಅತಿದೊಡ್ಡ ಡಿಜಿಟಲ್ ಡೀಲ್ಗಳಲ್ಲಿ ಒಂದೆನಿಸಿದೆ.
09:45 AM (IST) Feb 05
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಶ್ವದ ಮೊದಲ ಸಹಕಾರಿ ಟ್ಯಾಕ್ಸಿ ಸೇವೆಯಾದ 'ಭಾರತ್ ಟ್ಯಾಕ್ಸಿ'ಗೆ ಚಾಲನೆ ನೀಡಲಿದ್ದಾರೆ. ಓಲಾ, ಉಬರ್ಗೆ ಸ್ಪರ್ಧಿಯಾಗಿರುವ ಈ ಸೇವೆಯು 'ಸಾರಥಿಯೇ ಮಾಲೀಕ' ಎಂಬ ಆಶಯದೊಂದಿಗೆ, ಕಮಿಷನ್ ಹಾಗೂ ಸರ್ಜ್ ದರವಿಲ್ಲದೆ ಕಾರ್ಯನಿರ್ವಹಿಸಲಿದೆ.
08:56 AM (IST) Feb 05
4ನೇ ಸೀಸನ್ ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ನಲ್ಲಿ ಮಾಜಿ ಚಾಂಪಿಯನ್ ಆರ್ಸಿಬಿ ಹಾಗೂ ಕಳೆದ 3 ಆವೃತ್ತಿಗಳ ರನ್ನರ್-ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಲೀಗ್ನಲ್ಲಿ ಉತ್ತಮ ಪ್ರದರ್ಶನ ನೀಡಿ ನೇರವಾಗಿ ಫೈನಲ್ಗೇರಿದ ಆರ್ಸಿಬಿ ಸಂಘಟಿತ ಆಟವನ್ನು ನೆಚ್ಚಿಕೊಂಡಿದೆ.
08:10 AM (IST) Feb 05
3 Sisters Die Ghaziabad Due to Korean Game Addiction ಅಪ್ಪಾ... ನಮ್ಮನ್ನು ಕ್ಷಮಿಸಿ, ನಮ್ಮನ್ನು ಕೊರಿಯಾದಿಂದ ದೂರ ಮಾಡಲಾಗದು ಎಂದು ಪತ್ರ ಬರೆದಿಟ್ಟು 9ನೇ ಮಹಡಿಯಿಂದ ಬಾಲಕಿಯರು ಜಿಗಿದಿದ್ದಾರೆ. ನೂರಾರು ಮಕ್ಕಳ ಬಲಿ ಪಡೆದಿದ್ದ ಬ್ಲ್ಯೂವೇಲ್ ಬಳಿಕ ಮತ್ತೊಂದು ಮಾದರಿ ಆಟದ ಆತಂಕ ಶುರುವಾಗಿದೆ.
07:52 AM (IST) Feb 05
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದತ್ತು ಪುತ್ರನೆಂದು ಹೇಳಿಕೊಂಡು ವಂಚಿಸುತ್ತಿದ್ದ ಸುಜಯ್ ಅಲಿಯಾಸ್ ಸುಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈತ ರಾಜ್ಯಪಾಲರ ಲೆಟರ್ಹೆಡ್ನಲ್ಲಿ ನಕಲಿ ಸಹಿ ಮಾಡಿ ವಿಐಟಿ ವಿವಿ ಕುಲಪತಿ ಹುದ್ದೆಗೆ ನೇಮಕಾತಿ ಪತ್ರ ನೀಡಿ ವಂಚಿಸಿದ್ದಾನೆ..
07:51 AM (IST) Feb 05
ಐಸಿಸಿ ಅಂಡರ್-19 ವಿಶ್ವಕಪ್ ಸೆಮಿಫೈನಲ್ನಲ್ಲಿ, ಅಫ್ಘಾನಿಸ್ತಾನ ವಿರುದ್ಧ ಭಾರತ ತಂಡ ಐತಿಹಾಸಿಕ ಗೆಲುವು ಸಾಧಿಸಿ ಫೈನಲ್ಗೆ ಪ್ರವೇಶಿಸಿದೆ. 311 ರನ್ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ, ಕಿರಿಯರ ವಿಶ್ವಕಪ್ ಇತಿಹಾಸದಲ್ಲೇ ಗರಿಷ್ಠ ರನ್ ಚೇಸ್ ಮಾಡಿದ ದಾಖಲೆ ಬರೆಯಿತು.
07:50 AM (IST) Feb 05
ಮಸ್ಕತ್ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ ( (20 ಮಿಲಿಯನ್ ದಿರಮ್ ) ರು. ಮೊತ್ತದ ಲಾಟರಿ ಗೆದ್ದಿದ್ದಾರೆ.
07:50 AM (IST) Feb 05
ವ್ಯಾಪಾರ ಒಪ್ಪಂದದ ಭಾಗವಾಗಿ, ರಷ್ಯಾದಿಂದ ತೈಲ ಖರೀದಿ ಸ್ಥಗಿತಕ್ಕೆ ಭಾರತ ನಿರ್ಧರಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಇದೀಗ ಅಮೆರಿಕ ಮತ್ತು ರಷ್ಯಾ ನಡುವೆ ಜಟಾಪಟಿಗೆ ಕಾರಣವಾಗಿದೆ.
07:50 AM (IST) Feb 05
ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ಕೇಂದ್ರ ಸರ್ಕಾರ ಘೋಷಿಸಿದ್ದ ರೈಲ್ವೆ ಯೋಜನೆ ವಿರೋಧಿಸಿ 7 ಲಕ್ಷ ಸೇಬು ಮರಗಳ ಉಳಿವಿಗೆ ಜನ ಚಿಪ್ಕೋ ಚಳವಳಿ ನಡೆದದ್ದು, ಇದಕ್ಕೆ ಮಣಿದ ಸರ್ಕಾರ ಮೂರು ಯೋಜನೆಗಳನ್ನು ರದ್ದುಪಡಿಸಿದೆ.
07:49 AM (IST) Feb 05
ವಿಶೇಷ ಮತಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಸ್ವತಃ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ವಾದ ಮಂಡಿಸಿದ ಅಪರೂಪದ ಘಟನೆಗೆ ಸುಪ್ರೀಂಕೋರ್ಟ್ ಬುಧವಾರ ಸಾಕ್ಷಿಯಾಯಿತು.
07:49 AM (IST) Feb 05
ವಿಪಕ್ಷದ ಮಹಿಳಾ ಸಂಸದರು, ಲೋಕಸಭೆಯಲ್ಲಿ ಪ್ರಧಾನಿ ಕುಳಿತುಕೊಳ್ಳುವ ಸ್ಥಳಕ್ಕೆ ಮುತ್ತಿಗೆ ಹಾಕಿದ ಪರಿಣಾಮ ನರೇಂದ್ರ ಮೋದಿ ಅವರ ಭಾಷಣವನ್ನೇ ರದ್ದುಪಡಿಸಿದ ಅಪರೂಪದ ಬೆಳವಣಿಗೆಯೊಂದು ಬುಧವಾರ ನಡೆದಿದೆ.