ಬೆಂಗಳೂರು (ಜುಲೈ 9): ಕರ್ನಾಟಕದ ಕೈಗಾರಿಕೆಗಳನ್ನು ಸೆಳೆಯುವ ಉದ್ದೇಶದ ಮಹತ್ವಾಕಾಂಕ್ಷೆಯ 9,719 ಎಕ್ರೆ ಪ್ರದೇಶ ವ್ಯಾಪ್ತಿಯ ಓರ್ವಾಕಲ್ ನೋಡ್ ಕೈಗಾರಿಕಾ ಪ್ರದೇಶದ ಮಾಸ್ಟರ್ ಪ್ಲಾನ್ಗೆ ಆಂಧ್ರ ಪ್ರದೇಶ ಸರ್ಕಾರ ಮಂಗಳವಾರ ಅನುಮತಿ ನೀಡಿದೆ. ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ (ಎಚ್ಬಿಐಸಿ)ನ ಭಾಗವಾಗಿ ನಿರ್ಮಿಸುತ್ತಿರುವ ಇದು ಕರ್ನಾಟಕದ ಬಳ್ಳಾರಿಗೆ ಹೊಂದಿಕೊಂಡಿರುವ ಕರ್ನೂಲ್ ಜಿಲ್ಲೆಯಲ್ಲಿದೆ. ಬೆಂಗಳೂರು, ತಮಿಳು ನಾಡು, ತೆಲಂಗಾಣದ ಕೈಗಾರಿಕೆಗಳನ್ನು ಇದು ಸೆಳೆಯುವ ಸಾಧ್ಯತೆ ಇದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
11:37 PM (IST) Jul 09
ಯುಎಇ ಸರ್ಕಾರವು 23 ಲಕ್ಷ ರೂ.ಗೆ ಜೀವಿತಾವಧಿ ಗೋಲ್ಡನ್ ವೀಸಾ ನೀಡುತ್ತಿದೆ ಎಂಬ ವದಂತಿಯನ್ನು ನಿರಾಕರಿಸಿದೆ. ಅಧಿಕೃತ ವೆಬ್ಸೈಟ್ನಲ್ಲಿ ಮಾತ್ರ ಮಾಹಿತಿ ಲಭ್ಯ ಎಂದು ಸ್ಪಷ್ಟಪಡಿಸಿದೆ.
10:53 PM (IST) Jul 09
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರು ದೇಶಗಳ ಮೇಲೆ ಹೊಸ ತೆರಿಗೆ ವಿಧಿಸುವುದಾಗಿ ಘೋಷಿಸಿದ್ದಾರೆ. ಈ ತೆರಿಗೆಯು ಅಮೆರಿಕದ ವ್ಯಾಪಾರ ಹಿತಾಸಕ್ತಿಗಳನ್ನು ರಕ್ಷಿಸುವ ಉದ್ದೇಶ ಹೊಂದಿದೆ.
09:26 PM (IST) Jul 09
RBI ಸಮೀಕ್ಷೆಯ ಪ್ರಕಾರ ಜನರು ನೋಟುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬುದು ಸರ್ಕಾರದ ವಾದ.
08:37 PM (IST) Jul 09
Amit Shah political retirement: ಸಹಕಾರದ ಮೂಲಕ ಸಮೃದ್ಧಿ ಯೋಜನೆಯು ರೈತರನ್ನು ಸಬಲೀಕರಣಗೊಳಿಸುವುದರ ಜೊತೆಗೆ ಗ್ರಾಮೀಣ ಮತ್ತು ದೇಶದ ಆರ್ಥಿಕತೆಯನ್ನು ಬಲಪಡಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
06:44 PM (IST) Jul 09
ಜಾಗತಿಕ ಮಟ್ಟದ ಪ್ರತಿಷ್ಠಿತ ಕಂಪನಿಯಾಗಿರುವ ಗೂಗಲ್ನಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಉದ್ಯೋಗಿ ಮೈತ್ರಿ ಮಂಗಲ್ ಅವರ ಮಾಸಿಕ ಖರ್ಚು 4.28 ಲಕ್ಷ ರೂ. ಆಗಿದೆ. ಅಂದರೆ, ಬಹುತೇಕ ಕಂಪನಿಗಳು ಫ್ರೆಶರ್ಸ್ಗೆ ಕೊಡುವ ವಾರ್ಷಿಕ ಸಂಬಳ ಇದಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ.
05:48 PM (IST) Jul 09
ಜೈಪುರದ 71 ವರ್ಷದ ತಾರಾಚಂದ್ ಅಗರ್ವಾಲ್ ಅವರು ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ. ಮೊಮ್ಮಗಳಿಗೆ ಅಧ್ಯಯನದಲ್ಲಿ ಸಹಾಯ ಮಾಡುವಾಗ ಪರೀಕ್ಷೆ ಬರೆಯುವ ಆಸಕ್ತಿ ಮೂಡಿತು ಎಂದು ಅವರು ಹೇಳಿದ್ದಾರೆ.
05:09 PM (IST) Jul 09
ಕೊಲೆ ಪ್ರಕರಣದಲ್ಲಿ ಯೆಮೆನ್ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜು.16ರಂದು ಗಲ್ಲಿಗೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.
04:34 PM (IST) Jul 09
ಟೆಕ್ ದೈತ್ಯ ಆಪಲ್, ಭಾರತೀಯ ಮೂಲದ ಸಬಿಹ್ ಖಾನ್ ಅವರನ್ನು ಮುಖ್ಯ ಕಾರ್ಯಾಚರಣಾ ಅಧಿಕಾರಿಯಾಗಿ (COO) ನೇಮಿಸಿದೆ.
03:07 PM (IST) Jul 09
02:49 PM (IST) Jul 09
02:48 PM (IST) Jul 09
ಮಕ್ಕಳಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಕುಟುಂಬಸ್ಥರು ಮಾಂತ್ರಿಕನ ಬಳಿ ಕರೆದೊಯ್ದಿದ್ದು, ಆತ ಆಕೆಗೆ ಟಾಯ್ಲೆಟ್ ನೀರು ಕುಡಿಸಿದ್ದಾನೆ. ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ.
01:19 PM (IST) Jul 09
12:39 PM (IST) Jul 09
ಪನ್ನಾದ ಕೃಷ್ಣ ಕಲ್ಯಾಣಪುರ ಪಟ್ಟಿಯಲ್ಲಿರುವ ಗಣಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಬುಡಕಟ್ಟು ಯುವಕನೊಬ್ಬ ಇದೇ ಮೊದಲ ಬಾರಿಗೆ ಗಣಿ ಅಗೆದಾಗ ಆತ ನಿರೀಕ್ಷೆಯಯೇ ಮಾಡದ ಉಡುಗೊರೆ ಸಿಕ್ಕಿದೆ. ಮೊದಲ ದಿನವೇ ಆತನಿಗೆ ಜಾಕ್ಪಾಟ್ ಹೊಡೆದಿದೆ.
11:18 AM (IST) Jul 09
11:10 AM (IST) Jul 09
ಆಲಿಯಾ ಭಟ್ ಅವರ ತಾಯಿ, ನಟಿ-ನಿರ್ದೇಶಕಿ ಸೋನಿ ರಜ್ದಾನ್ ಅವರು 2025ರ ಜನವರಿ 23 ರಂದು ಪೊಲೀಸ್ ದೂರು ದಾಖಲಿಸಿದ್ದರು.
09:02 AM (IST) Jul 09
ಸಾಮಾನ್ಯವಾಗಿ ದೀಪಾವಳಿ ಸಮಯದಲ್ಲಿ ಅಥವಾ ವರ್ಷಾಂತ್ಯದ ವೇಳೆ ಬಡ್ಡಿ ಪಾವತಿ ಮಾಡುತ್ತಿದ್ದ ಇಪಿಎಫ್ಓ ಈ ಬಾರಿ ಜುಲೈ ಮೊದಲ ವಾರದಲ್ಲಿಯೇ ಬಹುತೇಕ ಖಾತೆಗಳಿಗೆ ಬಡ್ಡಿ ಜಮೆ ಮಾಡಿ ಮೆಚ್ಚುಗೆ ಸಂಪಾದಿಸಿದೆ.
07:54 AM (IST) Jul 09
ಕರ್ನಾಟಕದ ಕೈಗಾರಿಕೆಗಳನ್ನು ಸೆಳೆಯುವ ಉದ್ದೇಶದ ಮಹತ್ವಾಕಾಂಕ್ಷೆಯ 9,719 ಎಕ್ರೆ ಪ್ರದೇಶ ವ್ಯಾಪ್ತಿಯ ಓರ್ವಾಕಲ್ ನೋಡ್ ಕೈಗಾರಿಕಾ ಪ್ರದೇಶದ ಮಾಸ್ಟರ್ ಪ್ಲಾನ್ಗೆ ಆಂಧ್ರ ಪ್ರದೇಶ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.
07:54 AM (IST) Jul 09
ಮಕ್ಕಳು ಎಷ್ಟೇ ಚುರುಕಾದರೂ, ಗಣಿತಕ್ಕೆ ‘ಕಬ್ಬಿಣದ ಕಡಲೆ’ ಎಂಬ ಹಣೆಪಟ್ಟಿ ತಪ್ಪದು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯ ನಡೆಸಿದ ಸಮೀಕ್ಷೆಯೊಂದರಲ್ಲಿ, 6ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಕೇವಲ ಶೇ.53ರಷ್ಟು ಮಕ್ಕಳಿಗೆ 10ರ ವರೆಗಿನ ಮಗ್ಗಿ ಬರುತ್ತದೆ ಎಂದು ತಿಳಿದುಬಂದಿದೆ.
07:53 AM (IST) Jul 09
ಪೊಲೀಸ್ ಪೇದೆಯೊಬ್ಬ ಸತತ 12 ವರ್ಷಗಳ ಕಾಲ ಒಂದೂ ದಿನವೂ ಸಹ ಕೆಲಸ ಮಾಡದೆ ಇದ್ದರೂ ಬರೋಬ್ಬರಿ 35 ಲಕ್ಷ ರು. ಸಂಬಳ ಪಡೆದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
07:52 AM (IST) Jul 09
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಯಾನಿಗಳು ಜು.10ರಂದು ಭೂಮಿಗೆ ಮರಳುವ ಸಾಧ್ಯತೆ ಇದೆ. ಆದರೆ ಮರಳುವ ಸಮಯವು ಭೂಮಿಯಲ್ಲಿನ ಹವಾಮಾನ ಪರಿಸ್ಥಿತಿಯ ಮೇಲೆಯೂ ಅವಲಂಬಿತವಾಗಿರುತ್ತದೆ.
ADVERTISEMENT
07:52 AM (IST) Jul 09
ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬಿಹಾರದಲ್ಲಿ ಆಡಳಿತಾರೂಢ ಎನ್ಡಿಎ ಸರ್ಕಾರ, ಮಹಿಳೆಯರು ಮತ್ತು ಯುವಕರನ್ನು ಸೆಳೆಯುವ ಮಹತ್ವದ ಯೋಜನೆಗಳನ್ನು ಮಂಗಳವಾರ ಘೋಷಿಸಿದೆ.
07:51 AM (IST) Jul 09
ಭಾರತದಲ್ಲಿ ರಾಯಿಟರ್ಸ್ ಸುದ್ದಿ ಸಂಸ್ಥೆಯ ಎಕ್ಸ್ ಖಾತೆ ನಿರ್ಬಂಧದ ವಿಚಾರವಾಗಿ ಎಕ್ಸ್ ಪ್ರತಿಕ್ರಿಯಿಸಿದ್ದು, ‘ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಆತಂಕದಲ್ಲಿದೆ’ ಎಂದು ಕಳವಳ ವ್ಯಕ್ತಪಡಿಸಿದೆ. ಜೊತೆಗೆ ಖಾತೆ ನಿಷೇಧಕ್ಕೆ ಬಾಧಿತರಾಗಿರುವವರು ಕಾನೂನು ಪ್ರಕ್ರಿಯೆ ನಡೆಸುವಂತೆ ಒತ್ತಾಯಿಸಿದೆ.
07:51 AM (IST) Jul 09
ದಶಕಗಳ ಬಳಿಕ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ'' ಮೂಲಕ ಮತ್ತೆ ಕಿರುತೆಗೆ ಮರಳಿದ್ದು, ಅವರ ಸಂಭಾವನೆ, ವೃತ್ತಿ ಬದುಕಿನ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.
07:51 AM (IST) Jul 09
ಭಾರತ ಮತ್ತು ಪಾಕ್ ನಡುವಿನ ಸಂಘರ್ಷ ನಿಲ್ಲಿಸಿದ್ದೇ ನಾನು ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಪುನರುಚ್ಚರಿಸಿದ್ದಾರೆ. ಯುದ್ಧ ಮುಂದುವರಿಸಿದ್ದೇ ಆದಲ್ಲಿ ನಾನು ನಿಮ್ಮ ಜತೆಗೆ ವ್ಯಾಪಾರ ಬಂದ್ ಮಾಡುವುದಾಗಿ ಎಂದು ಬೆದರಿಕೆ ಹಾಕಿದೆ. ಇದರಿಂದ ಅವರು ಯುದ್ಧ ನಿಲ್ಲಿಸಿದರು ಎಂದು ಹೇಳಿದರು
07:50 AM (IST) Jul 09
ತಿರುಪತಿ ವೆಂಕಟೇಶ್ವರ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳುವ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಪ್ರತಿ ಭಾನುವಾರ ಚರ್ಚ್ಗೆ ಹೋಗುತ್ತಿದ್ದುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
07:50 AM (IST) Jul 09
ಮೆಸೇಜಿಂಗ್ ಜಗತ್ತಿನ ಅನಭಿಷಿಕ್ತ ದೊರೆಯಂತಿರುವ ವಾಟ್ಸಾಪ್ಗೆ ಪ್ರತಿಸ್ಪರ್ಧಿಯಾಗಿ, ಟ್ವೀಟರ್ನ ಸಹಸಂಸ್ಥಾಪಕ ಜಾಕ್ ಡೋರ್ಸಿ ‘ಬಿಟ್ಚ್ಯಾಟ್’ ಎಂಬ ಹೊಸ ಆ್ಯಪ್ ಅಭಿವೃದ್ಧಿಪಡಿಸಿದ್ದಾರೆ.
07:50 AM (IST) Jul 09
ಕೇಂದ್ರ ಸರ್ಕಾರ ಕಾರ್ಮಿಕ, ರೈತ, ಆರ್ಥಿಕತೆ, ರಾಷ್ಟ್ರವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ 10 ಕಾರ್ಮಿಕ ಸಂಘಟನೆಗಳು ಬುಧವಾರ ಭಾರತ್ ಬಂದ್ಗೆ ಕರೆ ನೀಡಿವೆ.