LIVE NOW
Published : Mar 06, 2026, 07:41 AM ISTUpdated : Mar 06, 2026, 11:11 AM IST

India News Live: Kejriwal - ಕೇಜ್ರಿವಾಲ್‌ಗೆ ಬಿಜೆಪಿ ಹೆದರಿದೆಯಾ? ವಿಚಾರಣೆ ಲೈವ್ ಮಾಡಿ - ಸ್ಪೀಕರ್‌ಗೆ ಅತಿಶಿ ಸವಾಲು

ಸಾರಾಂಶ

ನವದೆಹಲಿ (ಮಾ.6): ಭಾರತದ ಬುಡದಲ್ಲಿಯೇ ತನ್ನ ಯುದ್ಧನೌಕೆ ನಾಶವಾದ ಬೆನ್ನಲ್ಲಿಯೇ ಅಮೆರಿಕ ವಿರುದ್ಧದ ಯುದ್ಧಕ್ಕೆ ಭಾರತವನ್ನೂ ಇರಾನ್‌ ಎಳೆದಿದೆ. ನಮ್ಮ ಯುದ್ಧನೌಕೆ ಭಾರತದ ಅತಿಥಿಯಾಗಿತ್ತು. ಅದರ ಮೇಲೆ ಅಮೆರಿಕ ತನ್ನ ಕ್ರೌರ್ಯ ಮೆರೆದಿದೆ. ನೆನಪಿಟ್ಟುಕೊಳ್ಳಿ ಇದಕ್ಕಾಗಿ ಅಮೆರಿಕ ಪಶ್ಚಾತ್ತಾಪ ಪಡುವ ದಿನ ಖಂಡಿತಾ ಬರಲಿದೆ ಎಂದು ಇರಾನ್‌ ಕಿಡಿಕಾರಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್‌ಟೇನ್‌ಮೆಂಟ್‌ನ ಸುದ್ದಿಗಳ ವಿವರಗಳ ಲೈವ್‌ ಬ್ಲಾಗ್‌..

 

11:11 AM (IST) Mar 06

Kejriwal - ಕೇಜ್ರಿವಾಲ್‌ಗೆ ಬಿಜೆಪಿ ಹೆದರಿದೆಯಾ? ವಿಚಾರಣೆ ಲೈವ್ ಮಾಡಿ - ಸ್ಪೀಕರ್‌ಗೆ ಅತಿಶಿ ಸವಾಲು

ದೆಹಲಿ ವಿಧಾನಸಭೆಯ 'ಫಾನ್ಸಿ ಘರ್' ವಿವಾದಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಹಕ್ಕುಬಾಧ್ಯತಾ ಸಮಿತಿ ಮುಂದೆ ಹಾಜರಾಗಲಿದ್ದಾರೆ. ಈ ವಿಚಾರಣೆಯನ್ನು ನೇರ ಪ್ರಸಾರ ಮಾಡುವಂತೆ ವಿಪಕ್ಷ ನಾಯಕಿ ಅತಿಶಿ ಸ್ಪೀಕರ್ ವಿಜೇಂದರ್ ಗುಪ್ತಾಗೆ ಸವಾಲು ಹಾಕಿದ್ದಾರೆ. 

Read Full Story

10:55 AM (IST) Mar 06

'ಹಾರ್ಟ್‌ಬೀಟ್ 175ಕ್ಕೆ ಹೋಗಿತ್ತು!' ಇಂಗ್ಲೆಂಡ್ ಎದುರಿನ ಹೈವೋಲ್ಟೇಜ್ ಪಂದ್ಯದ ಆ ಕ್ಷಣ ನೆನಪಿಸಿಕೊಂಡ ಸೂರ್ಯಕುಮಾರ್ ಯಾದವ್!

ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ 7 ರನ್‌ಗಳ ರೋಚಕ ಜಯ ಸಾಧಿಸಿ ಭಾರತ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಪಂದ್ಯದ ನಂತರ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ ಅವರ ಇನ್ನಿಂಗ್ಸ್ ಮತ್ತು ಬೌಲರ್‌ಗಳ ಪ್ರದರ್ಶನವನ್ನು ಶ್ಲಾಘಿಸಿದರು.  

Read Full Story

10:13 AM (IST) Mar 06

ಜೊತೆಯಾಗಿ ಮದುವೆಗೆ ಬಂದ ದಳಪತಿ ವಿಜಯ್ ತ್ರಿಷಾ ಕೃಷ್ಣನ್ - ರವಿಮೋಹನ್ ಹಾಗೂ ಕೆನಿಷಾಗೆ ಹೋಲಿಸಿದ ನೆಟ್ಟಿಗರು

ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ, ನಟ ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಕೃಷ್ಣನ್ ಮದುವೆ ಆರತಕ್ಷತೆಯೊಂದಕ್ಕೆ ಜೊತೆಯಾಗಿ ಬಂದಿದ್ದು, ಒಂದೇ ಬಣ್ಣದ ಬಟ್ಟೆ ಧರಿಸಿ, ಒಂದೇ ಕಾರಿನಲ್ಲಿ ಬಂದಿದ್ದು, ಇವರಿಬ್ಬರ ವಿವಾಹೇತರ ಸಂಬಂಧದ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.

Read Full Story

09:54 AM (IST) Mar 06

ಟೇಕಾಫ್‌ ಆದ ಬೆನ್ನಲ್ಲಿಯೇ ರಾಡಾರ್‌ ಸಂಪರ್ಕ ಕಳೆದುಕೊಂಡ ಭಾರತದ ಸುಖೋಯ್‌-30 ಫೈಟರ್‌ಜೆಟ್‌, ಇಬ್ಬರು ಪೈಲಟ್‌ ದುರ್ಮರಣ!

ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ Su-30 MKI ಫೈಟರ್ ಜೆಟ್ ಪತನಗೊಂಡಿದೆ. ತರಬೇತಿ ಕಾರ್ಯಾಚರಣೆಯಲ್ಲಿದ್ದ ಈ ವಿಮಾನ ಅಪಘಾತದಲ್ಲಿ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಎಂಬ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ.
Read Full Story

09:49 AM (IST) Mar 06

ಮ್ಯಾನ್ ಆಫ್‌ ದಿ ಮ್ಯಾಚ್ ನನಗಲ್ಲ, ಈ ಕ್ರಿಕೆಟಿಗನಿಗೆ ಸಿಗಬೇಕಿತ್ತು! ಮತ್ತೆ ಫ್ಯಾನ್ಸ್ ಹೃದಯ ಗೆದ್ದ ಸಂಜು ಸ್ಯಾಮ್ಸನ್!

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ರೋಚಕ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. 89 ರನ್ ಗಳಿಸಿ ಪಂದ್ಯಶ್ರೇಷ್ಠರಾದ ಸಂಜು ಸ್ಯಾಮ್ಸನ್, ಈ ಪ್ರಶಸ್ತಿಯನ್ನು ಜಸ್ಪ್ರೀತ್ ಬುಮ್ರಾಗೆ ಅರ್ಪಿಸಿದ್ದಾರೆ. ಬುಮ್ರಾ ಅವರ ಅದ್ಭುತ ಡೆತ್ ಓವರ್ ಬೌಲಿಂಗ್ ಇಲ್ಲದಿದ್ದರೆ ಕಷ್ಟವಾಗ್ತಿತ್ತು.

Read Full Story

08:45 AM (IST) Mar 06

ಇರಾನ್ ಯುದ್ಧದ ಮಧ್ಯೆ ರಷ್ಯಾದ ತೈಲ ಖರೀದಿಸಲು ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

ಇರಾನ್-ಇಸ್ರೇಲ್ ಯುದ್ಧದಿಂದ ಹಾರ್ಮುಜ್ ಜಲಸಂಧಿ ಬಂದ್ ಆಗಿ ಭಾರತಕ್ಕೆ ತೈಲ ಸಂಕಷ್ಟ ಎದುರಾಗಿತ್ತು. ಈ ಬಿಕ್ಕಟ್ಟಿನ ನಡುವೆ, ಜಾಗತಿಕ ಇಂಧನ ಮಾರುಕಟ್ಟೆ ಸ್ಥಿರಗೊಳಿಸಲು ಅಮೆರಿಕವು ಭಾರತಕ್ಕೆ ರಷ್ಯಾದ ತೈಲ ಖರೀದಿಸಲು 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಿದೆ. 

Read Full Story

08:35 AM (IST) Mar 06

Arjun Tendulkar Wedding - ಸಚಿನ್ ಮಗ ಅರ್ಜುನ್ ತೆಂಡೂಲ್ಕರ್ ಮದುವೆ - ಧೋನಿ, ಯುವರಾಜ್ ಸೇರಿ ಕ್ರಿಕೆಟ್ ತಾರೆಯರ ದಂಡು!

ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಮಾರ್ಚ್ 5ರ ಗುರುವಾರದಂದು ಸಾನಿಯಾ ಚಾಂದೋಕ್ ಅವರೊಂದಿಗೆ ಸಪ್ತಪದಿ ತುಳಿದರು. ಈ ಅದ್ದೂರಿ ವಿವಾಹ ಸಮಾರಂಭದಲ್ಲಿ ಕುಟುಂಬದ ಆಪ್ತರು, ಸ್ನೇಹಿತರು ಹಾಗೂ ಕ್ರೀಡಾ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಿದ್ದರು.
Read Full Story

07:42 AM (IST) Mar 06

ಟಿ20 ಸೆಮೀಸ್: ನಿನ್ನೆ ನಡೆದ ಭಾರತ - ಇಂಗ್ಲೆಂಡ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಭಾರತ, ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಸಂಜು ಸ್ಯಾಮ್ಸನ್‌ (89) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 253 ರನ್ ಗಳಿಸಿದರೆ, ಜೇಕಬ್ ಬೆಥೆಲ್ (105) ಶತಕದ ಹೊರತಾಗಿಯೂ ಇಂಗ್ಲೆಂಡ್ ಸೋಲೊಪ್ಪಿಕೊಂಡಿತು.

 

Read Full Story

07:41 AM (IST) Mar 06

US Iran conflict: 4 ದಿನದ ಯುದ್ಧದಲ್ಲಿ ಅಮೆರಿಕದ ₹18000 ಕೋಟಿ, ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ನಷ್ಟ!

ಇರಾನ್ ವಿರುದ್ಧದ ಯುದ್ಧವು 100 ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಅಮೆರಿಕ ಸೇನೆಯು ಹೆಚ್ಚುವರಿ ಗುಪ್ತಚರ ಅಧಿಕಾರಿಗಳನ್ನು ಕೋರಿದೆ. ಈ ಸಂಘರ್ಷದಿಂದಾಗಿ ಅಮೆರಿಕ ಮತ್ತು ಇಸ್ರೇಲ್ ಭಾರೀ ಆರ್ಥಿಕ ನಷ್ಟವನ್ನು ಅನುಭವಿಸುತ್ತಿವೆ.

 

Read Full Story

More Trending News